Homeಮುಖಪುಟತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ....

ತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ. ಚಂದ್ರು

ಎರಡನೇ ತಿಂಗಳಿಗೆ ಕಾಲಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರ ಹೋರಾಟ

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನ ಸ್ಯಾಮ್‌ಸಂಗ್‌ ಘಟಕದಲ್ಲಿ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ತಿಂಗಳಿಗೆ ಕಾಲಿಟ್ಟಿದ್ದು, ತಮಿಳುನಾಡು ಸರ್ಕಾರ ಸಮಸ್ಯೆ ಪರಿಹರಿಸಲು ಏಕೆ ವಿಳಂಬ ಮಾಡುತ್ತಿದೆ? ಎಂದು ಕಾರ್ಮಿಕ ಕಾನೂನು ಮತ್ತು ಕೈಗಾರಿಕಾ ವಿವಾದಗಳ ತಜ್ಞ ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ.ಚಂದ್ರು ಪ್ರಶ್ನಿಸಿದ್ದಾರೆ.

ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ನೋಂದಣಿಯು ಸೆಪ್ಟೆಂಬರ್ 9ರಿಂದ ಪ್ರತಿಭಟನೆ ನಡೆಸುತ್ತಿರುವ ನೂರಾರು ಸ್ಯಾಮ್‌ಸಂಗ್ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಅವರು ಕಳೆದ ಜುಲೈ 25 ರಂದು ರಾಜ್ಯ ಕಾರ್ಮಿಕ ಇಲಾಖೆಗೆ ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ, ಇಲಾಖೆಗೆ ಅರ್ಜಿ ಕಳುಹಿಸಿದ 45 ದಿನಗಳಲ್ಲಿ ಒಕ್ಕೂಟವನ್ನು ನೋಂದಾಯಿಸಬೇಕು. ಆದರೆ, ಸರ್ಕಾರ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಕಾರ್ಮಿಕರನ್ನು ಕೆರಳಿಸಿದೆ.

ಪ್ರಸ್ತಾವಿತ ಕಾರ್ಮಿಕ ಒಕ್ಕೂಟದ ಹೆಸರಿನಲ್ಲಿ ‘ಸ್ಯಾಮ್‌ಸಂಗ್’ ಎಂದು ಕಂಪನಿಯ ಹೆಸರಿರುವುದು ಮತ್ತು ಕಾರ್ಮಿಕರ ಹೋರಾಟದ ಹಿಂದೆ ಸಿಪಿಐ (ಎಂ) ಬೆಂಬಲಿತ ಕಾರ್ಮಿಕ ಸಂಘಟನೆ ಸಿಐಟಿಯು ಇರುವುದರಿಂದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನಲಾಗಿದೆ.

“ಭಾರತದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುವ ವಿದೇಶಿ ಕಂಪನಿಗಳು ಸಾಮಾನ್ಯವಾಗಿ ಯಾವುದೇ ಕಾರ್ಮಿಕ ಒಕ್ಕೂಟಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂಬುವುದು ಮೊಟ್ಟ ಮೊದಲು ಬೇಡಿಕೆಯಾಗಿರುತ್ತದೆ” ಎಂದು ದಿ ನ್ಯೂಸ್ ಮಿನಿಟ್‌ನ ಶಬೀರ್ ಅಹ್ಮದ್ ಅವರೊಂದಿಗಿನ ಸಂದರ್ಶನದಲ್ಲಿ ನ್ಯಾಯಮೂರ್ತಿ ಚಂದ್ರು ಹೇಳಿದ್ದಾರೆ.

“ಸಂವಿಧಾನದ ಪ್ರಕಾರ ಒಕ್ಕೂಟ ಅಥವಾ ಸಂಘವನ್ನು ರಚಿಸುವುದು ಕಾರ್ಮಿಕರ ಮೂಲಭೂತ ಹಕ್ಕು. ಇದು 1965ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಅಂಗೀಕರಿಸಲ್ಪಟ್ಟ ಟ್ರೇಡ್ ಯೂನಿಯನ್‌ಗಳನ್ನು ಒಳಗೊಂಡಿದೆ. ಯಾವುದೇ ಕಡ್ಡಾಯ ಮಾನ್ಯತೆ ಇಲ್ಲದಿದ್ದರೂ, ಒಕ್ಕೂಟದ ನೋಂದಣಿಯನ್ನು ನಿರಾಕರಿಸಲು ಕಾರ್ಮಿಕ ನ್ಯಾಯಾಲಯಕ್ಕೆ ಯಾವುದೇ ವಿವೇಚನಾಧಿಕಾರವಿಲ್ಲ. ಟ್ರೇಡ್ ಯೂನಿಯನ್ಸ್ ಆಕ್ಟ್, 1926 ರ ಅಡಿಯಲ್ಲಿ, ಕಾರ್ಮಿಕರು ಒಟ್ಟು ಉದ್ಯೋಗಿಗಳ 10% ಅನ್ನು ಪ್ರತಿನಿಧಿಸಬೇಕು. ಹಾಗಿದ್ದಲ್ಲಿ, ಕಾರ್ಮಿಕ ಆಯುಕ್ತರು ಒಕ್ಕೂಟದ ಮಾನ್ಯತೆಗೆ ಶಿಫಾರಸು ಮಾಡಬಹುದು. ತಮಿಳುನಾಡಿನಲ್ಲಿ ಇದೇ ಮೊದಲ ಬಾರಿಗೆ ಸಮಸ್ಯೆ ಪರಿಹರಿಸಲಾಗದೆ, ಹೂಡಿಕೆಯ ರಹಸ್ಯ ಒಳ ಒಪ್ಪಂದವನ್ನು ಬಹಿರಂಗಪಡಿಸಲಾಗದೆ ಪೊಲೀಸರನ್ನು ಬಳಸಿಕೊಂಡು ಸರ್ಕಾರ ಕಾರ್ಮಿಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ” ಎಂದು ಚಂದ್ರು ತಿಳಿಸಿದ್ದಾರೆ.

“ಕಾರ್ಮಿಕ ಹಕ್ಕುಗಳು ಮತ್ತು ಸಮಸ್ಯೆಗಳ ವಿಷಯಕ್ಕೆ ಬಂದರೆ, ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಜ್ಯ ಮಟ್ಟದಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ ಎಂದಿರುವ ಚಂದ್ರು, “ಕಾರ್ಮಿಕ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರಗಳು ಸರಿಯಾದ ನೀತಿಗಳನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

“ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದರು. ಆದರೆ, ಬಳಿಕ ಅವರು ಸಂಪೂರ್ಣ ತಟಸ್ಥತೆಯನ್ನು ಕಾಯ್ದುಕೊಂಡರು. ಪ್ರಸ್ತುತ ಸರ್ಕಾರ ನಾವು ಸಮಸ್ಯೆ ಪರಿಹರಿಸುತ್ತಿದ್ದೇವೆ ಎನ್ನುತ್ತಿದೆ. ಆದರೆ, ಅವರು ಇನ್ನೂ ಕಾರ್ಮಿಕರ ಒಕ್ಕೂಟಕ್ಕೆ ಮಾನ್ಯತೆಯೇ ನೀಡಿಲ್ಲ. ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿಂದ ಕಾರ್ಮಿಕರು ನ್ಯಾಯಾಲಯದ ಮೊರೆ ಹೋಗುತ್ತಿಲ್ಲ ಎಂದು ಚಂದ್ರು ವಿವರಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನೌಕರರಿಗೆ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ನೀಡಿತ್ತು. ಈ ನಡುವೆ ಅಕ್ಟೋಬರ್ 10ರಂದು ಸಂಜೆ ತಮಿಳುನಾಡು ಪೊಲೀಸರು ಸುಮಾರು 300 ಕಾರ್ಮಿಕರನ್ನು ಬಂಧಿಸಿದ್ದರು. ಕಾರ್ಮಿಕರ ಅಕ್ರಮ ಬಂಧನದ ವಿರುದ್ದ ಸಿಐಟಿಯು ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಕಾರ್ಮಿಕರನ್ನು ಕೂಡಲೇ ಬಿಡುಗಡೆ ಮಾಡುವಂತೆ ಶ್ರೀಪೆರಂಬದೂರು ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ವಿಶೇಷ ಅರ್ಜಿಯನ್ನೂ ಸಲ್ಲಿಸಿದೆ.

ಸೌಜನ್ಯ : ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಮೂರು ತಿಂಗಳಿನಿಂದ ಬಿಡುಗಡೆಯಾಗದ ಗೌರವಧನ; ಸಂಕಷ್ಟದಲ್ಲಿ ಅಂಗನವಾಡಿ ನೌಕರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...