Homeಮುಖಪುಟತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ....

ತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ. ಚಂದ್ರು

ಎರಡನೇ ತಿಂಗಳಿಗೆ ಕಾಲಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರ ಹೋರಾಟ

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನ ಸ್ಯಾಮ್‌ಸಂಗ್‌ ಘಟಕದಲ್ಲಿ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ತಿಂಗಳಿಗೆ ಕಾಲಿಟ್ಟಿದ್ದು, ತಮಿಳುನಾಡು ಸರ್ಕಾರ ಸಮಸ್ಯೆ ಪರಿಹರಿಸಲು ಏಕೆ ವಿಳಂಬ ಮಾಡುತ್ತಿದೆ? ಎಂದು ಕಾರ್ಮಿಕ ಕಾನೂನು ಮತ್ತು ಕೈಗಾರಿಕಾ ವಿವಾದಗಳ ತಜ್ಞ ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ.ಚಂದ್ರು ಪ್ರಶ್ನಿಸಿದ್ದಾರೆ.

ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ನೋಂದಣಿಯು ಸೆಪ್ಟೆಂಬರ್ 9ರಿಂದ ಪ್ರತಿಭಟನೆ ನಡೆಸುತ್ತಿರುವ ನೂರಾರು ಸ್ಯಾಮ್‌ಸಂಗ್ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಅವರು ಕಳೆದ ಜುಲೈ 25 ರಂದು ರಾಜ್ಯ ಕಾರ್ಮಿಕ ಇಲಾಖೆಗೆ ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ, ಇಲಾಖೆಗೆ ಅರ್ಜಿ ಕಳುಹಿಸಿದ 45 ದಿನಗಳಲ್ಲಿ ಒಕ್ಕೂಟವನ್ನು ನೋಂದಾಯಿಸಬೇಕು. ಆದರೆ, ಸರ್ಕಾರ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಕಾರ್ಮಿಕರನ್ನು ಕೆರಳಿಸಿದೆ.

ಪ್ರಸ್ತಾವಿತ ಕಾರ್ಮಿಕ ಒಕ್ಕೂಟದ ಹೆಸರಿನಲ್ಲಿ ‘ಸ್ಯಾಮ್‌ಸಂಗ್’ ಎಂದು ಕಂಪನಿಯ ಹೆಸರಿರುವುದು ಮತ್ತು ಕಾರ್ಮಿಕರ ಹೋರಾಟದ ಹಿಂದೆ ಸಿಪಿಐ (ಎಂ) ಬೆಂಬಲಿತ ಕಾರ್ಮಿಕ ಸಂಘಟನೆ ಸಿಐಟಿಯು ಇರುವುದರಿಂದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನಲಾಗಿದೆ.

“ಭಾರತದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುವ ವಿದೇಶಿ ಕಂಪನಿಗಳು ಸಾಮಾನ್ಯವಾಗಿ ಯಾವುದೇ ಕಾರ್ಮಿಕ ಒಕ್ಕೂಟಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂಬುವುದು ಮೊಟ್ಟ ಮೊದಲು ಬೇಡಿಕೆಯಾಗಿರುತ್ತದೆ” ಎಂದು ದಿ ನ್ಯೂಸ್ ಮಿನಿಟ್‌ನ ಶಬೀರ್ ಅಹ್ಮದ್ ಅವರೊಂದಿಗಿನ ಸಂದರ್ಶನದಲ್ಲಿ ನ್ಯಾಯಮೂರ್ತಿ ಚಂದ್ರು ಹೇಳಿದ್ದಾರೆ.

“ಸಂವಿಧಾನದ ಪ್ರಕಾರ ಒಕ್ಕೂಟ ಅಥವಾ ಸಂಘವನ್ನು ರಚಿಸುವುದು ಕಾರ್ಮಿಕರ ಮೂಲಭೂತ ಹಕ್ಕು. ಇದು 1965ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಅಂಗೀಕರಿಸಲ್ಪಟ್ಟ ಟ್ರೇಡ್ ಯೂನಿಯನ್‌ಗಳನ್ನು ಒಳಗೊಂಡಿದೆ. ಯಾವುದೇ ಕಡ್ಡಾಯ ಮಾನ್ಯತೆ ಇಲ್ಲದಿದ್ದರೂ, ಒಕ್ಕೂಟದ ನೋಂದಣಿಯನ್ನು ನಿರಾಕರಿಸಲು ಕಾರ್ಮಿಕ ನ್ಯಾಯಾಲಯಕ್ಕೆ ಯಾವುದೇ ವಿವೇಚನಾಧಿಕಾರವಿಲ್ಲ. ಟ್ರೇಡ್ ಯೂನಿಯನ್ಸ್ ಆಕ್ಟ್, 1926 ರ ಅಡಿಯಲ್ಲಿ, ಕಾರ್ಮಿಕರು ಒಟ್ಟು ಉದ್ಯೋಗಿಗಳ 10% ಅನ್ನು ಪ್ರತಿನಿಧಿಸಬೇಕು. ಹಾಗಿದ್ದಲ್ಲಿ, ಕಾರ್ಮಿಕ ಆಯುಕ್ತರು ಒಕ್ಕೂಟದ ಮಾನ್ಯತೆಗೆ ಶಿಫಾರಸು ಮಾಡಬಹುದು. ತಮಿಳುನಾಡಿನಲ್ಲಿ ಇದೇ ಮೊದಲ ಬಾರಿಗೆ ಸಮಸ್ಯೆ ಪರಿಹರಿಸಲಾಗದೆ, ಹೂಡಿಕೆಯ ರಹಸ್ಯ ಒಳ ಒಪ್ಪಂದವನ್ನು ಬಹಿರಂಗಪಡಿಸಲಾಗದೆ ಪೊಲೀಸರನ್ನು ಬಳಸಿಕೊಂಡು ಸರ್ಕಾರ ಕಾರ್ಮಿಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ” ಎಂದು ಚಂದ್ರು ತಿಳಿಸಿದ್ದಾರೆ.

“ಕಾರ್ಮಿಕ ಹಕ್ಕುಗಳು ಮತ್ತು ಸಮಸ್ಯೆಗಳ ವಿಷಯಕ್ಕೆ ಬಂದರೆ, ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಜ್ಯ ಮಟ್ಟದಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ ಎಂದಿರುವ ಚಂದ್ರು, “ಕಾರ್ಮಿಕ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರಗಳು ಸರಿಯಾದ ನೀತಿಗಳನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

“ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದರು. ಆದರೆ, ಬಳಿಕ ಅವರು ಸಂಪೂರ್ಣ ತಟಸ್ಥತೆಯನ್ನು ಕಾಯ್ದುಕೊಂಡರು. ಪ್ರಸ್ತುತ ಸರ್ಕಾರ ನಾವು ಸಮಸ್ಯೆ ಪರಿಹರಿಸುತ್ತಿದ್ದೇವೆ ಎನ್ನುತ್ತಿದೆ. ಆದರೆ, ಅವರು ಇನ್ನೂ ಕಾರ್ಮಿಕರ ಒಕ್ಕೂಟಕ್ಕೆ ಮಾನ್ಯತೆಯೇ ನೀಡಿಲ್ಲ. ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿಂದ ಕಾರ್ಮಿಕರು ನ್ಯಾಯಾಲಯದ ಮೊರೆ ಹೋಗುತ್ತಿಲ್ಲ ಎಂದು ಚಂದ್ರು ವಿವರಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನೌಕರರಿಗೆ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ನೀಡಿತ್ತು. ಈ ನಡುವೆ ಅಕ್ಟೋಬರ್ 10ರಂದು ಸಂಜೆ ತಮಿಳುನಾಡು ಪೊಲೀಸರು ಸುಮಾರು 300 ಕಾರ್ಮಿಕರನ್ನು ಬಂಧಿಸಿದ್ದರು. ಕಾರ್ಮಿಕರ ಅಕ್ರಮ ಬಂಧನದ ವಿರುದ್ದ ಸಿಐಟಿಯು ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಕಾರ್ಮಿಕರನ್ನು ಕೂಡಲೇ ಬಿಡುಗಡೆ ಮಾಡುವಂತೆ ಶ್ರೀಪೆರಂಬದೂರು ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ವಿಶೇಷ ಅರ್ಜಿಯನ್ನೂ ಸಲ್ಲಿಸಿದೆ.

ಸೌಜನ್ಯ : ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಮೂರು ತಿಂಗಳಿನಿಂದ ಬಿಡುಗಡೆಯಾಗದ ಗೌರವಧನ; ಸಂಕಷ್ಟದಲ್ಲಿ ಅಂಗನವಾಡಿ ನೌಕರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...