Homeಮುಖಪುಟತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ....

ತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ. ಚಂದ್ರು

ಎರಡನೇ ತಿಂಗಳಿಗೆ ಕಾಲಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರ ಹೋರಾಟ

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನ ಸ್ಯಾಮ್‌ಸಂಗ್‌ ಘಟಕದಲ್ಲಿ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ತಿಂಗಳಿಗೆ ಕಾಲಿಟ್ಟಿದ್ದು, ತಮಿಳುನಾಡು ಸರ್ಕಾರ ಸಮಸ್ಯೆ ಪರಿಹರಿಸಲು ಏಕೆ ವಿಳಂಬ ಮಾಡುತ್ತಿದೆ? ಎಂದು ಕಾರ್ಮಿಕ ಕಾನೂನು ಮತ್ತು ಕೈಗಾರಿಕಾ ವಿವಾದಗಳ ತಜ್ಞ ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ.ಚಂದ್ರು ಪ್ರಶ್ನಿಸಿದ್ದಾರೆ.

ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ನೋಂದಣಿಯು ಸೆಪ್ಟೆಂಬರ್ 9ರಿಂದ ಪ್ರತಿಭಟನೆ ನಡೆಸುತ್ತಿರುವ ನೂರಾರು ಸ್ಯಾಮ್‌ಸಂಗ್ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಅವರು ಕಳೆದ ಜುಲೈ 25 ರಂದು ರಾಜ್ಯ ಕಾರ್ಮಿಕ ಇಲಾಖೆಗೆ ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ, ಇಲಾಖೆಗೆ ಅರ್ಜಿ ಕಳುಹಿಸಿದ 45 ದಿನಗಳಲ್ಲಿ ಒಕ್ಕೂಟವನ್ನು ನೋಂದಾಯಿಸಬೇಕು. ಆದರೆ, ಸರ್ಕಾರ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಕಾರ್ಮಿಕರನ್ನು ಕೆರಳಿಸಿದೆ.

ಪ್ರಸ್ತಾವಿತ ಕಾರ್ಮಿಕ ಒಕ್ಕೂಟದ ಹೆಸರಿನಲ್ಲಿ ‘ಸ್ಯಾಮ್‌ಸಂಗ್’ ಎಂದು ಕಂಪನಿಯ ಹೆಸರಿರುವುದು ಮತ್ತು ಕಾರ್ಮಿಕರ ಹೋರಾಟದ ಹಿಂದೆ ಸಿಪಿಐ (ಎಂ) ಬೆಂಬಲಿತ ಕಾರ್ಮಿಕ ಸಂಘಟನೆ ಸಿಐಟಿಯು ಇರುವುದರಿಂದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನಲಾಗಿದೆ.

“ಭಾರತದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುವ ವಿದೇಶಿ ಕಂಪನಿಗಳು ಸಾಮಾನ್ಯವಾಗಿ ಯಾವುದೇ ಕಾರ್ಮಿಕ ಒಕ್ಕೂಟಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂಬುವುದು ಮೊಟ್ಟ ಮೊದಲು ಬೇಡಿಕೆಯಾಗಿರುತ್ತದೆ” ಎಂದು ದಿ ನ್ಯೂಸ್ ಮಿನಿಟ್‌ನ ಶಬೀರ್ ಅಹ್ಮದ್ ಅವರೊಂದಿಗಿನ ಸಂದರ್ಶನದಲ್ಲಿ ನ್ಯಾಯಮೂರ್ತಿ ಚಂದ್ರು ಹೇಳಿದ್ದಾರೆ.

“ಸಂವಿಧಾನದ ಪ್ರಕಾರ ಒಕ್ಕೂಟ ಅಥವಾ ಸಂಘವನ್ನು ರಚಿಸುವುದು ಕಾರ್ಮಿಕರ ಮೂಲಭೂತ ಹಕ್ಕು. ಇದು 1965ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಅಂಗೀಕರಿಸಲ್ಪಟ್ಟ ಟ್ರೇಡ್ ಯೂನಿಯನ್‌ಗಳನ್ನು ಒಳಗೊಂಡಿದೆ. ಯಾವುದೇ ಕಡ್ಡಾಯ ಮಾನ್ಯತೆ ಇಲ್ಲದಿದ್ದರೂ, ಒಕ್ಕೂಟದ ನೋಂದಣಿಯನ್ನು ನಿರಾಕರಿಸಲು ಕಾರ್ಮಿಕ ನ್ಯಾಯಾಲಯಕ್ಕೆ ಯಾವುದೇ ವಿವೇಚನಾಧಿಕಾರವಿಲ್ಲ. ಟ್ರೇಡ್ ಯೂನಿಯನ್ಸ್ ಆಕ್ಟ್, 1926 ರ ಅಡಿಯಲ್ಲಿ, ಕಾರ್ಮಿಕರು ಒಟ್ಟು ಉದ್ಯೋಗಿಗಳ 10% ಅನ್ನು ಪ್ರತಿನಿಧಿಸಬೇಕು. ಹಾಗಿದ್ದಲ್ಲಿ, ಕಾರ್ಮಿಕ ಆಯುಕ್ತರು ಒಕ್ಕೂಟದ ಮಾನ್ಯತೆಗೆ ಶಿಫಾರಸು ಮಾಡಬಹುದು. ತಮಿಳುನಾಡಿನಲ್ಲಿ ಇದೇ ಮೊದಲ ಬಾರಿಗೆ ಸಮಸ್ಯೆ ಪರಿಹರಿಸಲಾಗದೆ, ಹೂಡಿಕೆಯ ರಹಸ್ಯ ಒಳ ಒಪ್ಪಂದವನ್ನು ಬಹಿರಂಗಪಡಿಸಲಾಗದೆ ಪೊಲೀಸರನ್ನು ಬಳಸಿಕೊಂಡು ಸರ್ಕಾರ ಕಾರ್ಮಿಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ” ಎಂದು ಚಂದ್ರು ತಿಳಿಸಿದ್ದಾರೆ.

“ಕಾರ್ಮಿಕ ಹಕ್ಕುಗಳು ಮತ್ತು ಸಮಸ್ಯೆಗಳ ವಿಷಯಕ್ಕೆ ಬಂದರೆ, ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಜ್ಯ ಮಟ್ಟದಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ ಎಂದಿರುವ ಚಂದ್ರು, “ಕಾರ್ಮಿಕ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರಗಳು ಸರಿಯಾದ ನೀತಿಗಳನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

“ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದರು. ಆದರೆ, ಬಳಿಕ ಅವರು ಸಂಪೂರ್ಣ ತಟಸ್ಥತೆಯನ್ನು ಕಾಯ್ದುಕೊಂಡರು. ಪ್ರಸ್ತುತ ಸರ್ಕಾರ ನಾವು ಸಮಸ್ಯೆ ಪರಿಹರಿಸುತ್ತಿದ್ದೇವೆ ಎನ್ನುತ್ತಿದೆ. ಆದರೆ, ಅವರು ಇನ್ನೂ ಕಾರ್ಮಿಕರ ಒಕ್ಕೂಟಕ್ಕೆ ಮಾನ್ಯತೆಯೇ ನೀಡಿಲ್ಲ. ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿಂದ ಕಾರ್ಮಿಕರು ನ್ಯಾಯಾಲಯದ ಮೊರೆ ಹೋಗುತ್ತಿಲ್ಲ ಎಂದು ಚಂದ್ರು ವಿವರಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನೌಕರರಿಗೆ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ನೀಡಿತ್ತು. ಈ ನಡುವೆ ಅಕ್ಟೋಬರ್ 10ರಂದು ಸಂಜೆ ತಮಿಳುನಾಡು ಪೊಲೀಸರು ಸುಮಾರು 300 ಕಾರ್ಮಿಕರನ್ನು ಬಂಧಿಸಿದ್ದರು. ಕಾರ್ಮಿಕರ ಅಕ್ರಮ ಬಂಧನದ ವಿರುದ್ದ ಸಿಐಟಿಯು ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಕಾರ್ಮಿಕರನ್ನು ಕೂಡಲೇ ಬಿಡುಗಡೆ ಮಾಡುವಂತೆ ಶ್ರೀಪೆರಂಬದೂರು ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ವಿಶೇಷ ಅರ್ಜಿಯನ್ನೂ ಸಲ್ಲಿಸಿದೆ.

ಸೌಜನ್ಯ : ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಮೂರು ತಿಂಗಳಿನಿಂದ ಬಿಡುಗಡೆಯಾಗದ ಗೌರವಧನ; ಸಂಕಷ್ಟದಲ್ಲಿ ಅಂಗನವಾಡಿ ನೌಕರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...