Homeದಲಿತ್ ಫೈಲ್ಸ್ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಸೈನಿಕನಾಗಿ ಕೆಲಸ ಮಾಡುತ್ತಿದ್ದ ದಲಿತ ಯುವಕನೊಬ್ಬ ಸವರ್ಣೀಯರ ಮನೆಯ ಎದುರು ಫೋನಿನಲ್ಲಿ ಮಾತನಾಡಿದ್ದಕ್ಕೆ ಕೋಪಗೊಂಡ ಜಾತಿವಾದಿಗಳು ಮೂವರು ದಲಿತರನ್ನು ಹತ್ಯೆ ಮಾಡಿದ್ದರು.

- Advertisement -
- Advertisement -

ತಮಿಳುನಾಡಿನ ಶಿವಗಂಗೈ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿಶೇಷ ನ್ಯಾಯಾಲಯವು ಶುಕ್ರವಾರ (ಆ.5), ಮೂವರು ದಲಿತರ ತ್ರಿವಳಿ ಹತ್ಯೆಗೆ ಸಂಬಂಧಿಸಿದಂತೆ 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮೇ 28, 2018ರಂದು ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಕಾಂಚನಾಥಂನ ದೇವೇಂದ್ರ ಕುಲ್ಲಾ ವೆಲ್ಲಲರ್ (ದಲಿತ ಸಮುದಾಯ) ಗ್ರಾಮಸ್ಥರು ತಮ್ಮ ಕರುಪ್ಪುಸಾಮಿ ದೇವಸ್ಥಾನದಲ್ಲಿ ಹಬ್ಬ ಮುಗಿಸಿ ಮನೆಗಳಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆ ದಿನ ರಾತ್ರಿ ಅಗಮುಡಿಯಾರ್ (ಪ್ರಬಲವಾದ ತೇವರ್ ಜಾತಿ ಸಮೂಹದ ಒಂದು ಭಾಗ) ಸಮುದಾಯದ ವ್ಯಕ್ತಿಗಳು ಎಂಟು ಮಂದಿ ದಲಿತರ ಮೇಲೆ ದಾಳಿ ಮಾಡಿ ಚಾಕು ಮತ್ತು ಕುಡುಗೋಲುಗಳಿಂದ ತೀವ್ರವಾಗಿ ಗಾಯಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಾಳಿಯಲ್ಲಿ ಮೂವರು ಗಾಯಗೊಂಡು ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡಿದ್ದ ಐವರು ಬದುಕುಳಿದರು. ಈ ಪ್ರಕರಣದಲ್ಲಿ ಮೂಲತಃ ನಾಲ್ವರು ಬಾಲಾಪರಾಧಿಗಳು ಸೇರಿದಂತೆ ಒಟ್ಟು 33 ಅಗಮುಡಿಯರರ ಮೇಲೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.

ವಿಚಾರಣೆಯ ಅವಧಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 27 ಆರೋಪಿಗಳು ದುಷ್ಕೃತ್ಯದಲ್ಲಿ ಭಾಗಿಯಾಗಿರುವ ದೋಷಿಗಳೆಂದು ಆಗಸ್ಟ್ 1ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಘೋಷಿಸಲಾಗಿದೆ. 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇದಕ್ಕೂ ಮೊದಲು 2019ರಲ್ಲಿ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಆರೋಪಿಗಳಿಗೆ ಜಾಮೀನು ನಿರಾಕರಿಸಿತ್ತು. ಜಾಮೀನು ತಿರಸ್ಕರಿಸುವಾಗ ಆರುಮುಗಂ (68), ಷಣ್ಮುಗನಾಥನ್ (31) ಮತ್ತು ಚಂದ್ರಶೇಖರನ್ (34) ಅವರ ತ್ರಿವಳಿ ಹತ್ಯೆಗಳು ಜಾತಿ ಅಸಮಾನತೆಯ ಕೊಳಕು ಮುಖವನ್ನು ಕಠೋರವಾಗಿ ನೆನಪಿಸುತ್ತದೆ ಎಂದು ಪೀಠವು ಹೇಳಿತ್ತು. (ಶಿವಗಂಗೈ ಜಿಲ್ಲೆಯು ಜಾತಿ ಹಿಂಸಾಚಾರಗಳಿಂದ ಕುಖ್ಯಾತಿ ಪಡೆದಿದೆ.)

ಎಂಟು ಮಂದಿ ದಲಿತರ ಮೇಲೆ ಕ್ರೂರವಾಗಿ ಹಲ್ಲೆ ಮಾಡುವ ಎರಡು ದಿನಗಳ ಹಿಂದೆ (ಮೇ 26, 2018) ಈ ಘಟನೆಗೆ ಕಾರಣವಾಗುವ ಬೆಳವಣಿಗೆಗಳಾಗಿದ್ದವು. ಅಗಮುಡಿಯಾರ್ ಸಮುದಾಯದ ಮನೆಯ ಹೊರಗೆ ಫೋನಿನಲ್ಲಿ ದಲಿತ ಯುವಕನೊಬ್ಬ ಜೋರಾಗಿ ಮಾತನಾಡಿದ್ದಾನೆಂದು ಜಾತಿವಾದಿಗಳು ಕೋಪಗೊಂಡರು. ಅಪರಾಧಿಗಳಾದ ಸುಮನ್ ಮತ್ತು ಅರುಣ್‌ಕುಮಾರ್ ಯುವಕನ ಮೇಲೆ ದಾಳಿ ಮಾಡಿದ್ದರು.

ಮನೆಯ ಹೊರಗೆ ಮಾತನಾಡಿದ್ದು ತಮಗೆ ತೋರಿದ ‘ಅಗೌರವ’ ಎಂದು ಪರಿಗಣಿಸಿದ್ದರು. ಯುವಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ಜಾತಿ ನಿಂದನೆಗಳನ್ನು ಮಾಡಿದರು. ಕೊಲೆ ಬೆದರಿಕೆಗಳನ್ನು ಹಾಕಿದರು. ಮೇ 28ರಂದು ನಡೆದ ದಾಳಿಯಲ್ಲಿ ಬದುಕುಳಿದವರಾದ ಧನಶೇಖರನ್ (52), ಮಲೈಚಾಮಿ (50), ಸುಕುಮಾರನ್ (22), ದೇವೇಂದ್ರನ್ (45) ಮತ್ತು ಮಗೇಶ್ವರನ್ (18) ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ಹಲವರಿಗೆ 40ರಿಂದ 50 ಕುಡುಗೋಲಿನೇಟು ಬಿದ್ದಿವೆ ಎಂದು ‘ದಿ ವೈರ್’ ವರದಿ ಮಾಡಿದೆ.

ಗ್ರಾಮದಲ್ಲಿ 36 ಕುಟುಂಬಗಳಿವೆ. ಅವರಲ್ಲಿ ಒಬ್ಬರು ಮಾತ್ರ ಅಗಮುಡಿಯಾರ್ ಸಮುದಾಯಕ್ಕೆ ಸೇರಿದವರು. ಇದರ ಹೊರತಾಗಿಯೂ ಅಗಮುಡಿಯಾರ್ ಕುಟುಂಬವು ಉಳಿದ 35 ದಲಿತ ಕುಟುಂಬಗಳ ವಿರುದ್ಧ ಪದೇ ಪದೇ ತಾರತಮ್ಯವನ್ನು ಎಸಗುತ್ತಿದೆ ಎಂದು ‘ದಿ ವೈರ್‌’ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ…

ಗ್ರಾಮದ ದಲಿತರಲ್ಲಿ ಪದವೀಧರರು, ಪೊಲೀಸರು, ಸರ್ಕಾರಿ ನೌಕರರು ಇದ್ದು, ಆರ್ಥಿಕವಾಗಿ ಮುಂದುವರಿದಿದ್ದಾರೆ. ಇದನ್ನು ಅಗಮುಡಿಯಾರ್ ಜಾತಿವಾದಿ ಮನಸ್ಥಿತಿಯು ಸಹಿಕೊಳ್ಳಲಿಲ್ಲ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ. ಕೊಲೆಯಾದ ಮೂವರಲ್ಲಿ ಒಬ್ಬರಾದ ಆರುಮುಗಂ ಅವರ ಪುತ್ರ ಪ್ರಭಾಕರ್ ಫೋನಿನಲ್ಲಿ ಮಾತನಾಡಿದ ಕಾರಣಕ್ಕೆ ಸುಮನ್ ಮತ್ತು ಅರುಣಕುಮಾರ್ ಎಂಬವರು ಹಲ್ಲೆ ಮಾಡಿದ್ದರು.

ಪ್ರಭಾಕರ್ ಒಬ್ಬ ಸೈನಿಕ, ಮುಂಬರುವ ಮದುವೆಯ ಕಾರಣದಿಂದ ಮನೆಯಲ್ಲಿದ್ದರು. ಮೇ 26 ರಂದು ನಿಂದನೆ ಮತ್ತು ದೈಹಿಕ ಹಲ್ಲೆಯ ನಂತರ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದರು. ದಾಳಿಯ ರಾತ್ರಿ ಪ್ರಭಾಕರ್ ಸ್ಥಳದಲ್ಲಿರದ ಕಾರಣ, ಆತನ ತಂದೆ ಆರುಮುಗಂ ಅವರನ್ನು ಜಾತಿವಾದಿಗಳು ಟಾರ್ಗೆಟ್ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ವರದಿ ಕೃಪೆ: ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...