Homeದಲಿತ್ ಫೈಲ್ಸ್ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಸೈನಿಕನಾಗಿ ಕೆಲಸ ಮಾಡುತ್ತಿದ್ದ ದಲಿತ ಯುವಕನೊಬ್ಬ ಸವರ್ಣೀಯರ ಮನೆಯ ಎದುರು ಫೋನಿನಲ್ಲಿ ಮಾತನಾಡಿದ್ದಕ್ಕೆ ಕೋಪಗೊಂಡ ಜಾತಿವಾದಿಗಳು ಮೂವರು ದಲಿತರನ್ನು ಹತ್ಯೆ ಮಾಡಿದ್ದರು.

- Advertisement -
- Advertisement -

ತಮಿಳುನಾಡಿನ ಶಿವಗಂಗೈ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿಶೇಷ ನ್ಯಾಯಾಲಯವು ಶುಕ್ರವಾರ (ಆ.5), ಮೂವರು ದಲಿತರ ತ್ರಿವಳಿ ಹತ್ಯೆಗೆ ಸಂಬಂಧಿಸಿದಂತೆ 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮೇ 28, 2018ರಂದು ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಕಾಂಚನಾಥಂನ ದೇವೇಂದ್ರ ಕುಲ್ಲಾ ವೆಲ್ಲಲರ್ (ದಲಿತ ಸಮುದಾಯ) ಗ್ರಾಮಸ್ಥರು ತಮ್ಮ ಕರುಪ್ಪುಸಾಮಿ ದೇವಸ್ಥಾನದಲ್ಲಿ ಹಬ್ಬ ಮುಗಿಸಿ ಮನೆಗಳಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆ ದಿನ ರಾತ್ರಿ ಅಗಮುಡಿಯಾರ್ (ಪ್ರಬಲವಾದ ತೇವರ್ ಜಾತಿ ಸಮೂಹದ ಒಂದು ಭಾಗ) ಸಮುದಾಯದ ವ್ಯಕ್ತಿಗಳು ಎಂಟು ಮಂದಿ ದಲಿತರ ಮೇಲೆ ದಾಳಿ ಮಾಡಿ ಚಾಕು ಮತ್ತು ಕುಡುಗೋಲುಗಳಿಂದ ತೀವ್ರವಾಗಿ ಗಾಯಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಾಳಿಯಲ್ಲಿ ಮೂವರು ಗಾಯಗೊಂಡು ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡಿದ್ದ ಐವರು ಬದುಕುಳಿದರು. ಈ ಪ್ರಕರಣದಲ್ಲಿ ಮೂಲತಃ ನಾಲ್ವರು ಬಾಲಾಪರಾಧಿಗಳು ಸೇರಿದಂತೆ ಒಟ್ಟು 33 ಅಗಮುಡಿಯರರ ಮೇಲೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.

ವಿಚಾರಣೆಯ ಅವಧಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 27 ಆರೋಪಿಗಳು ದುಷ್ಕೃತ್ಯದಲ್ಲಿ ಭಾಗಿಯಾಗಿರುವ ದೋಷಿಗಳೆಂದು ಆಗಸ್ಟ್ 1ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಘೋಷಿಸಲಾಗಿದೆ. 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇದಕ್ಕೂ ಮೊದಲು 2019ರಲ್ಲಿ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಆರೋಪಿಗಳಿಗೆ ಜಾಮೀನು ನಿರಾಕರಿಸಿತ್ತು. ಜಾಮೀನು ತಿರಸ್ಕರಿಸುವಾಗ ಆರುಮುಗಂ (68), ಷಣ್ಮುಗನಾಥನ್ (31) ಮತ್ತು ಚಂದ್ರಶೇಖರನ್ (34) ಅವರ ತ್ರಿವಳಿ ಹತ್ಯೆಗಳು ಜಾತಿ ಅಸಮಾನತೆಯ ಕೊಳಕು ಮುಖವನ್ನು ಕಠೋರವಾಗಿ ನೆನಪಿಸುತ್ತದೆ ಎಂದು ಪೀಠವು ಹೇಳಿತ್ತು. (ಶಿವಗಂಗೈ ಜಿಲ್ಲೆಯು ಜಾತಿ ಹಿಂಸಾಚಾರಗಳಿಂದ ಕುಖ್ಯಾತಿ ಪಡೆದಿದೆ.)

ಎಂಟು ಮಂದಿ ದಲಿತರ ಮೇಲೆ ಕ್ರೂರವಾಗಿ ಹಲ್ಲೆ ಮಾಡುವ ಎರಡು ದಿನಗಳ ಹಿಂದೆ (ಮೇ 26, 2018) ಈ ಘಟನೆಗೆ ಕಾರಣವಾಗುವ ಬೆಳವಣಿಗೆಗಳಾಗಿದ್ದವು. ಅಗಮುಡಿಯಾರ್ ಸಮುದಾಯದ ಮನೆಯ ಹೊರಗೆ ಫೋನಿನಲ್ಲಿ ದಲಿತ ಯುವಕನೊಬ್ಬ ಜೋರಾಗಿ ಮಾತನಾಡಿದ್ದಾನೆಂದು ಜಾತಿವಾದಿಗಳು ಕೋಪಗೊಂಡರು. ಅಪರಾಧಿಗಳಾದ ಸುಮನ್ ಮತ್ತು ಅರುಣ್‌ಕುಮಾರ್ ಯುವಕನ ಮೇಲೆ ದಾಳಿ ಮಾಡಿದ್ದರು.

ಮನೆಯ ಹೊರಗೆ ಮಾತನಾಡಿದ್ದು ತಮಗೆ ತೋರಿದ ‘ಅಗೌರವ’ ಎಂದು ಪರಿಗಣಿಸಿದ್ದರು. ಯುವಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ಜಾತಿ ನಿಂದನೆಗಳನ್ನು ಮಾಡಿದರು. ಕೊಲೆ ಬೆದರಿಕೆಗಳನ್ನು ಹಾಕಿದರು. ಮೇ 28ರಂದು ನಡೆದ ದಾಳಿಯಲ್ಲಿ ಬದುಕುಳಿದವರಾದ ಧನಶೇಖರನ್ (52), ಮಲೈಚಾಮಿ (50), ಸುಕುಮಾರನ್ (22), ದೇವೇಂದ್ರನ್ (45) ಮತ್ತು ಮಗೇಶ್ವರನ್ (18) ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ಹಲವರಿಗೆ 40ರಿಂದ 50 ಕುಡುಗೋಲಿನೇಟು ಬಿದ್ದಿವೆ ಎಂದು ‘ದಿ ವೈರ್’ ವರದಿ ಮಾಡಿದೆ.

ಗ್ರಾಮದಲ್ಲಿ 36 ಕುಟುಂಬಗಳಿವೆ. ಅವರಲ್ಲಿ ಒಬ್ಬರು ಮಾತ್ರ ಅಗಮುಡಿಯಾರ್ ಸಮುದಾಯಕ್ಕೆ ಸೇರಿದವರು. ಇದರ ಹೊರತಾಗಿಯೂ ಅಗಮುಡಿಯಾರ್ ಕುಟುಂಬವು ಉಳಿದ 35 ದಲಿತ ಕುಟುಂಬಗಳ ವಿರುದ್ಧ ಪದೇ ಪದೇ ತಾರತಮ್ಯವನ್ನು ಎಸಗುತ್ತಿದೆ ಎಂದು ‘ದಿ ವೈರ್‌’ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ…

ಗ್ರಾಮದ ದಲಿತರಲ್ಲಿ ಪದವೀಧರರು, ಪೊಲೀಸರು, ಸರ್ಕಾರಿ ನೌಕರರು ಇದ್ದು, ಆರ್ಥಿಕವಾಗಿ ಮುಂದುವರಿದಿದ್ದಾರೆ. ಇದನ್ನು ಅಗಮುಡಿಯಾರ್ ಜಾತಿವಾದಿ ಮನಸ್ಥಿತಿಯು ಸಹಿಕೊಳ್ಳಲಿಲ್ಲ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ. ಕೊಲೆಯಾದ ಮೂವರಲ್ಲಿ ಒಬ್ಬರಾದ ಆರುಮುಗಂ ಅವರ ಪುತ್ರ ಪ್ರಭಾಕರ್ ಫೋನಿನಲ್ಲಿ ಮಾತನಾಡಿದ ಕಾರಣಕ್ಕೆ ಸುಮನ್ ಮತ್ತು ಅರುಣಕುಮಾರ್ ಎಂಬವರು ಹಲ್ಲೆ ಮಾಡಿದ್ದರು.

ಪ್ರಭಾಕರ್ ಒಬ್ಬ ಸೈನಿಕ, ಮುಂಬರುವ ಮದುವೆಯ ಕಾರಣದಿಂದ ಮನೆಯಲ್ಲಿದ್ದರು. ಮೇ 26 ರಂದು ನಿಂದನೆ ಮತ್ತು ದೈಹಿಕ ಹಲ್ಲೆಯ ನಂತರ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದರು. ದಾಳಿಯ ರಾತ್ರಿ ಪ್ರಭಾಕರ್ ಸ್ಥಳದಲ್ಲಿರದ ಕಾರಣ, ಆತನ ತಂದೆ ಆರುಮುಗಂ ಅವರನ್ನು ಜಾತಿವಾದಿಗಳು ಟಾರ್ಗೆಟ್ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ವರದಿ ಕೃಪೆ: ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...