Homeದಲಿತ್ ಫೈಲ್ಸ್ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

ಸೈನಿಕನಾಗಿ ಕೆಲಸ ಮಾಡುತ್ತಿದ್ದ ದಲಿತ ಯುವಕನೊಬ್ಬ ಸವರ್ಣೀಯರ ಮನೆಯ ಎದುರು ಫೋನಿನಲ್ಲಿ ಮಾತನಾಡಿದ್ದಕ್ಕೆ ಕೋಪಗೊಂಡ ಜಾತಿವಾದಿಗಳು ಮೂವರು ದಲಿತರನ್ನು ಹತ್ಯೆ ಮಾಡಿದ್ದರು.

- Advertisement -
- Advertisement -

ತಮಿಳುನಾಡಿನ ಶಿವಗಂಗೈ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿಶೇಷ ನ್ಯಾಯಾಲಯವು ಶುಕ್ರವಾರ (ಆ.5), ಮೂವರು ದಲಿತರ ತ್ರಿವಳಿ ಹತ್ಯೆಗೆ ಸಂಬಂಧಿಸಿದಂತೆ 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮೇ 28, 2018ರಂದು ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಕಾಂಚನಾಥಂನ ದೇವೇಂದ್ರ ಕುಲ್ಲಾ ವೆಲ್ಲಲರ್ (ದಲಿತ ಸಮುದಾಯ) ಗ್ರಾಮಸ್ಥರು ತಮ್ಮ ಕರುಪ್ಪುಸಾಮಿ ದೇವಸ್ಥಾನದಲ್ಲಿ ಹಬ್ಬ ಮುಗಿಸಿ ಮನೆಗಳಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆ ದಿನ ರಾತ್ರಿ ಅಗಮುಡಿಯಾರ್ (ಪ್ರಬಲವಾದ ತೇವರ್ ಜಾತಿ ಸಮೂಹದ ಒಂದು ಭಾಗ) ಸಮುದಾಯದ ವ್ಯಕ್ತಿಗಳು ಎಂಟು ಮಂದಿ ದಲಿತರ ಮೇಲೆ ದಾಳಿ ಮಾಡಿ ಚಾಕು ಮತ್ತು ಕುಡುಗೋಲುಗಳಿಂದ ತೀವ್ರವಾಗಿ ಗಾಯಗೊಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಾಳಿಯಲ್ಲಿ ಮೂವರು ಗಾಯಗೊಂಡು ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡಿದ್ದ ಐವರು ಬದುಕುಳಿದರು. ಈ ಪ್ರಕರಣದಲ್ಲಿ ಮೂಲತಃ ನಾಲ್ವರು ಬಾಲಾಪರಾಧಿಗಳು ಸೇರಿದಂತೆ ಒಟ್ಟು 33 ಅಗಮುಡಿಯರರ ಮೇಲೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.

ವಿಚಾರಣೆಯ ಅವಧಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 27 ಆರೋಪಿಗಳು ದುಷ್ಕೃತ್ಯದಲ್ಲಿ ಭಾಗಿಯಾಗಿರುವ ದೋಷಿಗಳೆಂದು ಆಗಸ್ಟ್ 1ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಘೋಷಿಸಲಾಗಿದೆ. 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇದಕ್ಕೂ ಮೊದಲು 2019ರಲ್ಲಿ, ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಆರೋಪಿಗಳಿಗೆ ಜಾಮೀನು ನಿರಾಕರಿಸಿತ್ತು. ಜಾಮೀನು ತಿರಸ್ಕರಿಸುವಾಗ ಆರುಮುಗಂ (68), ಷಣ್ಮುಗನಾಥನ್ (31) ಮತ್ತು ಚಂದ್ರಶೇಖರನ್ (34) ಅವರ ತ್ರಿವಳಿ ಹತ್ಯೆಗಳು ಜಾತಿ ಅಸಮಾನತೆಯ ಕೊಳಕು ಮುಖವನ್ನು ಕಠೋರವಾಗಿ ನೆನಪಿಸುತ್ತದೆ ಎಂದು ಪೀಠವು ಹೇಳಿತ್ತು. (ಶಿವಗಂಗೈ ಜಿಲ್ಲೆಯು ಜಾತಿ ಹಿಂಸಾಚಾರಗಳಿಂದ ಕುಖ್ಯಾತಿ ಪಡೆದಿದೆ.)

ಎಂಟು ಮಂದಿ ದಲಿತರ ಮೇಲೆ ಕ್ರೂರವಾಗಿ ಹಲ್ಲೆ ಮಾಡುವ ಎರಡು ದಿನಗಳ ಹಿಂದೆ (ಮೇ 26, 2018) ಈ ಘಟನೆಗೆ ಕಾರಣವಾಗುವ ಬೆಳವಣಿಗೆಗಳಾಗಿದ್ದವು. ಅಗಮುಡಿಯಾರ್ ಸಮುದಾಯದ ಮನೆಯ ಹೊರಗೆ ಫೋನಿನಲ್ಲಿ ದಲಿತ ಯುವಕನೊಬ್ಬ ಜೋರಾಗಿ ಮಾತನಾಡಿದ್ದಾನೆಂದು ಜಾತಿವಾದಿಗಳು ಕೋಪಗೊಂಡರು. ಅಪರಾಧಿಗಳಾದ ಸುಮನ್ ಮತ್ತು ಅರುಣ್‌ಕುಮಾರ್ ಯುವಕನ ಮೇಲೆ ದಾಳಿ ಮಾಡಿದ್ದರು.

ಮನೆಯ ಹೊರಗೆ ಮಾತನಾಡಿದ್ದು ತಮಗೆ ತೋರಿದ ‘ಅಗೌರವ’ ಎಂದು ಪರಿಗಣಿಸಿದ್ದರು. ಯುವಕನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ಜಾತಿ ನಿಂದನೆಗಳನ್ನು ಮಾಡಿದರು. ಕೊಲೆ ಬೆದರಿಕೆಗಳನ್ನು ಹಾಕಿದರು. ಮೇ 28ರಂದು ನಡೆದ ದಾಳಿಯಲ್ಲಿ ಬದುಕುಳಿದವರಾದ ಧನಶೇಖರನ್ (52), ಮಲೈಚಾಮಿ (50), ಸುಕುಮಾರನ್ (22), ದೇವೇಂದ್ರನ್ (45) ಮತ್ತು ಮಗೇಶ್ವರನ್ (18) ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ಹಲವರಿಗೆ 40ರಿಂದ 50 ಕುಡುಗೋಲಿನೇಟು ಬಿದ್ದಿವೆ ಎಂದು ‘ದಿ ವೈರ್’ ವರದಿ ಮಾಡಿದೆ.

ಗ್ರಾಮದಲ್ಲಿ 36 ಕುಟುಂಬಗಳಿವೆ. ಅವರಲ್ಲಿ ಒಬ್ಬರು ಮಾತ್ರ ಅಗಮುಡಿಯಾರ್ ಸಮುದಾಯಕ್ಕೆ ಸೇರಿದವರು. ಇದರ ಹೊರತಾಗಿಯೂ ಅಗಮುಡಿಯಾರ್ ಕುಟುಂಬವು ಉಳಿದ 35 ದಲಿತ ಕುಟುಂಬಗಳ ವಿರುದ್ಧ ಪದೇ ಪದೇ ತಾರತಮ್ಯವನ್ನು ಎಸಗುತ್ತಿದೆ ಎಂದು ‘ದಿ ವೈರ್‌’ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ…

ಗ್ರಾಮದ ದಲಿತರಲ್ಲಿ ಪದವೀಧರರು, ಪೊಲೀಸರು, ಸರ್ಕಾರಿ ನೌಕರರು ಇದ್ದು, ಆರ್ಥಿಕವಾಗಿ ಮುಂದುವರಿದಿದ್ದಾರೆ. ಇದನ್ನು ಅಗಮುಡಿಯಾರ್ ಜಾತಿವಾದಿ ಮನಸ್ಥಿತಿಯು ಸಹಿಕೊಳ್ಳಲಿಲ್ಲ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ. ಕೊಲೆಯಾದ ಮೂವರಲ್ಲಿ ಒಬ್ಬರಾದ ಆರುಮುಗಂ ಅವರ ಪುತ್ರ ಪ್ರಭಾಕರ್ ಫೋನಿನಲ್ಲಿ ಮಾತನಾಡಿದ ಕಾರಣಕ್ಕೆ ಸುಮನ್ ಮತ್ತು ಅರುಣಕುಮಾರ್ ಎಂಬವರು ಹಲ್ಲೆ ಮಾಡಿದ್ದರು.

ಪ್ರಭಾಕರ್ ಒಬ್ಬ ಸೈನಿಕ, ಮುಂಬರುವ ಮದುವೆಯ ಕಾರಣದಿಂದ ಮನೆಯಲ್ಲಿದ್ದರು. ಮೇ 26 ರಂದು ನಿಂದನೆ ಮತ್ತು ದೈಹಿಕ ಹಲ್ಲೆಯ ನಂತರ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದರು. ದಾಳಿಯ ರಾತ್ರಿ ಪ್ರಭಾಕರ್ ಸ್ಥಳದಲ್ಲಿರದ ಕಾರಣ, ಆತನ ತಂದೆ ಆರುಮುಗಂ ಅವರನ್ನು ಜಾತಿವಾದಿಗಳು ಟಾರ್ಗೆಟ್ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ವರದಿ ಕೃಪೆ: ನ್ಯೂಸ್‌ ಮಿನಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....