Homeಮುಖಪುಟ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಸಮುದಾಯವು ಅತ್ಯಂತ ಶೋಷಿತ ಜನಾಂಗವಾಗಿದೆ. ಈ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿರುವ ವಿಡಿಯೊ ವೈರಲ್ ಆಗಿದೆ. ನರಿಕ್ಕುರವ ಸಮುದಾಯ ಪದೇ ಪದೇ ಅವಮಾನಕ್ಕೊಳಗಾಗುತ್ತಿರುವ ಘಟನೆಗಳು ತಮಿಳುನಾಡಿನಲ್ಲಿ ನಡೆಯುತ್ತಲೇ ಇವೆ.

- Advertisement -
- Advertisement -

ನರಿಕ್ಕುರವ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡು ರಾಜ್ಯ ಸಾರಿಗೆ ನಿಗಮ (ಟಿಎನ್‌‌ಎಸ್‌ಟಿಸಿ) ಸಿಬ್ಬಂದಿ ಈ ದುಷ್ಕೃತ್ಯ ನಡೆಸಿದ್ದು, ಸಿಬ್ಬಂದಿಯನ್ನು ಅಮಾನತು ಮಾಡಿದೆ.

ನರಿಕ್ಕುರವ ಸಮುದಾಯದವರೆಂಬ ಕಾರಣಕ್ಕೆ ಮಗು ಸೇರಿದಂತೆ ಕುಟುಂಬವನ್ನು ನಾಗರಕೋಯಿಲ್‌ನಲ್ಲಿ ಕೆಳಗಿಳಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕನ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವಲ್ಲಿಯೂರು ಮಾರ್ಗವಾಗಿ ತಿರುನಲ್ವೇಲಿಗೆ ತೆರಳುತ್ತಿದ್ದ ಬಸ್‌ ಹತ್ತಲು ಯತ್ನಿಸಿದ ಕುಟುಂಬವನ್ನು ಅವಮಾನಿಸಲಾಗಿದೆ. ವಡಸ್ಸೆರಿ ಬಸ್ ನಿಲ್ದಾಣದಲ್ಲಿ ಅವರು ಬಸ್‌ನಿಂದ ಇಳಿಯುತ್ತಿರುವ ದೃಶ್ಯಾವಳಿಗಳು ವೈರಲ್ ಆಗಿವೆ. ವಯಸ್ಸಾಯದ ಮುದುಕರೊಬ್ಬರು ಕೋಲು ಹಿಡಿದು ಕೆಳಗಿಳಿಯುತ್ತಾರೆ. ಬಸ್‌ನಿಂದ ಕೆಳಗಿಳಿಸಿದಾಗ ಮಗು ಅಳುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಜೊತೆಗೆ ಒಬ್ಬ ಮಹಿಳೆಯೂ ಇದ್ದಾರೆ.

ಬಸ್ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಬಸ್ ನಿಲ್ಲಿಸಿ ಮಗು ಸೇರಿದಂತೆ ಕುಟುಂಬದವರನ್ನು ಕೆಳಗಿಳಿಸಲಾಗಿದೆ. ಅಲ್ಲದೇ ಅವರ ಸಾಮಾನುಗಳನ್ನು ಬಸ್ಸಿನಿಂದ ಹೊರಗೆ ಎಸೆಯಲಾಗಿದೆ. ಇದು ವಿಡಿಯೊದಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ವಿಡಿಯೋ ಆಧರಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಅಮಾನತು ಮಾಡಲು ನಿರ್ಧರಿಸಲಾಗಿದೆ ಎಂದು ಟಿಎನ್ಎಸ್‌‌ಟಿಸಿ ನಾಗರಕೋಯಿಲ್ ವಲಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ತಿಳಿಸಿದ್ದಾರೆ.

ಎರಡನೇ ಘಟನೆ: ತಮಿಳುನಾಡಿನಲ್ಲಿ ಈ ವಾರ ನಡೆದ ಎರಡನೇ ಘಟನೆ ಇದಾಗಿದೆ. ಇದಕ್ಕೂ ಮೊದಲು, ಕೊಲಾಚೆಲ್‌ನಲ್ಲಿ ಒಣಮೀನು ಮಾರಾಟ ಮಾಡುತ್ತಿದ್ದ ವೃದ್ಧ ಮಹಿಳೆಯನ್ನು ಬಲವಂತವಾಗಿ ಬಸ್‌ನಿಂದ ಹೊರಹಾಕಿದ್ದಕ್ಕಾಗಿ ಟಿಎನ್‌ಎಸ್‌ಟಿಸಿ ಬಸ್‌ನ ಚಾಲಕ ಸೇರಿದಂತೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಬಳಿಕ ಹಿರಿಯ ಟಿಎನ್‌ಎಸ್‌ಟಿಸಿ ಅಧಿಕಾರಿಯೊಬ್ಬರು ಮಹಿಳೆಗೆ ವೈಯಕ್ತಿಕವಾಗಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿತ್ತು.


ಇದನ್ನೂ ಓದಿರಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?


ನರಿಕ್ಕುರವ ಸಮುದಾಯದ ಮಹಿಳೆಗೆ ಊಟ ನಿರಾಕರಣೆ

ನರಿಕ್ಕುರವ ಸಮುದಾಯದ ಮಹಿಳೆಗೆ ದೇವಸ್ಥಾನದಲ್ಲಿ ಊಟ ನಿರಾಕರಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನರಿಕ್ಕುರವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಸಮಾನತೆ ಸಾರಿದ್ದರು.

ಅಕ್ಟೋಬರ್ 29ರಂದು ಸಚಿವ ಪಿ.ಕೆ.ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್.ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಅಶ್ವಿನಿಯವರ ನರಿಕ್ಕುರವ ಅಲೆಮಾರಿ ಸಮುದಾತದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿತ್ತು.

ಮಹಿಳೆಯನ್ನು ಭೇಟಿಯಾಗಿದ್ದ ಸಿಎಂ ಸ್ಟಾಲಿನ್‌

ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಭೇಟಿ ಮಾಡಿದ್ದರು. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದ್ದರು.

ಜನಪ್ರತಿನಿಧಿಗಳು ಇಷ್ಟೆಲ್ಲ ಕ್ರಮಗಳನ್ನು ಜರುಗಿಸುತ್ತಿದ್ದರೂ ನರಿಕ್ಕುರವ ಸಮುದಾಯ ಮತ್ತೆ ಮತ್ತೆ ಅವಮಾನಕ್ಕೆ ಒಳಗಾಗುತ್ತಿರುವುದು ಮಾತ್ರ ನಿಲ್ಲುತ್ತಿಲ್ಲ.


ಇದನ್ನೂ ಓದಿರಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...