Homeಮುಖಪುಟ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಸಮುದಾಯವು ಅತ್ಯಂತ ಶೋಷಿತ ಜನಾಂಗವಾಗಿದೆ. ಈ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿರುವ ವಿಡಿಯೊ ವೈರಲ್ ಆಗಿದೆ. ನರಿಕ್ಕುರವ ಸಮುದಾಯ ಪದೇ ಪದೇ ಅವಮಾನಕ್ಕೊಳಗಾಗುತ್ತಿರುವ ಘಟನೆಗಳು ತಮಿಳುನಾಡಿನಲ್ಲಿ ನಡೆಯುತ್ತಲೇ ಇವೆ.

- Advertisement -
- Advertisement -

ನರಿಕ್ಕುರವ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡು ರಾಜ್ಯ ಸಾರಿಗೆ ನಿಗಮ (ಟಿಎನ್‌‌ಎಸ್‌ಟಿಸಿ) ಸಿಬ್ಬಂದಿ ಈ ದುಷ್ಕೃತ್ಯ ನಡೆಸಿದ್ದು, ಸಿಬ್ಬಂದಿಯನ್ನು ಅಮಾನತು ಮಾಡಿದೆ.

ನರಿಕ್ಕುರವ ಸಮುದಾಯದವರೆಂಬ ಕಾರಣಕ್ಕೆ ಮಗು ಸೇರಿದಂತೆ ಕುಟುಂಬವನ್ನು ನಾಗರಕೋಯಿಲ್‌ನಲ್ಲಿ ಕೆಳಗಿಳಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕನ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವಲ್ಲಿಯೂರು ಮಾರ್ಗವಾಗಿ ತಿರುನಲ್ವೇಲಿಗೆ ತೆರಳುತ್ತಿದ್ದ ಬಸ್‌ ಹತ್ತಲು ಯತ್ನಿಸಿದ ಕುಟುಂಬವನ್ನು ಅವಮಾನಿಸಲಾಗಿದೆ. ವಡಸ್ಸೆರಿ ಬಸ್ ನಿಲ್ದಾಣದಲ್ಲಿ ಅವರು ಬಸ್‌ನಿಂದ ಇಳಿಯುತ್ತಿರುವ ದೃಶ್ಯಾವಳಿಗಳು ವೈರಲ್ ಆಗಿವೆ. ವಯಸ್ಸಾಯದ ಮುದುಕರೊಬ್ಬರು ಕೋಲು ಹಿಡಿದು ಕೆಳಗಿಳಿಯುತ್ತಾರೆ. ಬಸ್‌ನಿಂದ ಕೆಳಗಿಳಿಸಿದಾಗ ಮಗು ಅಳುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಜೊತೆಗೆ ಒಬ್ಬ ಮಹಿಳೆಯೂ ಇದ್ದಾರೆ.

ಬಸ್ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಬಸ್ ನಿಲ್ಲಿಸಿ ಮಗು ಸೇರಿದಂತೆ ಕುಟುಂಬದವರನ್ನು ಕೆಳಗಿಳಿಸಲಾಗಿದೆ. ಅಲ್ಲದೇ ಅವರ ಸಾಮಾನುಗಳನ್ನು ಬಸ್ಸಿನಿಂದ ಹೊರಗೆ ಎಸೆಯಲಾಗಿದೆ. ಇದು ವಿಡಿಯೊದಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ವಿಡಿಯೋ ಆಧರಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಅಮಾನತು ಮಾಡಲು ನಿರ್ಧರಿಸಲಾಗಿದೆ ಎಂದು ಟಿಎನ್ಎಸ್‌‌ಟಿಸಿ ನಾಗರಕೋಯಿಲ್ ವಲಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ತಿಳಿಸಿದ್ದಾರೆ.

ಎರಡನೇ ಘಟನೆ: ತಮಿಳುನಾಡಿನಲ್ಲಿ ಈ ವಾರ ನಡೆದ ಎರಡನೇ ಘಟನೆ ಇದಾಗಿದೆ. ಇದಕ್ಕೂ ಮೊದಲು, ಕೊಲಾಚೆಲ್‌ನಲ್ಲಿ ಒಣಮೀನು ಮಾರಾಟ ಮಾಡುತ್ತಿದ್ದ ವೃದ್ಧ ಮಹಿಳೆಯನ್ನು ಬಲವಂತವಾಗಿ ಬಸ್‌ನಿಂದ ಹೊರಹಾಕಿದ್ದಕ್ಕಾಗಿ ಟಿಎನ್‌ಎಸ್‌ಟಿಸಿ ಬಸ್‌ನ ಚಾಲಕ ಸೇರಿದಂತೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಬಳಿಕ ಹಿರಿಯ ಟಿಎನ್‌ಎಸ್‌ಟಿಸಿ ಅಧಿಕಾರಿಯೊಬ್ಬರು ಮಹಿಳೆಗೆ ವೈಯಕ್ತಿಕವಾಗಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿತ್ತು.


ಇದನ್ನೂ ಓದಿರಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?


ನರಿಕ್ಕುರವ ಸಮುದಾಯದ ಮಹಿಳೆಗೆ ಊಟ ನಿರಾಕರಣೆ

ನರಿಕ್ಕುರವ ಸಮುದಾಯದ ಮಹಿಳೆಗೆ ದೇವಸ್ಥಾನದಲ್ಲಿ ಊಟ ನಿರಾಕರಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನರಿಕ್ಕುರವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಸಮಾನತೆ ಸಾರಿದ್ದರು.

ಅಕ್ಟೋಬರ್ 29ರಂದು ಸಚಿವ ಪಿ.ಕೆ.ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್.ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಅಶ್ವಿನಿಯವರ ನರಿಕ್ಕುರವ ಅಲೆಮಾರಿ ಸಮುದಾತದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿತ್ತು.

ಮಹಿಳೆಯನ್ನು ಭೇಟಿಯಾಗಿದ್ದ ಸಿಎಂ ಸ್ಟಾಲಿನ್‌

ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಭೇಟಿ ಮಾಡಿದ್ದರು. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದ್ದರು.

ಜನಪ್ರತಿನಿಧಿಗಳು ಇಷ್ಟೆಲ್ಲ ಕ್ರಮಗಳನ್ನು ಜರುಗಿಸುತ್ತಿದ್ದರೂ ನರಿಕ್ಕುರವ ಸಮುದಾಯ ಮತ್ತೆ ಮತ್ತೆ ಅವಮಾನಕ್ಕೆ ಒಳಗಾಗುತ್ತಿರುವುದು ಮಾತ್ರ ನಿಲ್ಲುತ್ತಿಲ್ಲ.


ಇದನ್ನೂ ಓದಿರಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...