Homeಮುಖಪುಟ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಸಮುದಾಯವು ಅತ್ಯಂತ ಶೋಷಿತ ಜನಾಂಗವಾಗಿದೆ. ಈ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿರುವ ವಿಡಿಯೊ ವೈರಲ್ ಆಗಿದೆ. ನರಿಕ್ಕುರವ ಸಮುದಾಯ ಪದೇ ಪದೇ ಅವಮಾನಕ್ಕೊಳಗಾಗುತ್ತಿರುವ ಘಟನೆಗಳು ತಮಿಳುನಾಡಿನಲ್ಲಿ ನಡೆಯುತ್ತಲೇ ಇವೆ.

- Advertisement -
- Advertisement -

ನರಿಕ್ಕುರವ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡು ರಾಜ್ಯ ಸಾರಿಗೆ ನಿಗಮ (ಟಿಎನ್‌‌ಎಸ್‌ಟಿಸಿ) ಸಿಬ್ಬಂದಿ ಈ ದುಷ್ಕೃತ್ಯ ನಡೆಸಿದ್ದು, ಸಿಬ್ಬಂದಿಯನ್ನು ಅಮಾನತು ಮಾಡಿದೆ.

ನರಿಕ್ಕುರವ ಸಮುದಾಯದವರೆಂಬ ಕಾರಣಕ್ಕೆ ಮಗು ಸೇರಿದಂತೆ ಕುಟುಂಬವನ್ನು ನಾಗರಕೋಯಿಲ್‌ನಲ್ಲಿ ಕೆಳಗಿಳಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕನ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವಲ್ಲಿಯೂರು ಮಾರ್ಗವಾಗಿ ತಿರುನಲ್ವೇಲಿಗೆ ತೆರಳುತ್ತಿದ್ದ ಬಸ್‌ ಹತ್ತಲು ಯತ್ನಿಸಿದ ಕುಟುಂಬವನ್ನು ಅವಮಾನಿಸಲಾಗಿದೆ. ವಡಸ್ಸೆರಿ ಬಸ್ ನಿಲ್ದಾಣದಲ್ಲಿ ಅವರು ಬಸ್‌ನಿಂದ ಇಳಿಯುತ್ತಿರುವ ದೃಶ್ಯಾವಳಿಗಳು ವೈರಲ್ ಆಗಿವೆ. ವಯಸ್ಸಾಯದ ಮುದುಕರೊಬ್ಬರು ಕೋಲು ಹಿಡಿದು ಕೆಳಗಿಳಿಯುತ್ತಾರೆ. ಬಸ್‌ನಿಂದ ಕೆಳಗಿಳಿಸಿದಾಗ ಮಗು ಅಳುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಜೊತೆಗೆ ಒಬ್ಬ ಮಹಿಳೆಯೂ ಇದ್ದಾರೆ.

ಬಸ್ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಬಸ್ ನಿಲ್ಲಿಸಿ ಮಗು ಸೇರಿದಂತೆ ಕುಟುಂಬದವರನ್ನು ಕೆಳಗಿಳಿಸಲಾಗಿದೆ. ಅಲ್ಲದೇ ಅವರ ಸಾಮಾನುಗಳನ್ನು ಬಸ್ಸಿನಿಂದ ಹೊರಗೆ ಎಸೆಯಲಾಗಿದೆ. ಇದು ವಿಡಿಯೊದಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ವಿಡಿಯೋ ಆಧರಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಅಮಾನತು ಮಾಡಲು ನಿರ್ಧರಿಸಲಾಗಿದೆ ಎಂದು ಟಿಎನ್ಎಸ್‌‌ಟಿಸಿ ನಾಗರಕೋಯಿಲ್ ವಲಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ತಿಳಿಸಿದ್ದಾರೆ.

ಎರಡನೇ ಘಟನೆ: ತಮಿಳುನಾಡಿನಲ್ಲಿ ಈ ವಾರ ನಡೆದ ಎರಡನೇ ಘಟನೆ ಇದಾಗಿದೆ. ಇದಕ್ಕೂ ಮೊದಲು, ಕೊಲಾಚೆಲ್‌ನಲ್ಲಿ ಒಣಮೀನು ಮಾರಾಟ ಮಾಡುತ್ತಿದ್ದ ವೃದ್ಧ ಮಹಿಳೆಯನ್ನು ಬಲವಂತವಾಗಿ ಬಸ್‌ನಿಂದ ಹೊರಹಾಕಿದ್ದಕ್ಕಾಗಿ ಟಿಎನ್‌ಎಸ್‌ಟಿಸಿ ಬಸ್‌ನ ಚಾಲಕ ಸೇರಿದಂತೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಬಳಿಕ ಹಿರಿಯ ಟಿಎನ್‌ಎಸ್‌ಟಿಸಿ ಅಧಿಕಾರಿಯೊಬ್ಬರು ಮಹಿಳೆಗೆ ವೈಯಕ್ತಿಕವಾಗಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿತ್ತು.


ಇದನ್ನೂ ಓದಿರಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?


ನರಿಕ್ಕುರವ ಸಮುದಾಯದ ಮಹಿಳೆಗೆ ಊಟ ನಿರಾಕರಣೆ

ನರಿಕ್ಕುರವ ಸಮುದಾಯದ ಮಹಿಳೆಗೆ ದೇವಸ್ಥಾನದಲ್ಲಿ ಊಟ ನಿರಾಕರಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನರಿಕ್ಕುರವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಸಮಾನತೆ ಸಾರಿದ್ದರು.

ಅಕ್ಟೋಬರ್ 29ರಂದು ಸಚಿವ ಪಿ.ಕೆ.ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್.ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಅಶ್ವಿನಿಯವರ ನರಿಕ್ಕುರವ ಅಲೆಮಾರಿ ಸಮುದಾತದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿತ್ತು.

ಮಹಿಳೆಯನ್ನು ಭೇಟಿಯಾಗಿದ್ದ ಸಿಎಂ ಸ್ಟಾಲಿನ್‌

ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಭೇಟಿ ಮಾಡಿದ್ದರು. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದ್ದರು.

ಜನಪ್ರತಿನಿಧಿಗಳು ಇಷ್ಟೆಲ್ಲ ಕ್ರಮಗಳನ್ನು ಜರುಗಿಸುತ್ತಿದ್ದರೂ ನರಿಕ್ಕುರವ ಸಮುದಾಯ ಮತ್ತೆ ಮತ್ತೆ ಅವಮಾನಕ್ಕೆ ಒಳಗಾಗುತ್ತಿರುವುದು ಮಾತ್ರ ನಿಲ್ಲುತ್ತಿಲ್ಲ.


ಇದನ್ನೂ ಓದಿರಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...