Homeಮುಖಪುಟ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಸಮುದಾಯವು ಅತ್ಯಂತ ಶೋಷಿತ ಜನಾಂಗವಾಗಿದೆ. ಈ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿರುವ ವಿಡಿಯೊ ವೈರಲ್ ಆಗಿದೆ. ನರಿಕ್ಕುರವ ಸಮುದಾಯ ಪದೇ ಪದೇ ಅವಮಾನಕ್ಕೊಳಗಾಗುತ್ತಿರುವ ಘಟನೆಗಳು ತಮಿಳುನಾಡಿನಲ್ಲಿ ನಡೆಯುತ್ತಲೇ ಇವೆ.

- Advertisement -
- Advertisement -

ನರಿಕ್ಕುರವ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡು ರಾಜ್ಯ ಸಾರಿಗೆ ನಿಗಮ (ಟಿಎನ್‌‌ಎಸ್‌ಟಿಸಿ) ಸಿಬ್ಬಂದಿ ಈ ದುಷ್ಕೃತ್ಯ ನಡೆಸಿದ್ದು, ಸಿಬ್ಬಂದಿಯನ್ನು ಅಮಾನತು ಮಾಡಿದೆ.

ನರಿಕ್ಕುರವ ಸಮುದಾಯದವರೆಂಬ ಕಾರಣಕ್ಕೆ ಮಗು ಸೇರಿದಂತೆ ಕುಟುಂಬವನ್ನು ನಾಗರಕೋಯಿಲ್‌ನಲ್ಲಿ ಕೆಳಗಿಳಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕನ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವಲ್ಲಿಯೂರು ಮಾರ್ಗವಾಗಿ ತಿರುನಲ್ವೇಲಿಗೆ ತೆರಳುತ್ತಿದ್ದ ಬಸ್‌ ಹತ್ತಲು ಯತ್ನಿಸಿದ ಕುಟುಂಬವನ್ನು ಅವಮಾನಿಸಲಾಗಿದೆ. ವಡಸ್ಸೆರಿ ಬಸ್ ನಿಲ್ದಾಣದಲ್ಲಿ ಅವರು ಬಸ್‌ನಿಂದ ಇಳಿಯುತ್ತಿರುವ ದೃಶ್ಯಾವಳಿಗಳು ವೈರಲ್ ಆಗಿವೆ. ವಯಸ್ಸಾಯದ ಮುದುಕರೊಬ್ಬರು ಕೋಲು ಹಿಡಿದು ಕೆಳಗಿಳಿಯುತ್ತಾರೆ. ಬಸ್‌ನಿಂದ ಕೆಳಗಿಳಿಸಿದಾಗ ಮಗು ಅಳುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಜೊತೆಗೆ ಒಬ್ಬ ಮಹಿಳೆಯೂ ಇದ್ದಾರೆ.

ಬಸ್ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಬಸ್ ನಿಲ್ಲಿಸಿ ಮಗು ಸೇರಿದಂತೆ ಕುಟುಂಬದವರನ್ನು ಕೆಳಗಿಳಿಸಲಾಗಿದೆ. ಅಲ್ಲದೇ ಅವರ ಸಾಮಾನುಗಳನ್ನು ಬಸ್ಸಿನಿಂದ ಹೊರಗೆ ಎಸೆಯಲಾಗಿದೆ. ಇದು ವಿಡಿಯೊದಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ವಿಡಿಯೋ ಆಧರಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಅಮಾನತು ಮಾಡಲು ನಿರ್ಧರಿಸಲಾಗಿದೆ ಎಂದು ಟಿಎನ್ಎಸ್‌‌ಟಿಸಿ ನಾಗರಕೋಯಿಲ್ ವಲಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ತಿಳಿಸಿದ್ದಾರೆ.

ಎರಡನೇ ಘಟನೆ: ತಮಿಳುನಾಡಿನಲ್ಲಿ ಈ ವಾರ ನಡೆದ ಎರಡನೇ ಘಟನೆ ಇದಾಗಿದೆ. ಇದಕ್ಕೂ ಮೊದಲು, ಕೊಲಾಚೆಲ್‌ನಲ್ಲಿ ಒಣಮೀನು ಮಾರಾಟ ಮಾಡುತ್ತಿದ್ದ ವೃದ್ಧ ಮಹಿಳೆಯನ್ನು ಬಲವಂತವಾಗಿ ಬಸ್‌ನಿಂದ ಹೊರಹಾಕಿದ್ದಕ್ಕಾಗಿ ಟಿಎನ್‌ಎಸ್‌ಟಿಸಿ ಬಸ್‌ನ ಚಾಲಕ ಸೇರಿದಂತೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಬಳಿಕ ಹಿರಿಯ ಟಿಎನ್‌ಎಸ್‌ಟಿಸಿ ಅಧಿಕಾರಿಯೊಬ್ಬರು ಮಹಿಳೆಗೆ ವೈಯಕ್ತಿಕವಾಗಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿತ್ತು.


ಇದನ್ನೂ ಓದಿರಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?


ನರಿಕ್ಕುರವ ಸಮುದಾಯದ ಮಹಿಳೆಗೆ ಊಟ ನಿರಾಕರಣೆ

ನರಿಕ್ಕುರವ ಸಮುದಾಯದ ಮಹಿಳೆಗೆ ದೇವಸ್ಥಾನದಲ್ಲಿ ಊಟ ನಿರಾಕರಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನರಿಕ್ಕುರವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಸಮಾನತೆ ಸಾರಿದ್ದರು.

ಅಕ್ಟೋಬರ್ 29ರಂದು ಸಚಿವ ಪಿ.ಕೆ.ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್.ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಅಶ್ವಿನಿಯವರ ನರಿಕ್ಕುರವ ಅಲೆಮಾರಿ ಸಮುದಾತದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿತ್ತು.

ಮಹಿಳೆಯನ್ನು ಭೇಟಿಯಾಗಿದ್ದ ಸಿಎಂ ಸ್ಟಾಲಿನ್‌

ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಭೇಟಿ ಮಾಡಿದ್ದರು. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದ್ದರು.

ಜನಪ್ರತಿನಿಧಿಗಳು ಇಷ್ಟೆಲ್ಲ ಕ್ರಮಗಳನ್ನು ಜರುಗಿಸುತ್ತಿದ್ದರೂ ನರಿಕ್ಕುರವ ಸಮುದಾಯ ಮತ್ತೆ ಮತ್ತೆ ಅವಮಾನಕ್ಕೆ ಒಳಗಾಗುತ್ತಿರುವುದು ಮಾತ್ರ ನಿಲ್ಲುತ್ತಿಲ್ಲ.


ಇದನ್ನೂ ಓದಿರಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...