Homeಮುಖಪುಟ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಸಮುದಾಯವು ಅತ್ಯಂತ ಶೋಷಿತ ಜನಾಂಗವಾಗಿದೆ. ಈ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿರುವ ವಿಡಿಯೊ ವೈರಲ್ ಆಗಿದೆ. ನರಿಕ್ಕುರವ ಸಮುದಾಯ ಪದೇ ಪದೇ ಅವಮಾನಕ್ಕೊಳಗಾಗುತ್ತಿರುವ ಘಟನೆಗಳು ತಮಿಳುನಾಡಿನಲ್ಲಿ ನಡೆಯುತ್ತಲೇ ಇವೆ.

- Advertisement -
- Advertisement -

ನರಿಕ್ಕುರವ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡು ರಾಜ್ಯ ಸಾರಿಗೆ ನಿಗಮ (ಟಿಎನ್‌‌ಎಸ್‌ಟಿಸಿ) ಸಿಬ್ಬಂದಿ ಈ ದುಷ್ಕೃತ್ಯ ನಡೆಸಿದ್ದು, ಸಿಬ್ಬಂದಿಯನ್ನು ಅಮಾನತು ಮಾಡಿದೆ.

ನರಿಕ್ಕುರವ ಸಮುದಾಯದವರೆಂಬ ಕಾರಣಕ್ಕೆ ಮಗು ಸೇರಿದಂತೆ ಕುಟುಂಬವನ್ನು ನಾಗರಕೋಯಿಲ್‌ನಲ್ಲಿ ಕೆಳಗಿಳಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕನ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವಲ್ಲಿಯೂರು ಮಾರ್ಗವಾಗಿ ತಿರುನಲ್ವೇಲಿಗೆ ತೆರಳುತ್ತಿದ್ದ ಬಸ್‌ ಹತ್ತಲು ಯತ್ನಿಸಿದ ಕುಟುಂಬವನ್ನು ಅವಮಾನಿಸಲಾಗಿದೆ. ವಡಸ್ಸೆರಿ ಬಸ್ ನಿಲ್ದಾಣದಲ್ಲಿ ಅವರು ಬಸ್‌ನಿಂದ ಇಳಿಯುತ್ತಿರುವ ದೃಶ್ಯಾವಳಿಗಳು ವೈರಲ್ ಆಗಿವೆ. ವಯಸ್ಸಾಯದ ಮುದುಕರೊಬ್ಬರು ಕೋಲು ಹಿಡಿದು ಕೆಳಗಿಳಿಯುತ್ತಾರೆ. ಬಸ್‌ನಿಂದ ಕೆಳಗಿಳಿಸಿದಾಗ ಮಗು ಅಳುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಜೊತೆಗೆ ಒಬ್ಬ ಮಹಿಳೆಯೂ ಇದ್ದಾರೆ.

ಬಸ್ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಬಸ್ ನಿಲ್ಲಿಸಿ ಮಗು ಸೇರಿದಂತೆ ಕುಟುಂಬದವರನ್ನು ಕೆಳಗಿಳಿಸಲಾಗಿದೆ. ಅಲ್ಲದೇ ಅವರ ಸಾಮಾನುಗಳನ್ನು ಬಸ್ಸಿನಿಂದ ಹೊರಗೆ ಎಸೆಯಲಾಗಿದೆ. ಇದು ವಿಡಿಯೊದಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ವಿಡಿಯೋ ಆಧರಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಅಮಾನತು ಮಾಡಲು ನಿರ್ಧರಿಸಲಾಗಿದೆ ಎಂದು ಟಿಎನ್ಎಸ್‌‌ಟಿಸಿ ನಾಗರಕೋಯಿಲ್ ವಲಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ತಿಳಿಸಿದ್ದಾರೆ.

ಎರಡನೇ ಘಟನೆ: ತಮಿಳುನಾಡಿನಲ್ಲಿ ಈ ವಾರ ನಡೆದ ಎರಡನೇ ಘಟನೆ ಇದಾಗಿದೆ. ಇದಕ್ಕೂ ಮೊದಲು, ಕೊಲಾಚೆಲ್‌ನಲ್ಲಿ ಒಣಮೀನು ಮಾರಾಟ ಮಾಡುತ್ತಿದ್ದ ವೃದ್ಧ ಮಹಿಳೆಯನ್ನು ಬಲವಂತವಾಗಿ ಬಸ್‌ನಿಂದ ಹೊರಹಾಕಿದ್ದಕ್ಕಾಗಿ ಟಿಎನ್‌ಎಸ್‌ಟಿಸಿ ಬಸ್‌ನ ಚಾಲಕ ಸೇರಿದಂತೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಬಳಿಕ ಹಿರಿಯ ಟಿಎನ್‌ಎಸ್‌ಟಿಸಿ ಅಧಿಕಾರಿಯೊಬ್ಬರು ಮಹಿಳೆಗೆ ವೈಯಕ್ತಿಕವಾಗಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿತ್ತು.


ಇದನ್ನೂ ಓದಿರಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?


ನರಿಕ್ಕುರವ ಸಮುದಾಯದ ಮಹಿಳೆಗೆ ಊಟ ನಿರಾಕರಣೆ

ನರಿಕ್ಕುರವ ಸಮುದಾಯದ ಮಹಿಳೆಗೆ ದೇವಸ್ಥಾನದಲ್ಲಿ ಊಟ ನಿರಾಕರಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನರಿಕ್ಕುರವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಸಮಾನತೆ ಸಾರಿದ್ದರು.

ಅಕ್ಟೋಬರ್ 29ರಂದು ಸಚಿವ ಪಿ.ಕೆ.ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್.ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಅಶ್ವಿನಿಯವರ ನರಿಕ್ಕುರವ ಅಲೆಮಾರಿ ಸಮುದಾತದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿತ್ತು.

ಮಹಿಳೆಯನ್ನು ಭೇಟಿಯಾಗಿದ್ದ ಸಿಎಂ ಸ್ಟಾಲಿನ್‌

ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಭೇಟಿ ಮಾಡಿದ್ದರು. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದ್ದರು.

ಜನಪ್ರತಿನಿಧಿಗಳು ಇಷ್ಟೆಲ್ಲ ಕ್ರಮಗಳನ್ನು ಜರುಗಿಸುತ್ತಿದ್ದರೂ ನರಿಕ್ಕುರವ ಸಮುದಾಯ ಮತ್ತೆ ಮತ್ತೆ ಅವಮಾನಕ್ಕೆ ಒಳಗಾಗುತ್ತಿರುವುದು ಮಾತ್ರ ನಿಲ್ಲುತ್ತಿಲ್ಲ.


ಇದನ್ನೂ ಓದಿರಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...