Homeಮುಖಪುಟ‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಕುಟುಂಬವನ್ನು ಕೆಳಗಿಳಿಸಿದ ತ.ನಾಡು ಸಾರಿಗೆ ಸಿಬ್ಬಂದಿ; ಅಮಾನತು

‘ನರಿಕ್ಕುರವ’ ಸಮುದಾಯವು ಅತ್ಯಂತ ಶೋಷಿತ ಜನಾಂಗವಾಗಿದೆ. ಈ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿರುವ ವಿಡಿಯೊ ವೈರಲ್ ಆಗಿದೆ. ನರಿಕ್ಕುರವ ಸಮುದಾಯ ಪದೇ ಪದೇ ಅವಮಾನಕ್ಕೊಳಗಾಗುತ್ತಿರುವ ಘಟನೆಗಳು ತಮಿಳುನಾಡಿನಲ್ಲಿ ನಡೆಯುತ್ತಲೇ ಇವೆ.

- Advertisement -
- Advertisement -

ನರಿಕ್ಕುರವ ಸಮುದಾಯದ ಕುಟುಂಬವನ್ನು ಬಸ್‌ನಿಂದ ಕೆಳಗಿಳಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡು ರಾಜ್ಯ ಸಾರಿಗೆ ನಿಗಮ (ಟಿಎನ್‌‌ಎಸ್‌ಟಿಸಿ) ಸಿಬ್ಬಂದಿ ಈ ದುಷ್ಕೃತ್ಯ ನಡೆಸಿದ್ದು, ಸಿಬ್ಬಂದಿಯನ್ನು ಅಮಾನತು ಮಾಡಿದೆ.

ನರಿಕ್ಕುರವ ಸಮುದಾಯದವರೆಂಬ ಕಾರಣಕ್ಕೆ ಮಗು ಸೇರಿದಂತೆ ಕುಟುಂಬವನ್ನು ನಾಗರಕೋಯಿಲ್‌ನಲ್ಲಿ ಕೆಳಗಿಳಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕನ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವಲ್ಲಿಯೂರು ಮಾರ್ಗವಾಗಿ ತಿರುನಲ್ವೇಲಿಗೆ ತೆರಳುತ್ತಿದ್ದ ಬಸ್‌ ಹತ್ತಲು ಯತ್ನಿಸಿದ ಕುಟುಂಬವನ್ನು ಅವಮಾನಿಸಲಾಗಿದೆ. ವಡಸ್ಸೆರಿ ಬಸ್ ನಿಲ್ದಾಣದಲ್ಲಿ ಅವರು ಬಸ್‌ನಿಂದ ಇಳಿಯುತ್ತಿರುವ ದೃಶ್ಯಾವಳಿಗಳು ವೈರಲ್ ಆಗಿವೆ. ವಯಸ್ಸಾಯದ ಮುದುಕರೊಬ್ಬರು ಕೋಲು ಹಿಡಿದು ಕೆಳಗಿಳಿಯುತ್ತಾರೆ. ಬಸ್‌ನಿಂದ ಕೆಳಗಿಳಿಸಿದಾಗ ಮಗು ಅಳುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಜೊತೆಗೆ ಒಬ್ಬ ಮಹಿಳೆಯೂ ಇದ್ದಾರೆ.

ಬಸ್ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಬಸ್ ನಿಲ್ಲಿಸಿ ಮಗು ಸೇರಿದಂತೆ ಕುಟುಂಬದವರನ್ನು ಕೆಳಗಿಳಿಸಲಾಗಿದೆ. ಅಲ್ಲದೇ ಅವರ ಸಾಮಾನುಗಳನ್ನು ಬಸ್ಸಿನಿಂದ ಹೊರಗೆ ಎಸೆಯಲಾಗಿದೆ. ಇದು ವಿಡಿಯೊದಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ವಿಡಿಯೋ ಆಧರಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಅಮಾನತು ಮಾಡಲು ನಿರ್ಧರಿಸಲಾಗಿದೆ ಎಂದು ಟಿಎನ್ಎಸ್‌‌ಟಿಸಿ ನಾಗರಕೋಯಿಲ್ ವಲಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ತಿಳಿಸಿದ್ದಾರೆ.

ಎರಡನೇ ಘಟನೆ: ತಮಿಳುನಾಡಿನಲ್ಲಿ ಈ ವಾರ ನಡೆದ ಎರಡನೇ ಘಟನೆ ಇದಾಗಿದೆ. ಇದಕ್ಕೂ ಮೊದಲು, ಕೊಲಾಚೆಲ್‌ನಲ್ಲಿ ಒಣಮೀನು ಮಾರಾಟ ಮಾಡುತ್ತಿದ್ದ ವೃದ್ಧ ಮಹಿಳೆಯನ್ನು ಬಲವಂತವಾಗಿ ಬಸ್‌ನಿಂದ ಹೊರಹಾಕಿದ್ದಕ್ಕಾಗಿ ಟಿಎನ್‌ಎಸ್‌ಟಿಸಿ ಬಸ್‌ನ ಚಾಲಕ ಸೇರಿದಂತೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು. ಬಳಿಕ ಹಿರಿಯ ಟಿಎನ್‌ಎಸ್‌ಟಿಸಿ ಅಧಿಕಾರಿಯೊಬ್ಬರು ಮಹಿಳೆಗೆ ವೈಯಕ್ತಿಕವಾಗಿ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿತ್ತು.


ಇದನ್ನೂ ಓದಿರಿ: ಜೈಭೀಮ್ ಹವಾ | ಸೂರಿಯಾ ‘ಸ್ವಾರ್ಥಿ’ ಎಂದ ತಮಿಳುನಾಡು BJP ನಾಯಕ; ನಟ ಪ್ರತಿಕ್ರಿಯಿಸಿದ್ದು ಹೇಗೆ?


ನರಿಕ್ಕುರವ ಸಮುದಾಯದ ಮಹಿಳೆಗೆ ಊಟ ನಿರಾಕರಣೆ

ನರಿಕ್ಕುರವ ಸಮುದಾಯದ ಮಹಿಳೆಗೆ ದೇವಸ್ಥಾನದಲ್ಲಿ ಊಟ ನಿರಾಕರಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ತಮಿಳುನಾಡಿನ ಮಾಮಲ್ಲಪುರಂ ದೇವಸ್ಥಾನದಲ್ಲಿ ನರಿಕ್ಕುರವ ಅಲೆಮಾರಿ ಮಹಿಳೆಗೆ ಊಟ ನಿರಾಕರಿಸಲಾಗಿತ್ತು. ಸರ್ಕಾರದ ವತಿಯಿಂದ ನಡೆಯುವ ದೇವಸ್ಥಾನದ ಅನ್ನ ಸಂತರ್ಪಣೆಯಲ್ಲಿ ನಮ್ಮ ಸಮುದಾಯಕ್ಕೆ ಪ್ರವೇಶವಿಲ್ಲ ಏಕೆ ಎಂದು ಆ ಮಹಿಳೆ ಪ್ರಶ್ನಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದು ಸರ್ಕಾರದ ಗಮನಕ್ಕೆ ಬಂದ ನಂತರ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರು ಯಾವ ದೇವಸ್ಥಾನದಲ್ಲಿ ಆ ಮಹಿಳೆಗೆ ಆಹಾರ ನಿರಾಕರಿಸಲಾಯಿತೋ ಅದೇ ದೇವಸ್ಥಾನದಲ್ಲಿ ಆ ಮಹಿಳೆಯೊಟ್ಟಿಗೆ ಕುಳಿತು ಊಟ ಮಾಡುವ ಮೂಲಕ ಸಮಾನತೆ ಸಾರಿದ್ದರು.

ಅಕ್ಟೋಬರ್ 29ರಂದು ಸಚಿವ ಪಿ.ಕೆ.ಸೇಕರ್ ಬಾಬುರವರೊಂದಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಮತ್ತು ತಿರುಪೊರುರು ಶಾಸಕರಾದ ಎಸ್.ಎಸ್.ಬಾಲಾಜಿಯವರು ಸಹ ಸ್ಥಳಸಯನ ಪೆರುಮಾಳ್ ದೇವಾಲಯದಲ್ಲಿ ನಡೆದ ಸಾಮೂಹಿಕ ಭೋಜನ ಕಾರ್ಯಕ್ರಮದಲ್ಲಿ ತಾರತಮ್ಯಕ್ಕೊಳಗಾಗಿದ್ದ ಅಶ್ವಿನಿಯವರೊಂದಿಗೆ ಊಟ ಮಾಡಿದ್ದರು. ಅಶ್ವಿನಿಯವರ ನರಿಕ್ಕುರವ ಅಲೆಮಾರಿ ಸಮುದಾತದ ಹಲವು ಮಂದಿ ಭಾಗವಾಗಿಸಿದ್ದರು. ಆ ಮೂಲಕ ಜಾತಿ ತಾರತಮ್ಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ತಮಿಳುನಾಡು ಸರ್ಕಾರ ಸಾರಿತ್ತು.

ಮಹಿಳೆಯನ್ನು ಭೇಟಿಯಾಗಿದ್ದ ಸಿಎಂ ಸ್ಟಾಲಿನ್‌

ಊಟ ನಿರಾಕರಿಸಲಾಗಿದ್ದ ನರಿಕುರವರ್ ಅಲೆಮಾರಿ ಸಮುದಾಯದ ಮಹಿಳೆ ಅಶ್ವಿನಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಭೇಟಿ ಮಾಡಿದ್ದರು. ಮಹಿಳೆಯ ಮನೆಗೆ ತೆರಳಿದ ಮುಖ್ಯಮಂತ್ರಿ ಅವರೊಂದಿಗೆ ಕೆಲಕಾಲ ಮಾತನಾಡಿದ್ದರು.

ಜನಪ್ರತಿನಿಧಿಗಳು ಇಷ್ಟೆಲ್ಲ ಕ್ರಮಗಳನ್ನು ಜರುಗಿಸುತ್ತಿದ್ದರೂ ನರಿಕ್ಕುರವ ಸಮುದಾಯ ಮತ್ತೆ ಮತ್ತೆ ಅವಮಾನಕ್ಕೆ ಒಳಗಾಗುತ್ತಿರುವುದು ಮಾತ್ರ ನಿಲ್ಲುತ್ತಿಲ್ಲ.


ಇದನ್ನೂ ಓದಿರಿ: ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...