Homeಮುಖಪುಟತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

ತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

- Advertisement -
- Advertisement -

ಕಳೆದ ಶನಿವಾರ (ಫೆ.19) ರಂದು ಮುಕ್ತಾಯಗೊಂಡ ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವೆಲ್ಲೂರು ನಗರ ಮುನ್ಸಿಪಲ್ ಕಾರ್ಪೊರೇಷನ್ (ವಿಎಂಸಿ) ನಿಂದ ಡಿಎಂಕೆಯ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ, 49 ವರ್ಷದ ಆರ್.ಗಂಗಾ ಅವರು 15 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರ್. ಗಂಗಾ ಅವರು ವೆಲ್ಲೂರು ಜಿಲ್ಲೆಯಲ್ಲಿ ಕಾರ್ಪೊರೇಷನ್ ಕೌನ್ಸಿಲರ್ ಆಗಿ ಆಯ್ಕೆಯಾದ ಮೊದಲ ಟ್ರಾನ್ಸ್‌ಜೆಂಡರ್‌ ವ್ಯಕ್ತಿಯಾಗಿದ್ದಾರೆ. ವೆಲ್ಲೂರು ನಗರ ಪಾಲಿಕೆಯ (ವಿಸಿಎಂಸಿ) ವಾರ್ಡ್ 37 ರಿಂದ ಐವರು ಅಭ್ಯರ್ಥಿಗಳ ವಿರುದ್ಧ ಡಿಎಂಕೆ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಗಂಗಾ ಅವರು ಮಂಗಳವಾರ 2,131 ಮತಗಳನ್ನು ಗಳಿಸಿ 15 ಮತಗಳ ವ್ಯತ್ಯಾಸದಿಂದ ಗೆದ್ದಿದ್ದಾರೆ. ಇವರು ಕಳೆದ 20 ವರ್ಷಗಳಿಂದ ಪಕ್ಷದ ಸದಸ್ಯೆಯಾಗಿದ್ದಾರೆ.

ತಮಿಳುನಾಡಿನ 21 ನಿಗಮಗಳು, 138 ಪುರಸಭೆಗಳು ಮತ್ತು 490 ಪಟ್ಟಣ ಪಂಚಾಯಿತಿಗಳ 12,607 ಸ್ಥಾನಗಳಿಗೆ ಒಂದೇ ಹಂತದಲ್ಲಿ ಶನಿವಾರ ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಿತು.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಗಂಗಾ ಅವರ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದ್ದಾರೆ. ಗಂಗಾ ಅವರು ವೆಲ್ಲೂರ್ ಡಿಸ್ಟ್ರಿಕ್ಟ್ ಆಲ್ ಜೆಂಡರ್ ಪಾಸಿಟಿವ್ ನೆಟ್‌ವರ್ಕ್ ಅನ್ನು ನಡೆಸುತ್ತಿದ್ದಾರೆ. ಎಚ್‌ಐವಿ/ಏಡ್ಸ್ ಮತ್ತು ವಿಕಲಾಂಗ ವ್ಯಕ್ತಿಗಳಿಗೆ ಸಹಾಯ ಮಾಡುತ್ತಾರೆ. ಇವರು ಸೌತ್ ಇಂಡಿಯನ್ ಟ್ರಾನ್ಸ್‌ಜೆಂಡರ್ಸ್ ಫೆಡರೇಶನ್‌ನ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ.

“ಮಹಿಳೆಯರಿಗೆ ಸಾರ್ವಜನಿಕ ಶೌಚಾಲಯಗಳು ಮತ್ತು ಯುವಕರಿಗೆ ಆಟದ ಮೈದಾನವನ್ನು ಸ್ಥಾಪಿಸಲಾಗುವುದು. ಇಲ್ಲಿನ ನಿವಾಸಿಗಳು ಪ್ರಸ್ತುತ ಕಳಪೆ-ನಿರ್ವಹಣೆಯ ಓವರ್‌ಹೆಡ್ ಟ್ಯಾಂಕ್‌ನಿಂದ ಸರಬರಾಜು ಮಾಡುವ ನೀರನ್ನು ಬಳಸುತ್ತಿದ್ದಾರೆ. ಅವರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕಾಗಿದೆ” ಎಂದು ಚುನಾವಣೆಗೆ ಮುಂಚೆ ಗಂಗಾ ತಿಳಿಸಿದ್ದರು.

ಒಂದು ದಶಕದ ನಂತರ ನಡೆದ ನಗರ ಸ್ಥಲೀಯ ಸಂಸ್ಥೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಭರ್ಜರಿ ಜಯ ದಾಖಲಿಸಿದೆ. ತಮಿಳುನಾಡಿನ ಎಲ್ಲಾ 21 ನಗರ ನಿಗಮಗಳು ಮತ್ತು 138 ಪುರಸಭೆಗಳ ಪೈಕಿ 128 ಅನ್ನು ಗೆದ್ದಿದೆ. 489 ಪಟ್ಟಣ ಪಂಚಾಯಿತಿಗಳ ಪೈಕಿ 400ರಲ್ಲಿಯೂ ಪಕ್ಷ ಗೆಲುವು ಸಾಧಿಸಿದೆ.


ಇದನ್ನೂ ಓದಿ: ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....