Homeಮುಖಪುಟತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

ತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

- Advertisement -
- Advertisement -

ಕಳೆದ ಶನಿವಾರ (ಫೆ.19) ರಂದು ಮುಕ್ತಾಯಗೊಂಡ ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವೆಲ್ಲೂರು ನಗರ ಮುನ್ಸಿಪಲ್ ಕಾರ್ಪೊರೇಷನ್ (ವಿಎಂಸಿ) ನಿಂದ ಡಿಎಂಕೆಯ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ, 49 ವರ್ಷದ ಆರ್.ಗಂಗಾ ಅವರು 15 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರ್. ಗಂಗಾ ಅವರು ವೆಲ್ಲೂರು ಜಿಲ್ಲೆಯಲ್ಲಿ ಕಾರ್ಪೊರೇಷನ್ ಕೌನ್ಸಿಲರ್ ಆಗಿ ಆಯ್ಕೆಯಾದ ಮೊದಲ ಟ್ರಾನ್ಸ್‌ಜೆಂಡರ್‌ ವ್ಯಕ್ತಿಯಾಗಿದ್ದಾರೆ. ವೆಲ್ಲೂರು ನಗರ ಪಾಲಿಕೆಯ (ವಿಸಿಎಂಸಿ) ವಾರ್ಡ್ 37 ರಿಂದ ಐವರು ಅಭ್ಯರ್ಥಿಗಳ ವಿರುದ್ಧ ಡಿಎಂಕೆ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಗಂಗಾ ಅವರು ಮಂಗಳವಾರ 2,131 ಮತಗಳನ್ನು ಗಳಿಸಿ 15 ಮತಗಳ ವ್ಯತ್ಯಾಸದಿಂದ ಗೆದ್ದಿದ್ದಾರೆ. ಇವರು ಕಳೆದ 20 ವರ್ಷಗಳಿಂದ ಪಕ್ಷದ ಸದಸ್ಯೆಯಾಗಿದ್ದಾರೆ.

ತಮಿಳುನಾಡಿನ 21 ನಿಗಮಗಳು, 138 ಪುರಸಭೆಗಳು ಮತ್ತು 490 ಪಟ್ಟಣ ಪಂಚಾಯಿತಿಗಳ 12,607 ಸ್ಥಾನಗಳಿಗೆ ಒಂದೇ ಹಂತದಲ್ಲಿ ಶನಿವಾರ ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಿತು.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಗಂಗಾ ಅವರ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದ್ದಾರೆ. ಗಂಗಾ ಅವರು ವೆಲ್ಲೂರ್ ಡಿಸ್ಟ್ರಿಕ್ಟ್ ಆಲ್ ಜೆಂಡರ್ ಪಾಸಿಟಿವ್ ನೆಟ್‌ವರ್ಕ್ ಅನ್ನು ನಡೆಸುತ್ತಿದ್ದಾರೆ. ಎಚ್‌ಐವಿ/ಏಡ್ಸ್ ಮತ್ತು ವಿಕಲಾಂಗ ವ್ಯಕ್ತಿಗಳಿಗೆ ಸಹಾಯ ಮಾಡುತ್ತಾರೆ. ಇವರು ಸೌತ್ ಇಂಡಿಯನ್ ಟ್ರಾನ್ಸ್‌ಜೆಂಡರ್ಸ್ ಫೆಡರೇಶನ್‌ನ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ.

“ಮಹಿಳೆಯರಿಗೆ ಸಾರ್ವಜನಿಕ ಶೌಚಾಲಯಗಳು ಮತ್ತು ಯುವಕರಿಗೆ ಆಟದ ಮೈದಾನವನ್ನು ಸ್ಥಾಪಿಸಲಾಗುವುದು. ಇಲ್ಲಿನ ನಿವಾಸಿಗಳು ಪ್ರಸ್ತುತ ಕಳಪೆ-ನಿರ್ವಹಣೆಯ ಓವರ್‌ಹೆಡ್ ಟ್ಯಾಂಕ್‌ನಿಂದ ಸರಬರಾಜು ಮಾಡುವ ನೀರನ್ನು ಬಳಸುತ್ತಿದ್ದಾರೆ. ಅವರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕಾಗಿದೆ” ಎಂದು ಚುನಾವಣೆಗೆ ಮುಂಚೆ ಗಂಗಾ ತಿಳಿಸಿದ್ದರು.

ಒಂದು ದಶಕದ ನಂತರ ನಡೆದ ನಗರ ಸ್ಥಲೀಯ ಸಂಸ್ಥೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಭರ್ಜರಿ ಜಯ ದಾಖಲಿಸಿದೆ. ತಮಿಳುನಾಡಿನ ಎಲ್ಲಾ 21 ನಗರ ನಿಗಮಗಳು ಮತ್ತು 138 ಪುರಸಭೆಗಳ ಪೈಕಿ 128 ಅನ್ನು ಗೆದ್ದಿದೆ. 489 ಪಟ್ಟಣ ಪಂಚಾಯಿತಿಗಳ ಪೈಕಿ 400ರಲ್ಲಿಯೂ ಪಕ್ಷ ಗೆಲುವು ಸಾಧಿಸಿದೆ.


ಇದನ್ನೂ ಓದಿ: ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್‌ ಐಟಿ ಸೆಲ್‌ ಸಿಬ್ಬಂದಿಗೆ ಪೊಲೀಸರಿಂದ ಕಿರುಕುಳ: ಸುಪ್ರಿಯಾ ಶ್ರೀನಾಟೆ ಆರೋಪ

0
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದ ಮೇರೆಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪೊಲೀಸರು "ಕಿರುಕುಳ" ಮತ್ತು "ಬೆದರಿಕೆ" ಹಾಕುತ್ತಿದ್ದಾರೆ  ಎಂದು...