Homeಮುಖಪುಟತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

- Advertisement -
- Advertisement -

ತಮಿಳುನಾಡಿನಲ್ಲಿ ಒಂದು ದಶಕದ ನಂತರ ಶನಿವಾರ (ಫೆ.19) ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆಡಳಿತಾರೂಢ ಡಿಎಂಕೆ ದೊಡ್ಡ ಗೆಲುವಿನತ್ತ ಮುನ್ನುಗ್ಗುತ್ತಿದೆ.

ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾಗಿರುವ ಎಐಎಡಿಎಂಕೆಯಿಂದ ಬಿಜೆಪಿ ಬೇರ್ಪಟ್ಟು ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ. ಈ ಚುನಾವಣೆಯ ಫಲಿತಾಂಶವನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಒಂಬತ್ತು ತಿಂಗಳ ಕಾರ್ಯಕ್ಷಮತೆಯ ರಿಪೋರ್ಟ್ ಕಾರ್ಡ್‌ನಂತೆ ನೋಡಲಾಗು‌ತ್ತಿದೆ.

ರಾಜ್ಯದ ಒಟ್ಟು 1,374 ಕಾರ್ಪೊರೇಷನ್ ವಾರ್ಡ್‌ಗಳಲ್ಲಿ, ಡಿಎಂಕೆ ಇದುವರೆಗೆ 289, ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ 49, ಡಿಎಂಕೆಯ ಮಿತ್ರಪಕ್ಷ ಸಿಪಿಐ(ಎಂ) 11 ಗೆದ್ದಿದ್ದರೆ, ಪ್ರತಿಸ್ಪರ್ಧಿ ಬಿಜೆಪಿ 3 ರಲ್ಲಿ ಗೆಲುವು ಸಾಧಿಸಿದೆ ಎಂದು ತಮಿಳುನಾಡು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಪುರಸಭೆಗಳಲ್ಲಿ (ಒಟ್ಟು ವಾರ್ಡ್ ಸದಸ್ಯ ಸ್ಥಾನಗಳು 3,843), ಡಿಎಂಕೆ 1,211 ಮತ್ತು ಎಐಎಡಿಎಂಕೆ 320, ಕಾಂಗ್ರೆಸ್ 80, ಸಿಪಿಐ 10, ಸಿಪಿಎಂ 24, ಬಿಜೆಪಿ 29 ಮತ್ತು ಡಿಎಂಡಿಕೆ 5 ಸ್ಥಾನಗಳನ್ನು ಗೆದ್ದಿವೆ.

ಪಟ್ಟಣ ಪಂಚಾಯಿತಿಗಳಲ್ಲಿ ಡಿಎಂಕೆ 3,782 ವಾರ್ಡ್‌ಗಳಲ್ಲಿ, ಎಐಎಡಿಎಂಕೆ 1,070, ಕಾಂಗ್ರೆಸ್ 258, ಬಿಜೆಪಿ 132, ಸಿಪಿಎಂ 58 ಮತ್ತು ಸಿಪಿಐ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಫೆಬ್ರವರಿ 19 ರಂದು ನಗರ ನಾಗರಿಕ ಚುನಾವಣೆ ನಡೆದಿದ್ದು, ಇಂದು ರಾಜ್ಯದ 268 ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಿದೆ.

ರಾಜಧಾನಿ ಚೆನ್ನೈ ಸೇರಿದಂತೆ 21 ನಗರಗಳು, 138 ಪುರಸಭೆಗಳು ಮತ್ತು 490 ಪಟ್ಟಣ ಪಂಚಾಯತ್‌ಗಳ 12,000 ಕ್ಕೂ ಹೆಚ್ಚು ಸದಸ್ಯರನ್ನು ಈ ಚುನಾವಣೆ ಆಯ್ಕೆ ಮಾಡುತ್ತವೆ. ಕಳೆದ ಐದು ವರ್ಷಗಳಲ್ಲಿ, ಈ ಸಂಸ್ಥೆಗಳಿಗೆ ಚುನಾವಣೆ ನಡೆಯದ ಕಾರಣ ಚುನಾಯಿತ ಪ್ರತಿನಿಧಿಗಳು ಇರಲಿಲ್ಲ.

ಎಂ.ಕೆ ಸ್ಟಾಲಿನ್ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ಸಮೀಕ್ಷೆ ಇದಾಗಿದೆ. ಈ ಬಾರಿ, ಆಡಳಿತಾರೂಢ ಡಿಎಂಕೆ ಫೆಡರಲಿಸಂನ ರಾಷ್ಟ್ರೀಯ ಸಮಸ್ಯೆಗಳು ಮತ್ತು ರಾಜ್ಯ ಸ್ವಾಯತ್ತತೆ ವಿಷಯಗಳನ್ನು ಮುಖ್ಯವಾಗಿರಿಸಿಕೊಂಡಿತ್ತು.

ಇನ್ನು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮಿಳು ಸ್ಟಾರ್‌ ನಟರಾದ ರಜನಿಕಾಂತ್, ಧನುಷ್, ಅಜಿತ್, ಶಿವ ಕಾರ್ತಿಕೇಯನ್, ಸಿಂಬು, ನಟಿ ತ್ರಿಶಾ ಕೃಷ್ಣನ್ ಮತದಾನ ಮಾಡದೇ ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ಚರ್ಚೆಗೆ ಗ್ರಾಸವಾಗಿತ್ತು.


ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...