Homeಮುಖಪುಟತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

ತಮಿಳುನಾಡು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಡಿಎಂಕೆಗೆ ಭರ್ಜರಿ ಮುನ್ನಡೆ

- Advertisement -
- Advertisement -

ತಮಿಳುನಾಡಿನಲ್ಲಿ ಒಂದು ದಶಕದ ನಂತರ ಶನಿವಾರ (ಫೆ.19) ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆಡಳಿತಾರೂಢ ಡಿಎಂಕೆ ದೊಡ್ಡ ಗೆಲುವಿನತ್ತ ಮುನ್ನುಗ್ಗುತ್ತಿದೆ.

ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾಗಿರುವ ಎಐಎಡಿಎಂಕೆಯಿಂದ ಬಿಜೆಪಿ ಬೇರ್ಪಟ್ಟು ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ. ಈ ಚುನಾವಣೆಯ ಫಲಿತಾಂಶವನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಒಂಬತ್ತು ತಿಂಗಳ ಕಾರ್ಯಕ್ಷಮತೆಯ ರಿಪೋರ್ಟ್ ಕಾರ್ಡ್‌ನಂತೆ ನೋಡಲಾಗು‌ತ್ತಿದೆ.

ರಾಜ್ಯದ ಒಟ್ಟು 1,374 ಕಾರ್ಪೊರೇಷನ್ ವಾರ್ಡ್‌ಗಳಲ್ಲಿ, ಡಿಎಂಕೆ ಇದುವರೆಗೆ 289, ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ 49, ಡಿಎಂಕೆಯ ಮಿತ್ರಪಕ್ಷ ಸಿಪಿಐ(ಎಂ) 11 ಗೆದ್ದಿದ್ದರೆ, ಪ್ರತಿಸ್ಪರ್ಧಿ ಬಿಜೆಪಿ 3 ರಲ್ಲಿ ಗೆಲುವು ಸಾಧಿಸಿದೆ ಎಂದು ತಮಿಳುನಾಡು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: ರಾಷ್ಟ್ರಧ್ವಜ ಕುರಿತ ಹೇಳಿಕೆ: ಈಶ್ವರಪ್ಪಗೆ ಕರೆ ಮಾಡಿ ಛೀಮಾರಿ ಹಾಕಿದ್ದೇನೆ – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಪುರಸಭೆಗಳಲ್ಲಿ (ಒಟ್ಟು ವಾರ್ಡ್ ಸದಸ್ಯ ಸ್ಥಾನಗಳು 3,843), ಡಿಎಂಕೆ 1,211 ಮತ್ತು ಎಐಎಡಿಎಂಕೆ 320, ಕಾಂಗ್ರೆಸ್ 80, ಸಿಪಿಐ 10, ಸಿಪಿಎಂ 24, ಬಿಜೆಪಿ 29 ಮತ್ತು ಡಿಎಂಡಿಕೆ 5 ಸ್ಥಾನಗಳನ್ನು ಗೆದ್ದಿವೆ.

ಪಟ್ಟಣ ಪಂಚಾಯಿತಿಗಳಲ್ಲಿ ಡಿಎಂಕೆ 3,782 ವಾರ್ಡ್‌ಗಳಲ್ಲಿ, ಎಐಎಡಿಎಂಕೆ 1,070, ಕಾಂಗ್ರೆಸ್ 258, ಬಿಜೆಪಿ 132, ಸಿಪಿಎಂ 58 ಮತ್ತು ಸಿಪಿಐ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಫೆಬ್ರವರಿ 19 ರಂದು ನಗರ ನಾಗರಿಕ ಚುನಾವಣೆ ನಡೆದಿದ್ದು, ಇಂದು ರಾಜ್ಯದ 268 ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಿದೆ.

ರಾಜಧಾನಿ ಚೆನ್ನೈ ಸೇರಿದಂತೆ 21 ನಗರಗಳು, 138 ಪುರಸಭೆಗಳು ಮತ್ತು 490 ಪಟ್ಟಣ ಪಂಚಾಯತ್‌ಗಳ 12,000 ಕ್ಕೂ ಹೆಚ್ಚು ಸದಸ್ಯರನ್ನು ಈ ಚುನಾವಣೆ ಆಯ್ಕೆ ಮಾಡುತ್ತವೆ. ಕಳೆದ ಐದು ವರ್ಷಗಳಲ್ಲಿ, ಈ ಸಂಸ್ಥೆಗಳಿಗೆ ಚುನಾವಣೆ ನಡೆಯದ ಕಾರಣ ಚುನಾಯಿತ ಪ್ರತಿನಿಧಿಗಳು ಇರಲಿಲ್ಲ.

ಎಂ.ಕೆ ಸ್ಟಾಲಿನ್ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ಸಮೀಕ್ಷೆ ಇದಾಗಿದೆ. ಈ ಬಾರಿ, ಆಡಳಿತಾರೂಢ ಡಿಎಂಕೆ ಫೆಡರಲಿಸಂನ ರಾಷ್ಟ್ರೀಯ ಸಮಸ್ಯೆಗಳು ಮತ್ತು ರಾಜ್ಯ ಸ್ವಾಯತ್ತತೆ ವಿಷಯಗಳನ್ನು ಮುಖ್ಯವಾಗಿರಿಸಿಕೊಂಡಿತ್ತು.

ಇನ್ನು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮಿಳು ಸ್ಟಾರ್‌ ನಟರಾದ ರಜನಿಕಾಂತ್, ಧನುಷ್, ಅಜಿತ್, ಶಿವ ಕಾರ್ತಿಕೇಯನ್, ಸಿಂಬು, ನಟಿ ತ್ರಿಶಾ ಕೃಷ್ಣನ್ ಮತದಾನ ಮಾಡದೇ ಇರುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ಚರ್ಚೆಗೆ ಗ್ರಾಸವಾಗಿತ್ತು.


ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡದ ಸ್ಟಾರ್‌ ನಟರು: ಜನರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...