Homeದಲಿತ್ ಫೈಲ್ಸ್ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಸವರ್ಣೀಯರಿಂದ ಅಡ್ಡಿ : ಜಾತಿ ದೌರ್ಜನ್ಯಕ್ಕೆ ಪೊಲೀಸರ...

ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಸವರ್ಣೀಯರಿಂದ ಅಡ್ಡಿ : ಜಾತಿ ದೌರ್ಜನ್ಯಕ್ಕೆ ಪೊಲೀಸರ ಬೆಂಬಲ ಆರೋಪ

- Advertisement -
- Advertisement -

ತಮಿಳುನಾಡಿನ ತಿರುವಣ್ಣಾಮಲೈನಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿರುವ ಮೋತಕ್ಕಲ್ ಗ್ರಾಮದಲ್ಲಿ ಕಳೆದ ಸೋಮವಾರ (ಸೆ.30) ದಲಿತ ಮಹಿಳೆಯೊಬ್ಬರ ಶವಯಾತ್ರೆಗೆ ಪ್ರಬಲ ಜಾತಿಯ ಗುಂಪು ಆಕ್ಷೇಪ ವ್ಯಕ್ತಪಡಿಸಿದೆ. ತಮ್ಮ ಪ್ರದೇಶದ ಮಾರ್ಗದ ದುಸ್ಥಿತಿಯಿಂದಾಗಿ ಗ್ರಾಮದ ಮುಖ್ಯರಸ್ತೆಯ ಮೂಲಕ ಮೃತದೇಹ ಸಾಗಿಸಲು ದಲಿತ ಕುಟುಂಬ ನಿರ್ಧರಿಸಿತ್ತು ಎಂದು ದಿ ಮೂಕನಾಯಕ ವರದಿ ಮಾಡಿದೆ.

ವರದಿಯ ಪ್ರಕಾರ, 70 ವರ್ಷದ ದಲಿತ ಮಹಿಳೆ ಎಸ್.ಕಿಲಿಯಾಂಬಾಳ್ ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಸಂಜೆ ದಲಿತ ಕಾಲೋನಿಯಲ್ಲಿರುವ ತಮ್ಮ ಮಗಳ ಮನೆಯಲ್ಲಿ ಸಾವನ್ನಪ್ಪಿದ್ದರು. ದಲಿತರ ಸ್ಮಶಾನ ಊರ ಹೊರಗೆ ಇರುವುದರಿಂದ ಅಲ್ಲಿಗೆ ಶವ ಕೊಂಡೊಯ್ಯಬೇಕಿತ್ತು. ಗ್ರಾಮದಲ್ಲಿ ದಲಿತರಿಗೆ ಮತ್ತು ಸವರ್ಣಿಯರಿಗೆ ಶವಯಾತ್ರೆ ನಡೆಸಲು ಪ್ರತ್ಯೇಕ ರಸ್ತೆಗಳಿವೆ. ದಲಿತ ಕೇರಿಯ ರಸ್ತೆ ದುಸ್ಥಿಯಿಂದ ಕೂಡಿದೆ. ಹಾಗಾಗಿ, ಸೋಮವಾರ ದಲಿತರು ಗ್ರಾಮದ ಮುಖ್ಯ ರಸ್ತೆಯಲ್ಲಿ ಶವಯಾತ್ರೆ ನಡೆಸಲು ಮುಂದಾಗಿದ್ದರು. ಈ ವೇಳೆ ಪ್ರಬಲ ಜಾತಿಯವರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂಜೆ 4 ಗಂಟೆ ಸುಮಾರಿಗೆ ಗ್ರಾಮದ ಮುಖ್ಯರಸ್ತೆಯಲ್ಲಿ ಶವಯಾತ್ರೆ ನಡೆಸಲು ದಲಿತರು ನಿರ್ಧರಿಸಿದ್ದರು. ಆದರೆ ಪ್ರಬಲ ಜಾತಿಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆದ ಪೊಲೀಸ್ ತಂಡ ಗ್ರಾಮಕ್ಕೆ ದೌಡಾಯಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆದಿದೆ ಎಂದು ವರದಿ ವಿವರಿಸಿದೆ.

ತಿರುವಣ್ಣಾಮಲೈನ ಕಂದಾಯ ವಿಭಾಗೀಯ ಅಧಿಕಾರಿ (ಆರ್‌ಡಿಒ) ಆರ್.ಮಂದಾಕಿನಿ ನೇತೃತ್ವದಲ್ಲಿ, ಕಂದಾಯ ಅಧಿಕಾರಿಗಳ ತಂಡವು ಗ್ರಾಮದಲ್ಲಿ ಪ್ರಬಲ ಜಾತಿ ಮತ್ತು ದಲಿತರ ನಡುವೆ ಶಾಂತಿ ಮಾತುಕತೆಗಳನ್ನು ಆಯೋಜಿಸಿತ್ತು. ಸುಮಾರು ಐದು ಗಂಟೆಗಳ ಚರ್ಚೆಯ ನಂತರ, ದಲಿತರು ತಮ್ಮ ಸಾಂಪ್ರದಾಯಿಕ ಮಾರ್ಗವನ್ನು ಬಳಸಲು ಒಪ್ಪಿಕೊಂಡರು. ಸ್ಥಳೀಯ ಆಡಳಿತ ದಲಿತ ಕೇರಿಯ ಮಾರ್ಗವನ್ನು ದುರಸ್ಥಿಗೊಳಿಸಿದ ಬಳಿಕ, ಸೋಮವಾರ ರಾತ್ರಿ ಮಹಿಳೆಯ ಅಂತ್ಯಕ್ರಿಯೆ ನಡೆಸಲಾಗಿದೆ.

ಮೋತಕ್ಕಲ್ ತಿರುವಣ್ಣಾಮಲೈ ಮತ್ತು ಧರ್ಮಪುರಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಗಡಿ ಗ್ರಾಮವಾಗಿದೆ. ಇದು ತಂಡ್ರಂಪಟ್ಟು ಪಂಚಾಯತ್ ಯೂನಿಯನ್ ವ್ಯಾಪ್ತಿಗೆ ಬರುತ್ತದೆ. ಗ್ರಾಮದ ಪ್ರಬಲ ಜಾತಿಯಲ್ಲಿ ಹೆಚ್ಚಿನವರು ಭೂಮಾಲೀಕರಾಗಿದ್ದಾರೆ. ದಲಿತರು ಅವರ ಜಮೀನುಗಳಲ್ಲಿ ವರ್ಷಗಳಿಂದ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.

ಸಿಪಿಐ(ಎಂ) ಕಾರ್ಯಕರ್ತ ಆರ್.ಅಣ್ಣಾಮಲೈ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಗ್ರಾಮದಲ್ಲಿ ಜಾತಿ ಆಧಾರಿತ ತಾರತಮ್ಯ ಸಾಮಾನ್ಯವಾಗಿದೆ. ಹಿಂದೆ ದಲಿತರಿಗೆ ಪ್ರಬಲ ಜಾತಿಯವರ ಸಲೂನ್‌ಗಳಲ್ಲಿ ಕ್ಷೌರ ಮಾಡಿಸಿಕೊಳ್ಳಲು ಅವಕಾಶವಿರಲಿಲ್ಲ. ದಲಿತರಿಗೆ ಮತ್ತು ಪ್ರಬಲರಿಗೆ ಪ್ರತ್ಯೇಕ ಟೀ ಕಪ್‌ಗಳನ್ನು ಬಳಸಲಾಗುತ್ತಿತ್ತು” ಎಂದು ತಿಳಿಸಿದ್ದಾರೆ.

ಬಸ್‌ಗಾಗಿ ಕಾಯುವ ದಲಿತರು ಪ್ರಬಲ ಜಾತಿಯವರು ನಡೆಸುತ್ತಿರುವ ಸಣ್ಣ ಅಂಗಡಿಗಳ ಬಳಿಯ ಮರಗಳ ನೆರಳಿನಲ್ಲಿ ಕೂಡ ನಿಲ್ಲುವಂತಿಲ್ಲ. ದಲಿತರು ಬಿಸಿಲಿನಲ್ಲೇ ನಿಲ್ಲುವಂತೆ ಒತ್ತಾಯಿಸಲಾಗುತ್ತಿದೆ ಎಂದು ಗ್ರಾಮದ ನಿವಾಸಿಗಳು ಹೇಳಿರುವುದಾಗಿ ವರದಿಯಾಗಿದೆ.

ಶವಯಾತ್ರೆಗೆ ಅಡ್ಡಿಪಡಿಸಿದ ಘಟನೆಯ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಗ್ರಾಮದಲ್ಲಿ ಜಾತಿ ಆಧಾರಿತ ತಾರತಮ್ಯ ಕೊನೆಗೊಳಿಸಲು ಎರಡು ಸಮುದಾಯಗಳ ನಡುವೆ ಸರಣಿ ಮಾತುಕತೆಗಳನ್ನು ಆಯೋಜಿಸಿದ್ದಾರೆ. ಜಿಲ್ಲಾಧಿಕಾರಿ ಡಿ.ಭಾಸ್ಕರ ಪಾಂಡಿಯನ್ ಮಾತನಾಡಿ, ಗ್ರಾಮದಲ್ಲಿ ಜಾತಿ ತಾರತಮ್ಯ ಕುರಿತು ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಮೊತಕ್ಕಲ್ ಗ್ರಾಮದಲ್ಲಿ ಆದಿ ದ್ರಾವಿಡರ್ ಸಮುದಾಯದ 500ಕ್ಕೂ ಹೆಚ್ಚು ಅರ್ಹ ಮತದಾರರು ಈ ವರ್ಷ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದರು. ಮೂಲ ಸೌಕರ್ಯಗಳ ಕೊರತೆ ಹಾಗೂ ಜಾತಿ ತಾರತಮ್ಯದಿಂದ ದಲಿತ ಸಮುದಾಯ ಹಲವು ವರ್ಷಗಳಿಂದ ನರಳುತ್ತಿದೆ ಎಂದು ದಲಿತ ಹಕ್ಕುಗಳ ಹೋರಾಟಗಾರ್ತಿ ಮತ್ತು ಲೇಖಕಿ ಶಾಲಿನ್ ಮರಿಯಾ ಲಾರೆನ್ಸ್ ಅವರನ್ನು ಉಲ್ಲೇಖಿಸಿ ಮೂಕನಾಯಕ ವರದಿ ಹೇಳಿದೆ.

ದಲಿತರಿಗೆ ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆಯೇ ಇಲ್ಲ. ಸಮುದಾಯವು ಅನೇಕ ಪ್ರಬಲ ಜಾತಿ ಮತ್ತು ಪಂಚಾಯತ್ ಅಧ್ಯಕ್ಷರಿಂದ ತಾರತಮ್ಯವನ್ನು ಎದುರಿಸಿದೆ. ಸ್ಮಶಾನಕ್ಕೆ ತೆರಳಲು ಪ್ರತ್ಯೇಕ ಮಾರ್ಗವನ್ನು ಬಳಸಬೇಕಾದ ಅನಿವಾರ್ಯತೆ ಹಲವು ವರ್ಷಗಳಿಂದ ನಮಗೆ ಎದುರಾಗಿದೆ. ಆದರೆ, ಗ್ರಾಮದ ಪ್ರಬಲ ಜಾತಿಯವರು ಮುಖ್ಯ ರಸ್ತೆಯಲ್ಲಿ ಹೋಗಲು ಬಿಡುತ್ತಿಲ್ಲ. ಅವರಿಂದ ಭಯಭೀತರಾಗಿದ್ದೇವೆ” ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.

ತಮ್ಮ ಸಾಮೂಹಿಕ ಅತೃಪ್ತಿ ವ್ಯಕ್ತಪಡಿಸಲು ಲೋಕಸಭೆ ಚುನಾವಣೆಗೂ ಮುನ್ನ ಗ್ರಾಮಸ್ಥರು ಗ್ರಾಮದ ಪ್ರವೇಶ ದ್ವಾರ ಹಾಗೂ ಸುಮಾರು 200 ಮನೆಗಳ ಮುಂದೆ ಕಪ್ಪು ಬಾವುಟ ಹಾರಿಸಿದ್ದರು. ಗ್ರಾಮಸ್ಥರು ತಮ್ಮ ಬೇಡಿಕೆ ಹಾಗೂ ಕುಂದುಕೊರತೆಗಳ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರವನ್ನೂ ಸಲ್ಲಿಸಿದ್ದರು ಎಂದು ಮೂಕನಾಯಕ ತಿಳಿಸಿದೆ.

ಜಾತಿ ದೌರ್ಜನ್ಯಕ್ಕೆ ಪೊಲೀಸರಿಂದ ಬೆಂಬಲ : ಆರೋಪ

ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಪ್ರಬಲರು ಅಡ್ಡಿಪಡಿಸಿದಾಗ ಸ್ಥಳಕ್ಕೆ ಬಂದ ಪೊಲೀಸರು, ಪ್ರಬಲರ ಮೇಲೆ ಕ್ರಮಕೈಗೊಂಡು ದಲಿತರಿಗೆ ಅವರ ಹಕ್ಕು ನೀಡಬೇಕಾಗಿತ್ತು. ಆದರೆ, ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಡಿಎಸ್ಪಿ) ಮೃತ ಮಹಿಳೆಯ ಕುಟುಂಬಸ್ಥರಿಗೆ ಪರ್ಯಾಯ ಮಾರ್ಗದಲ್ಲಿ ಶವಯಾತ್ರೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಮೂಲಕ ಜಾತಿ ದೌರ್ಜನ್ಯವನ್ನು ಪೊಲೀಸರು ಬೆಂಬಲಿಸಿದ್ದಾರೆ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಎಂದು ದಲಿತ ಸಮುದಾಯ ಆರೋಪಿಸಿದೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷವಾದ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ವರದಿ ಕೂಡ ಈ ಆರೋಪವನ್ನು ಪುಷ್ಠೀಕರಿಸಿದೆ. ಘಟನಾ ಸ್ಥಳಕ್ಕೆ ಧಾವಿಸಿದ ವಿಸಿಕೆಯ ಸತ್ಯಶೋಧನಾ ತಂಡ, ತಿರುವಣ್ಣಾಮಲೈ ಶಾಸಕ ಮತ್ತು ಲೋಕೋಪಯೋಗಿ, ಹೆದ್ದಾರಿಗಳು ಮತ್ತು ಸಣ್ಣ ಬಂದರುಗಳ ಸಚಿವ ಎವಿ ವೇಲು ಅವರ ಆಪ್ತ ಎಂದು ಹೇಳಿಕೊಳ್ಳುವ ಸ್ಥಳೀಯ ಡಿಎಂಕೆ ನಾಯಕ ಕೂಡ ಇದಕ್ಕೆ ಸಹಕರಿಸಿದ್ದಾರೆ ಎಂದಿದೆ.

ಇದನ್ನೂ ಓದಿ : ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...