Homeದಲಿತ್ ಫೈಲ್ಸ್ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಸವರ್ಣೀಯರಿಂದ ಅಡ್ಡಿ : ಜಾತಿ ದೌರ್ಜನ್ಯಕ್ಕೆ ಪೊಲೀಸರ...

ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಸವರ್ಣೀಯರಿಂದ ಅಡ್ಡಿ : ಜಾತಿ ದೌರ್ಜನ್ಯಕ್ಕೆ ಪೊಲೀಸರ ಬೆಂಬಲ ಆರೋಪ

- Advertisement -
- Advertisement -

ತಮಿಳುನಾಡಿನ ತಿರುವಣ್ಣಾಮಲೈನಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿರುವ ಮೋತಕ್ಕಲ್ ಗ್ರಾಮದಲ್ಲಿ ಕಳೆದ ಸೋಮವಾರ (ಸೆ.30) ದಲಿತ ಮಹಿಳೆಯೊಬ್ಬರ ಶವಯಾತ್ರೆಗೆ ಪ್ರಬಲ ಜಾತಿಯ ಗುಂಪು ಆಕ್ಷೇಪ ವ್ಯಕ್ತಪಡಿಸಿದೆ. ತಮ್ಮ ಪ್ರದೇಶದ ಮಾರ್ಗದ ದುಸ್ಥಿತಿಯಿಂದಾಗಿ ಗ್ರಾಮದ ಮುಖ್ಯರಸ್ತೆಯ ಮೂಲಕ ಮೃತದೇಹ ಸಾಗಿಸಲು ದಲಿತ ಕುಟುಂಬ ನಿರ್ಧರಿಸಿತ್ತು ಎಂದು ದಿ ಮೂಕನಾಯಕ ವರದಿ ಮಾಡಿದೆ.

ವರದಿಯ ಪ್ರಕಾರ, 70 ವರ್ಷದ ದಲಿತ ಮಹಿಳೆ ಎಸ್.ಕಿಲಿಯಾಂಬಾಳ್ ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಸಂಜೆ ದಲಿತ ಕಾಲೋನಿಯಲ್ಲಿರುವ ತಮ್ಮ ಮಗಳ ಮನೆಯಲ್ಲಿ ಸಾವನ್ನಪ್ಪಿದ್ದರು. ದಲಿತರ ಸ್ಮಶಾನ ಊರ ಹೊರಗೆ ಇರುವುದರಿಂದ ಅಲ್ಲಿಗೆ ಶವ ಕೊಂಡೊಯ್ಯಬೇಕಿತ್ತು. ಗ್ರಾಮದಲ್ಲಿ ದಲಿತರಿಗೆ ಮತ್ತು ಸವರ್ಣಿಯರಿಗೆ ಶವಯಾತ್ರೆ ನಡೆಸಲು ಪ್ರತ್ಯೇಕ ರಸ್ತೆಗಳಿವೆ. ದಲಿತ ಕೇರಿಯ ರಸ್ತೆ ದುಸ್ಥಿಯಿಂದ ಕೂಡಿದೆ. ಹಾಗಾಗಿ, ಸೋಮವಾರ ದಲಿತರು ಗ್ರಾಮದ ಮುಖ್ಯ ರಸ್ತೆಯಲ್ಲಿ ಶವಯಾತ್ರೆ ನಡೆಸಲು ಮುಂದಾಗಿದ್ದರು. ಈ ವೇಳೆ ಪ್ರಬಲ ಜಾತಿಯವರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂಜೆ 4 ಗಂಟೆ ಸುಮಾರಿಗೆ ಗ್ರಾಮದ ಮುಖ್ಯರಸ್ತೆಯಲ್ಲಿ ಶವಯಾತ್ರೆ ನಡೆಸಲು ದಲಿತರು ನಿರ್ಧರಿಸಿದ್ದರು. ಆದರೆ ಪ್ರಬಲ ಜಾತಿಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆದ ಪೊಲೀಸ್ ತಂಡ ಗ್ರಾಮಕ್ಕೆ ದೌಡಾಯಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆದಿದೆ ಎಂದು ವರದಿ ವಿವರಿಸಿದೆ.

ತಿರುವಣ್ಣಾಮಲೈನ ಕಂದಾಯ ವಿಭಾಗೀಯ ಅಧಿಕಾರಿ (ಆರ್‌ಡಿಒ) ಆರ್.ಮಂದಾಕಿನಿ ನೇತೃತ್ವದಲ್ಲಿ, ಕಂದಾಯ ಅಧಿಕಾರಿಗಳ ತಂಡವು ಗ್ರಾಮದಲ್ಲಿ ಪ್ರಬಲ ಜಾತಿ ಮತ್ತು ದಲಿತರ ನಡುವೆ ಶಾಂತಿ ಮಾತುಕತೆಗಳನ್ನು ಆಯೋಜಿಸಿತ್ತು. ಸುಮಾರು ಐದು ಗಂಟೆಗಳ ಚರ್ಚೆಯ ನಂತರ, ದಲಿತರು ತಮ್ಮ ಸಾಂಪ್ರದಾಯಿಕ ಮಾರ್ಗವನ್ನು ಬಳಸಲು ಒಪ್ಪಿಕೊಂಡರು. ಸ್ಥಳೀಯ ಆಡಳಿತ ದಲಿತ ಕೇರಿಯ ಮಾರ್ಗವನ್ನು ದುರಸ್ಥಿಗೊಳಿಸಿದ ಬಳಿಕ, ಸೋಮವಾರ ರಾತ್ರಿ ಮಹಿಳೆಯ ಅಂತ್ಯಕ್ರಿಯೆ ನಡೆಸಲಾಗಿದೆ.

ಮೋತಕ್ಕಲ್ ತಿರುವಣ್ಣಾಮಲೈ ಮತ್ತು ಧರ್ಮಪುರಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಗಡಿ ಗ್ರಾಮವಾಗಿದೆ. ಇದು ತಂಡ್ರಂಪಟ್ಟು ಪಂಚಾಯತ್ ಯೂನಿಯನ್ ವ್ಯಾಪ್ತಿಗೆ ಬರುತ್ತದೆ. ಗ್ರಾಮದ ಪ್ರಬಲ ಜಾತಿಯಲ್ಲಿ ಹೆಚ್ಚಿನವರು ಭೂಮಾಲೀಕರಾಗಿದ್ದಾರೆ. ದಲಿತರು ಅವರ ಜಮೀನುಗಳಲ್ಲಿ ವರ್ಷಗಳಿಂದ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.

ಸಿಪಿಐ(ಎಂ) ಕಾರ್ಯಕರ್ತ ಆರ್.ಅಣ್ಣಾಮಲೈ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಗ್ರಾಮದಲ್ಲಿ ಜಾತಿ ಆಧಾರಿತ ತಾರತಮ್ಯ ಸಾಮಾನ್ಯವಾಗಿದೆ. ಹಿಂದೆ ದಲಿತರಿಗೆ ಪ್ರಬಲ ಜಾತಿಯವರ ಸಲೂನ್‌ಗಳಲ್ಲಿ ಕ್ಷೌರ ಮಾಡಿಸಿಕೊಳ್ಳಲು ಅವಕಾಶವಿರಲಿಲ್ಲ. ದಲಿತರಿಗೆ ಮತ್ತು ಪ್ರಬಲರಿಗೆ ಪ್ರತ್ಯೇಕ ಟೀ ಕಪ್‌ಗಳನ್ನು ಬಳಸಲಾಗುತ್ತಿತ್ತು” ಎಂದು ತಿಳಿಸಿದ್ದಾರೆ.

ಬಸ್‌ಗಾಗಿ ಕಾಯುವ ದಲಿತರು ಪ್ರಬಲ ಜಾತಿಯವರು ನಡೆಸುತ್ತಿರುವ ಸಣ್ಣ ಅಂಗಡಿಗಳ ಬಳಿಯ ಮರಗಳ ನೆರಳಿನಲ್ಲಿ ಕೂಡ ನಿಲ್ಲುವಂತಿಲ್ಲ. ದಲಿತರು ಬಿಸಿಲಿನಲ್ಲೇ ನಿಲ್ಲುವಂತೆ ಒತ್ತಾಯಿಸಲಾಗುತ್ತಿದೆ ಎಂದು ಗ್ರಾಮದ ನಿವಾಸಿಗಳು ಹೇಳಿರುವುದಾಗಿ ವರದಿಯಾಗಿದೆ.

ಶವಯಾತ್ರೆಗೆ ಅಡ್ಡಿಪಡಿಸಿದ ಘಟನೆಯ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಗ್ರಾಮದಲ್ಲಿ ಜಾತಿ ಆಧಾರಿತ ತಾರತಮ್ಯ ಕೊನೆಗೊಳಿಸಲು ಎರಡು ಸಮುದಾಯಗಳ ನಡುವೆ ಸರಣಿ ಮಾತುಕತೆಗಳನ್ನು ಆಯೋಜಿಸಿದ್ದಾರೆ. ಜಿಲ್ಲಾಧಿಕಾರಿ ಡಿ.ಭಾಸ್ಕರ ಪಾಂಡಿಯನ್ ಮಾತನಾಡಿ, ಗ್ರಾಮದಲ್ಲಿ ಜಾತಿ ತಾರತಮ್ಯ ಕುರಿತು ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಮೊತಕ್ಕಲ್ ಗ್ರಾಮದಲ್ಲಿ ಆದಿ ದ್ರಾವಿಡರ್ ಸಮುದಾಯದ 500ಕ್ಕೂ ಹೆಚ್ಚು ಅರ್ಹ ಮತದಾರರು ಈ ವರ್ಷ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದರು. ಮೂಲ ಸೌಕರ್ಯಗಳ ಕೊರತೆ ಹಾಗೂ ಜಾತಿ ತಾರತಮ್ಯದಿಂದ ದಲಿತ ಸಮುದಾಯ ಹಲವು ವರ್ಷಗಳಿಂದ ನರಳುತ್ತಿದೆ ಎಂದು ದಲಿತ ಹಕ್ಕುಗಳ ಹೋರಾಟಗಾರ್ತಿ ಮತ್ತು ಲೇಖಕಿ ಶಾಲಿನ್ ಮರಿಯಾ ಲಾರೆನ್ಸ್ ಅವರನ್ನು ಉಲ್ಲೇಖಿಸಿ ಮೂಕನಾಯಕ ವರದಿ ಹೇಳಿದೆ.

ದಲಿತರಿಗೆ ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆಯೇ ಇಲ್ಲ. ಸಮುದಾಯವು ಅನೇಕ ಪ್ರಬಲ ಜಾತಿ ಮತ್ತು ಪಂಚಾಯತ್ ಅಧ್ಯಕ್ಷರಿಂದ ತಾರತಮ್ಯವನ್ನು ಎದುರಿಸಿದೆ. ಸ್ಮಶಾನಕ್ಕೆ ತೆರಳಲು ಪ್ರತ್ಯೇಕ ಮಾರ್ಗವನ್ನು ಬಳಸಬೇಕಾದ ಅನಿವಾರ್ಯತೆ ಹಲವು ವರ್ಷಗಳಿಂದ ನಮಗೆ ಎದುರಾಗಿದೆ. ಆದರೆ, ಗ್ರಾಮದ ಪ್ರಬಲ ಜಾತಿಯವರು ಮುಖ್ಯ ರಸ್ತೆಯಲ್ಲಿ ಹೋಗಲು ಬಿಡುತ್ತಿಲ್ಲ. ಅವರಿಂದ ಭಯಭೀತರಾಗಿದ್ದೇವೆ” ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.

ತಮ್ಮ ಸಾಮೂಹಿಕ ಅತೃಪ್ತಿ ವ್ಯಕ್ತಪಡಿಸಲು ಲೋಕಸಭೆ ಚುನಾವಣೆಗೂ ಮುನ್ನ ಗ್ರಾಮಸ್ಥರು ಗ್ರಾಮದ ಪ್ರವೇಶ ದ್ವಾರ ಹಾಗೂ ಸುಮಾರು 200 ಮನೆಗಳ ಮುಂದೆ ಕಪ್ಪು ಬಾವುಟ ಹಾರಿಸಿದ್ದರು. ಗ್ರಾಮಸ್ಥರು ತಮ್ಮ ಬೇಡಿಕೆ ಹಾಗೂ ಕುಂದುಕೊರತೆಗಳ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರವನ್ನೂ ಸಲ್ಲಿಸಿದ್ದರು ಎಂದು ಮೂಕನಾಯಕ ತಿಳಿಸಿದೆ.

ಜಾತಿ ದೌರ್ಜನ್ಯಕ್ಕೆ ಪೊಲೀಸರಿಂದ ಬೆಂಬಲ : ಆರೋಪ

ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಪ್ರಬಲರು ಅಡ್ಡಿಪಡಿಸಿದಾಗ ಸ್ಥಳಕ್ಕೆ ಬಂದ ಪೊಲೀಸರು, ಪ್ರಬಲರ ಮೇಲೆ ಕ್ರಮಕೈಗೊಂಡು ದಲಿತರಿಗೆ ಅವರ ಹಕ್ಕು ನೀಡಬೇಕಾಗಿತ್ತು. ಆದರೆ, ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಡಿಎಸ್ಪಿ) ಮೃತ ಮಹಿಳೆಯ ಕುಟುಂಬಸ್ಥರಿಗೆ ಪರ್ಯಾಯ ಮಾರ್ಗದಲ್ಲಿ ಶವಯಾತ್ರೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಮೂಲಕ ಜಾತಿ ದೌರ್ಜನ್ಯವನ್ನು ಪೊಲೀಸರು ಬೆಂಬಲಿಸಿದ್ದಾರೆ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಎಂದು ದಲಿತ ಸಮುದಾಯ ಆರೋಪಿಸಿದೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷವಾದ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ವರದಿ ಕೂಡ ಈ ಆರೋಪವನ್ನು ಪುಷ್ಠೀಕರಿಸಿದೆ. ಘಟನಾ ಸ್ಥಳಕ್ಕೆ ಧಾವಿಸಿದ ವಿಸಿಕೆಯ ಸತ್ಯಶೋಧನಾ ತಂಡ, ತಿರುವಣ್ಣಾಮಲೈ ಶಾಸಕ ಮತ್ತು ಲೋಕೋಪಯೋಗಿ, ಹೆದ್ದಾರಿಗಳು ಮತ್ತು ಸಣ್ಣ ಬಂದರುಗಳ ಸಚಿವ ಎವಿ ವೇಲು ಅವರ ಆಪ್ತ ಎಂದು ಹೇಳಿಕೊಳ್ಳುವ ಸ್ಥಳೀಯ ಡಿಎಂಕೆ ನಾಯಕ ಕೂಡ ಇದಕ್ಕೆ ಸಹಕರಿಸಿದ್ದಾರೆ ಎಂದಿದೆ.

ಇದನ್ನೂ ಓದಿ : ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...