Homeದಲಿತ್ ಫೈಲ್ಸ್ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಸವರ್ಣೀಯರಿಂದ ಅಡ್ಡಿ : ಜಾತಿ ದೌರ್ಜನ್ಯಕ್ಕೆ ಪೊಲೀಸರ...

ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಸವರ್ಣೀಯರಿಂದ ಅಡ್ಡಿ : ಜಾತಿ ದೌರ್ಜನ್ಯಕ್ಕೆ ಪೊಲೀಸರ ಬೆಂಬಲ ಆರೋಪ

- Advertisement -
- Advertisement -

ತಮಿಳುನಾಡಿನ ತಿರುವಣ್ಣಾಮಲೈನಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿರುವ ಮೋತಕ್ಕಲ್ ಗ್ರಾಮದಲ್ಲಿ ಕಳೆದ ಸೋಮವಾರ (ಸೆ.30) ದಲಿತ ಮಹಿಳೆಯೊಬ್ಬರ ಶವಯಾತ್ರೆಗೆ ಪ್ರಬಲ ಜಾತಿಯ ಗುಂಪು ಆಕ್ಷೇಪ ವ್ಯಕ್ತಪಡಿಸಿದೆ. ತಮ್ಮ ಪ್ರದೇಶದ ಮಾರ್ಗದ ದುಸ್ಥಿತಿಯಿಂದಾಗಿ ಗ್ರಾಮದ ಮುಖ್ಯರಸ್ತೆಯ ಮೂಲಕ ಮೃತದೇಹ ಸಾಗಿಸಲು ದಲಿತ ಕುಟುಂಬ ನಿರ್ಧರಿಸಿತ್ತು ಎಂದು ದಿ ಮೂಕನಾಯಕ ವರದಿ ಮಾಡಿದೆ.

ವರದಿಯ ಪ್ರಕಾರ, 70 ವರ್ಷದ ದಲಿತ ಮಹಿಳೆ ಎಸ್.ಕಿಲಿಯಾಂಬಾಳ್ ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಸಂಜೆ ದಲಿತ ಕಾಲೋನಿಯಲ್ಲಿರುವ ತಮ್ಮ ಮಗಳ ಮನೆಯಲ್ಲಿ ಸಾವನ್ನಪ್ಪಿದ್ದರು. ದಲಿತರ ಸ್ಮಶಾನ ಊರ ಹೊರಗೆ ಇರುವುದರಿಂದ ಅಲ್ಲಿಗೆ ಶವ ಕೊಂಡೊಯ್ಯಬೇಕಿತ್ತು. ಗ್ರಾಮದಲ್ಲಿ ದಲಿತರಿಗೆ ಮತ್ತು ಸವರ್ಣಿಯರಿಗೆ ಶವಯಾತ್ರೆ ನಡೆಸಲು ಪ್ರತ್ಯೇಕ ರಸ್ತೆಗಳಿವೆ. ದಲಿತ ಕೇರಿಯ ರಸ್ತೆ ದುಸ್ಥಿಯಿಂದ ಕೂಡಿದೆ. ಹಾಗಾಗಿ, ಸೋಮವಾರ ದಲಿತರು ಗ್ರಾಮದ ಮುಖ್ಯ ರಸ್ತೆಯಲ್ಲಿ ಶವಯಾತ್ರೆ ನಡೆಸಲು ಮುಂದಾಗಿದ್ದರು. ಈ ವೇಳೆ ಪ್ರಬಲ ಜಾತಿಯವರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂಜೆ 4 ಗಂಟೆ ಸುಮಾರಿಗೆ ಗ್ರಾಮದ ಮುಖ್ಯರಸ್ತೆಯಲ್ಲಿ ಶವಯಾತ್ರೆ ನಡೆಸಲು ದಲಿತರು ನಿರ್ಧರಿಸಿದ್ದರು. ಆದರೆ ಪ್ರಬಲ ಜಾತಿಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆದ ಪೊಲೀಸ್ ತಂಡ ಗ್ರಾಮಕ್ಕೆ ದೌಡಾಯಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆದಿದೆ ಎಂದು ವರದಿ ವಿವರಿಸಿದೆ.

ತಿರುವಣ್ಣಾಮಲೈನ ಕಂದಾಯ ವಿಭಾಗೀಯ ಅಧಿಕಾರಿ (ಆರ್‌ಡಿಒ) ಆರ್.ಮಂದಾಕಿನಿ ನೇತೃತ್ವದಲ್ಲಿ, ಕಂದಾಯ ಅಧಿಕಾರಿಗಳ ತಂಡವು ಗ್ರಾಮದಲ್ಲಿ ಪ್ರಬಲ ಜಾತಿ ಮತ್ತು ದಲಿತರ ನಡುವೆ ಶಾಂತಿ ಮಾತುಕತೆಗಳನ್ನು ಆಯೋಜಿಸಿತ್ತು. ಸುಮಾರು ಐದು ಗಂಟೆಗಳ ಚರ್ಚೆಯ ನಂತರ, ದಲಿತರು ತಮ್ಮ ಸಾಂಪ್ರದಾಯಿಕ ಮಾರ್ಗವನ್ನು ಬಳಸಲು ಒಪ್ಪಿಕೊಂಡರು. ಸ್ಥಳೀಯ ಆಡಳಿತ ದಲಿತ ಕೇರಿಯ ಮಾರ್ಗವನ್ನು ದುರಸ್ಥಿಗೊಳಿಸಿದ ಬಳಿಕ, ಸೋಮವಾರ ರಾತ್ರಿ ಮಹಿಳೆಯ ಅಂತ್ಯಕ್ರಿಯೆ ನಡೆಸಲಾಗಿದೆ.

ಮೋತಕ್ಕಲ್ ತಿರುವಣ್ಣಾಮಲೈ ಮತ್ತು ಧರ್ಮಪುರಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಗಡಿ ಗ್ರಾಮವಾಗಿದೆ. ಇದು ತಂಡ್ರಂಪಟ್ಟು ಪಂಚಾಯತ್ ಯೂನಿಯನ್ ವ್ಯಾಪ್ತಿಗೆ ಬರುತ್ತದೆ. ಗ್ರಾಮದ ಪ್ರಬಲ ಜಾತಿಯಲ್ಲಿ ಹೆಚ್ಚಿನವರು ಭೂಮಾಲೀಕರಾಗಿದ್ದಾರೆ. ದಲಿತರು ಅವರ ಜಮೀನುಗಳಲ್ಲಿ ವರ್ಷಗಳಿಂದ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.

ಸಿಪಿಐ(ಎಂ) ಕಾರ್ಯಕರ್ತ ಆರ್.ಅಣ್ಣಾಮಲೈ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಗ್ರಾಮದಲ್ಲಿ ಜಾತಿ ಆಧಾರಿತ ತಾರತಮ್ಯ ಸಾಮಾನ್ಯವಾಗಿದೆ. ಹಿಂದೆ ದಲಿತರಿಗೆ ಪ್ರಬಲ ಜಾತಿಯವರ ಸಲೂನ್‌ಗಳಲ್ಲಿ ಕ್ಷೌರ ಮಾಡಿಸಿಕೊಳ್ಳಲು ಅವಕಾಶವಿರಲಿಲ್ಲ. ದಲಿತರಿಗೆ ಮತ್ತು ಪ್ರಬಲರಿಗೆ ಪ್ರತ್ಯೇಕ ಟೀ ಕಪ್‌ಗಳನ್ನು ಬಳಸಲಾಗುತ್ತಿತ್ತು” ಎಂದು ತಿಳಿಸಿದ್ದಾರೆ.

ಬಸ್‌ಗಾಗಿ ಕಾಯುವ ದಲಿತರು ಪ್ರಬಲ ಜಾತಿಯವರು ನಡೆಸುತ್ತಿರುವ ಸಣ್ಣ ಅಂಗಡಿಗಳ ಬಳಿಯ ಮರಗಳ ನೆರಳಿನಲ್ಲಿ ಕೂಡ ನಿಲ್ಲುವಂತಿಲ್ಲ. ದಲಿತರು ಬಿಸಿಲಿನಲ್ಲೇ ನಿಲ್ಲುವಂತೆ ಒತ್ತಾಯಿಸಲಾಗುತ್ತಿದೆ ಎಂದು ಗ್ರಾಮದ ನಿವಾಸಿಗಳು ಹೇಳಿರುವುದಾಗಿ ವರದಿಯಾಗಿದೆ.

ಶವಯಾತ್ರೆಗೆ ಅಡ್ಡಿಪಡಿಸಿದ ಘಟನೆಯ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಗ್ರಾಮದಲ್ಲಿ ಜಾತಿ ಆಧಾರಿತ ತಾರತಮ್ಯ ಕೊನೆಗೊಳಿಸಲು ಎರಡು ಸಮುದಾಯಗಳ ನಡುವೆ ಸರಣಿ ಮಾತುಕತೆಗಳನ್ನು ಆಯೋಜಿಸಿದ್ದಾರೆ. ಜಿಲ್ಲಾಧಿಕಾರಿ ಡಿ.ಭಾಸ್ಕರ ಪಾಂಡಿಯನ್ ಮಾತನಾಡಿ, ಗ್ರಾಮದಲ್ಲಿ ಜಾತಿ ತಾರತಮ್ಯ ಕುರಿತು ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಮೊತಕ್ಕಲ್ ಗ್ರಾಮದಲ್ಲಿ ಆದಿ ದ್ರಾವಿಡರ್ ಸಮುದಾಯದ 500ಕ್ಕೂ ಹೆಚ್ಚು ಅರ್ಹ ಮತದಾರರು ಈ ವರ್ಷ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದರು. ಮೂಲ ಸೌಕರ್ಯಗಳ ಕೊರತೆ ಹಾಗೂ ಜಾತಿ ತಾರತಮ್ಯದಿಂದ ದಲಿತ ಸಮುದಾಯ ಹಲವು ವರ್ಷಗಳಿಂದ ನರಳುತ್ತಿದೆ ಎಂದು ದಲಿತ ಹಕ್ಕುಗಳ ಹೋರಾಟಗಾರ್ತಿ ಮತ್ತು ಲೇಖಕಿ ಶಾಲಿನ್ ಮರಿಯಾ ಲಾರೆನ್ಸ್ ಅವರನ್ನು ಉಲ್ಲೇಖಿಸಿ ಮೂಕನಾಯಕ ವರದಿ ಹೇಳಿದೆ.

ದಲಿತರಿಗೆ ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆಯೇ ಇಲ್ಲ. ಸಮುದಾಯವು ಅನೇಕ ಪ್ರಬಲ ಜಾತಿ ಮತ್ತು ಪಂಚಾಯತ್ ಅಧ್ಯಕ್ಷರಿಂದ ತಾರತಮ್ಯವನ್ನು ಎದುರಿಸಿದೆ. ಸ್ಮಶಾನಕ್ಕೆ ತೆರಳಲು ಪ್ರತ್ಯೇಕ ಮಾರ್ಗವನ್ನು ಬಳಸಬೇಕಾದ ಅನಿವಾರ್ಯತೆ ಹಲವು ವರ್ಷಗಳಿಂದ ನಮಗೆ ಎದುರಾಗಿದೆ. ಆದರೆ, ಗ್ರಾಮದ ಪ್ರಬಲ ಜಾತಿಯವರು ಮುಖ್ಯ ರಸ್ತೆಯಲ್ಲಿ ಹೋಗಲು ಬಿಡುತ್ತಿಲ್ಲ. ಅವರಿಂದ ಭಯಭೀತರಾಗಿದ್ದೇವೆ” ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.

ತಮ್ಮ ಸಾಮೂಹಿಕ ಅತೃಪ್ತಿ ವ್ಯಕ್ತಪಡಿಸಲು ಲೋಕಸಭೆ ಚುನಾವಣೆಗೂ ಮುನ್ನ ಗ್ರಾಮಸ್ಥರು ಗ್ರಾಮದ ಪ್ರವೇಶ ದ್ವಾರ ಹಾಗೂ ಸುಮಾರು 200 ಮನೆಗಳ ಮುಂದೆ ಕಪ್ಪು ಬಾವುಟ ಹಾರಿಸಿದ್ದರು. ಗ್ರಾಮಸ್ಥರು ತಮ್ಮ ಬೇಡಿಕೆ ಹಾಗೂ ಕುಂದುಕೊರತೆಗಳ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರವನ್ನೂ ಸಲ್ಲಿಸಿದ್ದರು ಎಂದು ಮೂಕನಾಯಕ ತಿಳಿಸಿದೆ.

ಜಾತಿ ದೌರ್ಜನ್ಯಕ್ಕೆ ಪೊಲೀಸರಿಂದ ಬೆಂಬಲ : ಆರೋಪ

ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಪ್ರಬಲರು ಅಡ್ಡಿಪಡಿಸಿದಾಗ ಸ್ಥಳಕ್ಕೆ ಬಂದ ಪೊಲೀಸರು, ಪ್ರಬಲರ ಮೇಲೆ ಕ್ರಮಕೈಗೊಂಡು ದಲಿತರಿಗೆ ಅವರ ಹಕ್ಕು ನೀಡಬೇಕಾಗಿತ್ತು. ಆದರೆ, ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಡಿಎಸ್ಪಿ) ಮೃತ ಮಹಿಳೆಯ ಕುಟುಂಬಸ್ಥರಿಗೆ ಪರ್ಯಾಯ ಮಾರ್ಗದಲ್ಲಿ ಶವಯಾತ್ರೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಮೂಲಕ ಜಾತಿ ದೌರ್ಜನ್ಯವನ್ನು ಪೊಲೀಸರು ಬೆಂಬಲಿಸಿದ್ದಾರೆ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಎಂದು ದಲಿತ ಸಮುದಾಯ ಆರೋಪಿಸಿದೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷವಾದ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ವರದಿ ಕೂಡ ಈ ಆರೋಪವನ್ನು ಪುಷ್ಠೀಕರಿಸಿದೆ. ಘಟನಾ ಸ್ಥಳಕ್ಕೆ ಧಾವಿಸಿದ ವಿಸಿಕೆಯ ಸತ್ಯಶೋಧನಾ ತಂಡ, ತಿರುವಣ್ಣಾಮಲೈ ಶಾಸಕ ಮತ್ತು ಲೋಕೋಪಯೋಗಿ, ಹೆದ್ದಾರಿಗಳು ಮತ್ತು ಸಣ್ಣ ಬಂದರುಗಳ ಸಚಿವ ಎವಿ ವೇಲು ಅವರ ಆಪ್ತ ಎಂದು ಹೇಳಿಕೊಳ್ಳುವ ಸ್ಥಳೀಯ ಡಿಎಂಕೆ ನಾಯಕ ಕೂಡ ಇದಕ್ಕೆ ಸಹಕರಿಸಿದ್ದಾರೆ ಎಂದಿದೆ.

ಇದನ್ನೂ ಓದಿ : ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...