Homeದಲಿತ್ ಫೈಲ್ಸ್ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಸವರ್ಣೀಯರಿಂದ ಅಡ್ಡಿ : ಜಾತಿ ದೌರ್ಜನ್ಯಕ್ಕೆ ಪೊಲೀಸರ...

ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಸವರ್ಣೀಯರಿಂದ ಅಡ್ಡಿ : ಜಾತಿ ದೌರ್ಜನ್ಯಕ್ಕೆ ಪೊಲೀಸರ ಬೆಂಬಲ ಆರೋಪ

- Advertisement -
- Advertisement -

ತಮಿಳುನಾಡಿನ ತಿರುವಣ್ಣಾಮಲೈನಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿರುವ ಮೋತಕ್ಕಲ್ ಗ್ರಾಮದಲ್ಲಿ ಕಳೆದ ಸೋಮವಾರ (ಸೆ.30) ದಲಿತ ಮಹಿಳೆಯೊಬ್ಬರ ಶವಯಾತ್ರೆಗೆ ಪ್ರಬಲ ಜಾತಿಯ ಗುಂಪು ಆಕ್ಷೇಪ ವ್ಯಕ್ತಪಡಿಸಿದೆ. ತಮ್ಮ ಪ್ರದೇಶದ ಮಾರ್ಗದ ದುಸ್ಥಿತಿಯಿಂದಾಗಿ ಗ್ರಾಮದ ಮುಖ್ಯರಸ್ತೆಯ ಮೂಲಕ ಮೃತದೇಹ ಸಾಗಿಸಲು ದಲಿತ ಕುಟುಂಬ ನಿರ್ಧರಿಸಿತ್ತು ಎಂದು ದಿ ಮೂಕನಾಯಕ ವರದಿ ಮಾಡಿದೆ.

ವರದಿಯ ಪ್ರಕಾರ, 70 ವರ್ಷದ ದಲಿತ ಮಹಿಳೆ ಎಸ್.ಕಿಲಿಯಾಂಬಾಳ್ ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಸಂಜೆ ದಲಿತ ಕಾಲೋನಿಯಲ್ಲಿರುವ ತಮ್ಮ ಮಗಳ ಮನೆಯಲ್ಲಿ ಸಾವನ್ನಪ್ಪಿದ್ದರು. ದಲಿತರ ಸ್ಮಶಾನ ಊರ ಹೊರಗೆ ಇರುವುದರಿಂದ ಅಲ್ಲಿಗೆ ಶವ ಕೊಂಡೊಯ್ಯಬೇಕಿತ್ತು. ಗ್ರಾಮದಲ್ಲಿ ದಲಿತರಿಗೆ ಮತ್ತು ಸವರ್ಣಿಯರಿಗೆ ಶವಯಾತ್ರೆ ನಡೆಸಲು ಪ್ರತ್ಯೇಕ ರಸ್ತೆಗಳಿವೆ. ದಲಿತ ಕೇರಿಯ ರಸ್ತೆ ದುಸ್ಥಿಯಿಂದ ಕೂಡಿದೆ. ಹಾಗಾಗಿ, ಸೋಮವಾರ ದಲಿತರು ಗ್ರಾಮದ ಮುಖ್ಯ ರಸ್ತೆಯಲ್ಲಿ ಶವಯಾತ್ರೆ ನಡೆಸಲು ಮುಂದಾಗಿದ್ದರು. ಈ ವೇಳೆ ಪ್ರಬಲ ಜಾತಿಯವರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಂಜೆ 4 ಗಂಟೆ ಸುಮಾರಿಗೆ ಗ್ರಾಮದ ಮುಖ್ಯರಸ್ತೆಯಲ್ಲಿ ಶವಯಾತ್ರೆ ನಡೆಸಲು ದಲಿತರು ನಿರ್ಧರಿಸಿದ್ದರು. ಆದರೆ ಪ್ರಬಲ ಜಾತಿಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆದ ಪೊಲೀಸ್ ತಂಡ ಗ್ರಾಮಕ್ಕೆ ದೌಡಾಯಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆದಿದೆ ಎಂದು ವರದಿ ವಿವರಿಸಿದೆ.

ತಿರುವಣ್ಣಾಮಲೈನ ಕಂದಾಯ ವಿಭಾಗೀಯ ಅಧಿಕಾರಿ (ಆರ್‌ಡಿಒ) ಆರ್.ಮಂದಾಕಿನಿ ನೇತೃತ್ವದಲ್ಲಿ, ಕಂದಾಯ ಅಧಿಕಾರಿಗಳ ತಂಡವು ಗ್ರಾಮದಲ್ಲಿ ಪ್ರಬಲ ಜಾತಿ ಮತ್ತು ದಲಿತರ ನಡುವೆ ಶಾಂತಿ ಮಾತುಕತೆಗಳನ್ನು ಆಯೋಜಿಸಿತ್ತು. ಸುಮಾರು ಐದು ಗಂಟೆಗಳ ಚರ್ಚೆಯ ನಂತರ, ದಲಿತರು ತಮ್ಮ ಸಾಂಪ್ರದಾಯಿಕ ಮಾರ್ಗವನ್ನು ಬಳಸಲು ಒಪ್ಪಿಕೊಂಡರು. ಸ್ಥಳೀಯ ಆಡಳಿತ ದಲಿತ ಕೇರಿಯ ಮಾರ್ಗವನ್ನು ದುರಸ್ಥಿಗೊಳಿಸಿದ ಬಳಿಕ, ಸೋಮವಾರ ರಾತ್ರಿ ಮಹಿಳೆಯ ಅಂತ್ಯಕ್ರಿಯೆ ನಡೆಸಲಾಗಿದೆ.

ಮೋತಕ್ಕಲ್ ತಿರುವಣ್ಣಾಮಲೈ ಮತ್ತು ಧರ್ಮಪುರಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಗಡಿ ಗ್ರಾಮವಾಗಿದೆ. ಇದು ತಂಡ್ರಂಪಟ್ಟು ಪಂಚಾಯತ್ ಯೂನಿಯನ್ ವ್ಯಾಪ್ತಿಗೆ ಬರುತ್ತದೆ. ಗ್ರಾಮದ ಪ್ರಬಲ ಜಾತಿಯಲ್ಲಿ ಹೆಚ್ಚಿನವರು ಭೂಮಾಲೀಕರಾಗಿದ್ದಾರೆ. ದಲಿತರು ಅವರ ಜಮೀನುಗಳಲ್ಲಿ ವರ್ಷಗಳಿಂದ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.

ಸಿಪಿಐ(ಎಂ) ಕಾರ್ಯಕರ್ತ ಆರ್.ಅಣ್ಣಾಮಲೈ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಗ್ರಾಮದಲ್ಲಿ ಜಾತಿ ಆಧಾರಿತ ತಾರತಮ್ಯ ಸಾಮಾನ್ಯವಾಗಿದೆ. ಹಿಂದೆ ದಲಿತರಿಗೆ ಪ್ರಬಲ ಜಾತಿಯವರ ಸಲೂನ್‌ಗಳಲ್ಲಿ ಕ್ಷೌರ ಮಾಡಿಸಿಕೊಳ್ಳಲು ಅವಕಾಶವಿರಲಿಲ್ಲ. ದಲಿತರಿಗೆ ಮತ್ತು ಪ್ರಬಲರಿಗೆ ಪ್ರತ್ಯೇಕ ಟೀ ಕಪ್‌ಗಳನ್ನು ಬಳಸಲಾಗುತ್ತಿತ್ತು” ಎಂದು ತಿಳಿಸಿದ್ದಾರೆ.

ಬಸ್‌ಗಾಗಿ ಕಾಯುವ ದಲಿತರು ಪ್ರಬಲ ಜಾತಿಯವರು ನಡೆಸುತ್ತಿರುವ ಸಣ್ಣ ಅಂಗಡಿಗಳ ಬಳಿಯ ಮರಗಳ ನೆರಳಿನಲ್ಲಿ ಕೂಡ ನಿಲ್ಲುವಂತಿಲ್ಲ. ದಲಿತರು ಬಿಸಿಲಿನಲ್ಲೇ ನಿಲ್ಲುವಂತೆ ಒತ್ತಾಯಿಸಲಾಗುತ್ತಿದೆ ಎಂದು ಗ್ರಾಮದ ನಿವಾಸಿಗಳು ಹೇಳಿರುವುದಾಗಿ ವರದಿಯಾಗಿದೆ.

ಶವಯಾತ್ರೆಗೆ ಅಡ್ಡಿಪಡಿಸಿದ ಘಟನೆಯ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಗ್ರಾಮದಲ್ಲಿ ಜಾತಿ ಆಧಾರಿತ ತಾರತಮ್ಯ ಕೊನೆಗೊಳಿಸಲು ಎರಡು ಸಮುದಾಯಗಳ ನಡುವೆ ಸರಣಿ ಮಾತುಕತೆಗಳನ್ನು ಆಯೋಜಿಸಿದ್ದಾರೆ. ಜಿಲ್ಲಾಧಿಕಾರಿ ಡಿ.ಭಾಸ್ಕರ ಪಾಂಡಿಯನ್ ಮಾತನಾಡಿ, ಗ್ರಾಮದಲ್ಲಿ ಜಾತಿ ತಾರತಮ್ಯ ಕುರಿತು ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಮೊತಕ್ಕಲ್ ಗ್ರಾಮದಲ್ಲಿ ಆದಿ ದ್ರಾವಿಡರ್ ಸಮುದಾಯದ 500ಕ್ಕೂ ಹೆಚ್ಚು ಅರ್ಹ ಮತದಾರರು ಈ ವರ್ಷ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದರು. ಮೂಲ ಸೌಕರ್ಯಗಳ ಕೊರತೆ ಹಾಗೂ ಜಾತಿ ತಾರತಮ್ಯದಿಂದ ದಲಿತ ಸಮುದಾಯ ಹಲವು ವರ್ಷಗಳಿಂದ ನರಳುತ್ತಿದೆ ಎಂದು ದಲಿತ ಹಕ್ಕುಗಳ ಹೋರಾಟಗಾರ್ತಿ ಮತ್ತು ಲೇಖಕಿ ಶಾಲಿನ್ ಮರಿಯಾ ಲಾರೆನ್ಸ್ ಅವರನ್ನು ಉಲ್ಲೇಖಿಸಿ ಮೂಕನಾಯಕ ವರದಿ ಹೇಳಿದೆ.

ದಲಿತರಿಗೆ ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆಯೇ ಇಲ್ಲ. ಸಮುದಾಯವು ಅನೇಕ ಪ್ರಬಲ ಜಾತಿ ಮತ್ತು ಪಂಚಾಯತ್ ಅಧ್ಯಕ್ಷರಿಂದ ತಾರತಮ್ಯವನ್ನು ಎದುರಿಸಿದೆ. ಸ್ಮಶಾನಕ್ಕೆ ತೆರಳಲು ಪ್ರತ್ಯೇಕ ಮಾರ್ಗವನ್ನು ಬಳಸಬೇಕಾದ ಅನಿವಾರ್ಯತೆ ಹಲವು ವರ್ಷಗಳಿಂದ ನಮಗೆ ಎದುರಾಗಿದೆ. ಆದರೆ, ಗ್ರಾಮದ ಪ್ರಬಲ ಜಾತಿಯವರು ಮುಖ್ಯ ರಸ್ತೆಯಲ್ಲಿ ಹೋಗಲು ಬಿಡುತ್ತಿಲ್ಲ. ಅವರಿಂದ ಭಯಭೀತರಾಗಿದ್ದೇವೆ” ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.

ತಮ್ಮ ಸಾಮೂಹಿಕ ಅತೃಪ್ತಿ ವ್ಯಕ್ತಪಡಿಸಲು ಲೋಕಸಭೆ ಚುನಾವಣೆಗೂ ಮುನ್ನ ಗ್ರಾಮಸ್ಥರು ಗ್ರಾಮದ ಪ್ರವೇಶ ದ್ವಾರ ಹಾಗೂ ಸುಮಾರು 200 ಮನೆಗಳ ಮುಂದೆ ಕಪ್ಪು ಬಾವುಟ ಹಾರಿಸಿದ್ದರು. ಗ್ರಾಮಸ್ಥರು ತಮ್ಮ ಬೇಡಿಕೆ ಹಾಗೂ ಕುಂದುಕೊರತೆಗಳ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರವನ್ನೂ ಸಲ್ಲಿಸಿದ್ದರು ಎಂದು ಮೂಕನಾಯಕ ತಿಳಿಸಿದೆ.

ಜಾತಿ ದೌರ್ಜನ್ಯಕ್ಕೆ ಪೊಲೀಸರಿಂದ ಬೆಂಬಲ : ಆರೋಪ

ಗ್ರಾಮದ ಮುಖ್ಯ ರಸ್ತೆಯಲ್ಲಿ ದಲಿತ ಮಹಿಳೆಯ ಶವಯಾತ್ರೆಗೆ ಪ್ರಬಲರು ಅಡ್ಡಿಪಡಿಸಿದಾಗ ಸ್ಥಳಕ್ಕೆ ಬಂದ ಪೊಲೀಸರು, ಪ್ರಬಲರ ಮೇಲೆ ಕ್ರಮಕೈಗೊಂಡು ದಲಿತರಿಗೆ ಅವರ ಹಕ್ಕು ನೀಡಬೇಕಾಗಿತ್ತು. ಆದರೆ, ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಡಿಎಸ್ಪಿ) ಮೃತ ಮಹಿಳೆಯ ಕುಟುಂಬಸ್ಥರಿಗೆ ಪರ್ಯಾಯ ಮಾರ್ಗದಲ್ಲಿ ಶವಯಾತ್ರೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಮೂಲಕ ಜಾತಿ ದೌರ್ಜನ್ಯವನ್ನು ಪೊಲೀಸರು ಬೆಂಬಲಿಸಿದ್ದಾರೆ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಎಂದು ದಲಿತ ಸಮುದಾಯ ಆರೋಪಿಸಿದೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷವಾದ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ವರದಿ ಕೂಡ ಈ ಆರೋಪವನ್ನು ಪುಷ್ಠೀಕರಿಸಿದೆ. ಘಟನಾ ಸ್ಥಳಕ್ಕೆ ಧಾವಿಸಿದ ವಿಸಿಕೆಯ ಸತ್ಯಶೋಧನಾ ತಂಡ, ತಿರುವಣ್ಣಾಮಲೈ ಶಾಸಕ ಮತ್ತು ಲೋಕೋಪಯೋಗಿ, ಹೆದ್ದಾರಿಗಳು ಮತ್ತು ಸಣ್ಣ ಬಂದರುಗಳ ಸಚಿವ ಎವಿ ವೇಲು ಅವರ ಆಪ್ತ ಎಂದು ಹೇಳಿಕೊಳ್ಳುವ ಸ್ಥಳೀಯ ಡಿಎಂಕೆ ನಾಯಕ ಕೂಡ ಇದಕ್ಕೆ ಸಹಕರಿಸಿದ್ದಾರೆ ಎಂದಿದೆ.

ಇದನ್ನೂ ಓದಿ : ತಮಿಳುನಾಡು : ಜಾತಿ ತಾರತಮ್ಯ ಪ್ರತಿಭಟಿಸಿದ ಬುಡಕಟ್ಟು ಪಂಚಾಯತ್ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...