Homeಮುಖಪುಟತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

- Advertisement -
- Advertisement -

2022 ರ ವೆಂಗೈವಾಯಲ್ ನೀರಿನ ಟ್ಯಾಂಕ್ ಮಾಲಿನ್ಯ ಪ್ರಕರಣದಲ್ಲಿ ತಮಿಳುನಾಡಿನ ಅಪರಾಧ ವಿಭಾಗದ ಅಪರಾಧ ತನಿಖಾ ಇಲಾಖೆ (ಸಿಬಿ-ಸಿಐಡಿ) ಮೂವರು ದಲಿತ ಯುವಕರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

ಡಿಸೆಂಬರ್ 26, 2022 ರಂದು, ವೆಳ್ಳಾಲರ್ ಪೊಲೀಸರು ಉದ್ದೇಶಪೂರ್ವಕವಾಗಿ ಹಾನಿ ಉಂಟುಮಾಡುವ ವಸ್ತುಗಳನ್ನು ನೀಡುವುದಕ್ಕಾಗಿ ಐಪಿಸಿಯ ಸೆಕ್ಷನ್ 328 ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ/ಎಸ್‌ಟಿ) ವಿರುದ್ಧ ದೌರ್ಜನ್ಯ ತಡೆ ಸೆಕ್ಷನ್ 3(1)(ಬಿ), 3(1)(ಎಕ್ಸ್‌), 3(2) (ವಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಲ, ಒಳಚರಂಡಿ ಅಥವಾ ಮೃತದೇಹಗಳಂತಹ ಅಸಹ್ಯಕರ ವಸ್ತುಗಳನ್ನು ಪರಿಶಿಷ್ಟರು ವಾಸಿಸುವ ಆವರಣದಲ್ಲಿ ಅಥವಾ ಹತ್ತಿರ ಎಸೆಯುವ ಮೂಲಕ, ಅವರ ನೀರಿನ ಮೂಲಗಳನ್ನು ಕಲುಷಿತಗೊಳಿಸುವ ಮೂಲಕ ಎಸ್‌ಸಿ/ಎಸ್‌ಟಿ ಸದಸ್ಯರ ವಿರುದ್ಧ ತಾರತಮ್ಯ ಅಥವಾ ಹಾನಿ ಮಾಡುವ ನಿರ್ದಿಷ್ಟ ಕೃತ್ಯಗಳಿಗಾಗಿ ಪ್ರಕರಣ ದಾಖಲಿಸಿದ್ದಾರೆ.

ವೆಂಗೈವಾಯಲ್ ಗ್ರಾಮದಲ್ಲಿ ನೀರಿನ ಟ್ಯಾಂಕ್‌ನಿಂದ ನೀರು ಸೇವಿಸಿದ ಮಕ್ಕಳು ವಾಂತಿ, ಜ್ವರದಿಂದ ಬಳಲುತ್ತಿದ್ದಾರೆ ಮತ್ತು ಆಸ್ಪತ್ರೆಗೆ ದಾಖಲಾಗಬೇಕಾಯಿತು ಎಂಬ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿದೆ.

ದೂರುದಾರರಾದ ಕೆ. ಕನಕರಾಜ್ ಅವರು, ಟ್ಯಾಂಕ್‌ನಲ್ಲಿನ ನೀರಿನ ಮೇಲೆ ಮಾನವ ಮಲ ತೇಲುತ್ತಿರುವುದು ಕಂಡುಬಂದಿದೆ ಎಂದು ಆರೋಪಿಸಿದ್ದಾರೆ.

ಸುದ್ದಿ ಹೊರಬಿದ್ದ ತಕ್ಷಣ, ತಮಿಳುನಾಡಿನಲ್ಲಿ ದಲಿತರ ಸುರಕ್ಷತೆಯ ಬಗ್ಗೆ ವಿರೋಧ ಪಕ್ಷಗಳು ಪ್ರಶ್ನೆಗಳನ್ನು ಎತ್ತುವುದರೊಂದಿಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಯಿತು. ತನಿಖೆಯಲ್ಲಿನ ವಿಳಂಬವನ್ನು ಕೂಡ ವಿರೋಧ ಪಕ್ಷಗಳು ಪ್ರಶ್ನಿಸಿದವು.

ಪ್ರಕರಣವನ್ನು ಜನವರಿ 1, 2023 ರಂದು ಸಿಬಿ-ಸಿಐಡಿಗೆ ವರ್ಗಾಯಿಸಲಾಯಿತು. 397 ಸಾಕ್ಷಿಗಳೊಂದಿಗೆ ವಿಚಾರಣೆ ನಡೆಸಲಾಗಿದ್ದು, 196 ಮೊಬೈಲ್ ಫೋನ್ ಸಂಖ್ಯೆಗಳನ್ನು ಸಹ ತನಿಖೆ ಮಾಡಲಾಯಿತು. 87 ಟವರ್‌ಗಳ ನಡುವೆ ನಡೆದ ಒಂದು ಲಕ್ಷಕ್ಕೂ ಹೆಚ್ಚು ಕರೆಗಳನ್ನು ವಿಶ್ಲೇಷಿಸಲಾಯಿತು.

ತಮಿಳುನಾಡು ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ಈ ಘಟನೆ ವರದಿ ಮಾಡುವ ಎರಡು ತಿಂಗಳ ಮೊದಲು, ಮುತ್ತುಕಾಡು ಪಂಚಾಯತ್ ಯೂನಿಯನ್ ಅಧ್ಯಕ್ಷೆ ಪದ್ಮಾ ಅವರ ಪತಿ ಮುತ್ತಯ್ಯ ಅವರು ಕಾನ್‌ಸ್ಟೆಬಲ್ ಮುರಳಿರಾಜ ಅವರ ತಂದೆ ಜೀವನಾನಂದಮ್ ಅವರನ್ನು ನೀರಿನ ಟ್ಯಾಂಕ್ ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಕ್ಕಾಗಿ ಅವಮಾನಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಘಟನೆಯನ್ನು ಮುರಳಿರಾಜ ಸೇಡಿನ ಕ್ರಮವಾಗಿ ಯೋಜಿಸಿ ನಡೆಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮುರಳಿರಾಜ, ಸುದರ್ಶನ್, ಮುತ್ತಯ್ಯ ಮತ್ತು ಆರ್ ಮುತ್ತುಕೃಷ್ಣನ್ ಅವರ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳಿಂದ ಅಳಿಸಲಾದ ಚಿತ್ರಗಳು ಮತ್ತು ಆಡಿಯೊ ರೆಕಾರ್ಡಿಂಗ್‌ಗಳನ್ನು ಮರುಪಡೆಯಲಾಗಿದೆ, ಇದು ಘಟನೆಯನ್ನು ಸಾಬೀತುಪಡಿಸುತ್ತದೆ” ಎಂದು ಪೊಲೀಸ್ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಾಕ್ಷ್ಯಾಧಾರಗಳ ಆಧಾರದ ಮೇಲೆ, ಮುರಳಿರಾಜ, ಸುದರ್ಶನ್ ಮತ್ತು ಮುತ್ತುಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಪುದುಕೊಟ್ಟೈ ವಿಶೇಷ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ.

ಪ್ಲಾಸ್ಟಿಕ್ ಚೀಲದಲ್ಲಿ ಮಾನವ ಮಲದೊಂದಿಗೆ ನೀರಿನ ಟ್ಯಾಂಕ್ ಮೇಲೆ ಇಬ್ಬರು ಪುರುಷರು ಕುಳಿತು ಮಾತನಾಡುತ್ತಿರುವ ವೀಡಿಯೊ ಕಾಣಿಸಿಕೊಂಡಿದೆ. ಅಲ್ಲದೆ, ಸುದರ್ಶನ್ ತನ್ನ ತಾಯಿ ಮತ್ತು ಚಿಕ್ಕಮ್ಮನೊಂದಿಗೆ ಘಟನೆಯ ಬಗ್ಗೆ ಮಾತನಾಡುತ್ತಿದ್ದ ಎರಡು ಆಡಿಯೊ ತುಣುಕುಗಳು ಸಹ ಬೆಳಕಿಗೆ ಬಂದವು ಮತ್ತು ವೈರಲ್ ಆಗಿವೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ತಮಿಳುನಾಡು ನೀರಿನ ಟ್ಯಾಂಕ್ ಮಾಲಿನ್ಯ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...