Homeಮುಖಪುಟತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ತಮಿಳುನಾಡು ನೀರಿನ ಟ್ಯಾಂಕ್ ಮಲೀನ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

- Advertisement -
- Advertisement -

2022 ರ ವೆಂಗೈವಾಯಲ್ ನೀರಿನ ಟ್ಯಾಂಕ್ ಮಾಲಿನ್ಯ ಪ್ರಕರಣದಲ್ಲಿ ತಮಿಳುನಾಡಿನ ಅಪರಾಧ ವಿಭಾಗದ ಅಪರಾಧ ತನಿಖಾ ಇಲಾಖೆ (ಸಿಬಿ-ಸಿಐಡಿ) ಮೂವರು ದಲಿತ ಯುವಕರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

ಡಿಸೆಂಬರ್ 26, 2022 ರಂದು, ವೆಳ್ಳಾಲರ್ ಪೊಲೀಸರು ಉದ್ದೇಶಪೂರ್ವಕವಾಗಿ ಹಾನಿ ಉಂಟುಮಾಡುವ ವಸ್ತುಗಳನ್ನು ನೀಡುವುದಕ್ಕಾಗಿ ಐಪಿಸಿಯ ಸೆಕ್ಷನ್ 328 ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ/ಎಸ್‌ಟಿ) ವಿರುದ್ಧ ದೌರ್ಜನ್ಯ ತಡೆ ಸೆಕ್ಷನ್ 3(1)(ಬಿ), 3(1)(ಎಕ್ಸ್‌), 3(2) (ವಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಲ, ಒಳಚರಂಡಿ ಅಥವಾ ಮೃತದೇಹಗಳಂತಹ ಅಸಹ್ಯಕರ ವಸ್ತುಗಳನ್ನು ಪರಿಶಿಷ್ಟರು ವಾಸಿಸುವ ಆವರಣದಲ್ಲಿ ಅಥವಾ ಹತ್ತಿರ ಎಸೆಯುವ ಮೂಲಕ, ಅವರ ನೀರಿನ ಮೂಲಗಳನ್ನು ಕಲುಷಿತಗೊಳಿಸುವ ಮೂಲಕ ಎಸ್‌ಸಿ/ಎಸ್‌ಟಿ ಸದಸ್ಯರ ವಿರುದ್ಧ ತಾರತಮ್ಯ ಅಥವಾ ಹಾನಿ ಮಾಡುವ ನಿರ್ದಿಷ್ಟ ಕೃತ್ಯಗಳಿಗಾಗಿ ಪ್ರಕರಣ ದಾಖಲಿಸಿದ್ದಾರೆ.

ವೆಂಗೈವಾಯಲ್ ಗ್ರಾಮದಲ್ಲಿ ನೀರಿನ ಟ್ಯಾಂಕ್‌ನಿಂದ ನೀರು ಸೇವಿಸಿದ ಮಕ್ಕಳು ವಾಂತಿ, ಜ್ವರದಿಂದ ಬಳಲುತ್ತಿದ್ದಾರೆ ಮತ್ತು ಆಸ್ಪತ್ರೆಗೆ ದಾಖಲಾಗಬೇಕಾಯಿತು ಎಂಬ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿದೆ.

ದೂರುದಾರರಾದ ಕೆ. ಕನಕರಾಜ್ ಅವರು, ಟ್ಯಾಂಕ್‌ನಲ್ಲಿನ ನೀರಿನ ಮೇಲೆ ಮಾನವ ಮಲ ತೇಲುತ್ತಿರುವುದು ಕಂಡುಬಂದಿದೆ ಎಂದು ಆರೋಪಿಸಿದ್ದಾರೆ.

ಸುದ್ದಿ ಹೊರಬಿದ್ದ ತಕ್ಷಣ, ತಮಿಳುನಾಡಿನಲ್ಲಿ ದಲಿತರ ಸುರಕ್ಷತೆಯ ಬಗ್ಗೆ ವಿರೋಧ ಪಕ್ಷಗಳು ಪ್ರಶ್ನೆಗಳನ್ನು ಎತ್ತುವುದರೊಂದಿಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಯಿತು. ತನಿಖೆಯಲ್ಲಿನ ವಿಳಂಬವನ್ನು ಕೂಡ ವಿರೋಧ ಪಕ್ಷಗಳು ಪ್ರಶ್ನಿಸಿದವು.

ಪ್ರಕರಣವನ್ನು ಜನವರಿ 1, 2023 ರಂದು ಸಿಬಿ-ಸಿಐಡಿಗೆ ವರ್ಗಾಯಿಸಲಾಯಿತು. 397 ಸಾಕ್ಷಿಗಳೊಂದಿಗೆ ವಿಚಾರಣೆ ನಡೆಸಲಾಗಿದ್ದು, 196 ಮೊಬೈಲ್ ಫೋನ್ ಸಂಖ್ಯೆಗಳನ್ನು ಸಹ ತನಿಖೆ ಮಾಡಲಾಯಿತು. 87 ಟವರ್‌ಗಳ ನಡುವೆ ನಡೆದ ಒಂದು ಲಕ್ಷಕ್ಕೂ ಹೆಚ್ಚು ಕರೆಗಳನ್ನು ವಿಶ್ಲೇಷಿಸಲಾಯಿತು.

ತಮಿಳುನಾಡು ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ಈ ಘಟನೆ ವರದಿ ಮಾಡುವ ಎರಡು ತಿಂಗಳ ಮೊದಲು, ಮುತ್ತುಕಾಡು ಪಂಚಾಯತ್ ಯೂನಿಯನ್ ಅಧ್ಯಕ್ಷೆ ಪದ್ಮಾ ಅವರ ಪತಿ ಮುತ್ತಯ್ಯ ಅವರು ಕಾನ್‌ಸ್ಟೆಬಲ್ ಮುರಳಿರಾಜ ಅವರ ತಂದೆ ಜೀವನಾನಂದಮ್ ಅವರನ್ನು ನೀರಿನ ಟ್ಯಾಂಕ್ ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಕ್ಕಾಗಿ ಅವಮಾನಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ಈ ಘಟನೆಯನ್ನು ಮುರಳಿರಾಜ ಸೇಡಿನ ಕ್ರಮವಾಗಿ ಯೋಜಿಸಿ ನಡೆಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮುರಳಿರಾಜ, ಸುದರ್ಶನ್, ಮುತ್ತಯ್ಯ ಮತ್ತು ಆರ್ ಮುತ್ತುಕೃಷ್ಣನ್ ಅವರ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳಿಂದ ಅಳಿಸಲಾದ ಚಿತ್ರಗಳು ಮತ್ತು ಆಡಿಯೊ ರೆಕಾರ್ಡಿಂಗ್‌ಗಳನ್ನು ಮರುಪಡೆಯಲಾಗಿದೆ, ಇದು ಘಟನೆಯನ್ನು ಸಾಬೀತುಪಡಿಸುತ್ತದೆ” ಎಂದು ಪೊಲೀಸ್ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಾಕ್ಷ್ಯಾಧಾರಗಳ ಆಧಾರದ ಮೇಲೆ, ಮುರಳಿರಾಜ, ಸುದರ್ಶನ್ ಮತ್ತು ಮುತ್ತುಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಪುದುಕೊಟ್ಟೈ ವಿಶೇಷ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ.

ಪ್ಲಾಸ್ಟಿಕ್ ಚೀಲದಲ್ಲಿ ಮಾನವ ಮಲದೊಂದಿಗೆ ನೀರಿನ ಟ್ಯಾಂಕ್ ಮೇಲೆ ಇಬ್ಬರು ಪುರುಷರು ಕುಳಿತು ಮಾತನಾಡುತ್ತಿರುವ ವೀಡಿಯೊ ಕಾಣಿಸಿಕೊಂಡಿದೆ. ಅಲ್ಲದೆ, ಸುದರ್ಶನ್ ತನ್ನ ತಾಯಿ ಮತ್ತು ಚಿಕ್ಕಮ್ಮನೊಂದಿಗೆ ಘಟನೆಯ ಬಗ್ಗೆ ಮಾತನಾಡುತ್ತಿದ್ದ ಎರಡು ಆಡಿಯೊ ತುಣುಕುಗಳು ಸಹ ಬೆಳಕಿಗೆ ಬಂದವು ಮತ್ತು ವೈರಲ್ ಆಗಿವೆ. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ತಮಿಳುನಾಡು ನೀರಿನ ಟ್ಯಾಂಕ್ ಮಾಲಿನ್ಯ ಪ್ರಕರಣ: ಆರೋಪ ಪಟ್ಟಿಯಲ್ಲಿ ಮೂವರು ದಲಿತರ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...