HomeUncategorizedತಮಿಳುನಾಡು: ಮರ್ಯಾದೆಗೇಡು ಹತ್ಯೆಗಳ ತಡೆಗೆ ಕಾಯ್ದೆಯನ್ನು ತರುತ್ತೇವೆ- ಎಂ. ಕೆ. ಸ್ಟಾಲಿನ್‌

ತಮಿಳುನಾಡು: ಮರ್ಯಾದೆಗೇಡು ಹತ್ಯೆಗಳ ತಡೆಗೆ ಕಾಯ್ದೆಯನ್ನು ತರುತ್ತೇವೆ- ಎಂ. ಕೆ. ಸ್ಟಾಲಿನ್‌

- Advertisement -
- Advertisement -

ದೇಶದಾದ್ಯಂತ ಅಂತರ್ಜಾತಿ ವಿವಾಹವಾದ ದಂಪತಿಗಳನ್ನು ಕುಟುಂಬದ ಸದಸ್ಯರು ಜಾತಿ ಕಾರಣಕ್ಕಾಗಿ ಹತ್ಯೆ ನಡೆಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಇದರ ಬೆನ್ನಲ್ಲೇ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ತಮಿಳುನಾಡಿನ ವಿಧಾನಸಭೆಯ ಕಲಾಪದ ವೇಳೆ ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳ ವಿರುದ್ದ ಪ್ರಭಲವಾದ ಕಾಯ್ದೆಯನ್ನು ರೂಪಿಸಲು ತಮ್ಮ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ “ಈಗಿರುವ ಪ್ರಸ್ತುತ ಕಾನೂನಿನಲ್ಲೇ ಇದನ್ನು ತಡೆಗಟ್ಟಬಹುದು, ಪ್ರತ್ಯೇಕ ಕಾಯ್ದೆ ಅಗತ್ಯವಿಲ್ಲ” ಎಂದಿದ್ದರು. ಡಿಎಂಕೆಯ ಮಿತ್ರ ಪಕ್ಷಗಳಾದ ಮಿತ್ರಪಕ್ಷಗಳಾದ ಸಿಪಿಐ, ಸಿಪಿಐ(ಎಂ) ಮತ್ತು ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಗಳ ಒತ್ತಡಕ್ಕೆ ಮಣಿದು ಅಂತಿಮವಾಗಿ ಜಾತಿ ಆಧಾರಿತ ದ್ವೇಷ ಅಪರಾಧಗಳು ಮತ್ತು ಮರ್ಯಾದೆಗೇಡು ಹತ್ಯೆಗಳು ತಡೆಗಟ್ಟುವ ಗುರಿಯನ್ನು ಹೊಂದಿರುವ ಕಾನೂನನ್ನು ರೂಪಿಸಲಾಗವುದು ಎಂದು ತಿಳಿಸಿದ್ದಾರೆ.

ಕಠಿಣ ಕಾನೂನು ಮತ್ತು ತೀರ್ಪುಗಳತ್ತ ಕರ್ನಾಟಕದ ನಿರಂತರ ಪ್ರಯತ್ನಗಳು
ಮಹಿಳಾ ಮತ್ತು ಸಮಾಜದ ವಿರುದ್ಧ ನಡೆಯುತ್ತಿರುವ ಗಂಭೀರ ಅಪರಾಧಗಳನ್ನು ನಿಗ್ರಹಿಸಲು ಕರ್ನಾಟಕ ಸರ್ಕಾವೂ ಮುಂದಾಗಿದೆ. ಈ ಹಿಂದೆ ಸೆಪ್ಟೆಂಬರ್ 2023ರಲ್ಲಿ ಮಾಧ್ಯಮ ವರದಿಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸ್ತಿತ್ವದಲ್ಲಿರುವ ಭಾರತೀಯ ದಂಡ ಸಂಹಿತಿಯ (ಐಪಿಸಿ) ನಿಯಮಗಳು ಇಂತಹ ಅಪರಾಧಗಳಿಗೆ ಸಾಕಷ್ಟು ಕಠಿಣವಲ್ಲವೆಂದು ಅಭಿಪ್ರಾಯಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಹೊಸ, ಕಠಿಣ ರಾಜ್ಯ ಕಾನೂನನ್ನು ರೂಪಿಸುವ ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದ್ದರು. ಮಹಿಳಾ ಸಂಘಟನೆಗಳು, ಕಾನೂನು ತಜ್ಞರು ಮತ್ತು ಇತರ ಸಾಮಾಜಿಕ ಪಾಲುದಾರರೊಂದಿಗೆ ವಿಚಾರಣಾ ಸಭೆಗಳನ್ನು ನಡೆಸುವ ಯೋಜನೆಯನ್ನು ಹೊಂದಿದ್ದೇವೆ, ಹೊಸ ಕಾನೂನು ಗಂಭೀರ ಅಪರಾಧಗಳ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರೂಪಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಪ್ರಕಟಿಸಿದ್ದರು.

ಇತ್ತ, ರಾಜ್ಯದ ನ್ಯಾಯಾಂಗವೂ ಇಂತಹ ಪ್ರಕರಣಗಳಲ್ಲಿ ಕಠಿಣ ತೀರ್ಪುಗಳನ್ನು ನೀಡುತ್ತಿದೆ ಎಂಬುದರ ಉದಾಹರಣೆಯಾಗಿ ಇತ್ತೀಚಿನ ಎರಡು ಪ್ರಮುಖ ತೀರ್ಪುಗಳು ಗಮನ ಸೆಳೆಯುತ್ತಿವೆ:

  • ಫೆಬ್ರವರಿ 2025: ಗದಗ ಜಿಲ್ಲೆಯ ಜಿಲ್ಲಾ ನ್ಯಾಯಾಲಯವು 2019ರ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ನಡೆದ “ಮರ್ಯಾದಾ ಹತ್ಯೆ” ಪ್ರಕರಣದಲ್ಲಿ ನಾಲ್ಕು ಸಂಬಂಧಿಕರಿಗೆ ಮರಣದಂಡನೆ ವಿಧಿಸಿತು.
  • ಏಪ್ರಿಲ್ 2025: ಕರ್ನಾಟಕದ ಮತ್ತೊಂದು ನ್ಯಾಯಾಲಯವು ಇಂತಹದೇ ಮತ್ತೊಂದು “ಮರ್ಯಾದಾ ಹತ್ಯೆ” ಪ್ರಕರಣದಲ್ಲಿ ಮೂವರಿಗೆ ಮರಣದಂಡನೆ ಹಾಗೂ ಒಂಬತ್ತು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತು.

ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳು ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ಕಠಿಣ ಕಾನೂನು ರೂಪಿಸುತ್ತಿರುವುದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುತ್ತವೆ ಎಂದು ಹಲವು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...