HomeUncategorizedತಮಿಳುನಾಡು: ಮರ್ಯಾದೆಗೇಡು ಹತ್ಯೆಗಳ ತಡೆಗೆ ಕಾಯ್ದೆಯನ್ನು ತರುತ್ತೇವೆ- ಎಂ. ಕೆ. ಸ್ಟಾಲಿನ್‌

ತಮಿಳುನಾಡು: ಮರ್ಯಾದೆಗೇಡು ಹತ್ಯೆಗಳ ತಡೆಗೆ ಕಾಯ್ದೆಯನ್ನು ತರುತ್ತೇವೆ- ಎಂ. ಕೆ. ಸ್ಟಾಲಿನ್‌

- Advertisement -
- Advertisement -

ದೇಶದಾದ್ಯಂತ ಅಂತರ್ಜಾತಿ ವಿವಾಹವಾದ ದಂಪತಿಗಳನ್ನು ಕುಟುಂಬದ ಸದಸ್ಯರು ಜಾತಿ ಕಾರಣಕ್ಕಾಗಿ ಹತ್ಯೆ ನಡೆಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಇದರ ಬೆನ್ನಲ್ಲೇ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ತಮಿಳುನಾಡಿನ ವಿಧಾನಸಭೆಯ ಕಲಾಪದ ವೇಳೆ ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳ ವಿರುದ್ದ ಪ್ರಭಲವಾದ ಕಾಯ್ದೆಯನ್ನು ರೂಪಿಸಲು ತಮ್ಮ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ “ಈಗಿರುವ ಪ್ರಸ್ತುತ ಕಾನೂನಿನಲ್ಲೇ ಇದನ್ನು ತಡೆಗಟ್ಟಬಹುದು, ಪ್ರತ್ಯೇಕ ಕಾಯ್ದೆ ಅಗತ್ಯವಿಲ್ಲ” ಎಂದಿದ್ದರು. ಡಿಎಂಕೆಯ ಮಿತ್ರ ಪಕ್ಷಗಳಾದ ಮಿತ್ರಪಕ್ಷಗಳಾದ ಸಿಪಿಐ, ಸಿಪಿಐ(ಎಂ) ಮತ್ತು ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಗಳ ಒತ್ತಡಕ್ಕೆ ಮಣಿದು ಅಂತಿಮವಾಗಿ ಜಾತಿ ಆಧಾರಿತ ದ್ವೇಷ ಅಪರಾಧಗಳು ಮತ್ತು ಮರ್ಯಾದೆಗೇಡು ಹತ್ಯೆಗಳು ತಡೆಗಟ್ಟುವ ಗುರಿಯನ್ನು ಹೊಂದಿರುವ ಕಾನೂನನ್ನು ರೂಪಿಸಲಾಗವುದು ಎಂದು ತಿಳಿಸಿದ್ದಾರೆ.

ಕಠಿಣ ಕಾನೂನು ಮತ್ತು ತೀರ್ಪುಗಳತ್ತ ಕರ್ನಾಟಕದ ನಿರಂತರ ಪ್ರಯತ್ನಗಳು
ಮಹಿಳಾ ಮತ್ತು ಸಮಾಜದ ವಿರುದ್ಧ ನಡೆಯುತ್ತಿರುವ ಗಂಭೀರ ಅಪರಾಧಗಳನ್ನು ನಿಗ್ರಹಿಸಲು ಕರ್ನಾಟಕ ಸರ್ಕಾವೂ ಮುಂದಾಗಿದೆ. ಈ ಹಿಂದೆ ಸೆಪ್ಟೆಂಬರ್ 2023ರಲ್ಲಿ ಮಾಧ್ಯಮ ವರದಿಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸ್ತಿತ್ವದಲ್ಲಿರುವ ಭಾರತೀಯ ದಂಡ ಸಂಹಿತಿಯ (ಐಪಿಸಿ) ನಿಯಮಗಳು ಇಂತಹ ಅಪರಾಧಗಳಿಗೆ ಸಾಕಷ್ಟು ಕಠಿಣವಲ್ಲವೆಂದು ಅಭಿಪ್ರಾಯಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಹೊಸ, ಕಠಿಣ ರಾಜ್ಯ ಕಾನೂನನ್ನು ರೂಪಿಸುವ ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದ್ದರು. ಮಹಿಳಾ ಸಂಘಟನೆಗಳು, ಕಾನೂನು ತಜ್ಞರು ಮತ್ತು ಇತರ ಸಾಮಾಜಿಕ ಪಾಲುದಾರರೊಂದಿಗೆ ವಿಚಾರಣಾ ಸಭೆಗಳನ್ನು ನಡೆಸುವ ಯೋಜನೆಯನ್ನು ಹೊಂದಿದ್ದೇವೆ, ಹೊಸ ಕಾನೂನು ಗಂಭೀರ ಅಪರಾಧಗಳ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರೂಪಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಪ್ರಕಟಿಸಿದ್ದರು.

ಇತ್ತ, ರಾಜ್ಯದ ನ್ಯಾಯಾಂಗವೂ ಇಂತಹ ಪ್ರಕರಣಗಳಲ್ಲಿ ಕಠಿಣ ತೀರ್ಪುಗಳನ್ನು ನೀಡುತ್ತಿದೆ ಎಂಬುದರ ಉದಾಹರಣೆಯಾಗಿ ಇತ್ತೀಚಿನ ಎರಡು ಪ್ರಮುಖ ತೀರ್ಪುಗಳು ಗಮನ ಸೆಳೆಯುತ್ತಿವೆ:

  • ಫೆಬ್ರವರಿ 2025: ಗದಗ ಜಿಲ್ಲೆಯ ಜಿಲ್ಲಾ ನ್ಯಾಯಾಲಯವು 2019ರ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ನಡೆದ “ಮರ್ಯಾದಾ ಹತ್ಯೆ” ಪ್ರಕರಣದಲ್ಲಿ ನಾಲ್ಕು ಸಂಬಂಧಿಕರಿಗೆ ಮರಣದಂಡನೆ ವಿಧಿಸಿತು.
  • ಏಪ್ರಿಲ್ 2025: ಕರ್ನಾಟಕದ ಮತ್ತೊಂದು ನ್ಯಾಯಾಲಯವು ಇಂತಹದೇ ಮತ್ತೊಂದು “ಮರ್ಯಾದಾ ಹತ್ಯೆ” ಪ್ರಕರಣದಲ್ಲಿ ಮೂವರಿಗೆ ಮರಣದಂಡನೆ ಹಾಗೂ ಒಂಬತ್ತು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತು.

ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳು ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ಕಠಿಣ ಕಾನೂನು ರೂಪಿಸುತ್ತಿರುವುದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುತ್ತವೆ ಎಂದು ಹಲವು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...