Homeಕರೋನಾ ತಲ್ಲಣಕೊರೊನಾ ನಿರ್ಬಂಧ ಸಡಿಲಗೊಳಿಸಿದ ತಮಿಳುನಾಡು: ಸಿನಿಮಾ ಥಿಯೇಟರ್‌ ಓಪನ್

ಕೊರೊನಾ ನಿರ್ಬಂಧ ಸಡಿಲಗೊಳಿಸಿದ ತಮಿಳುನಾಡು: ಸಿನಿಮಾ ಥಿಯೇಟರ್‌ ಓಪನ್

ಸೆಪ್ಟೆಂಬರ್‌ನಿಂದ 9 ರಿಂದ 12 ನೇ ತರಗತಿಗಳಿಗೆ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಶಾಲೆಗಳಿಗೆ ಅನುಮತಿ ನೀಡಲಾಗಿದೆ.

- Advertisement -
- Advertisement -

ಕೊರೊನಾ ನಿರ್ಬಂಧಗಳನ್ನು ಹಂತ ಹಂತವಾಗಿ ಸಡಿಲಗೊಳಿಸುವ ತನ್ನ ಕಾರ್ಯತಂತ್ರವನ್ನು ತಮಿಳುನಾಡು ಸರ್ಕಾರ ಮುಂದುವರಿಸಿದೆ. ಶನಿವಾರ ನಿರ್ಬಂಧಗಳಲ್ಲಿ ಮತ್ತಷ್ಟು ಸಡಿಲಿಕೆಗಳನ್ನು ಘೋಷಿಸಿದ್ದು, ಸಿನಿಮಾ ಥಿಯೇಟರ್‌‌ಗಳಿಗೆ 50% ಸಾಮರ್ಥ್ಯದಲ್ಲಿ ತೆರೆಯಲು ಅನುಮತಿ ನೀಡಲಾಗಿದೆ. ಸಿನಿಮಾ ಥಿಯೇಟರ್‌ ಸಿಬ್ಬಂದಿಗೆ ಲಸಿಕೆ ಹಾಕಲಾಗಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಥಿಯೇಟರ್‌ಗಳಿಗೆ ನಿರ್ದೇಶನ ನೀಡಲಾಗಿದೆ.

ಕೊರೊನಾ ಪ್ರೋಟೋಕಾಲ್‌ಗೆ ಅನುಸಾರವಾಗಿ ಸೆಪ್ಟೆಂಬರ್ ತಿಂಗಳಿನಿಂದ 9 ರಿಂದ 12 ನೇ ತರಗತಿಗಳಿಗೆ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಶಾಲೆಗಳು ಅನುಮೋದನೆ ಪಡೆದಿವೆ. ಶಾಲೆಗಳು ವಿದ್ಯಾರ್ಥಿಗಳಿಗೆ ಊಟದ ಯೋಜನೆಯಡಿಯಲ್ಲಿ ಆಹಾರವನ್ನು ನೀಡಬಹುದು ಎಂದು ಸರ್ಕಾರ ಹೇಳಿದೆ. 1 ನೇ ತರಗತಿಯಿಂದ 8 ನೇ ತರಗತಿಗಳಿಗೆ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಸೆಪ್ಟೆಂಬರ್ 15 ರ ನಂತರ ಸರ್ಕಾರ ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: ಕೊರೊನಾ ಮೂರನೇ ಅಲೆಯ ಭೀತಿ; ಸನ್ನದ್ಧವಾಗಿದೆಯೇ ಸರ್ಕಾರ?

ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳು ಸರ್ಕಾರವು ಅವರಿಗೆ ನೀಡುವ ಮಾರ್ಗಸೂಚಿಗಳ ಪ್ರಕಾರ ಸೆಪ್ಟೆಂಬರ್ 1 ರಿಂದ ಸರದಿ ಆಧಾರದ ಮೇಲೆ ತೆರೆಯಬಹುದು ಎಂದು ಸರ್ಕಾರ ಹೇಳಿದೆ. ಅಧ್ಯಾಪಕರು ಮತ್ತು ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಈ ಸಂಸ್ಥೆಗಳನ್ನು ಕೇಳಲಾಗಿದೆ.

ಪ್ರತಿ ಸಿಬ್ಬಂದಿಗಳೂ ಕೊರೊನಾ ಲಸಿಕೆ ಪಡೆದಿದ್ದರೆ ಬಾರ್‌, ಹೋಟೆಲ್‌ ಮತ್ತು ಕ್ಲಬ್‌ಗಳನ್ನು ತೆರೆಯಲು ಅನುಮೋದನೆ ನೀಡಲಾಗಿದೆ. ಬೀಚ್‌ ಸಾರ್ವಜನಿಕರಿಗೆ ತೆರೆಯಲಾಗಿದ್ದು, ಅಲ್ಲಿನ ಅಧಿಕಾರಿಗಳು, ವ್ಯಾಪಾರಸ್ಥರಿಗೆ ಲಸಿಕೆ ಪಡೆಯಲು ನಿರ್ದೇಶಿಸಲಾಗಿದೆ.

ಐಟಿ ಕಂಪನಿಗಳ ಕಚೇರಿಗಳು 100% ಸಿಬ್ಬಂದಿ ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಬಹುದಾಗಿದೆ.

ಸದ್ಯಕ್ಕೆ, ಈಜುಕೊಳಗಳು ಕ್ರೀಡಾ ತರಬೇತಿಗಾಗಿ ಮಾತ್ರ ತೆರೆಯಬಹುದು ಎಂದು ಸರ್ಕಾರ ಹೇಳಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ತರಬೇತಿ ಪಡೆಯುವವರು ಮತ್ತು ತರಬೇತುದಾರರು ಕೊರೊನಾ ಲಸಿಕೆಯನ್ನು ಪಡೆದಿರಬೇಕು ಎಂದು ತಿಳಿಸಿದೆ.

ಈ ಮೊದಲು ರಾತ್ರಿ 9 ಗಂಟೆಯವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಅನುಮತಿಸಲಾಗಿತ್ತು, ಈಗ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಬಹುದಾಗಿದೆ. ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಕಾರ್ಯಾಚರಣೆ ಪುನರಾರಂಭಿಸಲು ಆಂಧ್ರ ಪ್ರದೇಶ ಮತ್ತು ಕರ್ನಾಟಕಕ್ಕೆ ಬಸ್ ಸೇವೆಗಳಿಗೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: 3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...