Homeಕರೋನಾ ತಲ್ಲಣಕೊರೊನಾ ನಿರ್ಬಂಧ ಸಡಿಲಗೊಳಿಸಿದ ತಮಿಳುನಾಡು: ಸಿನಿಮಾ ಥಿಯೇಟರ್‌ ಓಪನ್

ಕೊರೊನಾ ನಿರ್ಬಂಧ ಸಡಿಲಗೊಳಿಸಿದ ತಮಿಳುನಾಡು: ಸಿನಿಮಾ ಥಿಯೇಟರ್‌ ಓಪನ್

ಸೆಪ್ಟೆಂಬರ್‌ನಿಂದ 9 ರಿಂದ 12 ನೇ ತರಗತಿಗಳಿಗೆ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಶಾಲೆಗಳಿಗೆ ಅನುಮತಿ ನೀಡಲಾಗಿದೆ.

- Advertisement -
- Advertisement -

ಕೊರೊನಾ ನಿರ್ಬಂಧಗಳನ್ನು ಹಂತ ಹಂತವಾಗಿ ಸಡಿಲಗೊಳಿಸುವ ತನ್ನ ಕಾರ್ಯತಂತ್ರವನ್ನು ತಮಿಳುನಾಡು ಸರ್ಕಾರ ಮುಂದುವರಿಸಿದೆ. ಶನಿವಾರ ನಿರ್ಬಂಧಗಳಲ್ಲಿ ಮತ್ತಷ್ಟು ಸಡಿಲಿಕೆಗಳನ್ನು ಘೋಷಿಸಿದ್ದು, ಸಿನಿಮಾ ಥಿಯೇಟರ್‌‌ಗಳಿಗೆ 50% ಸಾಮರ್ಥ್ಯದಲ್ಲಿ ತೆರೆಯಲು ಅನುಮತಿ ನೀಡಲಾಗಿದೆ. ಸಿನಿಮಾ ಥಿಯೇಟರ್‌ ಸಿಬ್ಬಂದಿಗೆ ಲಸಿಕೆ ಹಾಕಲಾಗಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಥಿಯೇಟರ್‌ಗಳಿಗೆ ನಿರ್ದೇಶನ ನೀಡಲಾಗಿದೆ.

ಕೊರೊನಾ ಪ್ರೋಟೋಕಾಲ್‌ಗೆ ಅನುಸಾರವಾಗಿ ಸೆಪ್ಟೆಂಬರ್ ತಿಂಗಳಿನಿಂದ 9 ರಿಂದ 12 ನೇ ತರಗತಿಗಳಿಗೆ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಶಾಲೆಗಳು ಅನುಮೋದನೆ ಪಡೆದಿವೆ. ಶಾಲೆಗಳು ವಿದ್ಯಾರ್ಥಿಗಳಿಗೆ ಊಟದ ಯೋಜನೆಯಡಿಯಲ್ಲಿ ಆಹಾರವನ್ನು ನೀಡಬಹುದು ಎಂದು ಸರ್ಕಾರ ಹೇಳಿದೆ. 1 ನೇ ತರಗತಿಯಿಂದ 8 ನೇ ತರಗತಿಗಳಿಗೆ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಸೆಪ್ಟೆಂಬರ್ 15 ರ ನಂತರ ಸರ್ಕಾರ ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: ಕೊರೊನಾ ಮೂರನೇ ಅಲೆಯ ಭೀತಿ; ಸನ್ನದ್ಧವಾಗಿದೆಯೇ ಸರ್ಕಾರ?

ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳು ಸರ್ಕಾರವು ಅವರಿಗೆ ನೀಡುವ ಮಾರ್ಗಸೂಚಿಗಳ ಪ್ರಕಾರ ಸೆಪ್ಟೆಂಬರ್ 1 ರಿಂದ ಸರದಿ ಆಧಾರದ ಮೇಲೆ ತೆರೆಯಬಹುದು ಎಂದು ಸರ್ಕಾರ ಹೇಳಿದೆ. ಅಧ್ಯಾಪಕರು ಮತ್ತು ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಈ ಸಂಸ್ಥೆಗಳನ್ನು ಕೇಳಲಾಗಿದೆ.

ಪ್ರತಿ ಸಿಬ್ಬಂದಿಗಳೂ ಕೊರೊನಾ ಲಸಿಕೆ ಪಡೆದಿದ್ದರೆ ಬಾರ್‌, ಹೋಟೆಲ್‌ ಮತ್ತು ಕ್ಲಬ್‌ಗಳನ್ನು ತೆರೆಯಲು ಅನುಮೋದನೆ ನೀಡಲಾಗಿದೆ. ಬೀಚ್‌ ಸಾರ್ವಜನಿಕರಿಗೆ ತೆರೆಯಲಾಗಿದ್ದು, ಅಲ್ಲಿನ ಅಧಿಕಾರಿಗಳು, ವ್ಯಾಪಾರಸ್ಥರಿಗೆ ಲಸಿಕೆ ಪಡೆಯಲು ನಿರ್ದೇಶಿಸಲಾಗಿದೆ.

ಐಟಿ ಕಂಪನಿಗಳ ಕಚೇರಿಗಳು 100% ಸಿಬ್ಬಂದಿ ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಬಹುದಾಗಿದೆ.

ಸದ್ಯಕ್ಕೆ, ಈಜುಕೊಳಗಳು ಕ್ರೀಡಾ ತರಬೇತಿಗಾಗಿ ಮಾತ್ರ ತೆರೆಯಬಹುದು ಎಂದು ಸರ್ಕಾರ ಹೇಳಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ತರಬೇತಿ ಪಡೆಯುವವರು ಮತ್ತು ತರಬೇತುದಾರರು ಕೊರೊನಾ ಲಸಿಕೆಯನ್ನು ಪಡೆದಿರಬೇಕು ಎಂದು ತಿಳಿಸಿದೆ.

ಈ ಮೊದಲು ರಾತ್ರಿ 9 ಗಂಟೆಯವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಅನುಮತಿಸಲಾಗಿತ್ತು, ಈಗ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಬಹುದಾಗಿದೆ. ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಕಾರ್ಯಾಚರಣೆ ಪುನರಾರಂಭಿಸಲು ಆಂಧ್ರ ಪ್ರದೇಶ ಮತ್ತು ಕರ್ನಾಟಕಕ್ಕೆ ಬಸ್ ಸೇವೆಗಳಿಗೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: 3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...