Homeಕರೋನಾ ತಲ್ಲಣಕೊರೊನಾ ನಿರ್ಬಂಧ ಸಡಿಲಗೊಳಿಸಿದ ತಮಿಳುನಾಡು: ಸಿನಿಮಾ ಥಿಯೇಟರ್‌ ಓಪನ್

ಕೊರೊನಾ ನಿರ್ಬಂಧ ಸಡಿಲಗೊಳಿಸಿದ ತಮಿಳುನಾಡು: ಸಿನಿಮಾ ಥಿಯೇಟರ್‌ ಓಪನ್

ಸೆಪ್ಟೆಂಬರ್‌ನಿಂದ 9 ರಿಂದ 12 ನೇ ತರಗತಿಗಳಿಗೆ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಶಾಲೆಗಳಿಗೆ ಅನುಮತಿ ನೀಡಲಾಗಿದೆ.

- Advertisement -
- Advertisement -

ಕೊರೊನಾ ನಿರ್ಬಂಧಗಳನ್ನು ಹಂತ ಹಂತವಾಗಿ ಸಡಿಲಗೊಳಿಸುವ ತನ್ನ ಕಾರ್ಯತಂತ್ರವನ್ನು ತಮಿಳುನಾಡು ಸರ್ಕಾರ ಮುಂದುವರಿಸಿದೆ. ಶನಿವಾರ ನಿರ್ಬಂಧಗಳಲ್ಲಿ ಮತ್ತಷ್ಟು ಸಡಿಲಿಕೆಗಳನ್ನು ಘೋಷಿಸಿದ್ದು, ಸಿನಿಮಾ ಥಿಯೇಟರ್‌‌ಗಳಿಗೆ 50% ಸಾಮರ್ಥ್ಯದಲ್ಲಿ ತೆರೆಯಲು ಅನುಮತಿ ನೀಡಲಾಗಿದೆ. ಸಿನಿಮಾ ಥಿಯೇಟರ್‌ ಸಿಬ್ಬಂದಿಗೆ ಲಸಿಕೆ ಹಾಕಲಾಗಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಥಿಯೇಟರ್‌ಗಳಿಗೆ ನಿರ್ದೇಶನ ನೀಡಲಾಗಿದೆ.

ಕೊರೊನಾ ಪ್ರೋಟೋಕಾಲ್‌ಗೆ ಅನುಸಾರವಾಗಿ ಸೆಪ್ಟೆಂಬರ್ ತಿಂಗಳಿನಿಂದ 9 ರಿಂದ 12 ನೇ ತರಗತಿಗಳಿಗೆ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಶಾಲೆಗಳು ಅನುಮೋದನೆ ಪಡೆದಿವೆ. ಶಾಲೆಗಳು ವಿದ್ಯಾರ್ಥಿಗಳಿಗೆ ಊಟದ ಯೋಜನೆಯಡಿಯಲ್ಲಿ ಆಹಾರವನ್ನು ನೀಡಬಹುದು ಎಂದು ಸರ್ಕಾರ ಹೇಳಿದೆ. 1 ನೇ ತರಗತಿಯಿಂದ 8 ನೇ ತರಗತಿಗಳಿಗೆ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರವನ್ನು ಸೆಪ್ಟೆಂಬರ್ 15 ರ ನಂತರ ಸರ್ಕಾರ ತೆಗೆದುಕೊಳ್ಳುತ್ತದೆ.

ಇದನ್ನೂ ಓದಿ: ಕೊರೊನಾ ಮೂರನೇ ಅಲೆಯ ಭೀತಿ; ಸನ್ನದ್ಧವಾಗಿದೆಯೇ ಸರ್ಕಾರ?

ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳು ಸರ್ಕಾರವು ಅವರಿಗೆ ನೀಡುವ ಮಾರ್ಗಸೂಚಿಗಳ ಪ್ರಕಾರ ಸೆಪ್ಟೆಂಬರ್ 1 ರಿಂದ ಸರದಿ ಆಧಾರದ ಮೇಲೆ ತೆರೆಯಬಹುದು ಎಂದು ಸರ್ಕಾರ ಹೇಳಿದೆ. ಅಧ್ಯಾಪಕರು ಮತ್ತು ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಈ ಸಂಸ್ಥೆಗಳನ್ನು ಕೇಳಲಾಗಿದೆ.

ಪ್ರತಿ ಸಿಬ್ಬಂದಿಗಳೂ ಕೊರೊನಾ ಲಸಿಕೆ ಪಡೆದಿದ್ದರೆ ಬಾರ್‌, ಹೋಟೆಲ್‌ ಮತ್ತು ಕ್ಲಬ್‌ಗಳನ್ನು ತೆರೆಯಲು ಅನುಮೋದನೆ ನೀಡಲಾಗಿದೆ. ಬೀಚ್‌ ಸಾರ್ವಜನಿಕರಿಗೆ ತೆರೆಯಲಾಗಿದ್ದು, ಅಲ್ಲಿನ ಅಧಿಕಾರಿಗಳು, ವ್ಯಾಪಾರಸ್ಥರಿಗೆ ಲಸಿಕೆ ಪಡೆಯಲು ನಿರ್ದೇಶಿಸಲಾಗಿದೆ.

ಐಟಿ ಕಂಪನಿಗಳ ಕಚೇರಿಗಳು 100% ಸಿಬ್ಬಂದಿ ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಬಹುದಾಗಿದೆ.

ಸದ್ಯಕ್ಕೆ, ಈಜುಕೊಳಗಳು ಕ್ರೀಡಾ ತರಬೇತಿಗಾಗಿ ಮಾತ್ರ ತೆರೆಯಬಹುದು ಎಂದು ಸರ್ಕಾರ ಹೇಳಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ತರಬೇತಿ ಪಡೆಯುವವರು ಮತ್ತು ತರಬೇತುದಾರರು ಕೊರೊನಾ ಲಸಿಕೆಯನ್ನು ಪಡೆದಿರಬೇಕು ಎಂದು ತಿಳಿಸಿದೆ.

ಈ ಮೊದಲು ರಾತ್ರಿ 9 ಗಂಟೆಯವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಅನುಮತಿಸಲಾಗಿತ್ತು, ಈಗ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಬಹುದಾಗಿದೆ. ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಕಾರ್ಯಾಚರಣೆ ಪುನರಾರಂಭಿಸಲು ಆಂಧ್ರ ಪ್ರದೇಶ ಮತ್ತು ಕರ್ನಾಟಕಕ್ಕೆ ಬಸ್ ಸೇವೆಗಳಿಗೆ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: 3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...