HomeUncategorizedತಮಿಳುನಾಡು: ನಮ್ಮ ಸಚಿವರನ್ನು ವಜಾ ಮಾಡಲು ನೀವು ಯಾರು?; ರಾಜ್ಯಪಾಲರಿಗೆ ಸ್ಟಾಲಿನ್ ನೇರ ಪ್ರಶ್ನೆ

ತಮಿಳುನಾಡು: ನಮ್ಮ ಸಚಿವರನ್ನು ವಜಾ ಮಾಡಲು ನೀವು ಯಾರು?; ರಾಜ್ಯಪಾಲರಿಗೆ ಸ್ಟಾಲಿನ್ ನೇರ ಪ್ರಶ್ನೆ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಶಿಫಾರಸು ಇಲ್ಲದೆ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲ ಆರ್.ಎನ್.ರವಿ ಅವರ ವಿರುದ್ದ ಗರಂ ಆಗಿದ್ದಾರೆ. ಶುಕ್ರವಾರ ರಾಜ್ಯಪಾಲ ರವಿ ಅವರು, ಸಚಿವ ಸೆಂಥಿಲ್‌ ಬಾಲಾಜಿ ವಜಾ ಆದೇಶ ಪ್ರಕಟಿಸಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಯಿತು. ಸಿಎಂ ಸ್ಟಾಲಿನ್ ಸಮೇತ ತಮಿಳುನಾಡು ಸರ್ಕಾರ ರಾಜ್ಯಪಾಲರ೫ ವಿರುದ್ಧ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಈಗ ರಾಜ್ಯಪಾಲ ರವಿ ಅವರಿಗೆ ಸ್ಟಾಲಿನ್ ನೇರ ಉತ್ತರ ಕೊಟ್ಟಿದ್ದಾರೆ.

ಸೆಂಥಿಲ್‌ ಬಾಲಾಜಿ ಅವರನ್ನು ಸಂಪುಟದಿಂದ ವಜಾಗೊಳಿಸಿದ್ದ ಆದೇಶವನ್ನ ತಾತ್ಕಾಲಿಕವಾಗಿ ತಡೆಹಿಡಿಯಲು ರಾಜ್ಯಪಾಲ ಆರ್‌.ಎನ್.ರವಿ ನಿರ್ಧಾರ ಮಾಡಿದ್ದಾರೆ. ಆದರೂ ವಿವಾದದ ಕಿಚ್ಚು ಮಾತ್ರ ತಣ್ಣಗಾಗುತ್ತಿಲ್ಲ. ಡಿಎಂಕೆ ಸರ್ಕಾರ ಈಗ ಕಾನೂನು ಹೋರಾಟಕ್ಕೆ ಸಿದ್ಧವಾಗಿದೆ. ಅಲ್ಲದೆ ನೇರವಾಗಿ ರಾಜ್ಯಪಾಲರಿಗೆ ಪತ್ರ ಬರೆದಿರುವ ಸ್ಟಾಲಿನ್ ‘ನಮ್ಮ ಸರ್ಕಾರದ ಸಚಿವರನ್ನು ವಜಾ ಮಾಡಲು ನೀವು ಯಾರು? ಆ ಅಧಿಕಾರ ನಿಮಗೆ ಇಲ್ಲ’ ಎಂದಿದ್ದಾರೆ.

ರಾಜ್ಯಪಾಲರ ನಿರ್ಧಾರದ ಬಗ್ಗೆ ಸ್ವತಃ ಬಿಜೆಪಿಯ ಕೆಲವು ನಾಯಕರಲ್ಲಿ ಅಸಮಾಧಾನ ಮೂಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರೆ ಮಾಡಿ ಇಂತಹ ನಿರ್ಧಾರ ತಗೆದುಕೊಳ್ಳದಿರುವಂತೆ ತಿಳಿಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ ಅಮಿತ್ ಶಾ ಅವರ ಸಲಹೆ ಮೇರೆಗೆ ತಮಿಳುನಾಡು ರಾಜ್ಯಪಾಲ ರವಿ ನಿರ್ಧಾರ ಬದಲಾಯಿಸಿದ್ದು, ತಮ್ಮ ವಜಾ ಆದೇಶವನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದ್ದಾರೆ. ಆದರೆ ಇದೀಗ ಡಿಎಂಕೆ ಈ ವಿಚಾರವನ್ನೇ ಹಿಡಿದುಕೊಂಡು ಹೋರಾಟ ಸಂಘಟಿಸಲು ಸಿದ್ಧತೆ ನಡೆಸಿದೆ. ಹೀಗಾಗಿ ‘ಸಚಿವರ ನೇಮಕ ಹಾಗೂ ವಜಾಗೊಳಿಸುವುದು ಮುಖ್ಯಮಂತ್ರಿ ವಿವೇಚನಾಧಿಕಾರ’ ಎಂದು ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ.

ವಜಾ ಪತ್ರ: ರಾಜ್ಯಪಾಲ ಆರ್.ಎನ್.ರವಿ ಅವರು ಗುರುವಾರ ಸಚಿವ ಬಾಲಾಜಿ ಅವರನ್ನ ಸಂಪುಟದಿಂದ ವಜಾ ಮಾಡಿದ್ದರು. ಜೊತೆಗೆ ರಾಜಭವನದಿಂದ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿ ‘ಬಾಲಾಜಿ ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು ಮತ್ತು ಮನಿ ಲಾಂಡರಿಂಗ್ ಸೇರಿ ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದು. ಹೀಗಾಗಿ ರಾಜ್ಯಪಾಲರು ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾ ಮಾಡಿದ್ದಾರೆ’ ಎಂದು ತಿಳಿಸಲಾಗಿತ್ತು.

ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಈ ತಿಕ್ಕಾಟ ಇದೇ ಮೊದಲೇನಲ್ಲ, ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವು ತಿಂಗಳಲ್ಲಿ ತಿಕ್ಕಾಟ ಶುರುವಾಗಿತ್ತು. ತಮಿಳುನಾಡು ರಾಜ್ಯಪಾಲರು ಹಾಗೂ ತಮಿಳುನಾಡು ಸರ್ಕಾರದ ನಡುವೆ ದೊಡ್ಡ ಸಂಘರ್ಷ ನಡೆಯುತ್ತಿದೆ. ಈ ಮಧ್ಯೆ ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು & ಮನಿ ಲಾಂಡರಿಂಗ್ ಸೇರಿ ಹಲವು ಆರೋಪದ ಅಡಿಯಲ್ಲಿ ಸಚಿವ ಸೆಂಥಿಲ್ ಬಾಲಾಜಿ ಬಂಧನವಾಗಿತ್ತು. ಈ ಘಟನೆ ಬಳಿಕ ಸರ್ಕಾರ ಮತ್ತು ರಾಜ್ಯಪಾಲರ ಮಧ್ಯೆ ತಿಕ್ಕಾಟ ಬಲು ಜೋರಾಗಿ ನಡೆಯುತ್ತಿತ್ತು. ಗುರುವಾರ ತಮಿಳುನಾಡು ರಾಜ್ಯಪಾಲರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಸಚಿವ ಸೆಂಥಿಲ್ ಬಾಲಾಜಿರನ್ನು ವಜಾ ಮಾಡಿ ಆದೇಶ ಹೊರಡಿಸಿದ್ದರು. ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಹೇಳಿಕೆ ಕೂಡ ನೀಡಲಾಗಿತ್ತು. ಈಗ ಅದೇ ನಿರ್ಧಾರ ಉಲ್ಟಾ ಆದಂತೆ ಕಾಣುತ್ತಿದೆ.

ಡಿಎಂಕೆ ನಾಯಕರು ತಮಿಳುನಾಡು ರಾಜ್ಯಪಾಲರ ವಿರುದ್ಧ ಕೆಂಡವಾಗಿದ್ದು, ಈ ವಿಚಾರವನ್ನ ನ್ಯಾಯಾಲಯದ ತನಕ ಕೊಂಡೊಯ್ಯಲು ಸಿದ್ಧತೆ ನಡೆಸಿದ್ದಾರೆ. ರಾಜ್ಯಪಾಲ ರವಿ ಅವರು ತೆಗೆದುಕೊಂಡ ಏಕಪಕ್ಷೀಯವಾದ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಡಿಎಂಕೆ ನಾಯಕರ ಗಂಭೀರ ಆರೋಪವಾಗಿದೆ. ಹೀಗಾಗಿ ಜಟಾಪಟಿ ಜೋರಾಗಿದ್ದು, ಗಲಾಟೆಗೆ ಮುಂದೆ ವಿಪರೀತವಾಗುವ ಮುನ್ಸೂಚನೆ ಸಿಗುತ್ತಿದೆ.

ಇದನ್ನೂ ಓದಿ: ಸಿಎಂ ಶಿಫಾರಸಿಲ್ಲದೆಯೇ ಸೆಂಥಿಲ್‌ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ಆದೇಶ ವಾಪಸ್ ಪಡೆದ ತಮಿಳುನಾಡು ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...