HomeUncategorizedತಮಿಳುನಾಡು: ನಮ್ಮ ಸಚಿವರನ್ನು ವಜಾ ಮಾಡಲು ನೀವು ಯಾರು?; ರಾಜ್ಯಪಾಲರಿಗೆ ಸ್ಟಾಲಿನ್ ನೇರ ಪ್ರಶ್ನೆ

ತಮಿಳುನಾಡು: ನಮ್ಮ ಸಚಿವರನ್ನು ವಜಾ ಮಾಡಲು ನೀವು ಯಾರು?; ರಾಜ್ಯಪಾಲರಿಗೆ ಸ್ಟಾಲಿನ್ ನೇರ ಪ್ರಶ್ನೆ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಶಿಫಾರಸು ಇಲ್ಲದೆ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲ ಆರ್.ಎನ್.ರವಿ ಅವರ ವಿರುದ್ದ ಗರಂ ಆಗಿದ್ದಾರೆ. ಶುಕ್ರವಾರ ರಾಜ್ಯಪಾಲ ರವಿ ಅವರು, ಸಚಿವ ಸೆಂಥಿಲ್‌ ಬಾಲಾಜಿ ವಜಾ ಆದೇಶ ಪ್ರಕಟಿಸಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಯಿತು. ಸಿಎಂ ಸ್ಟಾಲಿನ್ ಸಮೇತ ತಮಿಳುನಾಡು ಸರ್ಕಾರ ರಾಜ್ಯಪಾಲರ೫ ವಿರುದ್ಧ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಈಗ ರಾಜ್ಯಪಾಲ ರವಿ ಅವರಿಗೆ ಸ್ಟಾಲಿನ್ ನೇರ ಉತ್ತರ ಕೊಟ್ಟಿದ್ದಾರೆ.

ಸೆಂಥಿಲ್‌ ಬಾಲಾಜಿ ಅವರನ್ನು ಸಂಪುಟದಿಂದ ವಜಾಗೊಳಿಸಿದ್ದ ಆದೇಶವನ್ನ ತಾತ್ಕಾಲಿಕವಾಗಿ ತಡೆಹಿಡಿಯಲು ರಾಜ್ಯಪಾಲ ಆರ್‌.ಎನ್.ರವಿ ನಿರ್ಧಾರ ಮಾಡಿದ್ದಾರೆ. ಆದರೂ ವಿವಾದದ ಕಿಚ್ಚು ಮಾತ್ರ ತಣ್ಣಗಾಗುತ್ತಿಲ್ಲ. ಡಿಎಂಕೆ ಸರ್ಕಾರ ಈಗ ಕಾನೂನು ಹೋರಾಟಕ್ಕೆ ಸಿದ್ಧವಾಗಿದೆ. ಅಲ್ಲದೆ ನೇರವಾಗಿ ರಾಜ್ಯಪಾಲರಿಗೆ ಪತ್ರ ಬರೆದಿರುವ ಸ್ಟಾಲಿನ್ ‘ನಮ್ಮ ಸರ್ಕಾರದ ಸಚಿವರನ್ನು ವಜಾ ಮಾಡಲು ನೀವು ಯಾರು? ಆ ಅಧಿಕಾರ ನಿಮಗೆ ಇಲ್ಲ’ ಎಂದಿದ್ದಾರೆ.

ರಾಜ್ಯಪಾಲರ ನಿರ್ಧಾರದ ಬಗ್ಗೆ ಸ್ವತಃ ಬಿಜೆಪಿಯ ಕೆಲವು ನಾಯಕರಲ್ಲಿ ಅಸಮಾಧಾನ ಮೂಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರೆ ಮಾಡಿ ಇಂತಹ ನಿರ್ಧಾರ ತಗೆದುಕೊಳ್ಳದಿರುವಂತೆ ತಿಳಿಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ ಅಮಿತ್ ಶಾ ಅವರ ಸಲಹೆ ಮೇರೆಗೆ ತಮಿಳುನಾಡು ರಾಜ್ಯಪಾಲ ರವಿ ನಿರ್ಧಾರ ಬದಲಾಯಿಸಿದ್ದು, ತಮ್ಮ ವಜಾ ಆದೇಶವನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದ್ದಾರೆ. ಆದರೆ ಇದೀಗ ಡಿಎಂಕೆ ಈ ವಿಚಾರವನ್ನೇ ಹಿಡಿದುಕೊಂಡು ಹೋರಾಟ ಸಂಘಟಿಸಲು ಸಿದ್ಧತೆ ನಡೆಸಿದೆ. ಹೀಗಾಗಿ ‘ಸಚಿವರ ನೇಮಕ ಹಾಗೂ ವಜಾಗೊಳಿಸುವುದು ಮುಖ್ಯಮಂತ್ರಿ ವಿವೇಚನಾಧಿಕಾರ’ ಎಂದು ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ.

ವಜಾ ಪತ್ರ: ರಾಜ್ಯಪಾಲ ಆರ್.ಎನ್.ರವಿ ಅವರು ಗುರುವಾರ ಸಚಿವ ಬಾಲಾಜಿ ಅವರನ್ನ ಸಂಪುಟದಿಂದ ವಜಾ ಮಾಡಿದ್ದರು. ಜೊತೆಗೆ ರಾಜಭವನದಿಂದ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿ ‘ಬಾಲಾಜಿ ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು ಮತ್ತು ಮನಿ ಲಾಂಡರಿಂಗ್ ಸೇರಿ ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದು. ಹೀಗಾಗಿ ರಾಜ್ಯಪಾಲರು ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾ ಮಾಡಿದ್ದಾರೆ’ ಎಂದು ತಿಳಿಸಲಾಗಿತ್ತು.

ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಈ ತಿಕ್ಕಾಟ ಇದೇ ಮೊದಲೇನಲ್ಲ, ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವು ತಿಂಗಳಲ್ಲಿ ತಿಕ್ಕಾಟ ಶುರುವಾಗಿತ್ತು. ತಮಿಳುನಾಡು ರಾಜ್ಯಪಾಲರು ಹಾಗೂ ತಮಿಳುನಾಡು ಸರ್ಕಾರದ ನಡುವೆ ದೊಡ್ಡ ಸಂಘರ್ಷ ನಡೆಯುತ್ತಿದೆ. ಈ ಮಧ್ಯೆ ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು & ಮನಿ ಲಾಂಡರಿಂಗ್ ಸೇರಿ ಹಲವು ಆರೋಪದ ಅಡಿಯಲ್ಲಿ ಸಚಿವ ಸೆಂಥಿಲ್ ಬಾಲಾಜಿ ಬಂಧನವಾಗಿತ್ತು. ಈ ಘಟನೆ ಬಳಿಕ ಸರ್ಕಾರ ಮತ್ತು ರಾಜ್ಯಪಾಲರ ಮಧ್ಯೆ ತಿಕ್ಕಾಟ ಬಲು ಜೋರಾಗಿ ನಡೆಯುತ್ತಿತ್ತು. ಗುರುವಾರ ತಮಿಳುನಾಡು ರಾಜ್ಯಪಾಲರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಸಚಿವ ಸೆಂಥಿಲ್ ಬಾಲಾಜಿರನ್ನು ವಜಾ ಮಾಡಿ ಆದೇಶ ಹೊರಡಿಸಿದ್ದರು. ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಹೇಳಿಕೆ ಕೂಡ ನೀಡಲಾಗಿತ್ತು. ಈಗ ಅದೇ ನಿರ್ಧಾರ ಉಲ್ಟಾ ಆದಂತೆ ಕಾಣುತ್ತಿದೆ.

ಡಿಎಂಕೆ ನಾಯಕರು ತಮಿಳುನಾಡು ರಾಜ್ಯಪಾಲರ ವಿರುದ್ಧ ಕೆಂಡವಾಗಿದ್ದು, ಈ ವಿಚಾರವನ್ನ ನ್ಯಾಯಾಲಯದ ತನಕ ಕೊಂಡೊಯ್ಯಲು ಸಿದ್ಧತೆ ನಡೆಸಿದ್ದಾರೆ. ರಾಜ್ಯಪಾಲ ರವಿ ಅವರು ತೆಗೆದುಕೊಂಡ ಏಕಪಕ್ಷೀಯವಾದ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಡಿಎಂಕೆ ನಾಯಕರ ಗಂಭೀರ ಆರೋಪವಾಗಿದೆ. ಹೀಗಾಗಿ ಜಟಾಪಟಿ ಜೋರಾಗಿದ್ದು, ಗಲಾಟೆಗೆ ಮುಂದೆ ವಿಪರೀತವಾಗುವ ಮುನ್ಸೂಚನೆ ಸಿಗುತ್ತಿದೆ.

ಇದನ್ನೂ ಓದಿ: ಸಿಎಂ ಶಿಫಾರಸಿಲ್ಲದೆಯೇ ಸೆಂಥಿಲ್‌ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ಆದೇಶ ವಾಪಸ್ ಪಡೆದ ತಮಿಳುನಾಡು ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...