HomeUncategorizedತಮಿಳುನಾಡು: ನಮ್ಮ ಸಚಿವರನ್ನು ವಜಾ ಮಾಡಲು ನೀವು ಯಾರು?; ರಾಜ್ಯಪಾಲರಿಗೆ ಸ್ಟಾಲಿನ್ ನೇರ ಪ್ರಶ್ನೆ

ತಮಿಳುನಾಡು: ನಮ್ಮ ಸಚಿವರನ್ನು ವಜಾ ಮಾಡಲು ನೀವು ಯಾರು?; ರಾಜ್ಯಪಾಲರಿಗೆ ಸ್ಟಾಲಿನ್ ನೇರ ಪ್ರಶ್ನೆ

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಶಿಫಾರಸು ಇಲ್ಲದೆ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲ ಆರ್.ಎನ್.ರವಿ ಅವರ ವಿರುದ್ದ ಗರಂ ಆಗಿದ್ದಾರೆ. ಶುಕ್ರವಾರ ರಾಜ್ಯಪಾಲ ರವಿ ಅವರು, ಸಚಿವ ಸೆಂಥಿಲ್‌ ಬಾಲಾಜಿ ವಜಾ ಆದೇಶ ಪ್ರಕಟಿಸಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಯಿತು. ಸಿಎಂ ಸ್ಟಾಲಿನ್ ಸಮೇತ ತಮಿಳುನಾಡು ಸರ್ಕಾರ ರಾಜ್ಯಪಾಲರ೫ ವಿರುದ್ಧ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಈಗ ರಾಜ್ಯಪಾಲ ರವಿ ಅವರಿಗೆ ಸ್ಟಾಲಿನ್ ನೇರ ಉತ್ತರ ಕೊಟ್ಟಿದ್ದಾರೆ.

ಸೆಂಥಿಲ್‌ ಬಾಲಾಜಿ ಅವರನ್ನು ಸಂಪುಟದಿಂದ ವಜಾಗೊಳಿಸಿದ್ದ ಆದೇಶವನ್ನ ತಾತ್ಕಾಲಿಕವಾಗಿ ತಡೆಹಿಡಿಯಲು ರಾಜ್ಯಪಾಲ ಆರ್‌.ಎನ್.ರವಿ ನಿರ್ಧಾರ ಮಾಡಿದ್ದಾರೆ. ಆದರೂ ವಿವಾದದ ಕಿಚ್ಚು ಮಾತ್ರ ತಣ್ಣಗಾಗುತ್ತಿಲ್ಲ. ಡಿಎಂಕೆ ಸರ್ಕಾರ ಈಗ ಕಾನೂನು ಹೋರಾಟಕ್ಕೆ ಸಿದ್ಧವಾಗಿದೆ. ಅಲ್ಲದೆ ನೇರವಾಗಿ ರಾಜ್ಯಪಾಲರಿಗೆ ಪತ್ರ ಬರೆದಿರುವ ಸ್ಟಾಲಿನ್ ‘ನಮ್ಮ ಸರ್ಕಾರದ ಸಚಿವರನ್ನು ವಜಾ ಮಾಡಲು ನೀವು ಯಾರು? ಆ ಅಧಿಕಾರ ನಿಮಗೆ ಇಲ್ಲ’ ಎಂದಿದ್ದಾರೆ.

ರಾಜ್ಯಪಾಲರ ನಿರ್ಧಾರದ ಬಗ್ಗೆ ಸ್ವತಃ ಬಿಜೆಪಿಯ ಕೆಲವು ನಾಯಕರಲ್ಲಿ ಅಸಮಾಧಾನ ಮೂಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರೆ ಮಾಡಿ ಇಂತಹ ನಿರ್ಧಾರ ತಗೆದುಕೊಳ್ಳದಿರುವಂತೆ ತಿಳಿಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ ಅಮಿತ್ ಶಾ ಅವರ ಸಲಹೆ ಮೇರೆಗೆ ತಮಿಳುನಾಡು ರಾಜ್ಯಪಾಲ ರವಿ ನಿರ್ಧಾರ ಬದಲಾಯಿಸಿದ್ದು, ತಮ್ಮ ವಜಾ ಆದೇಶವನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದ್ದಾರೆ. ಆದರೆ ಇದೀಗ ಡಿಎಂಕೆ ಈ ವಿಚಾರವನ್ನೇ ಹಿಡಿದುಕೊಂಡು ಹೋರಾಟ ಸಂಘಟಿಸಲು ಸಿದ್ಧತೆ ನಡೆಸಿದೆ. ಹೀಗಾಗಿ ‘ಸಚಿವರ ನೇಮಕ ಹಾಗೂ ವಜಾಗೊಳಿಸುವುದು ಮುಖ್ಯಮಂತ್ರಿ ವಿವೇಚನಾಧಿಕಾರ’ ಎಂದು ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ.

ವಜಾ ಪತ್ರ: ರಾಜ್ಯಪಾಲ ಆರ್.ಎನ್.ರವಿ ಅವರು ಗುರುವಾರ ಸಚಿವ ಬಾಲಾಜಿ ಅವರನ್ನ ಸಂಪುಟದಿಂದ ವಜಾ ಮಾಡಿದ್ದರು. ಜೊತೆಗೆ ರಾಜಭವನದಿಂದ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿ ‘ಬಾಲಾಜಿ ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು ಮತ್ತು ಮನಿ ಲಾಂಡರಿಂಗ್ ಸೇರಿ ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದು. ಹೀಗಾಗಿ ರಾಜ್ಯಪಾಲರು ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾ ಮಾಡಿದ್ದಾರೆ’ ಎಂದು ತಿಳಿಸಲಾಗಿತ್ತು.

ಡಿಎಂಕೆ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಈ ತಿಕ್ಕಾಟ ಇದೇ ಮೊದಲೇನಲ್ಲ, ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವು ತಿಂಗಳಲ್ಲಿ ತಿಕ್ಕಾಟ ಶುರುವಾಗಿತ್ತು. ತಮಿಳುನಾಡು ರಾಜ್ಯಪಾಲರು ಹಾಗೂ ತಮಿಳುನಾಡು ಸರ್ಕಾರದ ನಡುವೆ ದೊಡ್ಡ ಸಂಘರ್ಷ ನಡೆಯುತ್ತಿದೆ. ಈ ಮಧ್ಯೆ ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು & ಮನಿ ಲಾಂಡರಿಂಗ್ ಸೇರಿ ಹಲವು ಆರೋಪದ ಅಡಿಯಲ್ಲಿ ಸಚಿವ ಸೆಂಥಿಲ್ ಬಾಲಾಜಿ ಬಂಧನವಾಗಿತ್ತು. ಈ ಘಟನೆ ಬಳಿಕ ಸರ್ಕಾರ ಮತ್ತು ರಾಜ್ಯಪಾಲರ ಮಧ್ಯೆ ತಿಕ್ಕಾಟ ಬಲು ಜೋರಾಗಿ ನಡೆಯುತ್ತಿತ್ತು. ಗುರುವಾರ ತಮಿಳುನಾಡು ರಾಜ್ಯಪಾಲರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಸಚಿವ ಸೆಂಥಿಲ್ ಬಾಲಾಜಿರನ್ನು ವಜಾ ಮಾಡಿ ಆದೇಶ ಹೊರಡಿಸಿದ್ದರು. ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಹೇಳಿಕೆ ಕೂಡ ನೀಡಲಾಗಿತ್ತು. ಈಗ ಅದೇ ನಿರ್ಧಾರ ಉಲ್ಟಾ ಆದಂತೆ ಕಾಣುತ್ತಿದೆ.

ಡಿಎಂಕೆ ನಾಯಕರು ತಮಿಳುನಾಡು ರಾಜ್ಯಪಾಲರ ವಿರುದ್ಧ ಕೆಂಡವಾಗಿದ್ದು, ಈ ವಿಚಾರವನ್ನ ನ್ಯಾಯಾಲಯದ ತನಕ ಕೊಂಡೊಯ್ಯಲು ಸಿದ್ಧತೆ ನಡೆಸಿದ್ದಾರೆ. ರಾಜ್ಯಪಾಲ ರವಿ ಅವರು ತೆಗೆದುಕೊಂಡ ಏಕಪಕ್ಷೀಯವಾದ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಡಿಎಂಕೆ ನಾಯಕರ ಗಂಭೀರ ಆರೋಪವಾಗಿದೆ. ಹೀಗಾಗಿ ಜಟಾಪಟಿ ಜೋರಾಗಿದ್ದು, ಗಲಾಟೆಗೆ ಮುಂದೆ ವಿಪರೀತವಾಗುವ ಮುನ್ಸೂಚನೆ ಸಿಗುತ್ತಿದೆ.

ಇದನ್ನೂ ಓದಿ: ಸಿಎಂ ಶಿಫಾರಸಿಲ್ಲದೆಯೇ ಸೆಂಥಿಲ್‌ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ಆದೇಶ ವಾಪಸ್ ಪಡೆದ ತಮಿಳುನಾಡು ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...