Homeಮುಖಪುಟಕೊರೊನಾ ಪರಿಹಾರ ನಿಧಿಗೆ ಚಿನ್ನದ ಸರ ನೀಡಿದ್ದ ಯುವತಿಗೆ ಉದ್ಯೋಗ ನೀಡಿದ ತಮಿಳುನಾಡು ಸಿಎಂ

ಕೊರೊನಾ ಪರಿಹಾರ ನಿಧಿಗೆ ಚಿನ್ನದ ಸರ ನೀಡಿದ್ದ ಯುವತಿಗೆ ಉದ್ಯೋಗ ನೀಡಿದ ತಮಿಳುನಾಡು ಸಿಎಂ

- Advertisement -
- Advertisement -

ತಮಿಳುನಾಡಿನಲ್ಲಿ ಕೋವಿಡ್ ಪರಿಹಾರಕ್ಕಾಗಿ ತನ್ನ ಚಿನ್ನದ ಸರವನ್ನು ದಾನ ಮಾಡಿದ್ದ 23 ವರ್ಷದ ಯುವತಿಗೆ ಉದ್ಯೋಗ ನೀಡಲಾಗಿದೆ. ಈ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಉದ್ಯೋಗ ನೀಡುವುದಾಗಿ ಹೇಳಿದ್ದ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

ಪೊತ್ತನೇರಿ ಗ್ರಾಮದ ಎಂಜಿನಿಯರಿಂಗ್ ಪದವೀಧರರಾದ ಆರ್.ಸೌಮ್ಯಾ ಅವರು ಸೇಲಂ ಬಳಿಯ ಮೆಟ್ಟೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಂ.ಕೆ.ಸ್ಟಾಲಿನ್ ಅವರಿಗೆ ಚಿನ್ನದ ಸರವನ್ನು ದೇಣಿಗೆ ನೀಡುವ ಜೊತೆಗೆ ಉದ್ಯೋಗದ ಅರ್ಜಿಯನ್ನು ನೀಡಿದ್ದರು.

ಕಳೆದ ವರ್ಷ ನ್ಯುಮೋನಿಯಾದಿಂದಾಗಿ ತನ್ನ ತಾಯಿ ಸಾವನ್ನಪ್ಪಿದ್ದಾರೆ. ತಮ್ಮ ತಂದೆಗೆ ಬರುವ 7,000 ರೂಪಾಯಿ ಪಿಂಚಣಿ ಹಣದಿಂದ ಕುಟುಂಬವನ್ನು ಪೂರೈಸಲು ಹೆಣಗಾಡುತ್ತಿದ್ದೇವೆ. ಮದುವೆಯಾಗಿರುವ ಇಬ್ಬರು ಹಿರಿಯ ಸಹೋದರಿಯರು ಆರ್ಥಿಕವಾಗಿ ಸಹಾಯ ಮಾಡುವ ಸ್ಥಿತಿಯಲ್ಲಿರಲಿಲ್ಲ, ನಾನು ಉದ್ಯೋಗ ಹುಡುಕುತ್ತಿದ್ದೇನೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ದಿಢೀರ್‌ ಬೆಳವಣಿಗೆ- ಎಐಡಿಎಂಕೆಯಲ್ಲಿ ಬಂಡಾಯದ ಬಿರುಗಾಳಿ

 

ಸೌಮ್ಯಾ ಅವರಿಗೆ ಕೆಲಸ ನೀಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಈ ಹಿಂದೆ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದರು. ಈಗ ಆಕೆಗೆ ಉದ್ಯೋಗ ನೀಡಿ, ಚಿನ್ನದ ಮನಸ್ಸಿನ ಹುಡುಗಿ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕರೆದಿದ್ದಾರೆ. ಸೌಮ್ಯಾ ಅವರನ್ನು ದೂರವಾಣಿ ಮೂಲಕ ಸ್ಟಾಲಿನ್ ಅಭಿನಂದಿಸಿದ್ದಾರೆ.

ಸಚಿವ ವಿ ಸೆಂಥಿಲ್ ಬಾಲಾಜಿ ಮೆಟ್ಟೂರಿನ ಸೌಮ್ಯಾ ಅವರ ಮನೆಗೆ ಭೇಟಿ ನೀಡಿ ಜೆಎಸ್‌ಡಬ್ಲ್ಯು ಸ್ಟೀಲ್ಸ್ ಲಿಮಿಟೆಡ್‌ನಿಂದ (JSW Steels Ltd) ನೇಮಕಾತಿಯ ಆದೇಶ ಪತ್ರವನ್ನು ಹಸ್ತಾಂತರಿಸಿದ್ದಾರೆ. ಆಕೆಗೆ ಮಾಸಿಕ ಒಟ್ಟು ವೇತನವಾಗಿ 17,500 ರೂಪಾಯಿ ನೀಡಲಾಗುತ್ತದೆ ಎನ್ನಲಾಗಿದೆ.

“ಮುಖ್ಯಮಂತ್ರಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಅರ್ಜಿಯನ್ನು ಪ್ರಸ್ತಾಪಿಸಿದಾಗ ಮತ್ತು ಉದ್ಯೋಗದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದಾಗ ನನಗೆ ಆತಂಕದಲ್ಲಿದ್ದೆ. ಅವರ ಕೆಲಸದ ಒತ್ತಡದ ನಡುವೆಯೂ, ಅವರು ನನ್ನ ಅರ್ಜಿಯನ್ನು ನೋಡಲು ಸಮಯ ನೀಡಿರುವುದನ್ನು ಆಶೀರ್ವಾದ ಎಂದುಕೊಳ್ಳುತ್ತೇನೆ. ’ನಾನು ನನ್ನ ಕೆಲಸವನ್ನು ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುತ್ತೇನೆ ಮತ್ತು ಮುಖ್ಯಮಂತ್ರಿಗಳಿಗೆ ಶಾಶ್ವತವಾಗಿ ಕೃತಜ್ಞಳಾಗಿರುತ್ತೇನೆ” ಎಂದು ಸೌಮ್ಯಾ ಹೇಳಿದ್ದಾರೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...