Homeಚಳವಳಿತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

- Advertisement -
- Advertisement -

‘ಅಗಮಾ ಶಾಸ್ತ್ರ’ದಲ್ಲಿ ತರಬೇತಿ ಪಡೆದ ಮಹಿಳೆಯರನ್ನು ಹಿಂದೂ ದೇವಾಲಯಗಳಲ್ಲಿ ಅರ್ಚಕರಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು  ಘೋಷಿಸಿದ್ದಾರೆ. ಸಚಿವರ ಈ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ನಾಂದಿ ಹಾಡಿದೆ.

’ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಮೊದಲೆ ಯಾವುದೇ ಚರ್ಚೆಗಳು ನಡೆದಿಲ್ಲ. ಆದರೆ ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಸಚಿವರು ಹೇಳಿದ್ದಾರೆ.

“ದೇವಾಲಯದ ಪುರೋಹಿತರ ಹುದ್ದೆಗಳನ್ನು ವಹಿಸಿಕೊಳ್ಳಲು ಮಹಿಳೆಯರಿಗೆ ಅವಕಾಶ ನೀಡಲಾಗುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ, ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದವರಿಗೆ ಅವಕಾಶ ನೀಡಲಾಗುವುದು ಎಂದು ನಾನು ಹೇಳಿದ್ದೇನೆ. ದೇವಾಲಯದ ಪುರೋಹಿತರ ಪಾತ್ರವನ್ನು ತೆಗೆದುಕೊಳ್ಳಲು ಇಷ್ಟಪಡುವ ಮಹಿಳೆಯರಿಂದ ಮನವಿಗಳು ಬಂದರೆ, ಖಂಡಿತವಾಗಿ ನಾವು ಅವರನ್ನು ಪರಿಗಣಿಸುತ್ತೇವೆ. ಅಗಮಾ ಸಂಪ್ರದಾಯದಲ್ಲಿ ಅವರ ಪರಿಣತಿಯೇ ಮಾನದಂಡವಾಗಿರುತ್ತದೆ. ಅವರಿಗೆ ಅಗತ್ಯವಾದ ತರಬೇತಿಯನ್ನು ನೀಡುತ್ತೇವೆ. ಜೊತೆಗೆ ಅರ್ಚಕರಾಗಿ ನೇಮಿಸುವ ಮೊದಲು ಸಂದರ್ಶನ ನಡೆಸುತ್ತೇವೆ” ಎಂದು ಸಚಿವ ಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

ಮಹಿಳೆಯರನ್ನು ಅರ್ಚಕರನ್ನಾಗಿ ನೇಮಿಸುವ ನಿರ್ಧಾರದ ಜೊತೆಗೆ ಮುಟ್ಟಿನ ಸಮಯದಲ್ಲಿ ದೇವಸ್ಥಾನದ ಆಚರಣೆಗಳಿಂದ ದೂರವಿರಲು “ಮಹಿಳೆಯರಿಗೆ ಐದು ದಿನಗಳ ರಜೆ” ಸೇರಿದಂತೆ ಎಲ್ಲ ಅಂಶಗಳನ್ನು ಪರಿಗಣಿಸುವುದಾಗಿ ಸಚಿವ ಶೇಖರ್‌ ಬಾಬು ಹೇಳಿದ್ದಾರೆ.

2008 ರಲ್ಲಿ, ಅರ್ಚಕರಾಗಿದ್ದ ತನ್ನ ತಂದೆ ಮರಣಹೊಂದಿದ ನಂತರ ಮಗಳಿಗೆ ಅರ್ಚಕರಾಗಿ ದೇವಾಲಯದಲ್ಲಿ ಪೂಜೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಅಂದಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಸೇರಿದಂತೆ ಅನೇಕರು ಮದ್ರಾಸ್ ಹೈಕೋರ್ಟ್ ನಿರ್ಧಾರವನ್ನು ಶ್ಲಾಘಿಸಿದ್ದರು.

ಮಧುರೈ ಹಳ್ಳಿಯ ಅರುಲ್ಮಿಗು ದುರ್ಗೈ ಅಮ್ಮನ್ ಕೋವಿಲ್ ಅರ್ಚಕರಾಗಿದ್ದ ಪಿನ್ನಥೇವರ್ ಅವರ ಮರಣದ ನಂತರ ಅವರ ಮಗಳು ಪಿನ್ನಿಯಕ್ಕಲ್ ಆ ಕೆಲಸವನ್ನು ತನಗೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆಕೆಯ ತಂದೆ 2006 ರಲ್ಲಿ ನಿಧನ ಹೊಂದಿದ್ದರೂ, ಪಿನ್ನಿಯಕ್ಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರಿಂದ 2004 ರಿಂದ ಪೂಜೆ ಮತ್ತು ಇತರ ಆಚರಣೆಗಳನ್ನು ಮಗಳು ಮಾಡುತ್ತಿದ್ದರು. ಆದರೆ, ಪಿನ್ನಥೇವರ್ ಮರಣದ ನಂತರ ಆಕೆ ಪೂಜೆ ನಡೆಸುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಪುರುಷರು ಮಾತ್ರ ಅರ್ಚಕರಾಗಬಹುದು ಎಂಬ ವಾದಕ್ಕೆ ಯಾವುದೇ ಕಾನೂನು ಅಥವಾ ವಾಸ್ತವಿಕ ಆಧಾರವಿಲ್ಲ ಎಂದು ತಿಳಿಸಿತ್ತು. “ದೇವಾಲಯದ ಪ್ರಧಾನ ದೇವತೆ ಸ್ತ್ರೀ ರೂಪದಲ್ಲಿ” ಅಮ್ಮನ್ “ಆಗಿದ್ದಾಗ, ಅಂತಹ ದೇವಾಲಯಗಳಲ್ಲಿ ಪೂಜೆ ಮಾಡಲು ಮಹಿಳೆಯ ವಿರುದ್ಧ ಆಕ್ಷೇಪಣೆಗಳು ವ್ಯಕ್ತವಾಗುತ್ತಿರುವುದು ವಿಪರ್ಯಾಸ” ಎಂದು ನ್ಯಾಯಮೂರ್ತಿ ಕೆ.ಚಂದ್ರು ತಮ್ಮ ಆದೇಶದಲ್ಲಿ ತಿಳಿಸಿದ್ದರು.

ಪ್ರಸ್ತುತ ಸಚಿವ ಶೇಖರ್‌ ಬಾಬು ಅವರ ಹೇಳಿಕೆ ಕೂಡ ತಮಿಳುನಾಡಿನಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.


ಇದನ್ನೂ ಓದಿ: ತೆಲಂಗಾಣ: ಭೂ ಕಬಳಿಕೆ ಆರೋಪದಿಂದ ಟಿಆರ್‌ಎಸ್‌ ತೊರೆದಿದ್ದ ಮಾಜಿ ಸಚಿವ ಬಿಜೆಪಿ ಸೇರ್ಪಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...