Homeಚಳವಳಿತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

- Advertisement -
- Advertisement -

‘ಅಗಮಾ ಶಾಸ್ತ್ರ’ದಲ್ಲಿ ತರಬೇತಿ ಪಡೆದ ಮಹಿಳೆಯರನ್ನು ಹಿಂದೂ ದೇವಾಲಯಗಳಲ್ಲಿ ಅರ್ಚಕರಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು  ಘೋಷಿಸಿದ್ದಾರೆ. ಸಚಿವರ ಈ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ನಾಂದಿ ಹಾಡಿದೆ.

’ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಮೊದಲೆ ಯಾವುದೇ ಚರ್ಚೆಗಳು ನಡೆದಿಲ್ಲ. ಆದರೆ ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಸಚಿವರು ಹೇಳಿದ್ದಾರೆ.

“ದೇವಾಲಯದ ಪುರೋಹಿತರ ಹುದ್ದೆಗಳನ್ನು ವಹಿಸಿಕೊಳ್ಳಲು ಮಹಿಳೆಯರಿಗೆ ಅವಕಾಶ ನೀಡಲಾಗುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ, ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದವರಿಗೆ ಅವಕಾಶ ನೀಡಲಾಗುವುದು ಎಂದು ನಾನು ಹೇಳಿದ್ದೇನೆ. ದೇವಾಲಯದ ಪುರೋಹಿತರ ಪಾತ್ರವನ್ನು ತೆಗೆದುಕೊಳ್ಳಲು ಇಷ್ಟಪಡುವ ಮಹಿಳೆಯರಿಂದ ಮನವಿಗಳು ಬಂದರೆ, ಖಂಡಿತವಾಗಿ ನಾವು ಅವರನ್ನು ಪರಿಗಣಿಸುತ್ತೇವೆ. ಅಗಮಾ ಸಂಪ್ರದಾಯದಲ್ಲಿ ಅವರ ಪರಿಣತಿಯೇ ಮಾನದಂಡವಾಗಿರುತ್ತದೆ. ಅವರಿಗೆ ಅಗತ್ಯವಾದ ತರಬೇತಿಯನ್ನು ನೀಡುತ್ತೇವೆ. ಜೊತೆಗೆ ಅರ್ಚಕರಾಗಿ ನೇಮಿಸುವ ಮೊದಲು ಸಂದರ್ಶನ ನಡೆಸುತ್ತೇವೆ” ಎಂದು ಸಚಿವ ಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

ಮಹಿಳೆಯರನ್ನು ಅರ್ಚಕರನ್ನಾಗಿ ನೇಮಿಸುವ ನಿರ್ಧಾರದ ಜೊತೆಗೆ ಮುಟ್ಟಿನ ಸಮಯದಲ್ಲಿ ದೇವಸ್ಥಾನದ ಆಚರಣೆಗಳಿಂದ ದೂರವಿರಲು “ಮಹಿಳೆಯರಿಗೆ ಐದು ದಿನಗಳ ರಜೆ” ಸೇರಿದಂತೆ ಎಲ್ಲ ಅಂಶಗಳನ್ನು ಪರಿಗಣಿಸುವುದಾಗಿ ಸಚಿವ ಶೇಖರ್‌ ಬಾಬು ಹೇಳಿದ್ದಾರೆ.

2008 ರಲ್ಲಿ, ಅರ್ಚಕರಾಗಿದ್ದ ತನ್ನ ತಂದೆ ಮರಣಹೊಂದಿದ ನಂತರ ಮಗಳಿಗೆ ಅರ್ಚಕರಾಗಿ ದೇವಾಲಯದಲ್ಲಿ ಪೂಜೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಅಂದಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಸೇರಿದಂತೆ ಅನೇಕರು ಮದ್ರಾಸ್ ಹೈಕೋರ್ಟ್ ನಿರ್ಧಾರವನ್ನು ಶ್ಲಾಘಿಸಿದ್ದರು.

ಮಧುರೈ ಹಳ್ಳಿಯ ಅರುಲ್ಮಿಗು ದುರ್ಗೈ ಅಮ್ಮನ್ ಕೋವಿಲ್ ಅರ್ಚಕರಾಗಿದ್ದ ಪಿನ್ನಥೇವರ್ ಅವರ ಮರಣದ ನಂತರ ಅವರ ಮಗಳು ಪಿನ್ನಿಯಕ್ಕಲ್ ಆ ಕೆಲಸವನ್ನು ತನಗೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆಕೆಯ ತಂದೆ 2006 ರಲ್ಲಿ ನಿಧನ ಹೊಂದಿದ್ದರೂ, ಪಿನ್ನಿಯಕ್ಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರಿಂದ 2004 ರಿಂದ ಪೂಜೆ ಮತ್ತು ಇತರ ಆಚರಣೆಗಳನ್ನು ಮಗಳು ಮಾಡುತ್ತಿದ್ದರು. ಆದರೆ, ಪಿನ್ನಥೇವರ್ ಮರಣದ ನಂತರ ಆಕೆ ಪೂಜೆ ನಡೆಸುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಪುರುಷರು ಮಾತ್ರ ಅರ್ಚಕರಾಗಬಹುದು ಎಂಬ ವಾದಕ್ಕೆ ಯಾವುದೇ ಕಾನೂನು ಅಥವಾ ವಾಸ್ತವಿಕ ಆಧಾರವಿಲ್ಲ ಎಂದು ತಿಳಿಸಿತ್ತು. “ದೇವಾಲಯದ ಪ್ರಧಾನ ದೇವತೆ ಸ್ತ್ರೀ ರೂಪದಲ್ಲಿ” ಅಮ್ಮನ್ “ಆಗಿದ್ದಾಗ, ಅಂತಹ ದೇವಾಲಯಗಳಲ್ಲಿ ಪೂಜೆ ಮಾಡಲು ಮಹಿಳೆಯ ವಿರುದ್ಧ ಆಕ್ಷೇಪಣೆಗಳು ವ್ಯಕ್ತವಾಗುತ್ತಿರುವುದು ವಿಪರ್ಯಾಸ” ಎಂದು ನ್ಯಾಯಮೂರ್ತಿ ಕೆ.ಚಂದ್ರು ತಮ್ಮ ಆದೇಶದಲ್ಲಿ ತಿಳಿಸಿದ್ದರು.

ಪ್ರಸ್ತುತ ಸಚಿವ ಶೇಖರ್‌ ಬಾಬು ಅವರ ಹೇಳಿಕೆ ಕೂಡ ತಮಿಳುನಾಡಿನಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.


ಇದನ್ನೂ ಓದಿ: ತೆಲಂಗಾಣ: ಭೂ ಕಬಳಿಕೆ ಆರೋಪದಿಂದ ಟಿಆರ್‌ಎಸ್‌ ತೊರೆದಿದ್ದ ಮಾಜಿ ಸಚಿವ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...