Homeಚಳವಳಿತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

- Advertisement -
- Advertisement -

‘ಅಗಮಾ ಶಾಸ್ತ್ರ’ದಲ್ಲಿ ತರಬೇತಿ ಪಡೆದ ಮಹಿಳೆಯರನ್ನು ಹಿಂದೂ ದೇವಾಲಯಗಳಲ್ಲಿ ಅರ್ಚಕರಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು  ಘೋಷಿಸಿದ್ದಾರೆ. ಸಚಿವರ ಈ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ನಾಂದಿ ಹಾಡಿದೆ.

’ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಮೊದಲೆ ಯಾವುದೇ ಚರ್ಚೆಗಳು ನಡೆದಿಲ್ಲ. ಆದರೆ ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಸಚಿವರು ಹೇಳಿದ್ದಾರೆ.

“ದೇವಾಲಯದ ಪುರೋಹಿತರ ಹುದ್ದೆಗಳನ್ನು ವಹಿಸಿಕೊಳ್ಳಲು ಮಹಿಳೆಯರಿಗೆ ಅವಕಾಶ ನೀಡಲಾಗುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ, ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದವರಿಗೆ ಅವಕಾಶ ನೀಡಲಾಗುವುದು ಎಂದು ನಾನು ಹೇಳಿದ್ದೇನೆ. ದೇವಾಲಯದ ಪುರೋಹಿತರ ಪಾತ್ರವನ್ನು ತೆಗೆದುಕೊಳ್ಳಲು ಇಷ್ಟಪಡುವ ಮಹಿಳೆಯರಿಂದ ಮನವಿಗಳು ಬಂದರೆ, ಖಂಡಿತವಾಗಿ ನಾವು ಅವರನ್ನು ಪರಿಗಣಿಸುತ್ತೇವೆ. ಅಗಮಾ ಸಂಪ್ರದಾಯದಲ್ಲಿ ಅವರ ಪರಿಣತಿಯೇ ಮಾನದಂಡವಾಗಿರುತ್ತದೆ. ಅವರಿಗೆ ಅಗತ್ಯವಾದ ತರಬೇತಿಯನ್ನು ನೀಡುತ್ತೇವೆ. ಜೊತೆಗೆ ಅರ್ಚಕರಾಗಿ ನೇಮಿಸುವ ಮೊದಲು ಸಂದರ್ಶನ ನಡೆಸುತ್ತೇವೆ” ಎಂದು ಸಚಿವ ಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

ಮಹಿಳೆಯರನ್ನು ಅರ್ಚಕರನ್ನಾಗಿ ನೇಮಿಸುವ ನಿರ್ಧಾರದ ಜೊತೆಗೆ ಮುಟ್ಟಿನ ಸಮಯದಲ್ಲಿ ದೇವಸ್ಥಾನದ ಆಚರಣೆಗಳಿಂದ ದೂರವಿರಲು “ಮಹಿಳೆಯರಿಗೆ ಐದು ದಿನಗಳ ರಜೆ” ಸೇರಿದಂತೆ ಎಲ್ಲ ಅಂಶಗಳನ್ನು ಪರಿಗಣಿಸುವುದಾಗಿ ಸಚಿವ ಶೇಖರ್‌ ಬಾಬು ಹೇಳಿದ್ದಾರೆ.

2008 ರಲ್ಲಿ, ಅರ್ಚಕರಾಗಿದ್ದ ತನ್ನ ತಂದೆ ಮರಣಹೊಂದಿದ ನಂತರ ಮಗಳಿಗೆ ಅರ್ಚಕರಾಗಿ ದೇವಾಲಯದಲ್ಲಿ ಪೂಜೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಅಂದಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಸೇರಿದಂತೆ ಅನೇಕರು ಮದ್ರಾಸ್ ಹೈಕೋರ್ಟ್ ನಿರ್ಧಾರವನ್ನು ಶ್ಲಾಘಿಸಿದ್ದರು.

ಮಧುರೈ ಹಳ್ಳಿಯ ಅರುಲ್ಮಿಗು ದುರ್ಗೈ ಅಮ್ಮನ್ ಕೋವಿಲ್ ಅರ್ಚಕರಾಗಿದ್ದ ಪಿನ್ನಥೇವರ್ ಅವರ ಮರಣದ ನಂತರ ಅವರ ಮಗಳು ಪಿನ್ನಿಯಕ್ಕಲ್ ಆ ಕೆಲಸವನ್ನು ತನಗೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆಕೆಯ ತಂದೆ 2006 ರಲ್ಲಿ ನಿಧನ ಹೊಂದಿದ್ದರೂ, ಪಿನ್ನಿಯಕ್ಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರಿಂದ 2004 ರಿಂದ ಪೂಜೆ ಮತ್ತು ಇತರ ಆಚರಣೆಗಳನ್ನು ಮಗಳು ಮಾಡುತ್ತಿದ್ದರು. ಆದರೆ, ಪಿನ್ನಥೇವರ್ ಮರಣದ ನಂತರ ಆಕೆ ಪೂಜೆ ನಡೆಸುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಪುರುಷರು ಮಾತ್ರ ಅರ್ಚಕರಾಗಬಹುದು ಎಂಬ ವಾದಕ್ಕೆ ಯಾವುದೇ ಕಾನೂನು ಅಥವಾ ವಾಸ್ತವಿಕ ಆಧಾರವಿಲ್ಲ ಎಂದು ತಿಳಿಸಿತ್ತು. “ದೇವಾಲಯದ ಪ್ರಧಾನ ದೇವತೆ ಸ್ತ್ರೀ ರೂಪದಲ್ಲಿ” ಅಮ್ಮನ್ “ಆಗಿದ್ದಾಗ, ಅಂತಹ ದೇವಾಲಯಗಳಲ್ಲಿ ಪೂಜೆ ಮಾಡಲು ಮಹಿಳೆಯ ವಿರುದ್ಧ ಆಕ್ಷೇಪಣೆಗಳು ವ್ಯಕ್ತವಾಗುತ್ತಿರುವುದು ವಿಪರ್ಯಾಸ” ಎಂದು ನ್ಯಾಯಮೂರ್ತಿ ಕೆ.ಚಂದ್ರು ತಮ್ಮ ಆದೇಶದಲ್ಲಿ ತಿಳಿಸಿದ್ದರು.

ಪ್ರಸ್ತುತ ಸಚಿವ ಶೇಖರ್‌ ಬಾಬು ಅವರ ಹೇಳಿಕೆ ಕೂಡ ತಮಿಳುನಾಡಿನಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.


ಇದನ್ನೂ ಓದಿ: ತೆಲಂಗಾಣ: ಭೂ ಕಬಳಿಕೆ ಆರೋಪದಿಂದ ಟಿಆರ್‌ಎಸ್‌ ತೊರೆದಿದ್ದ ಮಾಜಿ ಸಚಿವ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...