Homeಚಳವಳಿತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

- Advertisement -
- Advertisement -

‘ಅಗಮಾ ಶಾಸ್ತ್ರ’ದಲ್ಲಿ ತರಬೇತಿ ಪಡೆದ ಮಹಿಳೆಯರನ್ನು ಹಿಂದೂ ದೇವಾಲಯಗಳಲ್ಲಿ ಅರ್ಚಕರಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು  ಘೋಷಿಸಿದ್ದಾರೆ. ಸಚಿವರ ಈ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ನಾಂದಿ ಹಾಡಿದೆ.

’ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಮೊದಲೆ ಯಾವುದೇ ಚರ್ಚೆಗಳು ನಡೆದಿಲ್ಲ. ಆದರೆ ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಸಚಿವರು ಹೇಳಿದ್ದಾರೆ.

“ದೇವಾಲಯದ ಪುರೋಹಿತರ ಹುದ್ದೆಗಳನ್ನು ವಹಿಸಿಕೊಳ್ಳಲು ಮಹಿಳೆಯರಿಗೆ ಅವಕಾಶ ನೀಡಲಾಗುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ, ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದವರಿಗೆ ಅವಕಾಶ ನೀಡಲಾಗುವುದು ಎಂದು ನಾನು ಹೇಳಿದ್ದೇನೆ. ದೇವಾಲಯದ ಪುರೋಹಿತರ ಪಾತ್ರವನ್ನು ತೆಗೆದುಕೊಳ್ಳಲು ಇಷ್ಟಪಡುವ ಮಹಿಳೆಯರಿಂದ ಮನವಿಗಳು ಬಂದರೆ, ಖಂಡಿತವಾಗಿ ನಾವು ಅವರನ್ನು ಪರಿಗಣಿಸುತ್ತೇವೆ. ಅಗಮಾ ಸಂಪ್ರದಾಯದಲ್ಲಿ ಅವರ ಪರಿಣತಿಯೇ ಮಾನದಂಡವಾಗಿರುತ್ತದೆ. ಅವರಿಗೆ ಅಗತ್ಯವಾದ ತರಬೇತಿಯನ್ನು ನೀಡುತ್ತೇವೆ. ಜೊತೆಗೆ ಅರ್ಚಕರಾಗಿ ನೇಮಿಸುವ ಮೊದಲು ಸಂದರ್ಶನ ನಡೆಸುತ್ತೇವೆ” ಎಂದು ಸಚಿವ ಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

ಮಹಿಳೆಯರನ್ನು ಅರ್ಚಕರನ್ನಾಗಿ ನೇಮಿಸುವ ನಿರ್ಧಾರದ ಜೊತೆಗೆ ಮುಟ್ಟಿನ ಸಮಯದಲ್ಲಿ ದೇವಸ್ಥಾನದ ಆಚರಣೆಗಳಿಂದ ದೂರವಿರಲು “ಮಹಿಳೆಯರಿಗೆ ಐದು ದಿನಗಳ ರಜೆ” ಸೇರಿದಂತೆ ಎಲ್ಲ ಅಂಶಗಳನ್ನು ಪರಿಗಣಿಸುವುದಾಗಿ ಸಚಿವ ಶೇಖರ್‌ ಬಾಬು ಹೇಳಿದ್ದಾರೆ.

2008 ರಲ್ಲಿ, ಅರ್ಚಕರಾಗಿದ್ದ ತನ್ನ ತಂದೆ ಮರಣಹೊಂದಿದ ನಂತರ ಮಗಳಿಗೆ ಅರ್ಚಕರಾಗಿ ದೇವಾಲಯದಲ್ಲಿ ಪೂಜೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಅಂದಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಸೇರಿದಂತೆ ಅನೇಕರು ಮದ್ರಾಸ್ ಹೈಕೋರ್ಟ್ ನಿರ್ಧಾರವನ್ನು ಶ್ಲಾಘಿಸಿದ್ದರು.

ಮಧುರೈ ಹಳ್ಳಿಯ ಅರುಲ್ಮಿಗು ದುರ್ಗೈ ಅಮ್ಮನ್ ಕೋವಿಲ್ ಅರ್ಚಕರಾಗಿದ್ದ ಪಿನ್ನಥೇವರ್ ಅವರ ಮರಣದ ನಂತರ ಅವರ ಮಗಳು ಪಿನ್ನಿಯಕ್ಕಲ್ ಆ ಕೆಲಸವನ್ನು ತನಗೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆಕೆಯ ತಂದೆ 2006 ರಲ್ಲಿ ನಿಧನ ಹೊಂದಿದ್ದರೂ, ಪಿನ್ನಿಯಕ್ಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರಿಂದ 2004 ರಿಂದ ಪೂಜೆ ಮತ್ತು ಇತರ ಆಚರಣೆಗಳನ್ನು ಮಗಳು ಮಾಡುತ್ತಿದ್ದರು. ಆದರೆ, ಪಿನ್ನಥೇವರ್ ಮರಣದ ನಂತರ ಆಕೆ ಪೂಜೆ ನಡೆಸುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಪುರುಷರು ಮಾತ್ರ ಅರ್ಚಕರಾಗಬಹುದು ಎಂಬ ವಾದಕ್ಕೆ ಯಾವುದೇ ಕಾನೂನು ಅಥವಾ ವಾಸ್ತವಿಕ ಆಧಾರವಿಲ್ಲ ಎಂದು ತಿಳಿಸಿತ್ತು. “ದೇವಾಲಯದ ಪ್ರಧಾನ ದೇವತೆ ಸ್ತ್ರೀ ರೂಪದಲ್ಲಿ” ಅಮ್ಮನ್ “ಆಗಿದ್ದಾಗ, ಅಂತಹ ದೇವಾಲಯಗಳಲ್ಲಿ ಪೂಜೆ ಮಾಡಲು ಮಹಿಳೆಯ ವಿರುದ್ಧ ಆಕ್ಷೇಪಣೆಗಳು ವ್ಯಕ್ತವಾಗುತ್ತಿರುವುದು ವಿಪರ್ಯಾಸ” ಎಂದು ನ್ಯಾಯಮೂರ್ತಿ ಕೆ.ಚಂದ್ರು ತಮ್ಮ ಆದೇಶದಲ್ಲಿ ತಿಳಿಸಿದ್ದರು.

ಪ್ರಸ್ತುತ ಸಚಿವ ಶೇಖರ್‌ ಬಾಬು ಅವರ ಹೇಳಿಕೆ ಕೂಡ ತಮಿಳುನಾಡಿನಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.


ಇದನ್ನೂ ಓದಿ: ತೆಲಂಗಾಣ: ಭೂ ಕಬಳಿಕೆ ಆರೋಪದಿಂದ ಟಿಆರ್‌ಎಸ್‌ ತೊರೆದಿದ್ದ ಮಾಜಿ ಸಚಿವ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...