Homeಚಳವಳಿತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

- Advertisement -
- Advertisement -

‘ಅಗಮಾ ಶಾಸ್ತ್ರ’ದಲ್ಲಿ ತರಬೇತಿ ಪಡೆದ ಮಹಿಳೆಯರನ್ನು ಹಿಂದೂ ದೇವಾಲಯಗಳಲ್ಲಿ ಅರ್ಚಕರಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು  ಘೋಷಿಸಿದ್ದಾರೆ. ಸಚಿವರ ಈ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ನಾಂದಿ ಹಾಡಿದೆ.

’ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಮೊದಲೆ ಯಾವುದೇ ಚರ್ಚೆಗಳು ನಡೆದಿಲ್ಲ. ಆದರೆ ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಸಚಿವರು ಹೇಳಿದ್ದಾರೆ.

“ದೇವಾಲಯದ ಪುರೋಹಿತರ ಹುದ್ದೆಗಳನ್ನು ವಹಿಸಿಕೊಳ್ಳಲು ಮಹಿಳೆಯರಿಗೆ ಅವಕಾಶ ನೀಡಲಾಗುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ, ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದವರಿಗೆ ಅವಕಾಶ ನೀಡಲಾಗುವುದು ಎಂದು ನಾನು ಹೇಳಿದ್ದೇನೆ. ದೇವಾಲಯದ ಪುರೋಹಿತರ ಪಾತ್ರವನ್ನು ತೆಗೆದುಕೊಳ್ಳಲು ಇಷ್ಟಪಡುವ ಮಹಿಳೆಯರಿಂದ ಮನವಿಗಳು ಬಂದರೆ, ಖಂಡಿತವಾಗಿ ನಾವು ಅವರನ್ನು ಪರಿಗಣಿಸುತ್ತೇವೆ. ಅಗಮಾ ಸಂಪ್ರದಾಯದಲ್ಲಿ ಅವರ ಪರಿಣತಿಯೇ ಮಾನದಂಡವಾಗಿರುತ್ತದೆ. ಅವರಿಗೆ ಅಗತ್ಯವಾದ ತರಬೇತಿಯನ್ನು ನೀಡುತ್ತೇವೆ. ಜೊತೆಗೆ ಅರ್ಚಕರಾಗಿ ನೇಮಿಸುವ ಮೊದಲು ಸಂದರ್ಶನ ನಡೆಸುತ್ತೇವೆ” ಎಂದು ಸಚಿವ ಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

ಮಹಿಳೆಯರನ್ನು ಅರ್ಚಕರನ್ನಾಗಿ ನೇಮಿಸುವ ನಿರ್ಧಾರದ ಜೊತೆಗೆ ಮುಟ್ಟಿನ ಸಮಯದಲ್ಲಿ ದೇವಸ್ಥಾನದ ಆಚರಣೆಗಳಿಂದ ದೂರವಿರಲು “ಮಹಿಳೆಯರಿಗೆ ಐದು ದಿನಗಳ ರಜೆ” ಸೇರಿದಂತೆ ಎಲ್ಲ ಅಂಶಗಳನ್ನು ಪರಿಗಣಿಸುವುದಾಗಿ ಸಚಿವ ಶೇಖರ್‌ ಬಾಬು ಹೇಳಿದ್ದಾರೆ.

2008 ರಲ್ಲಿ, ಅರ್ಚಕರಾಗಿದ್ದ ತನ್ನ ತಂದೆ ಮರಣಹೊಂದಿದ ನಂತರ ಮಗಳಿಗೆ ಅರ್ಚಕರಾಗಿ ದೇವಾಲಯದಲ್ಲಿ ಪೂಜೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಅಂದಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಸೇರಿದಂತೆ ಅನೇಕರು ಮದ್ರಾಸ್ ಹೈಕೋರ್ಟ್ ನಿರ್ಧಾರವನ್ನು ಶ್ಲಾಘಿಸಿದ್ದರು.

ಮಧುರೈ ಹಳ್ಳಿಯ ಅರುಲ್ಮಿಗು ದುರ್ಗೈ ಅಮ್ಮನ್ ಕೋವಿಲ್ ಅರ್ಚಕರಾಗಿದ್ದ ಪಿನ್ನಥೇವರ್ ಅವರ ಮರಣದ ನಂತರ ಅವರ ಮಗಳು ಪಿನ್ನಿಯಕ್ಕಲ್ ಆ ಕೆಲಸವನ್ನು ತನಗೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆಕೆಯ ತಂದೆ 2006 ರಲ್ಲಿ ನಿಧನ ಹೊಂದಿದ್ದರೂ, ಪಿನ್ನಿಯಕ್ಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರಿಂದ 2004 ರಿಂದ ಪೂಜೆ ಮತ್ತು ಇತರ ಆಚರಣೆಗಳನ್ನು ಮಗಳು ಮಾಡುತ್ತಿದ್ದರು. ಆದರೆ, ಪಿನ್ನಥೇವರ್ ಮರಣದ ನಂತರ ಆಕೆ ಪೂಜೆ ನಡೆಸುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಪುರುಷರು ಮಾತ್ರ ಅರ್ಚಕರಾಗಬಹುದು ಎಂಬ ವಾದಕ್ಕೆ ಯಾವುದೇ ಕಾನೂನು ಅಥವಾ ವಾಸ್ತವಿಕ ಆಧಾರವಿಲ್ಲ ಎಂದು ತಿಳಿಸಿತ್ತು. “ದೇವಾಲಯದ ಪ್ರಧಾನ ದೇವತೆ ಸ್ತ್ರೀ ರೂಪದಲ್ಲಿ” ಅಮ್ಮನ್ “ಆಗಿದ್ದಾಗ, ಅಂತಹ ದೇವಾಲಯಗಳಲ್ಲಿ ಪೂಜೆ ಮಾಡಲು ಮಹಿಳೆಯ ವಿರುದ್ಧ ಆಕ್ಷೇಪಣೆಗಳು ವ್ಯಕ್ತವಾಗುತ್ತಿರುವುದು ವಿಪರ್ಯಾಸ” ಎಂದು ನ್ಯಾಯಮೂರ್ತಿ ಕೆ.ಚಂದ್ರು ತಮ್ಮ ಆದೇಶದಲ್ಲಿ ತಿಳಿಸಿದ್ದರು.

ಪ್ರಸ್ತುತ ಸಚಿವ ಶೇಖರ್‌ ಬಾಬು ಅವರ ಹೇಳಿಕೆ ಕೂಡ ತಮಿಳುನಾಡಿನಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.


ಇದನ್ನೂ ಓದಿ: ತೆಲಂಗಾಣ: ಭೂ ಕಬಳಿಕೆ ಆರೋಪದಿಂದ ಟಿಆರ್‌ಎಸ್‌ ತೊರೆದಿದ್ದ ಮಾಜಿ ಸಚಿವ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...