Homeಚಳವಳಿತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

- Advertisement -
- Advertisement -

‘ಅಗಮಾ ಶಾಸ್ತ್ರ’ದಲ್ಲಿ ತರಬೇತಿ ಪಡೆದ ಮಹಿಳೆಯರನ್ನು ಹಿಂದೂ ದೇವಾಲಯಗಳಲ್ಲಿ ಅರ್ಚಕರಾಗಿ ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು  ಘೋಷಿಸಿದ್ದಾರೆ. ಸಚಿವರ ಈ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ನಾಂದಿ ಹಾಡಿದೆ.

’ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಮೊದಲೆ ಯಾವುದೇ ಚರ್ಚೆಗಳು ನಡೆದಿಲ್ಲ. ಆದರೆ ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಸಚಿವರು ಹೇಳಿದ್ದಾರೆ.

“ದೇವಾಲಯದ ಪುರೋಹಿತರ ಹುದ್ದೆಗಳನ್ನು ವಹಿಸಿಕೊಳ್ಳಲು ಮಹಿಳೆಯರಿಗೆ ಅವಕಾಶ ನೀಡಲಾಗುತ್ತದೆಯೇ ಎಂದು ಮಾಧ್ಯಮದವರು ಕೇಳಿದಾಗ, ಅಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದವರಿಗೆ ಅವಕಾಶ ನೀಡಲಾಗುವುದು ಎಂದು ನಾನು ಹೇಳಿದ್ದೇನೆ. ದೇವಾಲಯದ ಪುರೋಹಿತರ ಪಾತ್ರವನ್ನು ತೆಗೆದುಕೊಳ್ಳಲು ಇಷ್ಟಪಡುವ ಮಹಿಳೆಯರಿಂದ ಮನವಿಗಳು ಬಂದರೆ, ಖಂಡಿತವಾಗಿ ನಾವು ಅವರನ್ನು ಪರಿಗಣಿಸುತ್ತೇವೆ. ಅಗಮಾ ಸಂಪ್ರದಾಯದಲ್ಲಿ ಅವರ ಪರಿಣತಿಯೇ ಮಾನದಂಡವಾಗಿರುತ್ತದೆ. ಅವರಿಗೆ ಅಗತ್ಯವಾದ ತರಬೇತಿಯನ್ನು ನೀಡುತ್ತೇವೆ. ಜೊತೆಗೆ ಅರ್ಚಕರಾಗಿ ನೇಮಿಸುವ ಮೊದಲು ಸಂದರ್ಶನ ನಡೆಸುತ್ತೇವೆ” ಎಂದು ಸಚಿವ ಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

ಮಹಿಳೆಯರನ್ನು ಅರ್ಚಕರನ್ನಾಗಿ ನೇಮಿಸುವ ನಿರ್ಧಾರದ ಜೊತೆಗೆ ಮುಟ್ಟಿನ ಸಮಯದಲ್ಲಿ ದೇವಸ್ಥಾನದ ಆಚರಣೆಗಳಿಂದ ದೂರವಿರಲು “ಮಹಿಳೆಯರಿಗೆ ಐದು ದಿನಗಳ ರಜೆ” ಸೇರಿದಂತೆ ಎಲ್ಲ ಅಂಶಗಳನ್ನು ಪರಿಗಣಿಸುವುದಾಗಿ ಸಚಿವ ಶೇಖರ್‌ ಬಾಬು ಹೇಳಿದ್ದಾರೆ.

2008 ರಲ್ಲಿ, ಅರ್ಚಕರಾಗಿದ್ದ ತನ್ನ ತಂದೆ ಮರಣಹೊಂದಿದ ನಂತರ ಮಗಳಿಗೆ ಅರ್ಚಕರಾಗಿ ದೇವಾಲಯದಲ್ಲಿ ಪೂಜೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಅಂದಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಸೇರಿದಂತೆ ಅನೇಕರು ಮದ್ರಾಸ್ ಹೈಕೋರ್ಟ್ ನಿರ್ಧಾರವನ್ನು ಶ್ಲಾಘಿಸಿದ್ದರು.

ಮಧುರೈ ಹಳ್ಳಿಯ ಅರುಲ್ಮಿಗು ದುರ್ಗೈ ಅಮ್ಮನ್ ಕೋವಿಲ್ ಅರ್ಚಕರಾಗಿದ್ದ ಪಿನ್ನಥೇವರ್ ಅವರ ಮರಣದ ನಂತರ ಅವರ ಮಗಳು ಪಿನ್ನಿಯಕ್ಕಲ್ ಆ ಕೆಲಸವನ್ನು ತನಗೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆಕೆಯ ತಂದೆ 2006 ರಲ್ಲಿ ನಿಧನ ಹೊಂದಿದ್ದರೂ, ಪಿನ್ನಿಯಕ್ಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರಿಂದ 2004 ರಿಂದ ಪೂಜೆ ಮತ್ತು ಇತರ ಆಚರಣೆಗಳನ್ನು ಮಗಳು ಮಾಡುತ್ತಿದ್ದರು. ಆದರೆ, ಪಿನ್ನಥೇವರ್ ಮರಣದ ನಂತರ ಆಕೆ ಪೂಜೆ ನಡೆಸುವುದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಪುರುಷರು ಮಾತ್ರ ಅರ್ಚಕರಾಗಬಹುದು ಎಂಬ ವಾದಕ್ಕೆ ಯಾವುದೇ ಕಾನೂನು ಅಥವಾ ವಾಸ್ತವಿಕ ಆಧಾರವಿಲ್ಲ ಎಂದು ತಿಳಿಸಿತ್ತು. “ದೇವಾಲಯದ ಪ್ರಧಾನ ದೇವತೆ ಸ್ತ್ರೀ ರೂಪದಲ್ಲಿ” ಅಮ್ಮನ್ “ಆಗಿದ್ದಾಗ, ಅಂತಹ ದೇವಾಲಯಗಳಲ್ಲಿ ಪೂಜೆ ಮಾಡಲು ಮಹಿಳೆಯ ವಿರುದ್ಧ ಆಕ್ಷೇಪಣೆಗಳು ವ್ಯಕ್ತವಾಗುತ್ತಿರುವುದು ವಿಪರ್ಯಾಸ” ಎಂದು ನ್ಯಾಯಮೂರ್ತಿ ಕೆ.ಚಂದ್ರು ತಮ್ಮ ಆದೇಶದಲ್ಲಿ ತಿಳಿಸಿದ್ದರು.

ಪ್ರಸ್ತುತ ಸಚಿವ ಶೇಖರ್‌ ಬಾಬು ಅವರ ಹೇಳಿಕೆ ಕೂಡ ತಮಿಳುನಾಡಿನಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.


ಇದನ್ನೂ ಓದಿ: ತೆಲಂಗಾಣ: ಭೂ ಕಬಳಿಕೆ ಆರೋಪದಿಂದ ಟಿಆರ್‌ಎಸ್‌ ತೊರೆದಿದ್ದ ಮಾಜಿ ಸಚಿವ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...