Homeಮುಖಪುಟತಮಿಳುನಾಡು: ಚಾಕು ತೋರಿಸಿ ಗೆಳೆಯನ ಎದುರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ತಮಿಳುನಾಡು: ಚಾಕು ತೋರಿಸಿ ಗೆಳೆಯನ ಎದುರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ತಮಿಳುನಾಡು: ಚಾಕು ತೋರಿಸಿ ಗೆಳೆಯನ ಎದುರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ|ಮಧ್ಯಪ್ರದೇಶ: 90 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ| ಚಂಡೀಗಡ: ಎಎಸ್‌ಐ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು| ದಕ್ಷಿಣ ಕನ್ನಡ: ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ ಶಿಕ್ಷೆ

- Advertisement -
- Advertisement -

ತಮಿಳುನಾಡು ರಾಜ್ಯದ ಕಾಂಚೀಪುರಂ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಕೆಯ ಗೆಳೆಯನ ಎದುರಲ್ಲಿ ಆರು ಮಂದಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಬೆಂಗಳೂರು-ಪುದುಚೇರಿ ಹೆದ್ದಾರಿ ಬಳಿ ಗುರುವಾರ ಈ ಘಟನೆ ನಡೆದಿದೆ.

20 ವರ್ಷದ ಯುವತಿ ತನ್ನ ಗೆಳೆಯನೊಂದಿಗೆ ಪ್ರಯಾಣಿಸುತ್ತಿದ್ದಾಗ ಇಬ್ಬರು ಮುಸುಕುಧಾರಿ ವ್ಯಕ್ತಿಗಳು ಅವರ ಬಳಿಗೆ ಬಂದು ಕಿರುಕುಳ ನೀಡಲು ಆರಂಭಿಸಿದರು. ದುಷ್ಕರ್ಮಿಗಳು ಇಬ್ಬರಿಗೂ ಚಾಕುವನ್ನು ತೋರಿಸಿ, ಯುವತಿಯನ್ನು ಯಾರೂ ಇಲ್ಲದ ಜಾಗಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ.

ಇಬ್ಬರು ಮುಸುಕುಧಾರಿ ವ್ಯಕ್ತಿಗಳು ಚಾಕು ತೋರಿಸಿ ಗೆಳೆಯನ ಎದುರಿನಲ್ಲಿಯೇ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇಬ್ಬರು ಮುಸುಕುಧಾರಿಗಳು ತಮ್ಮ ಬಳಿಗೆ ಬಂದಾಗ ಕುಡಿದ ಮತ್ತಿನಲ್ಲಿದ್ದರು ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ.

ಮುಸುಕುಧಾರಿಗಳಿಬ್ಬರು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾಗ, ಇನ್ನೂ ನಾಲ್ವರು ಘಟನೆ ನಡೆದ ಸ್ಥಳಕ್ಕೆ ಬಂದು ಅತ್ಯಾಚಾರಿಗಳೊಂದಿಗೆ ಸೇರಿಕೊಂಡರು. ನಂತರ ಆರು ಮಂದಿಯೂ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದರು.

ಇದನ್ನೂ ಓದಿರಿ: 4 ವರ್ಷದ ಮಗು ಮೇಲೆ ಅತ್ಯಾಚಾರ: ಸಿಸಿಕ್ಯಾಮರ ನೆರವಿನಿಂದ ಆರೋಪಿಯ ಬಂಧನ

ಪರಾರಿಯಾಗಲು ಯತ್ನಿಸಿದರೆ ಕೊಲೆ ಮಾಡುತ್ತೇವೆ ಎಂದು ದುಷ್ಕರ್ಮಿಗಳು ಯುವತಿಗೆ ಬೆದರಿಕೆ ಹಾಕಿದರು. ಈ ಇಬ್ಬರೂ ಸಂತ್ರಸ್ತರು ದುಷ್ಕರ್ಮಿಗಳ ಹಿಡಿತದಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ. ಕುಟುಂಬ ಸದಸ್ಯರಿಗೆ ತಿಳಿಸಿದ ನಂತರ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಎನ್‌ಡಿಟಿವಿಯೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಗ್ಯಾಂಗ್ ಬಾಲಕಿಗೆ ಚಾಕುವಿನಿಂದ ಬೆದರಿಸಿ ಕತ್ತಲೆ ಪ್ರದೇಶಕ್ಕೆ ಕರೆದೊಯ್ದಿದೆ. ಅವರು ಒಬ್ಬರ ನಂತರ ಒಬ್ಬರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ” ಎಂದಿದ್ದಾರೆ.

ಕಾಂಚೀಪುರಂ ಪ್ರದೇಶದಲ್ಲಿ ನಡೆದ ಭೀಕರ ಘಟನೆಯ ನಂತರ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದರು. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಮಧ್ಯಪ್ರದೇಶ: 90 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ

ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ 90 ವರ್ಷದ ವೃದ್ಧೆಯೊಬ್ಬರ ಮೇಲೆ ಮೋಟಾರ್ ಸೈಕಲ್ ಸವಾರನೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ 15 ಕಿಲೋಮೀಟರ್ ದೂರದಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿ ಮಾಡಲು ಗುರುವಾರ ರಾತ್ರಿ ಜಬಲ್‌ಪುರದಿಂದ ಶಹದೋಲ್ ರೈಲು ನಿಲ್ದಾಣಕ್ಕೆ ವೃದ್ಧೆ ಬಂದಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಪ್ರತೀಕ್ ತಿಳಿಸಿದ್ದಾರೆ.

“ವೃದ್ಧೆಯು ರಾತ್ರಿಯಿಡೀ ರೈಲ್ವೇ ನಿಲ್ದಾಣದಲ್ಲಿ ಉಳಿದುಕೊಂಡಿದ್ದರು. ಆಟೋರಿಕ್ಷಾ ಚಾಲಕನೊಬ್ಬ ಶುಕ್ರವಾರ ಬೆಳಿಗ್ಗೆ ವೃದ್ಧೆಯನ್ನು ಅಂಟ್ರಾ ಗ್ರಾಮದ ಮುಖ್ಯ ರಸ್ತೆಗೆ ಡ್ರಾಪ್‌ ಮಾಡಿದನು. ಮುಖ್ಯ ರಸ್ತೆಯಿಂದ ಸ್ವಲ್ಪ ದೂರದಲ್ಲಿರುವ ತನ್ನ ಸಂಬಂಧಿಕರ ಸ್ಥಳಕ್ಕೆ ಹೋಗಲು ಮತ್ತೊಂದು ವಾಹನವನ್ನು ಹತ್ತುವಂತೆ ಆತ ತಿಳಿಸಿದನು. ವೃದ್ಧೆಯು ಬಸ್‌ಗಾಗಿ ಕಾಯುತ್ತಿದ್ದಾಗ, ಅಪರಿಚಿತ ಮೋಟರ್‌ಸೈಕ್ಲಿಸ್ಟ್ ಬಂದಿದ್ದು ವೃದ್ಧೆಯನ್ನು ಗ್ರಾಮಕ್ಕೆ ಬಿಡುವುದಾಗಿ ಹೇಳಿದ್ದಾನೆ. ಆದರೆ ದಾರಿ ತಪ್ಪಿಸಿ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಮತ್ತೆ ಅಕೆಯನ್ನು ಮುಖ್ಯ ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ” ಎಂದು ಎಸ್‌ಪಿ ಹೇಳಿದ್ದಾರೆ.

ವೃದ್ಧೆಯು ತನ್ನ ಸಂಬಂಧಿಕರಿಗೆ ತಿಳಿಸಿದ ನಂತರ, ಅವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಅಪರಿಚಿತ ಮೋಟಾರ್ಸೈಕ್ಲಿಸ್ಟ್ ವಿರುದ್ಧ ಅತ್ಯಾಚಾರ ಮತ್ತು ಇತರ ಅಪರಾಧಗಳಿಗಾಗಿ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕುಮಾರ್ ಪ್ರತೀಕ್ ವಿವರಿಸಿದ್ದಾರೆ.

ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಚಂಡೀಗಡ: ಎಎಸ್‌ಐ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಸಂತ್ರಸ್ತೆಗೆ ಸಹಾಯ ಮಾಡುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ) ಶ್ರೇಣಿಯ  ಪೊಲೀಸ್ ಸಿಬ್ಬಂದಿಯ ಮೇಲೆ ಪ್ರಕರಣ ದಾಖಲಾಗಿದೆ.

ಆರೋಪಿ ಪೊಲೀಸನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಸ್ತುತ ಹರಿಯಾಣ ಪೊಲೀಸ್‌ನ ಡಯಲ್ 112 ತುರ್ತು ಸೇವೆಯ ಉಸ್ತುವಾರಿಯಾಗಿ ಛಚ್ರೌಲಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದನು.

ಜಗಧಾರಿಯಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಆರೋಪಿ ಎಎಸ್‌ಐ ತನ್ನ ಮೇಲೆ ಎರಡು ಬಾರಿ ವಿವಿಧ ಹೋಟೆಲ್‌ಗಳಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ: ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಐದು ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ.

ಇದನ್ನೂ ಓದಿರಿ: ತುಮಕೂರು ವಿವಿ ಸಂಶೋಧನಾ ವಿದ್ಯಾರ್ಥಿಯಿಂದ ಬಾಲಕಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬಿಜೈ ಕಾಪಿಕಾಡು ನಿವಾಸಿ ಶೇಖರ ಶಿಕ್ಷೆಗೊಳಗಾದ ಆರೋಪಿ. ಜುಲೈ 21, 2022ರಂದು ಬೆಳಗ್ಗೆ ಅಪರಾಧಿ ಶೇಖರ್‌ ಹ್ಯಾಟ್‌ ಹಿಲ್‌ ಜಡ್ಜಸ್‌ ಕ್ವಾಟ್ರರ್ಸ್‌ ಪಾರ್ಕಿಂಗ್‌ ಸ್ಥಳದಲ್ಲಿ ಪೈಟಿಂಗ್‌ ಕೆಲಸ ಮಾಡುತ್ತಿದ್ದನು. ಈ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಮಾಡಿದ ಎಸ್‌ಐ ಶ್ರೀಕಲಾ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಐದು ವರ್ಷ ಜೈಲು ಶಿಕ್ಷೆ, ಒಂದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಸಂತ್ರಸ್ತೆಗೆ ಒಂದು ಲಕ್ಷ ರೂ. ಪರಿಹಾರ ನೀಡುವಂತೆಯೂ ಅದೇಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...