Homeಮುಖಪುಟತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

’ಆಗಮ ಶಾಸ್ತ್ರ, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’

- Advertisement -
- Advertisement -

ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿರುವ 36,000 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ. ಹೊಸದಾಗಿ ರಚನೆಯಾಗಿರುವ ಡಿಎಂಕೆ ಸರ್ಕಾರ ನೂರು ದಿನಗಳನನ್ನು ಪೂರೈಸುವ ಮೊದಲೇ ಅರ್ಹರನ್ನು ಅರ್ಚಕರಾಗಿ ನೇಮಿಸುವುದಾಗಿ ತಿಳಿಸಿದೆ.

ತಮಿಳುನಾಡಿನ ಸ್ಟಾಲಿನ ನೇತೃತ್ವದ ಡಿಎಂಕೆ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ರಾಜ್ಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ. ಈ ವಿಷಯ ಪ್ರಸ್ತುತ ರಾಜ್ಯದಲ್ಲಿ ಇಷ್ಟೊಂದು ಮುನ್ನಲೆಗೆ ಬರಲು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರ ಬ್ರಾಹ್ಮಣ್ಯದ ವಿಚಾರ ವಿವಾದ ಮತ್ತು ದೂರಿಗೆ ಕಾರಣವಾಗಿರುವುದು.

ಆಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು ಘೋಷಿಸಿದ್ದರು. ಇದು ಪರ-ವಿರೋಧ ಚರ್ಚೆಗೆ ನಾಂದಿ ಹಾಡಿತ್ತು. ಈಗ ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವ ಕ್ರಮ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ರಾಜ್ಯದಲ್ಲಿ ನಟ ಚೇತನ್ ಅವರ ಬ್ರಾಹ್ಮಣ್ಯದ ಹೇಳಿಕೆ ಕುರಿತು ಸಂಘಟನೆಗಳು ದೂರು ನೀಡಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ನಟ ಚೇತನ್ ಪರ-ವಿರೋಧ ಪೋಸ್ಟ್‌ಗಳು ಹರಿದಾಡುತ್ತಿವೆ. ಇದರ ಜೊತೆಗೆ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ನಡುವಿನ ವ್ಯತ್ಯಾಸಗಳನ್ನು ಕುರಿತು ನೆಟ್ಟಿಗರು ಮಾತನಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಚಿಂತಕ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ರಾಜ್ಯದಲ್ಲಿಯೂ ಇಂತಹ ದಿಟ್ಟ ನಿರ್ಧಾರ ಜಾರಿಯಾಗಲಿ ಎಂದಿದ್ದಾರೆ.

“ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿ ನಾರಾಯಣ ಗುರುಗಳನ್ನು ತಮ್ಮ ಗುರುಗಳೆಂದು ಒಪ್ಪಿಕೊಳ್ಳುವ ಬಿಲ್ಲವ ಸಮುದಾಯದ ನಾಯಕರೊಬ್ಬರು ಧಾರ್ಮಿಕ ದತ್ತಿ ಇಲಾಖೆಯ ಸಚಿವರಾಗಿದ್ದಾರೆ. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯವರು ಈ ಅವಕಾಶವನ್ನು ಬಳಸಿಕೊಂಡು ನಾರಾಯಣ ಗುರುಗಳ ಆಶಯಕ್ಕೆ ಅನುಗುಣವಾಗಿ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಜಾತಿಭೇದವಿಲ್ಲದೆ ಅರ್ಚಕರನ್ನು ನೇಮಿಸುವ ದಿಟ್ಟ ನಿರ್ಧಾರವನ್ನು ಕೈಗೊಳ್ಳಬೇಕು” ಎಂದಿದ್ದಾರೆ.

“ಹಿಂದೂಗಳೆಲ್ಲ ಸೋದರರು ಎಂದು ಭಾವಿಸುವ ಆರ್‌ಎಸ್‌ಎಸ್‌ ಮತ್ತು ಅದರ ಪರಿವಾರ ಸಂಘಟನೆಗಳು ಹಾಗೂ ಬ್ರಾಹ್ಮಣರು ಬೇರೆ, ಜಾತಿಭೇದ, ಪುರೋಹಿತಷಾಹಿಯನ್ನು ಒಪ್ಪಿಕೊಳ್ಳುವ ಬ್ರಾಹ್ಮಣ್ಯ ಬೇರೆ ಎಂದು ವಾದಿಸುತ್ತಿರುವ ಬ್ರಾಹ್ಮಣರು ಮತ್ತು ಅವರ ಸಂಘಸಂಸ್ಥೆಗಳು ಕೂಡಾ ಇದನ್ನು ವಿರೋಧಿಸಲಿಕ್ಕಿಲ್ಲ ಎಂದು ನಂಬಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ಲೇಖಕ ನಾಗೇಗೌಡ ಕೀಲಾರ ಅವರು ತಮಿಳುನಾಡಿನ ಸರ್ಕಾರದ ನಿರ್ಧಾರವನ್ನು, ’ಈ ಆಗಮ ಶಾಸ್ತ್ರದ ಟ್ರೈನಿಂಗ್, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ಅರ್ಚಕ ವೃತ್ತಿ ಎನ್ನುವುದೇ ಇರಬಾರದು ಎನ್ನುವ ನಾಗೇಗೌಡ ಕೀಲಾರ ಅವರು, ’ ಅರ್ಚಕ ವೃತ್ತಿ ಅನ್ನುವುದೇ ಇರಬಾರದು. ಮೊದಲು ನಾವುಗಳು ನಮ್ಮ ದೇವಸ್ಥಾನಗಳ ಗರ್ಭಗುಡಿಯನ್ನು ಮಾರ್ಪಾಟು ಮಾಡಬೇಕು. ವಿಶಾಲವಾದ ಕೋಣೆಯನ್ನಾಗಿ ಪರಿವರ್ತಿಸಿ ಅಲ್ಲಿ ಒಳ್ಳೆಯ ಗಾಳಿ ಬೆಳಕು ಇರಬೇಕು. ಜನರೇ ಸ್ವತಃ ಒಳಗೆ ಹೋಗಿ ಯಾರದೇ ನೆರವು ಇಲ್ಲದೆ ಒಂದೆರಡು ನಿಮಿಷ ಸ್ವತಃ ಪೂಜೆ ಮಾಡಿಕೊಂಡು ಬರುವ ವ್ಯವಸ್ಥೆ ಮಾಡಬೇಕು. ಪೂಜಾ ಕೋಣೆಯ ಸುವ್ಯವಸ್ಥೆಯನ್ನು ಕಾಪಾಡಲು ಯಾರನ್ನಾದರೂ ಒಬ್ಬರನ್ನು ನೇಮಕ ಮಾಡಿದರೆ ಸಾಕು. ಈ ವ್ಯಕ್ತಿಗೆ ಸೆಕ್ಯುರಿಟಿ ಗಾರ್ಡ್ ಗೆ ಇರುವ ಕೌಶಲ್ಯ ಇದ್ದರೆ ಸಾಕೇ ಹೊರತು ಯಾವುದೇ ಆಗಮ ಶಾಸ್ತ್ರದ ಟ್ರೈನಿಂಗ್ ಅವಶ್ಯಕತೆ ಇಲ್ಲ’ ಎಂದಿದ್ದಾರೆ.

’ಅಬ್ರಾಹ್ಮಣರು ಅರ್ಚಕರು ಆಗೋದು ನನ್ನ ಅಭಿಪ್ರಾಯದಲ್ಲಿ ಯಾವುದೇ ಸಾಮಾಜಿಕ ಮೇಲಿನ ಚಲನೆ ಅಲ್ಲವೇ ಅಲ್ಲ. ಇದು ಕೂಡ ಬ್ರಾಹ್ಮಣ್ಯದ ಮುಂದುವರಿಕೆಯೇ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಕೆಲವು ವರ್ಷಗಳ ಹಿಂದೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪರಿಶಿಷ್ಟಜಾತಿ-ಪಂಗಡದವರ ಜೊತೆಯಲ್ಲಿ ಮಹಿಳೆಯರನ್ನೂ ಅರ್ಚಕರನ್ನಾಗಿ ನೇಮಿಸುವ ದಿಟ್ಟ ನಿರ್ಧಾರ ಕೈಗೊಂಡಿದ್ದರು. ಈಗ ತಮಿಳುನಾಡು ಸರ್ಕಾರದ ಕ್ರಮದಿಂದ ಪ್ರೇರಿತರಾಗಿ ರಾಜ್ಯದಲ್ಲಿಯೂ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡಲಿ ಎಂಬುದು ಸಾಮಾಜಿಕ ಹೋರಾಟಗಾರರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...