Homeಮುಖಪುಟತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

’ಆಗಮ ಶಾಸ್ತ್ರ, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’

- Advertisement -
- Advertisement -

ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿರುವ 36,000 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ. ಹೊಸದಾಗಿ ರಚನೆಯಾಗಿರುವ ಡಿಎಂಕೆ ಸರ್ಕಾರ ನೂರು ದಿನಗಳನನ್ನು ಪೂರೈಸುವ ಮೊದಲೇ ಅರ್ಹರನ್ನು ಅರ್ಚಕರಾಗಿ ನೇಮಿಸುವುದಾಗಿ ತಿಳಿಸಿದೆ.

ತಮಿಳುನಾಡಿನ ಸ್ಟಾಲಿನ ನೇತೃತ್ವದ ಡಿಎಂಕೆ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ರಾಜ್ಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ. ಈ ವಿಷಯ ಪ್ರಸ್ತುತ ರಾಜ್ಯದಲ್ಲಿ ಇಷ್ಟೊಂದು ಮುನ್ನಲೆಗೆ ಬರಲು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರ ಬ್ರಾಹ್ಮಣ್ಯದ ವಿಚಾರ ವಿವಾದ ಮತ್ತು ದೂರಿಗೆ ಕಾರಣವಾಗಿರುವುದು.

ಆಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು ಘೋಷಿಸಿದ್ದರು. ಇದು ಪರ-ವಿರೋಧ ಚರ್ಚೆಗೆ ನಾಂದಿ ಹಾಡಿತ್ತು. ಈಗ ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವ ಕ್ರಮ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ರಾಜ್ಯದಲ್ಲಿ ನಟ ಚೇತನ್ ಅವರ ಬ್ರಾಹ್ಮಣ್ಯದ ಹೇಳಿಕೆ ಕುರಿತು ಸಂಘಟನೆಗಳು ದೂರು ನೀಡಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ನಟ ಚೇತನ್ ಪರ-ವಿರೋಧ ಪೋಸ್ಟ್‌ಗಳು ಹರಿದಾಡುತ್ತಿವೆ. ಇದರ ಜೊತೆಗೆ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ನಡುವಿನ ವ್ಯತ್ಯಾಸಗಳನ್ನು ಕುರಿತು ನೆಟ್ಟಿಗರು ಮಾತನಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಚಿಂತಕ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ರಾಜ್ಯದಲ್ಲಿಯೂ ಇಂತಹ ದಿಟ್ಟ ನಿರ್ಧಾರ ಜಾರಿಯಾಗಲಿ ಎಂದಿದ್ದಾರೆ.

“ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿ ನಾರಾಯಣ ಗುರುಗಳನ್ನು ತಮ್ಮ ಗುರುಗಳೆಂದು ಒಪ್ಪಿಕೊಳ್ಳುವ ಬಿಲ್ಲವ ಸಮುದಾಯದ ನಾಯಕರೊಬ್ಬರು ಧಾರ್ಮಿಕ ದತ್ತಿ ಇಲಾಖೆಯ ಸಚಿವರಾಗಿದ್ದಾರೆ. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯವರು ಈ ಅವಕಾಶವನ್ನು ಬಳಸಿಕೊಂಡು ನಾರಾಯಣ ಗುರುಗಳ ಆಶಯಕ್ಕೆ ಅನುಗುಣವಾಗಿ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಜಾತಿಭೇದವಿಲ್ಲದೆ ಅರ್ಚಕರನ್ನು ನೇಮಿಸುವ ದಿಟ್ಟ ನಿರ್ಧಾರವನ್ನು ಕೈಗೊಳ್ಳಬೇಕು” ಎಂದಿದ್ದಾರೆ.

“ಹಿಂದೂಗಳೆಲ್ಲ ಸೋದರರು ಎಂದು ಭಾವಿಸುವ ಆರ್‌ಎಸ್‌ಎಸ್‌ ಮತ್ತು ಅದರ ಪರಿವಾರ ಸಂಘಟನೆಗಳು ಹಾಗೂ ಬ್ರಾಹ್ಮಣರು ಬೇರೆ, ಜಾತಿಭೇದ, ಪುರೋಹಿತಷಾಹಿಯನ್ನು ಒಪ್ಪಿಕೊಳ್ಳುವ ಬ್ರಾಹ್ಮಣ್ಯ ಬೇರೆ ಎಂದು ವಾದಿಸುತ್ತಿರುವ ಬ್ರಾಹ್ಮಣರು ಮತ್ತು ಅವರ ಸಂಘಸಂಸ್ಥೆಗಳು ಕೂಡಾ ಇದನ್ನು ವಿರೋಧಿಸಲಿಕ್ಕಿಲ್ಲ ಎಂದು ನಂಬಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ಲೇಖಕ ನಾಗೇಗೌಡ ಕೀಲಾರ ಅವರು ತಮಿಳುನಾಡಿನ ಸರ್ಕಾರದ ನಿರ್ಧಾರವನ್ನು, ’ಈ ಆಗಮ ಶಾಸ್ತ್ರದ ಟ್ರೈನಿಂಗ್, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ಅರ್ಚಕ ವೃತ್ತಿ ಎನ್ನುವುದೇ ಇರಬಾರದು ಎನ್ನುವ ನಾಗೇಗೌಡ ಕೀಲಾರ ಅವರು, ’ ಅರ್ಚಕ ವೃತ್ತಿ ಅನ್ನುವುದೇ ಇರಬಾರದು. ಮೊದಲು ನಾವುಗಳು ನಮ್ಮ ದೇವಸ್ಥಾನಗಳ ಗರ್ಭಗುಡಿಯನ್ನು ಮಾರ್ಪಾಟು ಮಾಡಬೇಕು. ವಿಶಾಲವಾದ ಕೋಣೆಯನ್ನಾಗಿ ಪರಿವರ್ತಿಸಿ ಅಲ್ಲಿ ಒಳ್ಳೆಯ ಗಾಳಿ ಬೆಳಕು ಇರಬೇಕು. ಜನರೇ ಸ್ವತಃ ಒಳಗೆ ಹೋಗಿ ಯಾರದೇ ನೆರವು ಇಲ್ಲದೆ ಒಂದೆರಡು ನಿಮಿಷ ಸ್ವತಃ ಪೂಜೆ ಮಾಡಿಕೊಂಡು ಬರುವ ವ್ಯವಸ್ಥೆ ಮಾಡಬೇಕು. ಪೂಜಾ ಕೋಣೆಯ ಸುವ್ಯವಸ್ಥೆಯನ್ನು ಕಾಪಾಡಲು ಯಾರನ್ನಾದರೂ ಒಬ್ಬರನ್ನು ನೇಮಕ ಮಾಡಿದರೆ ಸಾಕು. ಈ ವ್ಯಕ್ತಿಗೆ ಸೆಕ್ಯುರಿಟಿ ಗಾರ್ಡ್ ಗೆ ಇರುವ ಕೌಶಲ್ಯ ಇದ್ದರೆ ಸಾಕೇ ಹೊರತು ಯಾವುದೇ ಆಗಮ ಶಾಸ್ತ್ರದ ಟ್ರೈನಿಂಗ್ ಅವಶ್ಯಕತೆ ಇಲ್ಲ’ ಎಂದಿದ್ದಾರೆ.

’ಅಬ್ರಾಹ್ಮಣರು ಅರ್ಚಕರು ಆಗೋದು ನನ್ನ ಅಭಿಪ್ರಾಯದಲ್ಲಿ ಯಾವುದೇ ಸಾಮಾಜಿಕ ಮೇಲಿನ ಚಲನೆ ಅಲ್ಲವೇ ಅಲ್ಲ. ಇದು ಕೂಡ ಬ್ರಾಹ್ಮಣ್ಯದ ಮುಂದುವರಿಕೆಯೇ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಕೆಲವು ವರ್ಷಗಳ ಹಿಂದೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪರಿಶಿಷ್ಟಜಾತಿ-ಪಂಗಡದವರ ಜೊತೆಯಲ್ಲಿ ಮಹಿಳೆಯರನ್ನೂ ಅರ್ಚಕರನ್ನಾಗಿ ನೇಮಿಸುವ ದಿಟ್ಟ ನಿರ್ಧಾರ ಕೈಗೊಂಡಿದ್ದರು. ಈಗ ತಮಿಳುನಾಡು ಸರ್ಕಾರದ ಕ್ರಮದಿಂದ ಪ್ರೇರಿತರಾಗಿ ರಾಜ್ಯದಲ್ಲಿಯೂ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡಲಿ ಎಂಬುದು ಸಾಮಾಜಿಕ ಹೋರಾಟಗಾರರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...