Homeಮುಖಪುಟತಮಿಳುನಾಡಿನ ಹೊಸ ಸರ್ಕಾರದ ಆರಂಭಿಕ ಹೆಜ್ಜೆಗಳು ಮೂಡಿಸಿರುವ ಭರವಸೆಗಳು..

ತಮಿಳುನಾಡಿನ ಹೊಸ ಸರ್ಕಾರದ ಆರಂಭಿಕ ಹೆಜ್ಜೆಗಳು ಮೂಡಿಸಿರುವ ಭರವಸೆಗಳು..

- Advertisement -
- Advertisement -

2021 ರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡಿದ್ದ ಪಂಚರಾಜ್ಯ ಚುನಾವಣೆಗಳ ತೂಕ ಒಂದಾದರೆ, ತಮಿಳುನಾಡಿನ ಚುನಾವಣೆಯೇ ಒಂದು ತೂಕ ಎಂಬಂತೆ ಬಿಂಬಿಸಲಾಗಿತ್ತು. ಅಮ್ಮ ಖ್ಯಾತಿಯ ಜಯಲಲಿತಾ ಮತ್ತು ಕಲೈಜ್ಞರ್ ಖ್ಯಾತಿಯ ಕರುಣಾನಿಧಿ ಇಬ್ಬರೂ ಇಲ್ಲದೆ ತಮಿಳುನಾಡಿನಲ್ಲಿ ನಡೆದ ಮೊದಲ ಚುನಾವಣೆ ಇದಾಗಿದ್ದು, 50 ವರ್ಷಗಳ ನಂತರ ಮೊದಲ ಭಾರಿಗೆ ದ್ರಾವಿಡ ನಾಡಿನಲ್ಲಿ ನಾಯಕನಿಲ್ಲದ ನಿರ್ವಾತ ಸ್ಥಿತಿಯನ್ನು ಕಂಡಿತ್ತು. ಜಯಲಲಿತಾ ಅಕಾಲಿಕ ಸಾವು ಹಾಗೂ ಆಡಳಿತರೂಢ ಎಡಿಎಂಕೆ ಪಕ್ಷದ ಗೊತ್ತು ಗುರಿ ಇಲ್ಲದ ಅನೇಕ ಯಡವಟ್ಟುಗಳ ಕಾರಣದಿಂದಾಗಿ 10 ವರ್ಷಗಳ ಬಳಿಕ ಕೊನೆಗೂ ಡಿಎಂಕೆ ಅಧಿಕಾರಕ್ಕೆ ಏರಿದೆ.

ಹಾಗೆ ನೋಡಿದರೆ ಚುನಾವಣೆಗೆ ಮುನ್ನವೇ ಎಲ್ಲಾ ಸಮೀಕ್ಷಾ ವರದಿಗಳೂ ಈ ಬಾರಿ ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಏರುವುದು ಹಾಗೂ ಕರುಣಾನಿಧಿ ಮಗ ಸ್ಟಾಲಿನ್ ಸಿಎಂ ಆಗುವುದು ಖಚಿತ ಎಂದು ಷರ ಬರೆದಿದ್ದವು. ಅದರಂತೆ ಕೊನೆಗೂ ಎಡಿಎಂಕೆ ಸ್ವಂತ ಬಲದಲ್ಲಿ ಸರ್ಕಾರ ನಿರ್ಮಿಸಿದೆ. ಎಂ.ಕೆ. ಸ್ಟಾಲಿನ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. 34 ಜನರ ಕ್ಯಾಬಿನೆಟ್ ಸಹ ರಚಿಸಲಾಗಿದ್ದು, ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಪ್ರಮುಖ 6 ಅಂಶಗಳಿಗೆ ಮೊದಲ ಸಹಿ ಹಾಕಲಾಗಿದೆ.

ತಮಿಳುನಾಡಿನಲ್ಲಿ ಸರ್ಕಾರ ರಚಿಸುತ್ತಿದ್ದಂತೆ ಎಂಕೆ ಸ್ಟಾಲಿನ್ ತೆಗೆದುಕೊಂಡಿರುವ ಪ್ರಮುಖ ನಿರ್ಧಾರಗಳು ಹಾಗೂ ದ್ವೇಷ ರಾಜಕಾರಣಕ್ಕೆ ಹೆಸರಾದ ತಮಿಳುನಾಡಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ವಿರೋಧ ಪಕ್ಷಗಳನ್ನೂ ಗೌರವಿಸಿದ ಅವರ ನಡೆ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ. ಈ ನಡೆ ರಾಷ್ಟ್ರ ಮಟ್ಟದಲ್ಲೂ ಚರ್ಚೆಯಾಗುತ್ತಿದೆ. ಹಾಗಾದರೆ ಏನದು ತಮಿಳುನಾಡಿನ ಇತ್ತೀಚಿನ ರಾಜಕೀಯ ಬೆಳವಣಿಗೆ?

ಸ್ಟಾಲಿನ್ ಸಹಿ ಹಾಕಿದ 6 ಯೋಜನೆಗಳು

1. ಇಡೀ ದೇಶದಾದ್ಯಂತ ಇಂದು ಕೊರೊನಾ ಸೋಂಕು ಮಿತಿಮೀರಿದೆ. ತಮಿಳುನಾಡಿನಲ್ಲೂ ಇದರ ಆರ್ಭಟ ಕಡಿಮೆ ಏನಲ್ಲ. ಹೀಗಾಗಿ ಹೊಸ ಸರ್ಕಾರ ರಚಿಸಿದ ತಕ್ಷಣ ಸಿಎಂ ಸ್ಟಾಲಿನ್ ಕ್ಯಾಬಿನೆಟ್ ಸಭೆಯಲ್ಲಿ ಕೊರೊನಾ ರೋಗ ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚಿಸಿ ತಮಿಳುನಾಡಿನಲ್ಲಿ ಲಾಕ್‌ಡೌನ್ ಘೋಷಣೆ ಮಾಡಿದ್ದರು. ಅಲ್ಲದೆ, ಜನರಿಗೆ ಪರಿಹಾರದ ಜೊತೆಗೆ ಮನೆ ಮನೆ ಆಹಾರದ ರೇಷನ್ ಕಿಟ್ ತಲುಪಿಸುವ ನಿರ್ಧಾರ ಮನೆ ಮಾತಾಗಿತ್ತು.

2. ಕೊರೊನಾ ರೋಗಿಗಳಿಗೆ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಹಾಗೂ ಉಚಿತ ಚಿಕಿತ್ಸೆ ನೀಡಬೇಕು. ಜಿಲ್ಲಾ ಉಸ್ತುವಾರಿ ಸಚಿವ ಆಯಾ ಜಿಲ್ಲೆಗಳಲ್ಲಿಗೆ ಮುಕ್ಕಾಂ ಹೂಡಿ ಜಿಲ್ಲೆಗಳ ಎಲ್ಲಾ ಆಸ್ಪತ್ರೆಗಳು ಹಾಗು ಅಲ್ಲಿಗೆ ಬರುವ ರೋಗಿಗಳ ತಕ್ಷಣದ ಚಿಕಿತ್ಸೆಯನ್ನು ಮೇಲ್ವಿಚಾರಣೆ ಮಾಡಬೇಕು.

3. ಅನೇಕ ಬಿಕ್ಕಟ್ಟುಗಳ ಮಧ್ಯೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಆಮ್ಲಜನಕವನ್ನು ಪೂರೈಸಲಾಗುತ್ತಿದೆ. ಈ ಆಮ್ಲಜನಕವನ್ನು ಸರಿಯಾಗಿ ಬಳಸಲಾಗಿದೆಯೆ ಮತ್ತು ಯಾವುದೇ ಸಂದರ್ಭದಲ್ಲೂ ಆಮ್ಲಜನಕ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು.

4. ಚೆನ್ನೈನಲ್ಲಿ ಮಾತ್ರವಲ್ಲ, ಕೊಯಮತ್ತೂರು, ಸೇಲಂ, ತಿರುಚ್ಚಿ, ಮಧುರೈ ಮತ್ತು ತಿರುನೆಲ್ವೇಲಿ ಸೇರಿದಂತೆ ತಮಿಳುನಾಡಿನ ಪ್ರಮುಖ ನಗರಗಳಲ್ಲಿ ಕೋವಿಡ್ ಔಷಧಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಇದನ್ನು ಕೂಡಲೇ ತಡೆಯಬೇಕು. ತಪ್ಪಿತಸ್ತರನ್ನು ಬಂಧಿಸಬೇಕು.

PC : Hindustan Times

5. ಕೊರೊನಾ ಲಸಿಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಲ್ಲರೂ ಲಸಿಕೆ ಪಡೆಯುವಂತಾಗಬೇಕು ಹಾಗೂ ಈ ಲಸಿಕೆಯನ್ನು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಈ ಬಗ್ಗೆ ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಬೇಕು.

6. ರಾಜ್ಯ ನಗರ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ.

ಸ್ಟಾಲಿನ್ ಮುಖ್ಯಮಂತ್ರಿಯಾಗಿ ತನ್ನ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಈ ಎಲ್ಲಾ ತೀರ್ಮಾನಗಳನ್ನೂ ತೆಗೆದುಕೊಳ್ಳಲಾಗಿದೆ. ಸಿಎಂ ಆಜ್ಞೆಯಂತೆ ಎಲ್ಲಾ ಸಚಿವರು ಕೊರೊನಾ ನಿಯಂತ್ರಿಸುವ ಮತ್ತು ಜನರಿಗೆ ಉಚಿತ ಚಿಕಿತ್ಸೆ ನೀಡುವ ಸಲುವಾಗಿ ತಮ್ಮ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಕೊರೊನಾ ಕಾಲದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಪ್ರಾಥಮಿಕ ವರದಿಗಳು ಮೂಡಿವೆ.

ಇನ್ನೂ ಲಾಕ್‌ಡೌನ್ ಸಂದರ್ಭದಲ್ಲಿ ಬಡ ಜನರಿಗೆ ಸಮಸ್ಯೆ ಆಗಬಾರದು ಎಂದು 5 ಸಾವಿರ ರೂ ಪರಿಹಾರ ಧನ ಘೋಷಣೆ ಮಾಡಿರುವುದು ಮತ್ತು ಆಹಾರ ಸಾಮಗ್ರಿಗಳನ್ನು ನೀಡಿರುವುದು ಜನರ ಮೆಚ್ಚುಗೆಗೆ ಕಾರಣವಾಗಿದೆ. ಇನ್ನು ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣದ ನಿರ್ಧಾರವನ್ನು ಇಡೀ ದ್ರಾವಿಡ ಸಮಾಜ ಸ್ವಾಗತಿಸಿದೆ. ಈ ಯೋಜನೆ ಬಡ ಮತ್ತು ಕೂಲಿ ಕಾರ್ಮಿಕ ಮಹಿಳೆಯರಿಗೆ ವರದಾನವಾಗಲಿದೆ ಎಂದು ಬಣ್ಣಿಸಲಾಗಿದೆ.

ದ್ವೇಷ ರಾಜಕಾರಣಕ್ಕೆ ಪೂರ್ಣ ವಿರಾಮ

ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನವೇ ದ್ವೇಷ ರಾಜಕಾರಣವನ್ನು ರಾಷ್ಟ್ರಕ್ಕೆ ಪರಿಚಯಿಸಿದ ಖ್ಯಾತಿ ತಮಿಳುನಾಡಿಗೆ ಇದೆ. ಪೆರಿಯಾರ್ ಕಾಲದ ದ್ರಾವಿಡ ಚಳುವಳಿಗಳ ಕಾರಣಕ್ಕಾಗಿ ವೈಚಾರಿಕ ನಾಡು ಎಂಬ ಖ್ಯಾತಿಯನ್ನು ತಮಿಳುನಾಡು ಗಳಿಸಿದ್ದರೂ ಸಹ ದ್ವೇಷ ರಾಜಕಾರಣಕ್ಕೆ ಮೊದಲ ಬೀಜ ಭಿತ್ತಿದ ಕುಖ್ಯಾತಿಯೂ ತಮಿಳುನಾಡಿಗೆ ಇದೆ ಎಂಬುದು ಉಲ್ಲೇಖಾರ್ಹ.

ಡಿಎಂಕೆ ಮತ್ತು ಎಡಿಎಂಕೆ ಎರಡೂ ಪಕ್ಷಗಳೂ ಪೆರಿಯಾರ್ ಸಿದ್ದಾಂತದ ಅಡಿಯಲ್ಲಿ ರೂಪುಗೊಂಡಿದ್ದರೂ ಸಹ ಕರುಣಾನಿಧಿ ಮತ್ತು ಜಯಲಲಿತಾ ಅವರಿಗೆ ಒಬ್ಬರ ಮುಖ ಕಂಡರೆ ಒಬ್ಬರಿಗೆ ಆಗದ ಪರಿಸ್ಥಿತಿ ಅಲ್ಲಿತ್ತು. ಕರುಣಾನಿಧಿ ಸಿಎಂ ಆದರೆ ಜಯಲಲಿತಾ ಅವರನ್ನು ಬಂಧಿಸುವುದು, ಜಯಲಲಿತಾ ಸಿಎಂ ಆದರೆ ಕರುಣಾನಿಧಿಯನ್ನು ಬಂಧಿಸುವುದು ಸಾಮಾನ್ಯ ಘಟನೆಯಾಗಿತ್ತು. ಇನ್ನು ಕಾರ್ಯಕರ್ತರ ನಡುವಿನ ಅನೇಕ ಜಗಳಗಳು ಕೊಲೆಯಲ್ಲಿ ಅಂತ್ಯವಾದ ಘಟನೆಗಳೂ ಇವೆ.

ಆದರೆ, ಈ ಚುನಾವಣೆ ಫಲಿತಾಂಶದ ನಂತರ ಮೊದಲ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಸ್ಟಾಲಿನ್ ಈ ದ್ವೇಷ ರಾಜಕಾರಣಕ್ಕೆ ಪೂರ್ಣ ವಿರಾಮ ಹಾಕಲು ಮುಂದಾಗಿದ್ದಾರೆ. ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಹೊಸ ಸಿಎಂ ಪ್ರಮಾಣ ವಚನ ಸಮಾರಂಭಕ್ಕೆ ವಿರೋಧ ಪಕ್ಷಗಳಿಗೆ ಆಹ್ವಾನವೇ ಇರುವುದಿಲ್ಲ. ಆದರೆ, ಈ ಬಾರಿ ಸ್ಟಾಲಿನ್ ಮಾಜಿ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಹಾಗೂ ಮಾಜಿ ಡಿಸಿಎಂ ಓ ಪನ್ನೀರ್ ಸೆಲ್ವಂ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರನ್ನು ತಮ್ಮ ಸಮಾರಂಭಕ್ಕೆ ಖುದ್ದು ಆಹ್ವಾನಿಸಿದ್ದರು. ಅಲ್ಲದೆ, ಸಮಾರಂಭದ ಬಳಿಕ ಅವರ ಪಕ್ಕದಲ್ಲಿ ಕುಳಿತು ಸಮಾಲೋಚನೆ ನಡೆಸಿದ್ದ ದೃಶ್ಯ ಅನೇಕರಲ್ಲಿ ಅಚ್ಚರಿಗೆ ಕಾರಣವಾಗಿತ್ತು.

ಈ ವೇಳೆ ಮಾಧ್ಯಮಗಳ ಎದುರು ಸ್ಪಷ್ಟವಾಗಿ ಒಂದು ಮಾಹಿತಿಯನ್ನೂ ರವಾನಿಸಿದ್ದ ಸ್ಟಾಲಿನ್, ಡಿಎಂಕೆ ಪಕ್ಷ ಬೇರೆ, ಸರ್ಕಾರವೇ ಬೇರೆ. ಇಂದು ಅಧಿಕಾರ ಸ್ವೀಕರಿಸಿರುವ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸಲಿರುವ ಸರ್ಕಾರವೇ ಹೊರತು, ಡಿಎಂಕೆ ಪಕ್ಷಕ್ಕೆ ಸೀಮಿತವಾದ ಸರ್ಕಾರವಲ್ಲ ಎಂದು ಹೇಳುವ ಮೂಲಕ ತಮಿಳುನಾಡಿನಲ್ಲಿ ಹೊಸ ಇತಿಹಾಸ ನಿರ್ಮಿಸುವ ಹಾಗೂ ಉತ್ತಮ ಆಡಳಿತ ನೀಡುವ ಭರವಸೆಯನ್ನು ನೀಡಿದ್ದಾರೆ.

ಇದಕ್ಕೆ ಪೂರಕವಾಗಿ ಅನುಭವಿ ಹಾಗೂ ಸಾಮರ್ಥ್ಯಶಾಲಿಗಳಿಗೆ ಸಚಿವ ಸ್ಥಾನ ನೀಡಿದ್ದಾರೆ. ಹಣಕಾಸು ಇಲಾಖೆಯನ್ನು ಮುಖ್ಯಮಂತ್ರಿಗಳೇ ತಮ್ಮ ಬಳಿ ಇಟ್ಟುಕೊಳ್ಳುವುದು ಸಾಮಾನ್ಯ ಸಂಗತಿ. ಆದರೆ, ಸ್ಟಾಲಿನ್ ಮಧುರೈ ಕ್ಷೇತ್ರದ ಯುವ ಶಾಸಕ ಪಳನಿವೇಲ್ ತ್ಯಾಗರಾಜನ್ ಅವರಿಗೆ ಮೊದಲ ಬಾರಿಗೆ ಸಚಿವ ಸ್ಥಾನದ ಜೊತೆಗೆ ಹಣಕಾಸು ಇಲಾಖೆಯನ್ನು ನೀಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಡೆಯನ್ನು ಟೀಕಿಸುತ್ತಾ, ಸುಸ್ಥಿರ ಆರ್ಥಿಕತೆಯ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದ ಪಳನಿವೇಲ್ ತ್ಯಾಗರಾಜನ್ ಅವರಿಗೆ ಅನಿರೀಕ್ಷಿತವಾಗಿಯೇ ಹಣಕಾಸು ಇಲಾಖೆ ಸಿಕ್ಕಿದ್ದು, ಜನರಿಗೂ ಸಹ ಅವರ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಅಲ್ಲದೆ, ಸ್ಟಾಲಿನ್ ಅವರ ಈ ನಡೆಯೂ ಸಹ ಕುತೂಹಲ ಮೂಡಿಸಿದೆ.

ಸಿಎಂ ಸ್ಥಾನಕ್ಕೆ ಏರಿದ ತಕ್ಷಣ ಇಂತಹ ಅಭಿವೃದ್ಧಿ ಯೋಜನೆಗಳನ್ನು ಘೋಷಿಸುವುದು, ಜನರ ಹಾಗೂ ಮಾಧ್ಯಮಗಳು ಗಮನ ತನ್ನಡೆ ಸೆಯುವಂತೆ ನೋಡಿಕೊಳ್ಳುವುದು ತಮಿಳುನಾಡಿನ ರಾಜಕಾರಣದಲ್ಲಿ ಹೊಸ ವಿಚಾರವೇನಲ್ಲ. ಈ ಹಿಂದೆ ಕೂಡ ಸಾಕಷ್ಟು ಇಂತಹ ನಿದರ್ಶನಗಳು ಕಣ್ಣ ಮುಂದಿವೆ. ಎಂ.ಕೆ. ಸ್ಟಾಲಿನ್ ಸಹ ಅದನ್ನೇ ಮಾಡುತ್ತಿದ್ದಾರೆ. ಆದರೆ, ಈ ಜನಹಿತ ಆಡಳಿತ ಹೀಗೆ ಮುಂದುವರೆಯುತ್ತದೆಯೇ? ಹೊಸ ಸಿಎಂ ಸ್ಟಾಲಿನ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನೀಡುತ್ತಾರೆಯೇ? ನಾಯಕ ನಿರ್ವಾತ ಸ್ಥಿತಿ ಅನುಭವಿಸುತ್ತಿರುವ ತಮಿಳುನಾಡಿಗೆ ಭವಿಷ್ಯವಾಗಿ ರೂಪುಗೊಳ್ಳುತ್ತಾರೆಯೇ? ಎಂಬುದು ಇದೀಗ ಎಲ್ಲರ ಮುಂದಿರುವ ಪ್ರಶ್ನೆ.


ಇದನ್ನೂ ಓದಿ: ತಮಿಳುನಾಡು: ಸ್ಟಾಲಿನ್ ಸಂಪುಟದಲ್ಲಿ ಪುರುಷರದೇ ದರ್ಬಾರು – ಮಹಿಳೆಯರಿಗೆ ಕನಿಷ್ಠ ಪ್ರಾತಿನಿಧ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...