Homeಮುಖಪುಟತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

- Advertisement -
- Advertisement -

ತಮಿಳುನಾಡು ಚುನಾವಣಾ ದಿನ ದಿನಕ್ಕೂ ರಂಗೇರುತ್ತಿದೆ. ಸಿನಿಮಾ ತಾರೆಯರಿಂದ, ಐಪಿಎಸ್ ಅಧಿಕಾರಿಗಳಿಂದ ಕುತೂಹಲ ಗಳಿಸಿಕೊಂಡಿರುವ ಚುನಾವಣೆಗೆ ಹೊಸ ಹೊಸ ಚುನಾವಣಾ ತಂತ್ರಗಳು ಸೇರಿಕೊಳ್ಳುತ್ತಿವೆ. ಈಗ ಎಐಎಡಿಎಂಕೆ ಅಭ್ಯರ್ಥಿಯೊಬ್ಬರು ಮತದಾರರ ಬಟ್ಟೆ ಒಗೆಯುವ ಮೂಲಕ ಸುದ್ದಿಯಾಗಿದ್ದಾರೆ.

ನಾಗಪಟ್ಟಣಂ ವಿಧಾನಸಭಾ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ತಂಗಾ ಕಾತಿರಾವನ್, ಚುನಾವಣಾ ಪ್ರಚಾರದಲ್ಲಿ ಮಹಿಳೆಯೊಬ್ಬರ ಬಟ್ಟೆಗಳನ್ನು ತೊಳೆದು ಕೊಟ್ಟಿದ್ದಾರೆ. ಈ ಮೂಲಕ ತಮ್ಮ ಪ್ರಣಾಳಿಕೆಯಲ್ಲಿರುವ ವಾಷಿಂಗ್ ಮಷಿನ್ ಕೊಡುವ ಭರವಸೆಯನ್ನು ನೆನಪಿಸಿದ್ದಾರೆ.

ಎಐಎಡಿಎಂಕೆ ಅಭ್ಯರ್ಥಿ ತಂಗಾ ಕಾತಿರಾವನ್ ನಾಗೋರ್ ಬಳಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದರು. ಪಕ್ಷದ ಕಾರ್ಯಕರ್ತರು ವಂಡಿಪೆಟ್ಟೈನಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾಗ, ಒಬ್ಬ ಮಹಿಳೆ ತನ್ನ ಕುಟುಂಬ ಸದಸ್ಯರ ಬಟ್ಟೆ ಒಗೆಯುವುದನ್ನು ನೋಡಿದ ಕಾತಿ‌ರಾವನ್ ಮಹಿಳೆಯ ಬಳಿ ತಾವು ಬಟ್ಟೆ ಒಗೆದುಕೊಡುವುದಾಗಿ ತಿಳಿಸಿದ್ದಾರೆ. ಮೊದಲಿಗೆ ಬೇಡ ಎಂದ ಮಹಿಳೆ ನಂತರ ಕೆಲವು ಬಟ್ಟೆಗಳನ್ನು ಒಗೆಯಲು ನೀಡಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಫೈನಲ್ ಲಿಸ್ಟ್ ಬಿಡುಗಡೆ: ಮಿಥುನ್ ಚಕ್ರವರ್ತಿಗೆ ಟಿಕೆಟ್ ಇಲ್ಲ!

ಅಭ್ಯರ್ಥಿ ಕಾತಿರಾವನ್ ಕೆಲವು ನಿಮಿಷಗಳ ಕಾಲ ಬಟ್ಟೆ ತೊಳೆದಿದ್ದಾರೆ. ನಂತರ ಬಟ್ಟೆ ಪಕ್ಕದಲ್ಲಿ ಇದ್ದ ಕೆಲವು ಪಾತ್ರೆಗಳನ್ನು ತೊಡೆದು ಇಟ್ಟಿದ್ದಾರೆ. ಕಾತಿರಾವನ್ ಕೆಲಸ ನೋಡಿ ಸ್ಥಳೀಯ ನಿವಾಸಿಗಳು ಆಶ್ಚರ್ಯಪಟ್ಟಿದ್ದಾರೆ. ಜೊತೆಗೆ ಗಾಬರಿ ಕೂಡ ಆಗಿದ್ದಾರೆ ಎಂದು ವರದಿಯಾಗಿದೆ.

ಬಟ್ಟೆ ತೊಳೆದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾತಿರಾವನ್, “ನಮ್ಮ ಅಮ್ಮನ ಸರ್ಕಾರವು ಮತ್ತೆ ಅಧಿಕಾರಕ್ಕೆ ಬಂದ ನಂತರ ಬಟ್ಟೆಗಳನ್ನು ತೊಳೆಯುವ ಯಂತ್ರಗಳನ್ನು ನೀಡುವ ಭರವಸೆ ನೀಡಿದ್ದೇವೆ. ಮಹಿಳೆಯರು ಮತ್ತು ಗೃಹಿಣಿಯರಿಗೆ ವಾಷಿಂಗ್ ಮಷಿನ್‌ಗಳನ್ನು ನೀಡಲಾಗುತ್ತದೆ. ಇದನ್ನೂ ಸೂಚಿಸಲು ಮತ್ತು ಸಾಬೀತು ಪಡಿಸಲು ನಾನು ಬಟ್ಟೆಯನ್ನು ತೊಳೆದಿದ್ದೇನೆ” ಎಂದಿದ್ದಾರೆ.

50 ವರ್ಷದ ಎಐಎಡಿಎಂಕೆ ಅಭ್ಯರ್ಥಿ ಕಾತಿರಾವನ್, ನಾಗಪಟ್ಟಣಂ ಪಟ್ಟಣ ಕಾರ್ಯದರ್ಶಿಯಾಗಿದ್ದಾರೆ. ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಪಕ್ಷಕ್ಕಾಗಿ ಅವರು ಮಾಡಿರುವ ಕೆಲಸವನ್ನು ಗುರುತಿಸಿ ಈ ಬಾರಿ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 6ರಂದು ಮತದಾನವನ್ನು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ.  ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ದಲಿತ ಆರ್‌ಟಿಐ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ: ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...