Homeಮುಖಪುಟತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

- Advertisement -
- Advertisement -

ತಮಿಳುನಾಡು ಚುನಾವಣಾ ದಿನ ದಿನಕ್ಕೂ ರಂಗೇರುತ್ತಿದೆ. ಸಿನಿಮಾ ತಾರೆಯರಿಂದ, ಐಪಿಎಸ್ ಅಧಿಕಾರಿಗಳಿಂದ ಕುತೂಹಲ ಗಳಿಸಿಕೊಂಡಿರುವ ಚುನಾವಣೆಗೆ ಹೊಸ ಹೊಸ ಚುನಾವಣಾ ತಂತ್ರಗಳು ಸೇರಿಕೊಳ್ಳುತ್ತಿವೆ. ಈಗ ಎಐಎಡಿಎಂಕೆ ಅಭ್ಯರ್ಥಿಯೊಬ್ಬರು ಮತದಾರರ ಬಟ್ಟೆ ಒಗೆಯುವ ಮೂಲಕ ಸುದ್ದಿಯಾಗಿದ್ದಾರೆ.

ನಾಗಪಟ್ಟಣಂ ವಿಧಾನಸಭಾ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ತಂಗಾ ಕಾತಿರಾವನ್, ಚುನಾವಣಾ ಪ್ರಚಾರದಲ್ಲಿ ಮಹಿಳೆಯೊಬ್ಬರ ಬಟ್ಟೆಗಳನ್ನು ತೊಳೆದು ಕೊಟ್ಟಿದ್ದಾರೆ. ಈ ಮೂಲಕ ತಮ್ಮ ಪ್ರಣಾಳಿಕೆಯಲ್ಲಿರುವ ವಾಷಿಂಗ್ ಮಷಿನ್ ಕೊಡುವ ಭರವಸೆಯನ್ನು ನೆನಪಿಸಿದ್ದಾರೆ.

ಎಐಎಡಿಎಂಕೆ ಅಭ್ಯರ್ಥಿ ತಂಗಾ ಕಾತಿರಾವನ್ ನಾಗೋರ್ ಬಳಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದರು. ಪಕ್ಷದ ಕಾರ್ಯಕರ್ತರು ವಂಡಿಪೆಟ್ಟೈನಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾಗ, ಒಬ್ಬ ಮಹಿಳೆ ತನ್ನ ಕುಟುಂಬ ಸದಸ್ಯರ ಬಟ್ಟೆ ಒಗೆಯುವುದನ್ನು ನೋಡಿದ ಕಾತಿ‌ರಾವನ್ ಮಹಿಳೆಯ ಬಳಿ ತಾವು ಬಟ್ಟೆ ಒಗೆದುಕೊಡುವುದಾಗಿ ತಿಳಿಸಿದ್ದಾರೆ. ಮೊದಲಿಗೆ ಬೇಡ ಎಂದ ಮಹಿಳೆ ನಂತರ ಕೆಲವು ಬಟ್ಟೆಗಳನ್ನು ಒಗೆಯಲು ನೀಡಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಫೈನಲ್ ಲಿಸ್ಟ್ ಬಿಡುಗಡೆ: ಮಿಥುನ್ ಚಕ್ರವರ್ತಿಗೆ ಟಿಕೆಟ್ ಇಲ್ಲ!

ಅಭ್ಯರ್ಥಿ ಕಾತಿರಾವನ್ ಕೆಲವು ನಿಮಿಷಗಳ ಕಾಲ ಬಟ್ಟೆ ತೊಳೆದಿದ್ದಾರೆ. ನಂತರ ಬಟ್ಟೆ ಪಕ್ಕದಲ್ಲಿ ಇದ್ದ ಕೆಲವು ಪಾತ್ರೆಗಳನ್ನು ತೊಡೆದು ಇಟ್ಟಿದ್ದಾರೆ. ಕಾತಿರಾವನ್ ಕೆಲಸ ನೋಡಿ ಸ್ಥಳೀಯ ನಿವಾಸಿಗಳು ಆಶ್ಚರ್ಯಪಟ್ಟಿದ್ದಾರೆ. ಜೊತೆಗೆ ಗಾಬರಿ ಕೂಡ ಆಗಿದ್ದಾರೆ ಎಂದು ವರದಿಯಾಗಿದೆ.

ಬಟ್ಟೆ ತೊಳೆದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾತಿರಾವನ್, “ನಮ್ಮ ಅಮ್ಮನ ಸರ್ಕಾರವು ಮತ್ತೆ ಅಧಿಕಾರಕ್ಕೆ ಬಂದ ನಂತರ ಬಟ್ಟೆಗಳನ್ನು ತೊಳೆಯುವ ಯಂತ್ರಗಳನ್ನು ನೀಡುವ ಭರವಸೆ ನೀಡಿದ್ದೇವೆ. ಮಹಿಳೆಯರು ಮತ್ತು ಗೃಹಿಣಿಯರಿಗೆ ವಾಷಿಂಗ್ ಮಷಿನ್‌ಗಳನ್ನು ನೀಡಲಾಗುತ್ತದೆ. ಇದನ್ನೂ ಸೂಚಿಸಲು ಮತ್ತು ಸಾಬೀತು ಪಡಿಸಲು ನಾನು ಬಟ್ಟೆಯನ್ನು ತೊಳೆದಿದ್ದೇನೆ” ಎಂದಿದ್ದಾರೆ.

50 ವರ್ಷದ ಎಐಎಡಿಎಂಕೆ ಅಭ್ಯರ್ಥಿ ಕಾತಿರಾವನ್, ನಾಗಪಟ್ಟಣಂ ಪಟ್ಟಣ ಕಾರ್ಯದರ್ಶಿಯಾಗಿದ್ದಾರೆ. ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಪಕ್ಷಕ್ಕಾಗಿ ಅವರು ಮಾಡಿರುವ ಕೆಲಸವನ್ನು ಗುರುತಿಸಿ ಈ ಬಾರಿ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 6ರಂದು ಮತದಾನವನ್ನು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ.  ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ದಲಿತ ಆರ್‌ಟಿಐ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ: ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...