Homeಮುಖಪುಟತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

- Advertisement -
- Advertisement -

ತಮಿಳುನಾಡು ಚುನಾವಣಾ ದಿನ ದಿನಕ್ಕೂ ರಂಗೇರುತ್ತಿದೆ. ಸಿನಿಮಾ ತಾರೆಯರಿಂದ, ಐಪಿಎಸ್ ಅಧಿಕಾರಿಗಳಿಂದ ಕುತೂಹಲ ಗಳಿಸಿಕೊಂಡಿರುವ ಚುನಾವಣೆಗೆ ಹೊಸ ಹೊಸ ಚುನಾವಣಾ ತಂತ್ರಗಳು ಸೇರಿಕೊಳ್ಳುತ್ತಿವೆ. ಈಗ ಎಐಎಡಿಎಂಕೆ ಅಭ್ಯರ್ಥಿಯೊಬ್ಬರು ಮತದಾರರ ಬಟ್ಟೆ ಒಗೆಯುವ ಮೂಲಕ ಸುದ್ದಿಯಾಗಿದ್ದಾರೆ.

ನಾಗಪಟ್ಟಣಂ ವಿಧಾನಸಭಾ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ತಂಗಾ ಕಾತಿರಾವನ್, ಚುನಾವಣಾ ಪ್ರಚಾರದಲ್ಲಿ ಮಹಿಳೆಯೊಬ್ಬರ ಬಟ್ಟೆಗಳನ್ನು ತೊಳೆದು ಕೊಟ್ಟಿದ್ದಾರೆ. ಈ ಮೂಲಕ ತಮ್ಮ ಪ್ರಣಾಳಿಕೆಯಲ್ಲಿರುವ ವಾಷಿಂಗ್ ಮಷಿನ್ ಕೊಡುವ ಭರವಸೆಯನ್ನು ನೆನಪಿಸಿದ್ದಾರೆ.

ಎಐಎಡಿಎಂಕೆ ಅಭ್ಯರ್ಥಿ ತಂಗಾ ಕಾತಿರಾವನ್ ನಾಗೋರ್ ಬಳಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದರು. ಪಕ್ಷದ ಕಾರ್ಯಕರ್ತರು ವಂಡಿಪೆಟ್ಟೈನಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾಗ, ಒಬ್ಬ ಮಹಿಳೆ ತನ್ನ ಕುಟುಂಬ ಸದಸ್ಯರ ಬಟ್ಟೆ ಒಗೆಯುವುದನ್ನು ನೋಡಿದ ಕಾತಿ‌ರಾವನ್ ಮಹಿಳೆಯ ಬಳಿ ತಾವು ಬಟ್ಟೆ ಒಗೆದುಕೊಡುವುದಾಗಿ ತಿಳಿಸಿದ್ದಾರೆ. ಮೊದಲಿಗೆ ಬೇಡ ಎಂದ ಮಹಿಳೆ ನಂತರ ಕೆಲವು ಬಟ್ಟೆಗಳನ್ನು ಒಗೆಯಲು ನೀಡಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಫೈನಲ್ ಲಿಸ್ಟ್ ಬಿಡುಗಡೆ: ಮಿಥುನ್ ಚಕ್ರವರ್ತಿಗೆ ಟಿಕೆಟ್ ಇಲ್ಲ!

ಅಭ್ಯರ್ಥಿ ಕಾತಿರಾವನ್ ಕೆಲವು ನಿಮಿಷಗಳ ಕಾಲ ಬಟ್ಟೆ ತೊಳೆದಿದ್ದಾರೆ. ನಂತರ ಬಟ್ಟೆ ಪಕ್ಕದಲ್ಲಿ ಇದ್ದ ಕೆಲವು ಪಾತ್ರೆಗಳನ್ನು ತೊಡೆದು ಇಟ್ಟಿದ್ದಾರೆ. ಕಾತಿರಾವನ್ ಕೆಲಸ ನೋಡಿ ಸ್ಥಳೀಯ ನಿವಾಸಿಗಳು ಆಶ್ಚರ್ಯಪಟ್ಟಿದ್ದಾರೆ. ಜೊತೆಗೆ ಗಾಬರಿ ಕೂಡ ಆಗಿದ್ದಾರೆ ಎಂದು ವರದಿಯಾಗಿದೆ.

ಬಟ್ಟೆ ತೊಳೆದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾತಿರಾವನ್, “ನಮ್ಮ ಅಮ್ಮನ ಸರ್ಕಾರವು ಮತ್ತೆ ಅಧಿಕಾರಕ್ಕೆ ಬಂದ ನಂತರ ಬಟ್ಟೆಗಳನ್ನು ತೊಳೆಯುವ ಯಂತ್ರಗಳನ್ನು ನೀಡುವ ಭರವಸೆ ನೀಡಿದ್ದೇವೆ. ಮಹಿಳೆಯರು ಮತ್ತು ಗೃಹಿಣಿಯರಿಗೆ ವಾಷಿಂಗ್ ಮಷಿನ್‌ಗಳನ್ನು ನೀಡಲಾಗುತ್ತದೆ. ಇದನ್ನೂ ಸೂಚಿಸಲು ಮತ್ತು ಸಾಬೀತು ಪಡಿಸಲು ನಾನು ಬಟ್ಟೆಯನ್ನು ತೊಳೆದಿದ್ದೇನೆ” ಎಂದಿದ್ದಾರೆ.

50 ವರ್ಷದ ಎಐಎಡಿಎಂಕೆ ಅಭ್ಯರ್ಥಿ ಕಾತಿರಾವನ್, ನಾಗಪಟ್ಟಣಂ ಪಟ್ಟಣ ಕಾರ್ಯದರ್ಶಿಯಾಗಿದ್ದಾರೆ. ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಪಕ್ಷಕ್ಕಾಗಿ ಅವರು ಮಾಡಿರುವ ಕೆಲಸವನ್ನು ಗುರುತಿಸಿ ಈ ಬಾರಿ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 6ರಂದು ಮತದಾನವನ್ನು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ.  ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ದಲಿತ ಆರ್‌ಟಿಐ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ: ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...