HomeUncategorizedತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರಿಂದ ಮುಷ್ಕರ; 80% ಉತ್ಪಾದನೆಗೆ ಹೊಡೆತ!

ತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರಿಂದ ಮುಷ್ಕರ; 80% ಉತ್ಪಾದನೆಗೆ ಹೊಡೆತ!

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್ಸಂಗ್ ಇಂಡಿಯಾ ಕಂಪೆನಿಯ ಕಾರ್ಮಿಕರ ಮುಷ್ಕರವನ್ನು ಮುಂದುವರೆಸಿದ್ದು, ಒಕ್ಕೂಟದ ಮಾನ್ಯತೆ ನೀಡುವಂತೆ ಮತ್ತು ಸ್ವಾಭಿಮಾನಕ್ಕಾಗಿ ಈ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ಮತ್ತೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್‌ 9ರಿಂದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಡಿಮೆ ಕೆಲಸದ ಸಮಯ ಮತ್ತು ಪರಿಷ್ಕೃತ ವೇತನ ಸೇರಿದಂತೆ ಹಲವಾರು ಬೇಡಿಕೆಗಳನ್ನು ಕಾರ್ಮಿಕರು ಕಂಪೆನಿಯ ಮುಂದಿಟ್ಟಿದ್ದಾರೆ. ಸಿಐಟಿಯು ಬೆಂಬಲಿತ ಒಕ್ಕೂಟದ ಮಾನ್ಯತೆ ಪ್ರಮುಖ ಒತ್ತಾಯವಾಗಿದ್ದು, ಕಾರ್ಖಾನೆಯೊಳಗೆ ಕಂಪನಿಯ ಅಧಿಕಾರಿಗಳು ಗೌರವದಿಂದ ವರ್ತಿಸುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂಓದಿ: ಗೌರಿ ಲಂಕೇಶ್ ಅವರಿಗೆ ALIFA ಬಹಿರಂಗ ಪತ್ರ | ‘ಬೆಂಕಿ ಮತ್ತು ಹೂವುವಿನಂತ ಗೌರಿ!’

“ನಮ್ಮೆಲ್ಲರ ಗುರುತಿನ ಚೀಟಿಗಳಲ್ಲಿ ನಮ್ಮ ಹೆಸರುಗಳಿವೆ ಮತ್ತು ನಮ್ಮಲ್ಲಿ ಹೆಚ್ಚಿನವರು ಹಲವಾರು ವರ್ಷಗಳಿಂದ ಇಲ್ಲಿ ಕೆಲಸ ಮಾಡಿದ್ದೇವೆ ಆದರೆ ನಮ್ಮ ತಕ್ಷಣದ ಮೇಲ್ವಿಚಾರಣಾ ಎಂಜಿನಿಯರ್‌ಗಳು ಎಂದಿಗೂ ನಮ್ಮ ಹೆಸರನ್ನು ಕರೆಯುವುದಿಲ್ಲ” ಎಂದು ಅಸೆಂಬ್ಲಿ ಆಪರೇಟರ್ ಆಗಿ ಕೆಲಸ ಮಾಡುವ ಶ್ರೀನಿವಾಸನ್ (ಹೆಸರು ಬದಲಾಯಿಸಲಾಗಿದೆ) ಹೇಳಿದ್ದಾರೆ.

ಮುಷ್ಕರದಲ್ಲಿ ಭಾಗವಹಿಸುವ ಅದರ 1800 ಕಾರ್ಮಿಕರಲ್ಲಿ ಹೆಚ್ಚಿನ 1300 ಮಂದಿ ಅಸೆಂಬ್ಲಿ ಆಪರೇಟರ್‌ಗಳಾಗಿ ಕೆಲಸ ಮಾಡುತ್ತಾರೆ. ಇವರಲ್ಲಿ ಸುಮಾರು 50-60% ಮಹಿಳೆಯರಾಗಿದ್ದು, ಯಾವುದೇ ಮಹಿಳಾ ಕಾರ್ಮಿಕರು ಪ್ರತಿಭಟನೆಯ ಭಾಗವಾಗಿಲ್ಲದಿದ್ದರೂ, ಪ್ರತಿಭಟನೆಯನ್ನು ಬೆಂಬಲಿಸಲು ಅರ್ಧದಷ್ಟು ಜನರು ಕೆಲಸಕ್ಕೆ ಹಾಜರಾಗಲಿಲ್ಲ ಎಂದು ಸಿಐಟಿಯು ಸಂಘಟಕರು ಹೇಳಿದ್ದಾರೆ.

ಕಾರ್ಮಿಕರು ವರ್ಷಕ್ಕೆ 20 ವೈಯಕ್ತಿಕ ರಜೆಗಳು ಮತ್ತು 7 ಕ್ಯಾಶುಯಲ್ ರಜೆಗಳಿಗೆ ಅರ್ಹರಾಗಿರುತ್ತಾರೆ. ಆದರೆ ಅವುಗಳನ್ನು ಬಳಸಲು ಯಾವಾಗಲೂ ಅನುಮತಿಸಲಾಗುವುದಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.ತಮಿಳುನಾಡು

ಇದನ್ನೂಓದಿ: ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ : ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ

“ಕುಟುಂಬದಲ್ಲಿ ಸಾವಿನ ಸಂದರ್ಭದಲ್ಲಿ ಸಹ, ನಮಗೆ ಮೂರು ಅಥವಾ ನಾಲ್ಕನೇ ದಿನ ಫೋನ್ ಕರೆಗಳು ಬರುತ್ತವೆ. ಕರೆ ಮಾಡಿ, ಯಾವಾಗ ಕೆಲಸಕ್ಕೆ ಮರಳುತ್ತೀರ ಎಂದು ಅವರು ಕೇಳುತ್ತಾರೆ” ಎಂದು ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುವ ಪ್ರವೀಣ್ (ಹೆಸರು ಬದಲಾಯಿಸಲಾಗಿದೆ) ಹೇಳಿದ್ದಾರೆ.

ಕಾರ್ಖಾನೆಯಲ್ಲಿ ಕಾರ್ಮಿಕರು ಈಗ ಅಧಿಕೃತವಾಗಿ ದಿನಕ್ಕೆ ಒಂಬತ್ತು ಗಂಟೆಗಳ ಕಾಲ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಕೆಲಸ ಮಾಡುತ್ತಾರೆ. ಪ್ರತಿದಿನ 40 ನಿಮಿಷಗಳ ಕಾಲ ಊಟಕ್ಕೆ ಬಿಡುತ್ತಾರೆ. ಆದಾಗ್ಯೂ, ಪ್ರತಿದಿನ ಸಂಜೆ 5:30 ಕ್ಕೆ ಹೊರಡುವ ಬಸ್‌ಗಳನ್ನು ಹಿಡಿಯಲು ಕೆಲವೇ ನಿಮಿಷಗಳು ಬಾಕಿ ಇರುವಾಗ ಅವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗುತ್ತದೆ ಎಂದು ಅರೋಪಿಸಲಾಗಿದೆ. ತಮಗೆ ಈಗ ಎಂಟು ಗಂಟೆಗಳ ಕೆಲಸದ ಅವಧಿ ಮಾಡಬೇಕು ಎಂದು ಕಾರ್ಮಿಕರು ಆಗ್ರಹಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಯಿಂದ ಕಾರ್ಖಾನೆಯ ಶೇ.80 ರಷ್ಟು ಉತ್ಪಾದನೆಗೆ ಹೊಡೆತ ಬಿದ್ದಿದೆ ಎಂದು ಕಾರ್ಮಿಕರು ಹೇಳಿದ್ದಾರೆ. ಜುಲೈ 25, 2024 ರಂದು, ಇ ಮುತ್ತುಕುಮಾರ್ ನೇತೃತ್ವದ CITU ಸದಸ್ಯರು ‘Samsung India Workers Union (SIWU)’ ನೋಂದಣಿಯನ್ನು ಪ್ರಾರಂಭಿಸಿದರು. ನೋಂದಣಿಗಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ 1455 ಕಾರ್ಮಿಕರನ್ನು ಸದಸ್ಯರನ್ನಾಗಿ ಪಟ್ಟಿಮಾಡಲಾಗಿತ್ತು. ನೋಂದಣಿಗೆ ಇನ್ನಷ್ಟೆ ಅನುಮೋದನೆ ದೊರೆಯಬೇಕಿದೆ. ಈ ಸಂಘಟನೆಗೆ ಆಗಸ್ಟ್ 20 ರಂದು ಲೇಬರ್ ಕಮಿಷನರ್‌ಗೆ Samsung India Electronics ನಿಂದ ಕಾನೂನು ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ: ದಾವುದ್ ಇಬ್ರಾಹಿಂ ಜೊತೆ ಲಿಂಕ್ ಎಂದ ಎಎನ್‌ಐ | ಸುಳ್ಳು ಸುದ್ದಿಗೆ ಕ್ಷಮೆಯಾಚಿಸಲು ಸಲ್ಮಾನ್ ಖಾನ್ ಒತ್ತಾಯ

ಸೋಮವಾರ, ಅನುಮತಿ ಪಡೆಯದೆ ಕಾಂಚೀಪುರಂ ಕಲೆಕ್ಟರೇಟ್‌ಗೆ ಮೆರವಣಿಗೆ ನಡೆಸಿದ ಆರೋಪದ ಮೇಲೆ ಮುತ್ತುಕುಮಾರ್ ಸೇರಿದಂತೆ 117 ಕಾರ್ಮಿಕರನ್ನು ಬಂಧಿಸಲಾಗಿತ್ತು. ತಮಿಳುನಾಡು

ಮತ್ತೊಂದೆಡೆ ದಕ್ಷಿಣ ಕೊರಿಯಾದಲ್ಲಿ ನ್ಯಾಷನಲ್ ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಯೂನಿಯನ್(NSEU) ಈ ವರ್ಷದ ಜುಲೈನಲ್ಲಿ ಅನಿರ್ದಿಷ್ಟ ಮುಷ್ಕರವನ್ನು ನಡೆಸಿತು. ಈ ಮುಷ್ಕರದ ವೇಳೆ ಸುಧಾರಿತ ವೇತನ, ಹೆಚ್ಚು ಪಾರದರ್ಶಕ ಬೋನಸ್ ವ್ಯವಸ್ಥೆ ಮತ್ತು ವರ್ಷಕ್ಕೆ ಹೆಚ್ಚುವರಿ ದಿನ ರಜೆಯನ್ನು ಕೋರಲಾಗಿತ್ತು. NSEU ಭಾರತದ ಮುಷ್ಕರವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಭಾರತೀಯ ಸ್ಥಾವರದಲ್ಲಿ ಕಾರ್ಮಿಕರಿಗೆ ನ್ಯಾಯಯುತ ವೇತನ ಮತ್ತು ಸಮಂಜಸವಾದ ಕೆಲಸದ ಪರಿಸ್ಥಿತಿಗಳನ್ನು ಒದಗಿಸದಿರುವುದು ತೀವ್ರ ವಿಷಾದನೀಯ ಎಂದು ಹೇಳಿದೆ.

ದಕ್ಷಿಣ ಕೊರಿಯಾದಲ್ಲಿ ಸರಾಸರಿ ವೇತನವು ಸುಮಾರು 4.5 ಲಕ್ಷ ರೂ.ಗಳಷ್ಟಿದ್ದರೆ ಭಾರತದಲ್ಲಿ ಸರಾಸರಿ ವೇತನವು ಸುಮಾರು 30,000 ರೂ. ಆಗಿದೆ. ಸ್ಯಾಮ್‌ಸಂಗ್ ಇಂಡಿಯಾ ಪ್ಲಾಂಟ್‌ನಲ್ಲಿನ ಕಾರ್ಮಿಕ ವೆಚ್ಚವು ಅದರ ವಾರ್ಷಿಕ ಉತ್ಪಾದನಾ ಮೌಲ್ಯದ 0.3% ಕ್ಕಿಂತ ಕಡಿಮೆ ಎಂದು CITU ಹೇಳಿದೆ.

ವಿಡಿಯೊ ನೋಡಿ: ಸದನದಲ್ಲಿ ಕೆ.ಎಸ್ ಪುಟ್ಟಣ್ಣಯ್ಯನವರು ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡಿದ್ದು ಹೀಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...