HomeUncategorizedತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರಿಂದ ಮುಷ್ಕರ; 80% ಉತ್ಪಾದನೆಗೆ ಹೊಡೆತ!

ತಮಿಳುನಾಡು | ಸ್ಯಾಮ್‌ಸಂಗ್ ಕಾರ್ಮಿಕರಿಂದ ಮುಷ್ಕರ; 80% ಉತ್ಪಾದನೆಗೆ ಹೊಡೆತ!

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್ಸಂಗ್ ಇಂಡಿಯಾ ಕಂಪೆನಿಯ ಕಾರ್ಮಿಕರ ಮುಷ್ಕರವನ್ನು ಮುಂದುವರೆಸಿದ್ದು, ಒಕ್ಕೂಟದ ಮಾನ್ಯತೆ ನೀಡುವಂತೆ ಮತ್ತು ಸ್ವಾಭಿಮಾನಕ್ಕಾಗಿ ಈ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ಮತ್ತೆ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್‌ 9ರಿಂದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಡಿಮೆ ಕೆಲಸದ ಸಮಯ ಮತ್ತು ಪರಿಷ್ಕೃತ ವೇತನ ಸೇರಿದಂತೆ ಹಲವಾರು ಬೇಡಿಕೆಗಳನ್ನು ಕಾರ್ಮಿಕರು ಕಂಪೆನಿಯ ಮುಂದಿಟ್ಟಿದ್ದಾರೆ. ಸಿಐಟಿಯು ಬೆಂಬಲಿತ ಒಕ್ಕೂಟದ ಮಾನ್ಯತೆ ಪ್ರಮುಖ ಒತ್ತಾಯವಾಗಿದ್ದು, ಕಾರ್ಖಾನೆಯೊಳಗೆ ಕಂಪನಿಯ ಅಧಿಕಾರಿಗಳು ಗೌರವದಿಂದ ವರ್ತಿಸುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದನ್ನೂಓದಿ: ಗೌರಿ ಲಂಕೇಶ್ ಅವರಿಗೆ ALIFA ಬಹಿರಂಗ ಪತ್ರ | ‘ಬೆಂಕಿ ಮತ್ತು ಹೂವುವಿನಂತ ಗೌರಿ!’

“ನಮ್ಮೆಲ್ಲರ ಗುರುತಿನ ಚೀಟಿಗಳಲ್ಲಿ ನಮ್ಮ ಹೆಸರುಗಳಿವೆ ಮತ್ತು ನಮ್ಮಲ್ಲಿ ಹೆಚ್ಚಿನವರು ಹಲವಾರು ವರ್ಷಗಳಿಂದ ಇಲ್ಲಿ ಕೆಲಸ ಮಾಡಿದ್ದೇವೆ ಆದರೆ ನಮ್ಮ ತಕ್ಷಣದ ಮೇಲ್ವಿಚಾರಣಾ ಎಂಜಿನಿಯರ್‌ಗಳು ಎಂದಿಗೂ ನಮ್ಮ ಹೆಸರನ್ನು ಕರೆಯುವುದಿಲ್ಲ” ಎಂದು ಅಸೆಂಬ್ಲಿ ಆಪರೇಟರ್ ಆಗಿ ಕೆಲಸ ಮಾಡುವ ಶ್ರೀನಿವಾಸನ್ (ಹೆಸರು ಬದಲಾಯಿಸಲಾಗಿದೆ) ಹೇಳಿದ್ದಾರೆ.

ಮುಷ್ಕರದಲ್ಲಿ ಭಾಗವಹಿಸುವ ಅದರ 1800 ಕಾರ್ಮಿಕರಲ್ಲಿ ಹೆಚ್ಚಿನ 1300 ಮಂದಿ ಅಸೆಂಬ್ಲಿ ಆಪರೇಟರ್‌ಗಳಾಗಿ ಕೆಲಸ ಮಾಡುತ್ತಾರೆ. ಇವರಲ್ಲಿ ಸುಮಾರು 50-60% ಮಹಿಳೆಯರಾಗಿದ್ದು, ಯಾವುದೇ ಮಹಿಳಾ ಕಾರ್ಮಿಕರು ಪ್ರತಿಭಟನೆಯ ಭಾಗವಾಗಿಲ್ಲದಿದ್ದರೂ, ಪ್ರತಿಭಟನೆಯನ್ನು ಬೆಂಬಲಿಸಲು ಅರ್ಧದಷ್ಟು ಜನರು ಕೆಲಸಕ್ಕೆ ಹಾಜರಾಗಲಿಲ್ಲ ಎಂದು ಸಿಐಟಿಯು ಸಂಘಟಕರು ಹೇಳಿದ್ದಾರೆ.

ಕಾರ್ಮಿಕರು ವರ್ಷಕ್ಕೆ 20 ವೈಯಕ್ತಿಕ ರಜೆಗಳು ಮತ್ತು 7 ಕ್ಯಾಶುಯಲ್ ರಜೆಗಳಿಗೆ ಅರ್ಹರಾಗಿರುತ್ತಾರೆ. ಆದರೆ ಅವುಗಳನ್ನು ಬಳಸಲು ಯಾವಾಗಲೂ ಅನುಮತಿಸಲಾಗುವುದಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.ತಮಿಳುನಾಡು

ಇದನ್ನೂಓದಿ: ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ : ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ

“ಕುಟುಂಬದಲ್ಲಿ ಸಾವಿನ ಸಂದರ್ಭದಲ್ಲಿ ಸಹ, ನಮಗೆ ಮೂರು ಅಥವಾ ನಾಲ್ಕನೇ ದಿನ ಫೋನ್ ಕರೆಗಳು ಬರುತ್ತವೆ. ಕರೆ ಮಾಡಿ, ಯಾವಾಗ ಕೆಲಸಕ್ಕೆ ಮರಳುತ್ತೀರ ಎಂದು ಅವರು ಕೇಳುತ್ತಾರೆ” ಎಂದು ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುವ ಪ್ರವೀಣ್ (ಹೆಸರು ಬದಲಾಯಿಸಲಾಗಿದೆ) ಹೇಳಿದ್ದಾರೆ.

ಕಾರ್ಖಾನೆಯಲ್ಲಿ ಕಾರ್ಮಿಕರು ಈಗ ಅಧಿಕೃತವಾಗಿ ದಿನಕ್ಕೆ ಒಂಬತ್ತು ಗಂಟೆಗಳ ಕಾಲ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಕೆಲಸ ಮಾಡುತ್ತಾರೆ. ಪ್ರತಿದಿನ 40 ನಿಮಿಷಗಳ ಕಾಲ ಊಟಕ್ಕೆ ಬಿಡುತ್ತಾರೆ. ಆದಾಗ್ಯೂ, ಪ್ರತಿದಿನ ಸಂಜೆ 5:30 ಕ್ಕೆ ಹೊರಡುವ ಬಸ್‌ಗಳನ್ನು ಹಿಡಿಯಲು ಕೆಲವೇ ನಿಮಿಷಗಳು ಬಾಕಿ ಇರುವಾಗ ಅವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗುತ್ತದೆ ಎಂದು ಅರೋಪಿಸಲಾಗಿದೆ. ತಮಗೆ ಈಗ ಎಂಟು ಗಂಟೆಗಳ ಕೆಲಸದ ಅವಧಿ ಮಾಡಬೇಕು ಎಂದು ಕಾರ್ಮಿಕರು ಆಗ್ರಹಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಯಿಂದ ಕಾರ್ಖಾನೆಯ ಶೇ.80 ರಷ್ಟು ಉತ್ಪಾದನೆಗೆ ಹೊಡೆತ ಬಿದ್ದಿದೆ ಎಂದು ಕಾರ್ಮಿಕರು ಹೇಳಿದ್ದಾರೆ. ಜುಲೈ 25, 2024 ರಂದು, ಇ ಮುತ್ತುಕುಮಾರ್ ನೇತೃತ್ವದ CITU ಸದಸ್ಯರು ‘Samsung India Workers Union (SIWU)’ ನೋಂದಣಿಯನ್ನು ಪ್ರಾರಂಭಿಸಿದರು. ನೋಂದಣಿಗಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ 1455 ಕಾರ್ಮಿಕರನ್ನು ಸದಸ್ಯರನ್ನಾಗಿ ಪಟ್ಟಿಮಾಡಲಾಗಿತ್ತು. ನೋಂದಣಿಗೆ ಇನ್ನಷ್ಟೆ ಅನುಮೋದನೆ ದೊರೆಯಬೇಕಿದೆ. ಈ ಸಂಘಟನೆಗೆ ಆಗಸ್ಟ್ 20 ರಂದು ಲೇಬರ್ ಕಮಿಷನರ್‌ಗೆ Samsung India Electronics ನಿಂದ ಕಾನೂನು ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ: ದಾವುದ್ ಇಬ್ರಾಹಿಂ ಜೊತೆ ಲಿಂಕ್ ಎಂದ ಎಎನ್‌ಐ | ಸುಳ್ಳು ಸುದ್ದಿಗೆ ಕ್ಷಮೆಯಾಚಿಸಲು ಸಲ್ಮಾನ್ ಖಾನ್ ಒತ್ತಾಯ

ಸೋಮವಾರ, ಅನುಮತಿ ಪಡೆಯದೆ ಕಾಂಚೀಪುರಂ ಕಲೆಕ್ಟರೇಟ್‌ಗೆ ಮೆರವಣಿಗೆ ನಡೆಸಿದ ಆರೋಪದ ಮೇಲೆ ಮುತ್ತುಕುಮಾರ್ ಸೇರಿದಂತೆ 117 ಕಾರ್ಮಿಕರನ್ನು ಬಂಧಿಸಲಾಗಿತ್ತು. ತಮಿಳುನಾಡು

ಮತ್ತೊಂದೆಡೆ ದಕ್ಷಿಣ ಕೊರಿಯಾದಲ್ಲಿ ನ್ಯಾಷನಲ್ ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಯೂನಿಯನ್(NSEU) ಈ ವರ್ಷದ ಜುಲೈನಲ್ಲಿ ಅನಿರ್ದಿಷ್ಟ ಮುಷ್ಕರವನ್ನು ನಡೆಸಿತು. ಈ ಮುಷ್ಕರದ ವೇಳೆ ಸುಧಾರಿತ ವೇತನ, ಹೆಚ್ಚು ಪಾರದರ್ಶಕ ಬೋನಸ್ ವ್ಯವಸ್ಥೆ ಮತ್ತು ವರ್ಷಕ್ಕೆ ಹೆಚ್ಚುವರಿ ದಿನ ರಜೆಯನ್ನು ಕೋರಲಾಗಿತ್ತು. NSEU ಭಾರತದ ಮುಷ್ಕರವನ್ನು ಬೆಂಬಲಿಸಿ ಹೇಳಿಕೆ ನೀಡಿದ್ದು, ಭಾರತೀಯ ಸ್ಥಾವರದಲ್ಲಿ ಕಾರ್ಮಿಕರಿಗೆ ನ್ಯಾಯಯುತ ವೇತನ ಮತ್ತು ಸಮಂಜಸವಾದ ಕೆಲಸದ ಪರಿಸ್ಥಿತಿಗಳನ್ನು ಒದಗಿಸದಿರುವುದು ತೀವ್ರ ವಿಷಾದನೀಯ ಎಂದು ಹೇಳಿದೆ.

ದಕ್ಷಿಣ ಕೊರಿಯಾದಲ್ಲಿ ಸರಾಸರಿ ವೇತನವು ಸುಮಾರು 4.5 ಲಕ್ಷ ರೂ.ಗಳಷ್ಟಿದ್ದರೆ ಭಾರತದಲ್ಲಿ ಸರಾಸರಿ ವೇತನವು ಸುಮಾರು 30,000 ರೂ. ಆಗಿದೆ. ಸ್ಯಾಮ್‌ಸಂಗ್ ಇಂಡಿಯಾ ಪ್ಲಾಂಟ್‌ನಲ್ಲಿನ ಕಾರ್ಮಿಕ ವೆಚ್ಚವು ಅದರ ವಾರ್ಷಿಕ ಉತ್ಪಾದನಾ ಮೌಲ್ಯದ 0.3% ಕ್ಕಿಂತ ಕಡಿಮೆ ಎಂದು CITU ಹೇಳಿದೆ.

ವಿಡಿಯೊ ನೋಡಿ: ಸದನದಲ್ಲಿ ಕೆ.ಎಸ್ ಪುಟ್ಟಣ್ಣಯ್ಯನವರು ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡಿದ್ದು ಹೀಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...