Homeಮುಖಪುಟತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮದ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

- Advertisement -
- Advertisement -

ದೌರ್ಜನ್ಯ ತಡೆ (ಎಸ್‌ಸಿ /ಎಸ್‌ಟಿ)  ಕಾಯ್ದೆಯಡಿ ಜಾತಿ ಹಿಂದೂಗಳ( ಅತಿ ಹಿಂದುಳಿದ ಸಮುದಾಯ) ವಿರುದ್ಧ ದಾಖಲಾದ ಪ್ರಕರಣವನ್ನು ಹಿಂತೆಗೆದುಕೊಳ್ಳದ ಕಾರಣ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉಲಗಂ ಹಳ್ಳಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿದೆ.

ದಲಿತ ಕಾಲೋನಿಗೆ ಬರುತ್ತಿದ್ದ ಹಾಲು, ನೀರು ನಿಲ್ಲಿಸಲಾಗಿದೆ. ದಿನಸಿ ಅಂಗಡಿಯವರು ದಿನಸಿ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಅಲ್ಲಿನ ದಲಿತರು ಆರೋಪಿಸಿದ್ದಾರೆ.

“ಏನಾಗುತ್ತಿದೆ ಎಂಬುದೇ ನಮಗೆ ತಿಳಿಯುತ್ತಿಲ್ಲ. ಅಂಗಡಿಯವರು ಇದ್ದಕ್ಕಿದ್ದಂತೆ ನಮಗೆ ದಿನಸಿ ನೀಡಲು ನಿರಾಕರಿಸಿದ್ದಾರೆ. ಅಕ್ಟೋಬರ್ 2 ರಿಂದ ನಮ್ಮ ಮನೆಗಳಿಗೆ ಹಾಲು ನೀಡುತ್ತಿದ್ದವರು ಬಂದಿಲ್ಲ.  ಹಳ್ಳಿಯ ಕೊಳಾಯಿಗಳಿಂದ ನಮಗೆ ನೀರು ಬಂದಿಲ್ಲ’ ಎಂದು ಹೊಸೂರಿನ ಉಲಗಂ ಗ್ರಾಮದ ದಲಿತ ಕಾಲೋನಿ ಮಹಿಳೆ ಆತಂಕ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಉಲಗಂ ಹಳ್ಳಿಯ 22 ವರ್ಷದ ದಲಿತ ಯುವಕ ಸೂರ್ಯಕುಮಾರ್, ಅತಿ ಹಿಂದುಳಿದ ಸಮುದಾಯಕ್ಕೆ (MBC) ಸೇರಿದ ಕುರುಂಬಾರ್ ಜಾತಿಗೆ ಸೇರಿದ ಹೊಸೂರಿನ ಮಣಿಯಂಗಲ್ ಗ್ರಾಮದ 17 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋಗಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಘಟನೆ ನಡೆದ ಕೂಡಲೇ ಬಾಲಕಿಯ ಪೋಷಕರು ಅಪಹರಣದ ಆರೋಪ ಮತ್ತು ಪೊಕ್ಸೊ ಕಾಯ್ದೆಯಡಿ ಸೂರ್ಯ ಕುಮಾರ್ ವಿರುದ್ಧ ಪೊಲೀಸ್ ದೂರು ದಾಖಲಿಸಿದರೆ, ಇತ್ತ ಸೂರ್ಯಕುಮಾರ್ ಅವರ ಕುಟುಂಬ ವಾಸಿಸುವ ಉಲಗಂ ಗ್ರಾಮದಲ್ಲಿ ಕುರುಂಬಾರ್ ಸಮುದಾಯದ ಜನ ದಲಿತ ಕಾಲೋನಿ ಮತ್ತು ಅಲ್ಲಿನ ಜನರ ಮೇಲೆ ಹಲ್ಲೆ ನಡೆಸಿದ್ದರು. ಗ್ರಾಮದ ದಲಿತ ಜನರ ದೂರಿನ ಆಧಾರದ ಮೇಲೆ ಪೊಲೀಸರು 30 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರು ತಿಂಗಳ ನಂತರ ಕುರುಂಬಾರ್‌ ಸಮುದಾಯದ ಹುಡುಗಿಗೆ 18 ವರ್ಷ ಆದಾಗ, ಎರಡೂ ಕುಟುಂಬಗಳು ಸೇರಿ ಸೂರ್ಯಕುಮಾರ್ ಅವರೊಂದಿಗೆ ಆಕೆಯ ಮದುವೆ ಮಾಡಿದ್ದಾರೆ. ನಂತರ ಹುಡುಗಿಯ ಕುಟುಂಬ ಸೂರ್ಯಕುಮಾರ್ ವಿರುದ್ಧ ಸಲ್ಲಿಸಿದ್ದ ಪ್ರಕರಣವನ್ನು ಹಿಂತೆಗೆದುಕೊಂಡರು. ಆದರೆ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ್ದವರರ ಮೇಲೆ ದಲಿತರು  ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಾಖಲಿಸಿದ್ದ ದೂರನ್ನು ವಾಪಾಸ್ ಪಡೆದಿರಲ್ಲ. ಈ ಪ್ರಕರಣ ಅಕ್ಟೋಬರ್ 1 ರಂದು ವಿಚಾರಣೆಗೆ ಬಂದಿತ್ತು.

“ಅವರು ಪ್ರಕರಣವನ್ನು ಹಿಂಪಡೆಯಲು ನಮಗೆ ಅನೇಕ ಬಾರಿ ಹೇಳಿದರು. ಅವರ್‍ಯಾರು ಹುಡುಗಿಯ ಸಂಬಂಧಿಗಳಲ್ಲ ಅಥವಾ ಅವರು ಹುಡುಗಿಯ ಹಳ್ಳಿಗೆ ಸೇರಿದವರಲ್ಲದ ಕಾರಣ ನಾವು ಪ್ರಕರಣವನ್ನು ಹಿಂತೆಗೆದುಕೊಳ್ಳಲು ಇಷ್ಟಪಡಲಿಲ್ಲ” ಎಂದು ಉಲಗಂ ಗ್ರಾಮಸ್ಥ ಟಿ.ಸೇತು ಹೇಳುತ್ತಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ಅಕ್ಟೋಬರ್‌ 1ರಂದು ವಿಚಾರಣೆ ಎದುರಿಸಿ ಗ್ರಾಮಕ್ಕೆ ಹಿಂತಿರುಗಿದಾಗ, ಡಂಗೂರ ಬಾರಿಸುವ ಮೂಲಕ ನಮ್ಮನ್ನು ಬಹಿಷ್ಕರಿಸಲಾಗಿದೆ.  ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಸೇತು ತಿಳಿಸಿದ್ದಾರೆ.

ಗ್ರಾಮದಲ್ಲಿ ನಮ್ಮ ಸಮುದಾಯದವರು 29 ಕುಟುಂಬಗಳಿವೆ. ಕುರುಂಬಾರ್‌ ಸಮುದಾಯದ 300 ಕುಟುಂಬಗಳಿವೆ. ಹಾಗಾಗಿ ಅವರು ನಮಗೆ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ ಈಗ ಬಹಿಷ್ಕಾರ ಹಾಕಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಕಂದಾಯ ಅಧಿಕಾರಿ ಗುಣಶೇಖರನ್ ಘಟನೆಯ ಬಗ್ಗೆ ತಿಳಿದಿಲ್ಲ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...