Homeಮುಖಪುಟತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮದ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

- Advertisement -
- Advertisement -

ದೌರ್ಜನ್ಯ ತಡೆ (ಎಸ್‌ಸಿ /ಎಸ್‌ಟಿ)  ಕಾಯ್ದೆಯಡಿ ಜಾತಿ ಹಿಂದೂಗಳ( ಅತಿ ಹಿಂದುಳಿದ ಸಮುದಾಯ) ವಿರುದ್ಧ ದಾಖಲಾದ ಪ್ರಕರಣವನ್ನು ಹಿಂತೆಗೆದುಕೊಳ್ಳದ ಕಾರಣ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉಲಗಂ ಹಳ್ಳಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿದೆ.

ದಲಿತ ಕಾಲೋನಿಗೆ ಬರುತ್ತಿದ್ದ ಹಾಲು, ನೀರು ನಿಲ್ಲಿಸಲಾಗಿದೆ. ದಿನಸಿ ಅಂಗಡಿಯವರು ದಿನಸಿ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಅಲ್ಲಿನ ದಲಿತರು ಆರೋಪಿಸಿದ್ದಾರೆ.

“ಏನಾಗುತ್ತಿದೆ ಎಂಬುದೇ ನಮಗೆ ತಿಳಿಯುತ್ತಿಲ್ಲ. ಅಂಗಡಿಯವರು ಇದ್ದಕ್ಕಿದ್ದಂತೆ ನಮಗೆ ದಿನಸಿ ನೀಡಲು ನಿರಾಕರಿಸಿದ್ದಾರೆ. ಅಕ್ಟೋಬರ್ 2 ರಿಂದ ನಮ್ಮ ಮನೆಗಳಿಗೆ ಹಾಲು ನೀಡುತ್ತಿದ್ದವರು ಬಂದಿಲ್ಲ.  ಹಳ್ಳಿಯ ಕೊಳಾಯಿಗಳಿಂದ ನಮಗೆ ನೀರು ಬಂದಿಲ್ಲ’ ಎಂದು ಹೊಸೂರಿನ ಉಲಗಂ ಗ್ರಾಮದ ದಲಿತ ಕಾಲೋನಿ ಮಹಿಳೆ ಆತಂಕ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಉಲಗಂ ಹಳ್ಳಿಯ 22 ವರ್ಷದ ದಲಿತ ಯುವಕ ಸೂರ್ಯಕುಮಾರ್, ಅತಿ ಹಿಂದುಳಿದ ಸಮುದಾಯಕ್ಕೆ (MBC) ಸೇರಿದ ಕುರುಂಬಾರ್ ಜಾತಿಗೆ ಸೇರಿದ ಹೊಸೂರಿನ ಮಣಿಯಂಗಲ್ ಗ್ರಾಮದ 17 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋಗಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಘಟನೆ ನಡೆದ ಕೂಡಲೇ ಬಾಲಕಿಯ ಪೋಷಕರು ಅಪಹರಣದ ಆರೋಪ ಮತ್ತು ಪೊಕ್ಸೊ ಕಾಯ್ದೆಯಡಿ ಸೂರ್ಯ ಕುಮಾರ್ ವಿರುದ್ಧ ಪೊಲೀಸ್ ದೂರು ದಾಖಲಿಸಿದರೆ, ಇತ್ತ ಸೂರ್ಯಕುಮಾರ್ ಅವರ ಕುಟುಂಬ ವಾಸಿಸುವ ಉಲಗಂ ಗ್ರಾಮದಲ್ಲಿ ಕುರುಂಬಾರ್ ಸಮುದಾಯದ ಜನ ದಲಿತ ಕಾಲೋನಿ ಮತ್ತು ಅಲ್ಲಿನ ಜನರ ಮೇಲೆ ಹಲ್ಲೆ ನಡೆಸಿದ್ದರು. ಗ್ರಾಮದ ದಲಿತ ಜನರ ದೂರಿನ ಆಧಾರದ ಮೇಲೆ ಪೊಲೀಸರು 30 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರು ತಿಂಗಳ ನಂತರ ಕುರುಂಬಾರ್‌ ಸಮುದಾಯದ ಹುಡುಗಿಗೆ 18 ವರ್ಷ ಆದಾಗ, ಎರಡೂ ಕುಟುಂಬಗಳು ಸೇರಿ ಸೂರ್ಯಕುಮಾರ್ ಅವರೊಂದಿಗೆ ಆಕೆಯ ಮದುವೆ ಮಾಡಿದ್ದಾರೆ. ನಂತರ ಹುಡುಗಿಯ ಕುಟುಂಬ ಸೂರ್ಯಕುಮಾರ್ ವಿರುದ್ಧ ಸಲ್ಲಿಸಿದ್ದ ಪ್ರಕರಣವನ್ನು ಹಿಂತೆಗೆದುಕೊಂಡರು. ಆದರೆ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ್ದವರರ ಮೇಲೆ ದಲಿತರು  ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಾಖಲಿಸಿದ್ದ ದೂರನ್ನು ವಾಪಾಸ್ ಪಡೆದಿರಲ್ಲ. ಈ ಪ್ರಕರಣ ಅಕ್ಟೋಬರ್ 1 ರಂದು ವಿಚಾರಣೆಗೆ ಬಂದಿತ್ತು.

“ಅವರು ಪ್ರಕರಣವನ್ನು ಹಿಂಪಡೆಯಲು ನಮಗೆ ಅನೇಕ ಬಾರಿ ಹೇಳಿದರು. ಅವರ್‍ಯಾರು ಹುಡುಗಿಯ ಸಂಬಂಧಿಗಳಲ್ಲ ಅಥವಾ ಅವರು ಹುಡುಗಿಯ ಹಳ್ಳಿಗೆ ಸೇರಿದವರಲ್ಲದ ಕಾರಣ ನಾವು ಪ್ರಕರಣವನ್ನು ಹಿಂತೆಗೆದುಕೊಳ್ಳಲು ಇಷ್ಟಪಡಲಿಲ್ಲ” ಎಂದು ಉಲಗಂ ಗ್ರಾಮಸ್ಥ ಟಿ.ಸೇತು ಹೇಳುತ್ತಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ಅಕ್ಟೋಬರ್‌ 1ರಂದು ವಿಚಾರಣೆ ಎದುರಿಸಿ ಗ್ರಾಮಕ್ಕೆ ಹಿಂತಿರುಗಿದಾಗ, ಡಂಗೂರ ಬಾರಿಸುವ ಮೂಲಕ ನಮ್ಮನ್ನು ಬಹಿಷ್ಕರಿಸಲಾಗಿದೆ.  ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಸೇತು ತಿಳಿಸಿದ್ದಾರೆ.

ಗ್ರಾಮದಲ್ಲಿ ನಮ್ಮ ಸಮುದಾಯದವರು 29 ಕುಟುಂಬಗಳಿವೆ. ಕುರುಂಬಾರ್‌ ಸಮುದಾಯದ 300 ಕುಟುಂಬಗಳಿವೆ. ಹಾಗಾಗಿ ಅವರು ನಮಗೆ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ ಈಗ ಬಹಿಷ್ಕಾರ ಹಾಕಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಕಂದಾಯ ಅಧಿಕಾರಿ ಗುಣಶೇಖರನ್ ಘಟನೆಯ ಬಗ್ಗೆ ತಿಳಿದಿಲ್ಲ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...