Homeಮುಖಪುಟತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮದ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

- Advertisement -
- Advertisement -

ದೌರ್ಜನ್ಯ ತಡೆ (ಎಸ್‌ಸಿ /ಎಸ್‌ಟಿ)  ಕಾಯ್ದೆಯಡಿ ಜಾತಿ ಹಿಂದೂಗಳ( ಅತಿ ಹಿಂದುಳಿದ ಸಮುದಾಯ) ವಿರುದ್ಧ ದಾಖಲಾದ ಪ್ರಕರಣವನ್ನು ಹಿಂತೆಗೆದುಕೊಳ್ಳದ ಕಾರಣ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉಲಗಂ ಹಳ್ಳಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿದೆ.

ದಲಿತ ಕಾಲೋನಿಗೆ ಬರುತ್ತಿದ್ದ ಹಾಲು, ನೀರು ನಿಲ್ಲಿಸಲಾಗಿದೆ. ದಿನಸಿ ಅಂಗಡಿಯವರು ದಿನಸಿ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಅಲ್ಲಿನ ದಲಿತರು ಆರೋಪಿಸಿದ್ದಾರೆ.

“ಏನಾಗುತ್ತಿದೆ ಎಂಬುದೇ ನಮಗೆ ತಿಳಿಯುತ್ತಿಲ್ಲ. ಅಂಗಡಿಯವರು ಇದ್ದಕ್ಕಿದ್ದಂತೆ ನಮಗೆ ದಿನಸಿ ನೀಡಲು ನಿರಾಕರಿಸಿದ್ದಾರೆ. ಅಕ್ಟೋಬರ್ 2 ರಿಂದ ನಮ್ಮ ಮನೆಗಳಿಗೆ ಹಾಲು ನೀಡುತ್ತಿದ್ದವರು ಬಂದಿಲ್ಲ.  ಹಳ್ಳಿಯ ಕೊಳಾಯಿಗಳಿಂದ ನಮಗೆ ನೀರು ಬಂದಿಲ್ಲ’ ಎಂದು ಹೊಸೂರಿನ ಉಲಗಂ ಗ್ರಾಮದ ದಲಿತ ಕಾಲೋನಿ ಮಹಿಳೆ ಆತಂಕ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಉಲಗಂ ಹಳ್ಳಿಯ 22 ವರ್ಷದ ದಲಿತ ಯುವಕ ಸೂರ್ಯಕುಮಾರ್, ಅತಿ ಹಿಂದುಳಿದ ಸಮುದಾಯಕ್ಕೆ (MBC) ಸೇರಿದ ಕುರುಂಬಾರ್ ಜಾತಿಗೆ ಸೇರಿದ ಹೊಸೂರಿನ ಮಣಿಯಂಗಲ್ ಗ್ರಾಮದ 17 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋಗಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಘಟನೆ ನಡೆದ ಕೂಡಲೇ ಬಾಲಕಿಯ ಪೋಷಕರು ಅಪಹರಣದ ಆರೋಪ ಮತ್ತು ಪೊಕ್ಸೊ ಕಾಯ್ದೆಯಡಿ ಸೂರ್ಯ ಕುಮಾರ್ ವಿರುದ್ಧ ಪೊಲೀಸ್ ದೂರು ದಾಖಲಿಸಿದರೆ, ಇತ್ತ ಸೂರ್ಯಕುಮಾರ್ ಅವರ ಕುಟುಂಬ ವಾಸಿಸುವ ಉಲಗಂ ಗ್ರಾಮದಲ್ಲಿ ಕುರುಂಬಾರ್ ಸಮುದಾಯದ ಜನ ದಲಿತ ಕಾಲೋನಿ ಮತ್ತು ಅಲ್ಲಿನ ಜನರ ಮೇಲೆ ಹಲ್ಲೆ ನಡೆಸಿದ್ದರು. ಗ್ರಾಮದ ದಲಿತ ಜನರ ದೂರಿನ ಆಧಾರದ ಮೇಲೆ ಪೊಲೀಸರು 30 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರು ತಿಂಗಳ ನಂತರ ಕುರುಂಬಾರ್‌ ಸಮುದಾಯದ ಹುಡುಗಿಗೆ 18 ವರ್ಷ ಆದಾಗ, ಎರಡೂ ಕುಟುಂಬಗಳು ಸೇರಿ ಸೂರ್ಯಕುಮಾರ್ ಅವರೊಂದಿಗೆ ಆಕೆಯ ಮದುವೆ ಮಾಡಿದ್ದಾರೆ. ನಂತರ ಹುಡುಗಿಯ ಕುಟುಂಬ ಸೂರ್ಯಕುಮಾರ್ ವಿರುದ್ಧ ಸಲ್ಲಿಸಿದ್ದ ಪ್ರಕರಣವನ್ನು ಹಿಂತೆಗೆದುಕೊಂಡರು. ಆದರೆ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ್ದವರರ ಮೇಲೆ ದಲಿತರು  ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಾಖಲಿಸಿದ್ದ ದೂರನ್ನು ವಾಪಾಸ್ ಪಡೆದಿರಲ್ಲ. ಈ ಪ್ರಕರಣ ಅಕ್ಟೋಬರ್ 1 ರಂದು ವಿಚಾರಣೆಗೆ ಬಂದಿತ್ತು.

“ಅವರು ಪ್ರಕರಣವನ್ನು ಹಿಂಪಡೆಯಲು ನಮಗೆ ಅನೇಕ ಬಾರಿ ಹೇಳಿದರು. ಅವರ್‍ಯಾರು ಹುಡುಗಿಯ ಸಂಬಂಧಿಗಳಲ್ಲ ಅಥವಾ ಅವರು ಹುಡುಗಿಯ ಹಳ್ಳಿಗೆ ಸೇರಿದವರಲ್ಲದ ಕಾರಣ ನಾವು ಪ್ರಕರಣವನ್ನು ಹಿಂತೆಗೆದುಕೊಳ್ಳಲು ಇಷ್ಟಪಡಲಿಲ್ಲ” ಎಂದು ಉಲಗಂ ಗ್ರಾಮಸ್ಥ ಟಿ.ಸೇತು ಹೇಳುತ್ತಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ಅಕ್ಟೋಬರ್‌ 1ರಂದು ವಿಚಾರಣೆ ಎದುರಿಸಿ ಗ್ರಾಮಕ್ಕೆ ಹಿಂತಿರುಗಿದಾಗ, ಡಂಗೂರ ಬಾರಿಸುವ ಮೂಲಕ ನಮ್ಮನ್ನು ಬಹಿಷ್ಕರಿಸಲಾಗಿದೆ.  ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಸೇತು ತಿಳಿಸಿದ್ದಾರೆ.

ಗ್ರಾಮದಲ್ಲಿ ನಮ್ಮ ಸಮುದಾಯದವರು 29 ಕುಟುಂಬಗಳಿವೆ. ಕುರುಂಬಾರ್‌ ಸಮುದಾಯದ 300 ಕುಟುಂಬಗಳಿವೆ. ಹಾಗಾಗಿ ಅವರು ನಮಗೆ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ ಈಗ ಬಹಿಷ್ಕಾರ ಹಾಕಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಕಂದಾಯ ಅಧಿಕಾರಿ ಗುಣಶೇಖರನ್ ಘಟನೆಯ ಬಗ್ಗೆ ತಿಳಿದಿಲ್ಲ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...