Homeಮುಖಪುಟತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ತಮಿಳುನಾಡು: ಕೃಷ್ಣಗಿರಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮದ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

- Advertisement -
- Advertisement -

ದೌರ್ಜನ್ಯ ತಡೆ (ಎಸ್‌ಸಿ /ಎಸ್‌ಟಿ)  ಕಾಯ್ದೆಯಡಿ ಜಾತಿ ಹಿಂದೂಗಳ( ಅತಿ ಹಿಂದುಳಿದ ಸಮುದಾಯ) ವಿರುದ್ಧ ದಾಖಲಾದ ಪ್ರಕರಣವನ್ನು ಹಿಂತೆಗೆದುಕೊಳ್ಳದ ಕಾರಣ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉಲಗಂ ಹಳ್ಳಿಯಲ್ಲಿ 29 ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿದೆ.

ದಲಿತ ಕಾಲೋನಿಗೆ ಬರುತ್ತಿದ್ದ ಹಾಲು, ನೀರು ನಿಲ್ಲಿಸಲಾಗಿದೆ. ದಿನಸಿ ಅಂಗಡಿಯವರು ದಿನಸಿ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಅಲ್ಲಿನ ದಲಿತರು ಆರೋಪಿಸಿದ್ದಾರೆ.

“ಏನಾಗುತ್ತಿದೆ ಎಂಬುದೇ ನಮಗೆ ತಿಳಿಯುತ್ತಿಲ್ಲ. ಅಂಗಡಿಯವರು ಇದ್ದಕ್ಕಿದ್ದಂತೆ ನಮಗೆ ದಿನಸಿ ನೀಡಲು ನಿರಾಕರಿಸಿದ್ದಾರೆ. ಅಕ್ಟೋಬರ್ 2 ರಿಂದ ನಮ್ಮ ಮನೆಗಳಿಗೆ ಹಾಲು ನೀಡುತ್ತಿದ್ದವರು ಬಂದಿಲ್ಲ.  ಹಳ್ಳಿಯ ಕೊಳಾಯಿಗಳಿಂದ ನಮಗೆ ನೀರು ಬಂದಿಲ್ಲ’ ಎಂದು ಹೊಸೂರಿನ ಉಲಗಂ ಗ್ರಾಮದ ದಲಿತ ಕಾಲೋನಿ ಮಹಿಳೆ ಆತಂಕ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಉಲಗಂ ಹಳ್ಳಿಯ 22 ವರ್ಷದ ದಲಿತ ಯುವಕ ಸೂರ್ಯಕುಮಾರ್, ಅತಿ ಹಿಂದುಳಿದ ಸಮುದಾಯಕ್ಕೆ (MBC) ಸೇರಿದ ಕುರುಂಬಾರ್ ಜಾತಿಗೆ ಸೇರಿದ ಹೊಸೂರಿನ ಮಣಿಯಂಗಲ್ ಗ್ರಾಮದ 17 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋಗಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಘಟನೆ ನಡೆದ ಕೂಡಲೇ ಬಾಲಕಿಯ ಪೋಷಕರು ಅಪಹರಣದ ಆರೋಪ ಮತ್ತು ಪೊಕ್ಸೊ ಕಾಯ್ದೆಯಡಿ ಸೂರ್ಯ ಕುಮಾರ್ ವಿರುದ್ಧ ಪೊಲೀಸ್ ದೂರು ದಾಖಲಿಸಿದರೆ, ಇತ್ತ ಸೂರ್ಯಕುಮಾರ್ ಅವರ ಕುಟುಂಬ ವಾಸಿಸುವ ಉಲಗಂ ಗ್ರಾಮದಲ್ಲಿ ಕುರುಂಬಾರ್ ಸಮುದಾಯದ ಜನ ದಲಿತ ಕಾಲೋನಿ ಮತ್ತು ಅಲ್ಲಿನ ಜನರ ಮೇಲೆ ಹಲ್ಲೆ ನಡೆಸಿದ್ದರು. ಗ್ರಾಮದ ದಲಿತ ಜನರ ದೂರಿನ ಆಧಾರದ ಮೇಲೆ ಪೊಲೀಸರು 30 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆರು ತಿಂಗಳ ನಂತರ ಕುರುಂಬಾರ್‌ ಸಮುದಾಯದ ಹುಡುಗಿಗೆ 18 ವರ್ಷ ಆದಾಗ, ಎರಡೂ ಕುಟುಂಬಗಳು ಸೇರಿ ಸೂರ್ಯಕುಮಾರ್ ಅವರೊಂದಿಗೆ ಆಕೆಯ ಮದುವೆ ಮಾಡಿದ್ದಾರೆ. ನಂತರ ಹುಡುಗಿಯ ಕುಟುಂಬ ಸೂರ್ಯಕುಮಾರ್ ವಿರುದ್ಧ ಸಲ್ಲಿಸಿದ್ದ ಪ್ರಕರಣವನ್ನು ಹಿಂತೆಗೆದುಕೊಂಡರು. ಆದರೆ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ್ದವರರ ಮೇಲೆ ದಲಿತರು  ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಾಖಲಿಸಿದ್ದ ದೂರನ್ನು ವಾಪಾಸ್ ಪಡೆದಿರಲ್ಲ. ಈ ಪ್ರಕರಣ ಅಕ್ಟೋಬರ್ 1 ರಂದು ವಿಚಾರಣೆಗೆ ಬಂದಿತ್ತು.

“ಅವರು ಪ್ರಕರಣವನ್ನು ಹಿಂಪಡೆಯಲು ನಮಗೆ ಅನೇಕ ಬಾರಿ ಹೇಳಿದರು. ಅವರ್‍ಯಾರು ಹುಡುಗಿಯ ಸಂಬಂಧಿಗಳಲ್ಲ ಅಥವಾ ಅವರು ಹುಡುಗಿಯ ಹಳ್ಳಿಗೆ ಸೇರಿದವರಲ್ಲದ ಕಾರಣ ನಾವು ಪ್ರಕರಣವನ್ನು ಹಿಂತೆಗೆದುಕೊಳ್ಳಲು ಇಷ್ಟಪಡಲಿಲ್ಲ” ಎಂದು ಉಲಗಂ ಗ್ರಾಮಸ್ಥ ಟಿ.ಸೇತು ಹೇಳುತ್ತಾರೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ಅಕ್ಟೋಬರ್‌ 1ರಂದು ವಿಚಾರಣೆ ಎದುರಿಸಿ ಗ್ರಾಮಕ್ಕೆ ಹಿಂತಿರುಗಿದಾಗ, ಡಂಗೂರ ಬಾರಿಸುವ ಮೂಲಕ ನಮ್ಮನ್ನು ಬಹಿಷ್ಕರಿಸಲಾಗಿದೆ.  ಗ್ರಾಮದ ದಲಿತ ಜನರಿಗೆ ದಿನಸಿ, ಹಾಲು ಮತ್ತು ನೀರು ನೀಡುವ ಜನರಿಂದ 5,000 ರೂ.ಗಳ ದಂಡವನ್ನು ವಸೂಲಿ ಮಾಡಬೇಕೆಂದು ಗ್ರಾಮ ಜಾತಿ ಪಂಚಾಯತ್ ಆದೇಶಿಸಿದೆ ಎಂದು ಸೇತು ತಿಳಿಸಿದ್ದಾರೆ.

ಗ್ರಾಮದಲ್ಲಿ ನಮ್ಮ ಸಮುದಾಯದವರು 29 ಕುಟುಂಬಗಳಿವೆ. ಕುರುಂಬಾರ್‌ ಸಮುದಾಯದ 300 ಕುಟುಂಬಗಳಿವೆ. ಹಾಗಾಗಿ ಅವರು ನಮಗೆ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೆ ಈಗ ಬಹಿಷ್ಕಾರ ಹಾಕಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಕಂದಾಯ ಅಧಿಕಾರಿ ಗುಣಶೇಖರನ್ ಘಟನೆಯ ಬಗ್ಗೆ ತಿಳಿದಿಲ್ಲ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...